ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಸುಮಾರು 50 ನಿಮಿಷಗಳ ಕಾಲ ಚರ್ಚಿಸಿದ್ದಾರೆ. ಹಾಟ್ಲೈನ್ ಮೂಲಕ ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ. ವಿಶ್ವ ಸಂಸ್ಥೆಯ ವೋಟಿಂಗ್ನಲ್ಲಿ ಭಾರತ ತಟಸ್ಥ ನಿಲುವು ತಾಳಿದ್ದಕ್ಕೆ ಹಾಗೂ ಭಾರತ ರಷ್ಯಾ ವಿರುದ್ಧ ಮತ ಚಲಾಯಿಸದೆ, ಮತದಾನದಿಂದ ದೂರ ಉಳಿದಿದ್ದಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಬಿಗ್ ಆಫರ್ ನೀಡಿದ್ದಾರೆ. ಕಡಿಮೆ ಬೆಲೆಯಲ್ಲಿ ಶೇ.25 ರಿಂದ ಶೇ.27 …
Read More »ಶಿಕ್ಷಕರ ವಿರುದ್ಧ ಠಾಣೆಯ ಮೆಟ್ಟಿಲೇರಿದ 3ನೇ ಕ್ಲಾಸ್ ವಿದ್ಯಾರ್ಥಿ: ಬಾಲಕನ ಮಾತು ಕೇಳಿ ಪೊಲೀಸರೇ ಶಾಕ್!
ಶಿಕ್ಷಕರ ವಿರುದ್ಧ 8 ವರ್ಷದ ಬಾಲಕನೊಬ್ಬ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಅಪರೂಪದ ಪ್ರಸಂಗ ತೆಲಂಗಾಣದ ಮೆಹಬೂಬಬಾದ್ ಜಿಲ್ಲೆಯ ಬಯ್ಯಾಪುರಂ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸ್ ಠಾಣೆಗೆ ಅಳುತ್ತಾ ಬಂದ ಬಾಲಕನನ್ನು ಪೊಲೀಸರು ಪ್ರಶ್ನಿಸಿದಾಗ, ಬಾಲಕ ಕೊಟ್ಟ ಉತ್ತರ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ವಿವರಣೆಗೆ ಬರುವುದಾದರೆ, ಅನಿಲ್ ಹೆಸರಿನ ಬಾಲಕ ಬಯ್ಯಾರಾಮ್ ಮಂಡಲದ ಖಾಸಗಿ ಶಾಲೆಯೊಂದರಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಶನಿವಾರ ಪೊಲೀಸ್ ಠಾಣೆಗೆ ಆಗಮಿಸಿದ ಬಾಲಕ, ತನ್ನ ಶಾಲಾ …
Read More »ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …
Read More »ಬಡವರಿಗಾಗಿ ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ: ಸಿದ್ದರಾಮಯ್ಯ
ನಾವು ಅಧಿಕಾರದಲ್ಲಿ ಇದ್ದಿದ್ದರೆ ಬಡವರಿಗೆ ಮನೆ ನೀಡುತ್ತಿದ್ದೆವು. 1 ಲಕ್ಷ ಮನೆಗಳನ್ನು ಬಡವರಿಗಾಗಿ ನೀಡುತ್ತಿದ್ದೆವು. ಆದ್ರೆ ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಕುಮಾರಸ್ವಾಮಿ ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ. ಕಾಂಗ್ರೆಸ್ಗೆ ಓಟು ಹಾಕಿದರೆ ನನಗೇ ಓಟು ಹಾಕಿದಂತೆ ಎಂದರು.
