ಬೆಂಗಳೂರು: ರಾಜ್ಯದಲ್ಲಿ ಬಿ.ಝಡ್. ಜಮೀರ್ ಅಹಮದ್ ಖಾನ್ ಸೇರಿ 6 ಮಾಜಿ ಸಚಿವರು ಸರ್ಕಾರದಿಂದ ನೀಡಲಾಗಿದ್ದ ವಸತಿ ಗೃಹಗಳ ಬಾಡಿಗೆ ಮತ್ತು ಗೃಹೋಪಯೋಗಿ ವಸ್ತುಗಳ ಬಾಬ್ತುಗಳನ್ನು ಮೂರು ವರ್ಷವಾದರೂ ಪಾವತಿಸಿಲ್ಲ. ರಾಜ್ಯದಲ್ಲಿ ಸಚಿವರಾದವರಿಗೆ ಸರ್ಕಾರದಿಂದ ಆಡಳಿತ ಕಾರ್ಯವೈಖರಿಗೆ ಅನುಕೂಲ ಆಗುವಂತೆ ವಸತಿ ಗೃಹ ನೀಡಲಾಗುತ್ತದೆ. ಕೆಲವರು ಅಧಿಕಾರ ಪೂರ್ಣಗೊಂಡರೂ ವಸತಿ ಮನೆ ಬಿಟ್ಟು ಹೋಗದೇ ಇದ್ದಲ್ಲಿ, ಎಷ್ಟು ದಿನಗಳವರೆಗೆ ಉಳಿದುಕೊಂಡಿರುತ್ತಾರೋ ಅಷ್ಟು ಅವಧಿಗೆ ಬಾಡಿಗೆ ಮತ್ತು ಗೃಹೋಪಯೋಗಿ ವಸ್ತುಗಳ ಬಾಬ್ತು ಪಾವತಿಸಬೇಕು. …
Read More »ಮತ್ತೆ ಬೆಲೆ ಏರಿಕೆಯ ಬರೆ: ದಿನಬಳಕೆ ಗ್ರಾಹಕ ಉತ್ಪನ್ನಗಳು ಶೇ.10 ತುಟ್ಟಿ ಸಾಧ್ಯತೆ
ನವದೆಹಲಿ: ಬೆಲೆ ಏರಿಕೆ ಆಘಾತದಿಂದ ಈಗಾಗಲೇ ಕಂಗೆಟ್ಟಿರುವ ಸಾಮಾನ್ಯ ಜನರಿಗೆ ಮತ್ತೊಂದು ಸುತ್ತಿನ ದುಬಾರಿ ಬರೆ ಬೀಳುವುದು ಖಚಿತವಾಗಿದೆ. ಸಗಟು ಮತ್ತು ಚಿಲ್ಲರೆ ಮಾರಾಟ ಹಣದುಬ್ಬರದ ದರ ಏರಿಕೆಯಾದ ಬೆನ್ನಲ್ಲೇ ದಿನಬಳಕೆಯ ಶೀಘ್ರ ಬಿಕರಿಯಾಗುವ ಗ್ರಾಹಕ ಸರಕುಗಳ (ಎಫ್ಎಂಸಿಜಿ) ಬೆಲೆಯನ್ನು ಶೇ.10 ಹೆಚ್ಚಿಸಲು ತಯಾರಿಕಾ ಕಂಪನಿಗಳು ಮುಂದಾಗಿವೆ. ಕೆಲವು ಕಂಪನಿಗಳು ಈಗಾಗಲೇ ಏರಿಕೆ ಮಾಡಿಯೂ ಆಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ಉತ್ಪಾದನಾ ವೆಚ್ಚ ಹೆಚ್ಚಳದ ಕಾರಣ ಕಳೆದ ಜನವರಿಯಲ್ಲಿ ಎಫ್ಎಂಸಿಜಿ …
Read More »ಕೋ-ಜನರೇಷನ್ಗೆ ಬೇಕಿದೆ ನವೀಕರಣ; 62 ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಂಕಷ್ಟ!
