ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ. ಈ ಮಾದರಿಯ ಸಿನಿಮಾಗಳಲ್ಲೇ ಅತೀ ಕಡಿಮೆ ಸಮಯದಲ್ಲಿ ಇಷ್ಟೊಂದು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ. ಈ ಕುರಿತು ಬಾಲಿವುಡ್ ಖ್ಯಾತ ಟ್ರೇಡ್ ಅನಾಲಿಸಿಸ್ಟ್ ಟ್ವೀಟ್ ಕೂಡ ಮಾಡಿದ್ದು, ಆಯಾ ದಿನದ ಗಳಿಕೆಯ ಲೆಕ್ಕ ಕೊಟ್ಟಿದ್ದಾರೆ. ಮೊದಲ ದಿನ 3.55 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದ್ದರೆ, …
Read More »ಮಣಿಪುರದಲ್ಲಿ ಬಿರೆನ್ ಸಿಂಗ್, ಗೋವಾದಲ್ಲಿ ಸಾವಂತ್ ಸಿಎಂ ಆಗಿ ಮುಂದುವರಿಕೆ ಸಾಧ್ಯತೆ
ನವದೆಹಲಿ: ಮಣಿಪುರದಲ್ಲಿ ಎನ್. ಬಿರೆನ್ ಸಿಂಗ್ ಹಾಗೂ ಗೋವಾದಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಗೋವಾದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಹೊಸ ಸರ್ಕಾರ ರಚನೆಯ ಸಂಬಂಧ ಪ್ರಮೋದ್ ಸಾವಂತ್ …
Read More »ಕಾಂಗ್ರೆಸ್ ಲೋಫರ್ ಪಾರ್ಟಿ: ಯತ್ನಾಳ್
ಕಾಂಗ್ರೆಸ್ ಲೋಫರ್ ಪಾರ್ಟಿ ಎಂದು ಕಾಂಗ್ರೆಸ್ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ವಿಜಯಪುರ ನಗರದ ತೊರವಿ ಎಲ್.ಟಿ ನಂ 4ರಲ್ಲಿ ಮಾದ್ಯಮಗಳಿಗೆ ಯತ್ನಾಳ್ ಈ ರೀತಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಲೋಫರ್ ಪಾರ್ಟಿ ಎಂದು ಇತ್ತಿಚೆಗೆ ಬಿಜೆಪಿಗೆ ಬ್ರೋಕರ್ ಪಾರ್ಟಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗೆ ಯತ್ನಾಳ್ ಟಾಂಗ್ ನೀಡಿದರು. ಬಿಜೆಪಿಗೆ ಬ್ರೋಕರ್ ಎಂದವರಿಗೆ ಕಾಂಗ್ರೆಸ್ ಲೋಫರ್ ಪಾರ್ಟಿ ಅನ್ನೋದು …
Read More »ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್ನಲ್ಲಿ ಆಕಸ್ಮಿಕವಾಗಿ ಬೆಂಕಿ
ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಲಕ್ಷಾಂತರ ರೂಪಾಯಿ ಮೌಲ್ಯದ ಕೈಗಾರಿಕಾ ವೇಸ್ಟೇಜ್ ಬೆಂಕಿಗಾಹುತಿಯಾಗದೆ. ಹೌದು ಇತ್ತೀವೆಗೆ ಬೆಳಗಾವಿ ನಗರದಲ್ಲಿ ಬೆಂಕಿ ಅವಘಡಗಳಿ ದಿನದಿಂದ ದಿನಕ್ಕೆ ಹೆಚಚಾಗುತ್ತಿವೆ. ಆಕಸ್ಮಿಕವಾಗಿ ಕಾಣಿಸಿಕೊಳ್ಳುವ ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತಿಗಳು ಬೆಂಕಿಗೆ ಆಹುತಿಯಾಗುತ್ತಿವೆ. ಹಾಗೆಯೇ ಇಂದು ಆಟೋ ನಗರದಲ್ಲಿನ ವಿವಿಧ ಇಂಡಸ್ಟ್ರೀಸ್ಗಳ ವೇಸ್ಟೇಜ್ ಸ್ಟಾಕ್ ಮಾಡುವ ಸ್ಟಾಕ್ ಯಾರ್ಡ್ನಲ್ಲಿ ಇಂದಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ …
