Breaking News

ರಾಷ್ಟ್ರೀಯ

ಇನ್ಮುಂದೆ ಮೌಖಿಕ ಆದೇಶದ ಮೇಲೆ ಯಾರೂ ಕಾಮಗಾರಿ ಮಾಡುವಂತಿಲ್ಲ : ಸಿಎಂ ಬೊಮ್ಮಾಯಿ, ‘

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯಿಂದ ಹೆಚ್ಚಿತ್ತಿರುವ ರಾಜ್ಯ ಸರ್ಕಾರ, ಇನ್ಮುಂದೆ ಮೌಖಿಕ ಆದೇಶದ ಮೇಲೆ ಯಾರೂ ಕಾಮಗಾರಿ ಮಾಡುವಂತಿಲ್ಲ ಎಂದು ತಿಳಿಸಿದೆ. ಶಿವಮೊಗ್ಗದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ‘ಲೋಕಲ್ ಬಾಂಡೀಸ್ʼನಲ್ಲಿ, ಪಂಚಾಯತ್ ರಾಜ್ ಬಾಂಡೀಸ್ʼನಲ್ಲೂ ಮೌಖಿಕ ಆದೇಶದ ಮೇಲೆ ಕೆಲಸಗಳು ನಡೆಯುತ್ತವೆ. ಆದ್ರೆ, ನಾನು ಈಗಾಗ್ಲೇ ಪ್ರತಿ ಡಿಪಾರ್ಟ್ಮೆಂಟ್ʼಗೆ ಸೂಚನೆ ನೀಡಿದ್ದೇನೆ. ಯಾವುದೇ ಮೌಖಿಕ ಆದೇಶದ ಮೇಲೆ ಕೆಲಸದ ಕಾಮಗಾರಿ ಮಾಡಬಾರದು. ಒಂದ್ವೇಳೆ ಮಾಡಿದ್ರೆ, …

Read More »

ವಾಣಿವಿಲಾಸ ಮಾದರಿಯಲ್ಲಿ ಕೆ.ಸಿ.ಜನರಲ್‍ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ

ಬೆಂಗಳೂರು, ಏ.20- ವಾಣಿ ವಿಲಾಸ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ. ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸ ಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದನ್ನು ವಾಣಿ …

Read More »

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್

ಬೆಂಗಳೂರು, ಏ.19. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ಯಾವುದೇ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಗಳಲ್ಲಿ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ಆದೇಶಿದೆ. ಮಾಲೂರು ಪುರಸಭೆಯ ಕೆ.ಲಕ್ಷ್ಮೀಕಾಂತ ಸೇರಿ ಆರು ನಾಮ ನಿರ್ದೇಶಿತ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾ. ಅಲೋಕ್ ಅರಾಧೆ ಮತ್ತು ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ದ ಕಲಂ 243ಆರ್(2)(ಎ) …

Read More »

ಏರ್​ಪೋರ್ಟ್​ಗಳ​ನ್ನು ಮಾರಾಟ ಮಾಡ್ತಿಲ್ಲ, ಗುತ್ತಿಗೆಗೆ ನೀಡುತ್ತಿದ್ದೇವೆ: ಸಚಿವ ಸಿಂಧಿಯಾ

: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ರಾಜನಂದಗಾಂವ್‌ಗೆ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿ ಅಗತ್ಯ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಸಿಂಧಿಯಾ ಜೊತೆ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ರಾಜನಂದಗಾಂವ್ ಸಂಸದ ಸಂತೋಷ್ ಪಾಂಡೆ ಮತ್ತು ಎಲ್ಲಾ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಕೇಂದ್ರ ಸಚಿವ ಸಿಂಧಿಯಾ, ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳು ಮತ್ತು ನೌಕರರಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದೇವೆ. ಸಭೆಯಲ್ಲಿ …

Read More »

ರಾಜ್ಯದ ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕೆಲವು ಕಡೆಗಳಲ್ಲಿ ಪೈಸೆಗಳಷ್ಟು ಏರಿಕೆ ಕಂಡಿದೆ. ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆ ಯಥಾಸ್ಥಿತಿ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಒಂದು ಲೀಟರ್​​ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ ಒಂದು ಲೀಟರ್​ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್​ಗೆ ರಾಜಧಾನಿಯಲ್ಲಿ 114.06 ರೂಪಾಯಿ ದರ ನಿಗದಿಯಾಗಿದೆ. ಬೆಂಗಳೂರು ಹೊರತುಪಡಿಸಿ …

Read More »