ಬೆಳಗಾವಿ :ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 72 ಸಕ್ಕರೆ ಕಾರ್ಖಾನೆಗಳ ಪೈಕಿ 60 ಸಕ್ಕರೆ ಕಾರ್ಖಾನೆಗಳು ಕೋಜನರೇಷನ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದರೂ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ನೆರೆ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ಬಲ ನೀಡುವ ದೃಷ್ಠಿಯಿಂದ ಮಹಾರಾಷ್ಟ್ರ ಸರ್ಕಾರ, ಅಲ್ಲಿನ ಸಕ್ಕರೆ ಕಾರ್ಖಾನೆಗಳಿಗೆ ಪ್ರತಿ ಯುನಿಟ್ಗೆ 5.80 ರೂ. ವಿದ್ಯುತ್ ದರ ನೀಡುತ್ತಲಿದೆ. ಆದರೆ ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳ ಕೋ-ಜನರೇಷನ್ ವಿದ್ಯುತ್ ಉತ್ಪಾದನೆಯ …
Read More »ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ತಡೆಗೋಡೆ ಬಿರುಕು..! ಯಾವುದೇ ಕ್ಷಣದಲ್ಲಾದರೂ ತಡೆಗೋಡೆ ಬೀಳುವ ಆತಂಕ
ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ತಡೆಗೋಡೆ ಬಿರುಕು ಬಿಟ್ಟಿದೆ. ಯಾವುದೇ ಕ್ಷಣದಲ್ಲಾದರೂ ತಡೆಗೋಡೆ ಬೀಳುವ ಆತಂಕ, ಅಪಾಯ ಇದೆ. 10 ಕಿಲೋ ಮೀಟರ್ ಉದ್ದದ ಫ್ಲೈಓವರ್ ಇದಾಗಿದೆ. ಫ್ಲೈಓರ್ ನ ಮಧ್ಯ ಭಾಗ ಲೇಬೈ ಬಳಿ ಬಿರುಕು ಬಿಟ್ಟಿದೆ. ಕೆಲ ತಿಂಗಳ ಹಿಂದೆ ಇದೇ ಲೇಬೈ ಬಳಿ ಅಪಘಾತವಾಗಿತ್ತು. ಇತ್ತೀಚೆಗೆ ಅಪಘಾತದಲ್ಲಿ ತಡೆಗೋಡೆ ಬಿರುಕುಬಿಟ್ಟಿತ್ತು. ಆದರೆ ತಡೆಗೋಡೆ ದುರಸ್ತಿ ಮಾಡದೆ, ಬಿಇಪಿಟಿಎಲ್ ಸಂಸ್ಥೆ ಹಾಗೆಯೇ ಬಿಟ್ಟಿದೆ. ಗೋಡೆ ಬದಲಿಗೆ ಬ್ಯಾರಿಕೇಡ್ …
Read More »ಹಿಜಾಬ್ ತೀರ್ಪು ನೀಡಿದ ಮೂವರು ನ್ಯಾಯಾಧೀಶರಿಗೆ ‘Y’ ಶ್ರೇಣಿಯ ಭದ್ರತೆ: ಸಿಎಂ
ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿರುವ ಮುಖ್ಯ ನ್ಯಾಯಮೂರ್ತಿ ಸೇರಿ ಮೂವರು ನ್ಯಾಯಾಧೀಶರಿಗೆ ವೈ ಶ್ರೇಣಿಯ ಭದ್ರತೆ ನೀಡಲು ನಿರ್ಧರಿಸಿದ್ದು, ಕೊಲೆ ಬೆದರಿಕೆ ಹಾಕಿರುವ ಆರೋಪಿಗಳನ್ನು ತಮಿಳುನಾಡಿನಿಂದ ಕರ್ನಾಟಕಕ್ಕೆ ಕರೆತಂದು ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರ ಮೇಲೆ ಬೆದರಿಕೆ …
Read More »ಸಿದ್ದರಾಮಯ್ಯಗೆ ಹಿಂದಿ ಬರುವುದಿಲ್ಲ, ಸಿನಿಮಾ ನೋಡುವುದಿಲ್ಲ:ಜೋಶಿ
ಧಾರವಾಡ: ಸಿದ್ದರಾಮಯ್ಯ ಅವರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ, ಹೀಗಾಗಿ ಸಿನಿಮಾ ನೋಡುವುದಿಲ್ಲ ಅಂತಾರೆ. ಬೇರೆ ಸಿನಿಮಾ ನೋಡೋಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧದಿಂದಲೇ ಸಿನಿಮಾ ಜನಪ್ರಿಯ ಆಗಿದೆ. ಸಿದ್ದರಾಮಯ್ಯ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ ನೋಡುವುದಿಲ್ಲ. ಬೇರೆ ಸಿನಿಮಾ ನೋಡಲು ಹೋಗುತ್ತಾರೆ. ಈ ಸಿನಿಮಾಗೆ ಇಂಗ್ಲೀಷ್ ಸಬ್ …