Read More »ತುಕ್ಕಾನಟ್ಟಿ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನ
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ್ ಉಪ್ಪಾರ್ ಅವರ ನೇತೃತ್ವ ಹಾಗೂ ಬೈಲಹೊಂಗಲನ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಮ್ಮ ಪ್ರತಿμÁ್ಠನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ ಉಪಸ್ಥಿತಿ ಇರಲಿದ್ದಾರೆ …
Read More »ತುಮಕೂರಿನ ಲಾಡ್ಜ್ನಲ್ಲಿ ಹೆಂಡ್ತಿ ಕಾಲನ್ನೇ ಕತ್ತರಿಸಿದ ಗಂಡ! ಬಳಿಕ ನಡೆಯಿತು ಮತ್ತೊಂದು ನಾಟಕ
ತುಮಕೂರು: ಇಲ್ಲೊಬ್ಬ ಲಾಡ್ಜ್ನಲ್ಲಿ ತನ್ನ ಪತ್ನಿಯ ಕಾಲನ್ನೇ ಕತ್ತರಿಸಿದ್ದಾನೆ. ಬಳಿಕ ಲಾಡ್ಜ್ ಮಾಲೀಕರ ಬಳಿ ಬಂದು ‘ಹೆಂಡತಿಯ ಕಾಲು ಕತ್ತರಿಸಿದ್ದೇನೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಬೇಕು. ನಾಲ್ವರು ಹುಡುಗರನ್ನು ಕಳುಹಿಸಿ’ ಎಂದಿದ್ದಾನೆ. ಅಷ್ಟೇ ಅಲ್ಲ, ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ… ಇಂತಹ ಅಮಾನುಷ ಘಟನೆ ತುಮಕೂರಿನ ಅಶೋಕ ಲಾಡ್ಜ್ ಆಯಂಡ್ ಹೋಟೆಲ್ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಗಂಡನಿಂದ ಹಲ್ಲೆಗೆ ಒಳಗಾದಾಕೆ ಹೆಸರು ಅನಿತಾ. ಈಕೆಯ ಗಂಡ ಬಾಬು ಆರೋಪಿ. ನಾಲ್ಕು ವರ್ಷದ …
Read More »ಮಾತನಾಡಬೇಕೆಂದು ಪತ್ನಿಯನ್ನು ಹೋಟೆಲ್ಗೆ ಕರೆದು ಆಕೆಯಬರ್ಬರ ಹತ್ಯೆ
ವಿಜಯವಾಡ: ಮಾತನಾಡಬೇಕೆಂದು ಪತ್ನಿಯನ್ನು ಹೋಟೆಲ್ಗೆ ಕರೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಗಾಂಧಿನಗರದಲ್ಲಿ ನಡೆದಿದೆ. ಗವರ್ನರ್ ಪೇಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಂಚಿಕಚರ್ಲಾ ಮೂಲದ ಶರೊನ್ ಪರಿಮಳ ಎಂಬಾಕೆ 2015ರಲ್ಲಿ ವೇಮುಲಪಲ್ಲಿ ವಲಯದ ಉಪ್ಪಾಳ ಪ್ರಸಾದ್ ರಾವ್ ಎಂಬುವರನ್ನು ಮದುವೆ ಆಗಿದ್ದರು. ಆರಂಭದಲ್ಲಿ ದಂಪತಿ ಸುಖಕರ ಜೀವನ ನಡೆಸುತ್ತಿದ್ದರು. ನಂತರದ ದಿನಗಳಲ್ಲಿ …
Read More »ಪೊಲೀಸರ ಗುಂಡಿಗೆ ಇಬ್ಬರು ಅತ್ಯಾಚಾರ ಆರೋಪಿಗಳು ಬಲಿ
