Breaking News

ರಾಷ್ಟ್ರೀಯ

ಕನ್ನಡ ಸಾಹಿತ್ಯ ಪರಿಷತ್ತಿನ‌ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು‌.

ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತಿನ‌ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು‌. ಬೆಳಗಾವಿಯ ರಾಮತೀರ್ಥ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತವತಿಯಿಂದ ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ಪುಸ್ತಕ ದತ್ತಿ ನಿಮಿತ್ಯ ವಿಜ್ಞಾನ ಉಪನ್ಯಾಸ ಹಾಗೂ ದತ್ತಿ ಪುಸ್ತಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು.ಕೆಟ್ಟ ಚಟಗಳನ್ನು ತ್ಯಜಿಸಿ …

Read More »

ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯ ಚಿಕಿತ್ಸಾ ಶುಲ್ಕ ಏರಿಕೆ, ಸಾರ್ವಜನಿಕರ ಆಕ್ರೋಶ

ಹುಬ್ಬಳ್ಳಿ, ಮಾರ್ಚ್​ 04: ಹುಬ್ಬಳ್ಳಿಯ (Hubballi) ಕಿಮ್ಸ್​ (KIMS) ಆಸ್ಪತ್ರೆ ಉತ್ತರ ಕರ್ನಾಟಕ ಜನರ ಸಂಜೀವಿನಿಯಾಗಿದೆ. ನಿತ್ಯ ನೂರಾರು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇದೀಗ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸಾ ಶುಲ್ಕ ಏರಿಕೆಯಾಗಿದೆ. ಹೊರ ರೋಗಿಗಳ ನೊಂದಣಿ ವಿಭಾಗದ ಶುಲ್ಕ 10 ರೂಪಾಯಿಂದ 20 ರೂಪಾಯಿಗೆ ಏರಿಕೆಯಾಗೊದೆ. ಒಳ ರೋಗಿಗಳ ನೊಂದಣಿ ವಿಭಾಗದ ಶುಲ್ಕ 30 ರೂಪಾಯಿಂದ 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ಎಕ್ಸರೇ, ಸ್ಕ್ಯಾನಿಂಗ್, ಜನನ, ಮರಣ ಪ್ರಮಾಣ …

Read More »

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ; ಕೃಷಿ ಪಂಪ್‌ ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್‌ ಪೂರೈಕೆ – ಸಚಿವ ಜಾರ್ಜ್

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇಲ್ಲ, ಸಮಸ್ಯೆಯೂ ಇಲ್ಲ. ಕೃಷಿ ಪಂಪ್‌ ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಇಂದು ಬಿಜೆಪಿಯ ಶಾಸಕ ಸಿದ್ದು ಸವದಿ, ವಿದ್ಯುತ್‌ ಕಡಿತದ ಬಗ್ಗೆ ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಂಪ್‌ ಸೆಟ್‌ಗಳಿಗೆ ಇಡೀ ರಾಜ್ಯದಲ್ಲಿ ಪವರ್‌ ಕಟ್‌ ಇಲ್ಲ. 7 ಗಂಟೆ ವಿದ್ಯುತ್‌ ನೀಡುತ್ತಿದ್ದೇವೆ. ದುರಸ್ತಿ ಸಂದರ್ಭದಲ್ಲಿ ವಿದ್ಯುತ್‌ ಕಡಿತವಾಗಬಹುದು. ಇತ್ತೀಚೆಗೆ ಎಸ್ಕಾಂಗಳ …

Read More »

ಖಾಸಗಿ ಬಡಾವಣೆಗಳ ಅನುಮೋದನೆಗೆ ಸರ್ಕಾರದ ಸಹಮತಿ ಅಗತ್ಯ: ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಮತ್ತು ನಗರ ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಬಡಾವಣೆಗಳ ಅನುಮೋದನೆಗೆ ಇನ್ನು ಮುಂದೆ ಸರ್ಕಾರದ ಸಹಮತಿ ಪಡೆಯಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಸೂಚಿಸಿದ್ದಾರೆ. “ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು/ಯೋಜನಾ ಪ್ರಾಧಿಕಾರಗಳು ಸಾಧಿಸಿರುವ ಪ್ರಗತಿ ಕುರಿತಂತೆ ವಿಕಾಸಸೌಧದಲ್ಲಿ ಸೋಮವಾರ ಪರಿಶೀಲನಾ ಸಭೆ ನಡೆಸಿದ ಸಚಿವರು, ಖಾಸಗಿಯವರು ಭೂಮಿಯನ್ನು ಹೊಂದಿಸಿ/ಖರೀದಿಸಿ ಬಡಾವಣೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿರುವಾಗ ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಅದು …

Read More »

ಕೃಷಿ ಭೂಮಿ ಕೈಗಾರಿಕೆಗೆ ಉದ್ದೇಶಕ್ಕೆ ಬಳಕೆ: ಯೋಜನೆ ಕೈ ಬಿಡಲು ರೈತರ ಪ್ರತಿಭಟನೆ

ಕೃಷಿ ಭೂಮಿ ಕೈಗಾರಿಕೆಗೆ ಉದ್ದೇಶಕ್ಕೆ ಬಳಕೆ: ಯೋಜನೆ ಕೈ ಬಿಡಲು ರೈತರ ಪ್ರತಿಭಟನೆ ವಿಜಯಪುರ ಜಿಲ್ಲೆಯ ತಿಡಗುಂದಿ ಸಮೀಪ 1203 ಎಕರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸುವುದನ್ನು ವಿರೋಧಿಸಿ, ಯೋಜನೆಯನ್ನು ಕೈಬೀಡಬೇಕೆಂದು ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ರೈತರೊಂದಿಗೆ ಬೃಹತ್ ಪ್ರತಿಭಟನೆ ಮಾಡಿದರು. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ರೈತರು ಸರ್ಕಾರದ …

Read More »

ಕಲಾವಿದರ ಸಂಘಕ್ಕೆ ನಾಯಕತ್ವದ ಕೊರತೆ ಇದೆ, ಜಗ್ಗೇಶ್ ಸಾರ್ ಹೇಳಿದ್ರಲ್ಲಿ ತಪ್ಪಿಲ್ಲ: ಸಾಧು ಕೋಕಿಲ

ಬೆಂಗಳೂರು, ಮಾರ್ಚ್​ 03 : ರಾಜ್ಯ ಕಲಾವಿದರ ಸಂಘಕ್ಕೆ ನಾಯಕತ್ವದ ಕೊರತೆ ಇದೆ, ಹಿರಿಯ ನಟ ಜಗ್ಗೇಶ್ (Jaggesh) ಅವರನ್ನು ಹೇಳಿದ್ದು ಸರಿ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಹೇಳಿದರು. ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ಚಿತ್ರರಂಗವಾಗಲೀ, ಕಲಾವಿದರ ಸಂಘವನ್ನಾಗಲೀ ಮುನ್ನಡೆಸುವವರು ಯಾರಾದರೂ ಇದ್ದಾರೆಯೇ? ಅದೊಂದು ಕಾಲವಿತ್ತು, ಡಾ ರಾಜ್ ಕುಮಾರ್ ಅವರು ಕರೆ ನೀಡಿದರೆ ಲಕ್ಷಾಂತರ ಜನ ಸೇರುತ್ತಿದ್ದರು, ಅಂಬರೀಶ್, ವಿಷ್ಣುವರ್ಧನ ಈಗ ನಮ್ಮೊಂದಿಗಿಲ್ಲ, ಅವರಂಥ ನಾಯಕತ್ವ ಯಾರು ನೀಡುತ್ತಾರೆ? …

Read More »

ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ

ಬೆಂಗಳೂರು, :   ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ಏರ್​ಪೋರ್ಟ್​ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನ ಹೊನ್ನಾವರ, ಕಾರವಾರ, ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು. ಗರಿಷ್ಠ ತಾಪಮಾನ ಕರಾವಳಿ ಕರ್ನಾಟಕದಲ್ಲಿ 36-38 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. …

Read More »