ಚಾಕೊಲೇಟ್ ಕೊಡ್ತೀನೆಂದು ಪುಸಲಾಯಿಸಿ ರೇಪ್ & ಕಿಡ್ನಾಪ್; ಅಪರಾಧಿಗೆ 10 ವರ್ಷ ಜೈಲು

ಬೆಂಗಳೂರು: ಚಾಕೊಲೇಟ್ ಕೊಡಿಸುವ ನೆಪದಲ್ಲಿ ಮಗು ಒಂದನ್ನ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದ ಆರೋಪಿಗೆ ಆನೇಕಲ್ ತಾಲೂಕಿನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಶ್ರೀಕಾಂತ್ ಅವರು 10 ವರ್ಷ ಜೈಲು ಶಿಕ್ಷೆಯನ್ನ ವಿಧಿಸಿದ್ದಾರೆ. ಲೋಕನಾಥ್ ಬಹದ್ದೂರ್ ಜೈಲು ಶಿಕ್ಷೆಗೆ ಒಳಗಾದ ಅಪರಾಧಿ. ಏನಿದು ಪ್ರಕರಣ..? ನೇಪಾಳಿ ಮೂಲದವನಾದ ಲೋಕನಾಥ್ ಬಹದ್ದೂರ್ 2017ರಲ್ಲಿ ಮಗುವನ್ನ ಕಿಡ್ನಾಪ್ ಮಾಡಿ ಅತ್ಯಾಚಾರ ನಡೆಸಿದ್ದ. ಅತ್ತಿಬೆಲೆಯಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡ್ತಿದ್ದ ಈತ, ಮನೆ ಎದುರು …

Read More »

ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಗೂ ಸರ್ಕಾರ ಬುಲ್ಡೋಜರ್ ಶಾಕ್ ನೀಡಿದ್ದು, ದೆಹಲಿಯಲ್ಲಿ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಒಡೆದು ಹಾಕಲು ನಗರ ಪಾಲಿಕೆ ಆದೇಶ ನೀಡಿದೆ. ಹನುಮ ಜಯಂತಿಯಂದು ದೆಹಲಿಯಲ್ಲಿ ನಡೆದ ಜಹಾಂಗೀರ್‌ಪುರಿ ಹಿಂಸಾಚಾರದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಮನವಿಯಲ್ಲಿ ಏ.20 ಮತ್ತು 21ರಂದು …

Read More »

ಅಪ್ರಾಪ್ತೆ ಮೇಲೆ ತಂದೆ, ಅಣ್ಣನಿಂದ ಅತ್ಯಾಚಾರ , ಕಿರುಕುಳ

ಮುಂಬೈ: ಅಣ್ಣ, ತಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಆಕೆಯ ಅಜ್ಜ ಹಾಗೂ ಚಿಕ್ಕಪ್ಪ ಕಳೆದ 5 ವರ್ಷಗಳಿಂದ ಕಿರುಕುಳ ನೀಡಿದ ಘಟನೆ ಪುಣೆದಲ್ಲಿ ನಡೆದಿದೆ. 11 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಸಹೋದರ, ಸಂತ್ರಸ್ತೆಯ ತಂದೆ (45) ಪ್ರತ್ಯೇಕವಾಗಿ ಅತ್ಯಾಚಾರವೆಸಗಿದ್ದಾರೆ. ಇದರ ಜೊತೆಗೆ ಆಕೆಯ ಅಜ್ಜ(60) ಹಾಗೂ ಚಿಕ್ಕಪ್ಪ (25) ಕಳೆದ 5 ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ಮೂಲತಃ ಬಿಹಾರದವರಾಗಿದ್ದು, ಸದ್ಯ ಪುಣೆಯಲ್ಲಿ …

Read More »

ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ನೀವು ಸಿದ್ಧ ಇದ್ದೀರಾ? ‘

ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭಾದ ವಿಪಕ್ಷ ನಾಯಕ ಸಿದ್ದರಾಮಯ್ಯನವರ ನಡುವೆ ಸರಣಿ ಟ್ವೀಟ್ ಸಮರ ಈಗ ತಾರಕಕ್ಕೇರಿದೆ.ಈಗ ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ ‘ನಿತ್ಯ ನನ್ನ ವಿರುದ್ಧ ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ’ ಎಂದು ಪ್ರಶ್ನಿಸಿದ್ದಾರೆ. ‘ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ …

Read More »

ಮನೆಯಲ್ಲಿದ್ದ ಕಪಾಟು ಒಡೆದು ಚಿನ್ನಾಭರಣ ಸಹಿತ ನಗದು ಹಣ ಕಳ್ಳತನ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಕಳ್ಳರು ನುಗ್ಗಿ ಮನೆಯಲ್ಲಿದ್ದ ಕಪಾಟು ಒಡೆದು ಚಿನ್ನಾಭರಣ ಸಹಿತ ನಗದು ಹಣ ಕಳ್ಳತನ ಮಾಡಿದ ಘಟನೆ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕಕ್ಕಿಂಜೆ ಸಮೀಪದ ಕತ್ತರಿಗುಡ್ಡೆಯಲ್ಲಿ ನಡೆದಿದೆ.   ಇಲ್ಲಿನ ನಿವಾಸಿ ಇಕ್ಬಾಲ್ ಎಂಬವರಿಗೆ ಸೇರಿದ ಮನೆಯಲ್ಲಿ ಅವರ ತಂಗಿ ಝರಿನಾ ಮತ್ತು ಇಬ್ಬರು ಮಕ್ಕಳು ಮಾತ್ರ ವಾಸವಾಗಿದ್ದು, ಗಂಡ ಇಸ್ಮಾಯಿಲ್ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಝರಿನಾ ಮತ್ತು ಮಕ್ಕಳು ಮೂರು …

Read More »