ಗುವಾಹಟಿ(ಅಸ್ಸೋಂ): ಕೇವಲ 24 ಗಂಟೆಯೊಳಗೆ ಎರಡು ಎನ್ಕೌಂಟರ್ ನಡೆಸಿರುವ ಅಸ್ಸೋಂ ಪೊಲೀಸರು ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಎನ್ಕೌಂಟರ್ ಮಾಡಿದ್ದಾರೆ. ಮೊದಲನೇ ಎನ್ಕೌಂಟರ್ ಗುವಾಹಟಿ ಹಾಗೂ ಎರಡನೇಯದು ಉದಲಗುರಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮಾರ್ಚ್ 10ರಂದು ರಾಜೇಶ್ ಎಂಬ ವ್ಯಕ್ತಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಮರುದಿನ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದ ಪೊಲೀಸರು, ಆತನನ್ನ …
Read More »ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಪ್ರಕರಣ, ಇಂದೇ ಶುರುವಾಗುತ್ತಾ ವಿಚಾರಣೆ?
ನವದೆಹಲಿ, ಮಾ. 16: ಶಾಲೆಗಳಲ್ಲಿ ಹಿಜಾಬ್ (Hijab) ಧರಿಸುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಈಗ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದೆ. ನಿನ್ನೆ (ಮಾರ್ಚ್ 15ರಂದು) ಕರ್ನಾಟಕ ಹೈಕೋರ್ಟ್ (Karnataka High Court) ನೀಡಿರುವ ತೀರ್ಪನ್ನು ಪ್ರಶ್ನಿಸಿ ನಿಬಾ ನಾಜ್ ಎಂಬ ವಿದ್ಯಾರ್ಥಿನಿ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು ಇಂದು ಅವರ ಪರ ವಕೀಲರು ಓಪನ್ ಕೋರ್ಟಿನಲ್ಲಿ ಮೆನ್ಷನ್ ಕೂಡ ಮಾಡಲಿದ್ದಾರೆ. ಇದೇ ರೀತಿ ಇಂದು ಇನ್ನೂ …
Read More »ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಪೆರಾರಿವಾಲನ್ ಬಿಡುಗಡೆ
31 ವರ್ಷಗಳ ಜೈಲು ಶಿಕ್ಷೆಯ ನಂತರ, ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎಜಿ ಪೆರಾರಿವಾಲನ್ ಮಂಗಳವಾರ ಜಾಮೀನಿನ ಮೇಲೆ ಚೆನ್ನೈನ ಪುಝಲ್ ಸೆಂಟ್ರಲ್ ಜೈಲಿನಿಂದ ಹೊರಬಂದರು. ಮಾರ್ಚ್ 9 ರಂದು ಸುಪ್ರೀಂ ಕೋರ್ಟ್ ಪೆರಾರಿವಾಲನ್ ಅವರಿಗೆ ಜಾಮೀನು ನೀಡಿತ್ತು.ಜೈಲಿನ ಆವರಣದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಪೆರಾರಿವಾಲನ್ ಮತ್ತು ಅವರ ತಾಯಿ ಅರ್ಪುತಮ್ ಅಮ್ಮಾಳ್ ‘ನ್ಯಾಯಕ್ಕಾಗಿ ತಮ್ಮ ಹೋರಾಟದಲ್ಲಿ ತಮ್ಮೊಂದಿಗೆ ನಿಂತ’ ಎಲ್ಲರಿಗೂ ಧನ್ಯವಾದ ಹೇಳಿದರು. ‘ಪೆರಾರಿವಾಲನ್ ಸೇರಿದಂತೆ …
Read More »