ಡಬ್ಬಲ್ ಮರ್ಡರ್ ಮಾಡಿ ಜೈಲುಪಾಲಾಗಿದ್ದ ವಿಚಾರಣಾಧೀನ ಖೈದಿ ಜೈಲಿನಲ್ಲಿ ನೇಣಿಗೆ ಶರಣು

ಹಾವೇರಿ, : ವಿಚಾರಣಾಧೀನ ಕೈದಿ ಜೈಲಿನಲ್ಲಿ ನೇಣಿಗೆ ಶರಣಾಗಿರುವಂತಹ (death) ಘಟನೆ ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜಿಲ್ಲಾಕಾರಾ ಗೃಹದಲ್ಲಿ ನಡೆದಿದೆ. ಕೋಟೆಪ್ಪ ಅಂಬಿಗೇರ್ (42) ನೇಣಿಗೆ ಶರಣಾದ ಖೈದಿ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಕೋಟೆಪ್ಪ ಅಂಬಿಗೇರ್​​ ಸುಮಾರು ಆರುವರೆ ವರ್ಷಗಳ ಹಿಂದೆ ಡಬ್ಬಲ್ ಮರ್ಡರ್ ಮಾಡಿ ಜೈಲು ಪಾಲಾಗಿದ್ದರು. ಹೃದಯ ಸಂಬಂಧಿ ಕಾಯಿಲೆ ಇತ್ತು. ನ್ಯಾಯಾಲಯದಿಂದ ಬೆಲ್ …

Read More »

135 ಸೀಟು ಕೊಟ್ಟಿರುವುದು ನಟ್​​ ಬೋಲ್ಟ್ ರಿಪೇರಿ ಮಾಡುವುದಕ್ಕಲ್ಲ:H.D.K.

ಬೆಂಗಳೂರು: ”ನಟ್​ ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸುವುದಕ್ಕೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ”ಡಿ. ಕೆ. ಶಿವಕುಮಾರ್ ಬಹುಶಃ ಭೂಮಿ ಮೇಲಿಲ್ಲ ಅನಿಸುತ್ತದೆ. ಅಧಿಕಾರ ಹಾಗೆ ಮಾತನಾಡಿಸುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು” ಎಂದು …

Read More »

ದಯಾಮರಣ ಕಾನೂನು ಹೋರಾಟಗಾರ್ತಿ ಎಚ್.ಬಿ.ಕರಿಬಸಮ್ಮ

ದಾವಣಗೆರೆ: ಎಚ್.ಬಿ. ಕರಿಬಸಮ್ಮ 85 ವರ್ಷದ ವೃದ್ಧೆ. 30 ವರ್ಷಗಳ ಕಾಲ ಶಾಲಾ ಮಕ್ಕಳಿಗೆ ಒಳ್ಳೆಯ ಗುರುವಾಗಿ ನೀತಿ ಪಾಠ ಮಾಡಿ ನಿವೃತ್ತಿ ಆಗಿರುವ ಶಿಕ್ಷಕಿ. 24 ವರ್ಷಗಳ ಹಿಂದೆ ತಾನು ಅನುಭವಿಸಿದ ನರಕಯಾತನೆಗೆ ಮುಕ್ತಿ ಬಯಸಿದ್ದ ಎಚ್.ಬಿ. ಕರಿಬಸಮ್ಮ ಅವರು ಕಾನೂನಿನಡಿ ಘನತೆಯಿಂದ ಮರಣ ಹೊಂದುವ ಹಕ್ಕು ಸಿಗಬೇಕೆಂದು ಹೋರಾಡಿದವರಲ್ಲಿ ಇವರೂ ಒಬ್ಬರು. ಕೇಂದ್ರ ಸರ್ಕಾರ ದಯಾಮರಣಕ್ಕೆ ಸಂಬಂಧಿಸಿದಂತೆ ಕಾನೂನಿನಡಿ ಮಾರ್ಗಸೂಚಿಗಳನ್ನು ತಯಾರು ಮಾಡುವಂತೆ ಆಯಾಯ ರಾಜ್ಯಗಳಿಗೆ ಸೂಚನೆ ನೀಡಿದೆ. …

Read More »