Read More »ಕಾಂಗ್ರೆಸ್ ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೆ,ನಾನು ಭಗವದ್ಗೀತೆ ವಿರೋಧಿಯಲ್ಲ: ಸಿದ್ದರಾಮಯ್ಯ
ಮಂಗಳೂರು: ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರುವ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇವೆ ಎಂದರು.ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ …
Read More »ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಹಾಲಿನ ದರ ಹೆಚ್ಚಳ ಸಾಧ್ಯತೆ
ಬೆಳಗಾವಿ: ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ ಕೈಗೊಳ್ಳುವ ನಿರ್ಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಹಾಲಿನ ದರ ಪರಿಷ್ಕರಣೆ ಮಾಡುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಿ …
Read More »ಮೋಳವಾಡದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ : ಸಮರ್ಪಕ ಪುನರ್ವಸತಿ ಕಲ್ಪಿಸಲು ಗ್ರಾಮಸ್ಥರ ಮನವಿ
ಬೆಳಗಾವಿ : ಆಡಳಿತವನ್ನು ಜನರ ಮನೆಬಾಗಿಲಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಆಶಯದಂತೆ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಕೃಷ್ಣಾ ಹೊಳೆದಂಡೆಯ ಕಾಗವಾಡ ತಾಲೂಕಿನ ಮೋಳವಾಡ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿದರು. ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯನ್ನು ಗ್ರಾಮದ ಹಿರಿಯರು ಅಲಂಕೃತ ಎತ್ತಿನ ಬಂಡಿಯಲ್ಲಿ ಬರಮಾಡಿಕೊಂಡರು. ಝಾಂಜ್, ಡೊಳ್ಳು, ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಮಹಾಲಕ್ಷ್ಮಿ ಮಂದಿರದವರೆಗೆ ಜಿಲ್ಲಾಧಿಕಾರಿಯನ್ನು ಕರೆದೊಯ್ದರು. ಗ್ರಾಮದ …
Read More »ನನ್ನನ್ನು ಮೋದಿ ಚಮಚಾ ಎನ್ನುತ್ತಿದ್ದಾರೆ. ಇದಕ್ಕೆ ನಾನು ಕೇರ್ ಮಾಡುವುದಿಲ್ಲ :ಪ್ರಕಾಶ್ ಬೆಳವಾಡಿ
ಮೈಸೂರು, ಮಾರ್ಚ್ 18: ಪ್ರಧಾನಿ ನರೇಂದ್ರ ಮೋದಿಯವರು ಒಳ್ಳೆಯ ಕೆಲಸ ಮಾಡಿದಾಗ ನಾನು ಅವರನ್ನು ಬೆಂಬಲಿಸಿರುವುದು ನಿಜ. ಹಾಗಾಗಿ, ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ಬಂದ ಬಳಿಕವೂ ನನ್ನನ್ನು ಮೋದಿ ಚಮಚಾ ಎನ್ನುತ್ತಿದ್ದಾರೆ. ಇದಕ್ಕೆ ನಾನು ಕೇರ್ ಮಾಡುವುದಿಲ್ಲ ಎಂದು ನಟ ಕಂ ನಿರ್ದೇಶಕ ಪ್ರಕಾಶ್ ಬೆಳವಾಡಿ ತಿಳಿಸಿದ್ದಾರೆ. ಮೈಸೂರಿನ ಡಿಆರ್ಸಿಯಲ್ಲಿ ವಿವಿಧ ಕ್ಷೇತ್ರದ ಪ್ರಮುಖರ ಜತೆ ಆಯೋಜಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆ ಬಳಿಕ ಮಾತನಾಡಿದ …
Read More »
Laxmi News 24×7