Read More »10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …
Read More »ನವವಧು ಮೇಲೆ ಪತಿ ಸಹೋದರನಿಂದಲೇ ಅತ್ಯಾಚಾರ
ಆಕೆಗೆ ಹದಿನೈದು ದಿನಗಳ ಹಿಂದೆ ಮದುವೆಯಾಗಿತ್ತು. ಹೊಸ ಜೀವನದ ಹೊಸ್ತಿಲಿಗೆ ಆಸೆಗಣ್ಣುಗಳಿಂದಲೇ ಗಂಡನ ಮನೆಗೆ ಹೆಜ್ಜೆ ಇಟ್ಟಿದ್ದ ಆಕೆಗೆ, ತಿಂಗಳು ಕಳೆಯುವ ಮುನ್ನವೇ ನರಕ ದರ್ಶನವಾಗಿದೆ. ತನ್ನ ಗಂಡನ ಸಹೋದರನೆ ಇಪ್ಪತ್ತು ವರ್ಷದ ನವವಧುವಿನ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ್ದಾನೆ. ಈ ಅಮಾನವೀಯ, ಅನಾಗರಿಕ ಘಟನೆ ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ, ಡಾಂಕುರ್ ಪ್ರದೇಶದಲ್ಲಿ ಗುರುವಾರದಂದು ನಡೆದಿದೆ. ಹೀನ ಕೃತ್ಯ ಎಸಗಿದ ಪಾಪಿ ತಲೆಮರೆಸಿಕೊಂಡಿದ್ದು, ಪೊಲೀಸರ ವಿಶೇಷ ತಂಡವೊಂದು ಆತನನ್ನು ಹುಡುಕಲು …
Read More »ಒಂದೇ ಹಳಿಯಲ್ಲಿ ಎರಡು ರೈಲು – ಅಪಾಯದಿಂದ ಪಾರಾಗುವ ಹೊಸ ತಂತ್ರಜ್ಞಾನ
ಭಾರತೀಯ ರೈಲ್ವೇ ಅಭಿವೃದ್ಧಿ ಪಡಿಸಿದ ಸ್ವಯಂ ಚಾಲಿತ ರೈಲು ಸಂರಕ್ಷಣಾ ವ್ಯವಸ್ಥೆ(ಎಟಿಪಿ)ಯ ಹೊಸ ‘ಕವಚ’ ತಂತ್ರಜ್ಞಾನವನ್ನು ಶುಕ್ರವಾರ ಪರೀಕ್ಷಿಸಲಾಯಿತು. ಪರೀಕ್ಷೆಯನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಶ್ಣವ್ ಕೂಲಂಕುಶವಾಗಿ ವೀಕ್ಷಿಸಿ ತಂತ್ರಜ್ಞಾನವನ್ನು ಶ್ಲಾಘಿಸಿದ್ದಾರೆ. Watch the action!! Collision was avoided with the help of Kavach with two trains/loco approaching each other on same track. Loco was stopped automatically by Kavach …
Read More »ತಮ್ಮ ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!
ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇವತ್ತಿಗೆ ಒಂಬತ್ತನೇ ದಿನ. ಈ ನಡುವೆ ಉಕ್ರೇನ್ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ. ರಷ್ಯಾ ಸೇನೆ ಕಂಡುಕೇಳರಿಯದ ರೀತಿಯಲ್ಲಿ ಉಕ್ರೇನ್ ಮೇಲೆ ಬಾಂಬ್, ಕ್ಷಿಪಣಿ ದಾಳಿ ನಡೆಸ್ತಿವೆ. ಈ ಹಿನ್ನೆಲೆ ಖಾರ್ಕೀವ್, ಚೆರ್ನಿಹೀವ್, ಸುಮಿ, ಕೀವ್ ನಗರಗಳು ತತ್ತರಿಸಿದ್ದು, ಸ್ಮಶಾನದಂತಾಗಿಬಿಟ್ಟಿವೆ. ಸದ್ಯ ರಷ್ಯಾ ಆರ್ಮಿ ಕೀವ್ನಿಂದ 20 ಮೈಲಿ ದೂರದಲ್ಲಿ ಬೀಡುಬಿಟ್ಟಿದೆ. ಮುಂದಿನ ಆದೇಶಕ್ಕಾಗಿ ಕಾಯ್ತಿದೆ. ಜಾಪೋರಿಷಿಯಾ ಸಮೀಪದ ಎನರ್ವೋದರ್ …
Read More »ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ
ಬೆಳಗಾವಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳು ಆ ದೇಶ ಬಿಟ್ಟು ಸುರಕ್ಷಿತವಾಗಿ ಪ್ರಯಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 24 ಗಂಟೆ ಯುದ್ಧಕ್ಕೆ ವಿರಾಮ ಘೋಷಣೆ ಮಾಡಿದರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತದಂತಹ ಹಲವಾರು ಶಾಂತಿ ಪ್ರಿಯ ದೇಶಗಳ ಪ್ರಜೆಗಳು ಉಕ್ರೇನ್ನಲ್ಲಿ ಸಿಲುಕಿದ್ದಾರೆ. ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸುವುದರಿಂದ ರಷ್ಯಾ ಮತ್ತಷ್ಟು ಜಗತ್ತಿನ ಇತರೆ ರಾಷ್ಟ್ರಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. …
Read More »ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ನಿಧನ
ಮೆಲ್ಬೋರ್ನ್: ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಶಂಕಿತ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. https://twitter.com/virendersehwag/status/1499748352048599041/photo/1?ref_src=twsrc%5Etfw%7Ctwcamp%5Etweetembed%7Ctwterm%5E1499748352048599041%7Ctwgr%5E%7Ctwcon%5Es1_&ref_url=https%3A%2F%2Fwww.etvbharat.com%2Fkannada%2Fkarnataka%2Fsports%2Fcricket%2Faustralian-cricket-icon-shane-warne-has-died%2Fka20220304194424913
Read More »
Laxmi News 24×7