ಬೆಳಗಾವಿ: ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಬಿದ್ದು ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವಿನ ಕದ ತಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ …
Read More »ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ ಹಾಗೂ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು …
Read More »ಸಿದ್ದರಾಮಯ್ಯ, ಎಚ್ ಡಿಕೆ ಚೀಪ್ ಪಾಪ್ಯುಲಾರಿಟಿ ಬಿಡಲಿ: ಸಚಿವ ಕಾರಜೋಳ
ಬೆಳಗಾವಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಮುಖ ರಾಜಕಾರಣಿಗಳು. ಚೀಪ್ ಪಾಪ್ಯುಲಾರಿಟಿ ಸಲುವಾಗಿ ಮೀಡಿಯಾಗಳಲ್ಲಿ ಬರಲು ಏನೇನೋ ಹೇಳಬಾರದು. ಆರೆಸ್ಸೆಸ್ ಸಂಸ್ಕೃತಿ ಗೊತ್ತಿಲ್ಲದವರು ಏನೇನೋ ಹೇಳುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು. ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರನ್ನೋ ಖುಷಿ ಪಡಿಸುವ ಸಲುವಾಗಿ ಏನೇನೋ ಹೇಳಿಕೆ ಕೊಟ್ಟರೆ ಅರ್ಥವಿರಲ್ಲ. ಆರೆಸ್ಸೆಸ್ ನವರು ದೇಶ ಭಕ್ತರು ಎಂಬುದು ಮೊದಲು ಗೊತ್ತಿರಬೇಕು. …
Read More »ಅಡುಗೆ ಅನಿಲ ದರ ಮತ್ತಷ್ಟು ಏರಿಕೆ
ನವದೆಹಲಿ: ಪೆಟ್ರೋಲ್-ಡೀಸೆಲ್ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಇದೀಗ ಎಲ್ ಪಿಜಿ ಶಾಕ್ ನೀಡಿದೆ. ಅಡುಗೆ ಅನಿಲ ದರ ಮತ್ತಷ್ಟು ಏರಿಕೆಯಾಗಿದ್ದು ದೇಶಾದ್ಯಂತ ಹೊಸ ಪರಿಷ್ಕೃತ ಸಿಲಿಂಡಿರ್ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಇತ್ತೀಚೆಗಷ್ಟೇ ಅಡುಗೆ ಅನಿಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಇದೀಗ ಮತ್ತೆ ಬೆಲೆ ಏರಿಕೆ ಬಿಸಿ ಕೈಸುಟ್ಟುಕೊಳ್ಳುವಂತಾಗಿದ್ದು, ಗ್ಯಾಸ್ ಸಿಲಿಂಡರ್ ದರ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಬೆಲೆ ಏರಿಕೆ ಬಳಿಕ ಕರ್ನಾಟಕದಲ್ಲಿ …
Read More »ಹಿಂಸಾಚಾರ ಸಹಿಸಲು ಸಾಧ್ಯವಿಲ್ಲ: ಅಮಿತ್ ಶಾ ಭೇಟಿ ಬಳಿಕ ಚನ್ನಿ ಹೇಳಿಕೆ
ನವದೆಹಲಿ, ಅಕ್ಟೋಬರ್ 06: ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ದೆಹಲಿಯ ನಿವಾಸದಲ್ಲಿ ಮಂಗಳವಾರ ಭೇಟಿಯಾಗಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹಾಗೂ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಯ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಸಭೆಯ ನಂತರ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ, “ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದೆ. ಕೇಂದ್ರ ಸರ್ಕಾರದ ಮೂರು …
Read More »ಶ್ರೀ ಗ್ರಾಮ ದೇವತಾ ಜಾತ್ರಾ ಕಮೀಟಿ ಗೋಕಾಕ ಪ್ಲೇವನಾಮ ಸಂವತ್ಸರ, ಅಶ್ವಿಜ ಮಾಸ ಶ್ರವನ್ನರಾತ್ರಾ ಕಾರ್ಯಕ್ರಮಗಳು
* ಶ್ರೀ ಗ್ರಾಮ ದೇವತಾ ಜಾತ್ರಾ ಕಮೀಟಿ ಗೋಕಾಕ ಪ್ಲೇವನಾಮ ಸಂವತ್ಸರ, ಅಶ್ವಿಜ ಮಾಸ ಶ್ರವನ್ನರಾತ್ರಾ ಕಾರ್ಯಕ್ರಮಗಳು 06/10/2021 ಬುಧವಾರ : ಅಶ್ವಿಜ ಶುದ್ಧ ಪ್ರತಿಪದಾ ನವರಾತ್ರಿ ಪ್ರಾರಂಭ 07/10/2021 ಗುರುವಾರ : ಘಟಸ್ಥಾಪನೆ 10/10/2021 ಭಾನುವಾರ : ಲಲಿತಾ ಪಂಚಮಿ 13/10/2021 ಬುಧವಾರ ( ಉಪಾಂಗ ಲಲಿತಾ ವೃತ್ತಂ ) : ದುರ್ಗಾಷ್ಟಮಿ – ನವಚಂಡಿ ಹವನ ರಾತ್ರಿ ಪ್ರಾರಂಭ …
Read More »ಜಿಲ್ಲಾಡಳಿತದ ವಿರೋಧದ ಮಧ್ಯೆಯೂ ಮೈಸೂರಲ್ಲಿ ಮಹಿಷಾ ದಸರಾ ಆಚರಣೆ
ಮೈಸೂರು: ಜಿಲ್ಲಾಡಳಿತದ ವಿರೋಧದ ನಡುವೆಯೂ ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮಷಿಷಾ ದಸರಾಗೆ ಚಾಲನೆ ಸಿಕ್ಕಿದ್ದು ನಗರದ ಬುದ್ಧ ವಿಹಾರದಿಂದ ಮಹಿಷಾ ಮೆರವಣಿಗೆ ಆರಂಭವಾಗಿದೆ. ಮೊದಲ ಬಾರಿಗೆ ಮಹಿಷಾಸುರ ಪ್ರತಿಮೆ ನಿರ್ಮಿಸಿ ಮೆರವಣಿಗೆ ಮಾಡಲಾಗುತ್ತಿದ್ದು, ಮಹಿಷಾಸುರ ಪಂಚಲೋಹದ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬುದ್ದವಿಹಾರದಿಂದ ಅಶೋಕಪುರಂ ಪಾರ್ಕ್ವರೆಗೆ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಕಾರ್ಯಕ್ರಮದಲ್ಲಿ ಉರಿಲಿಂಗಪೆದ್ದಿ ಮಠದ ಪೀಠಾಧಿಪಾತಿ ಜ್ಞಾನಪ್ರಕಾಶ ಸ್ವಾಮೀಜಿ, ಮಾಜಿ ಮೇಯರ್ ಪುರುಷೋತ್ತಮ್ …
Read More »ಕೆಲವೇ ಗಂಟೆಗಳಲ್ಲಿ 6 ಬಿಲಿಯನ್ ಡಾಲರ್ಗಳಷ್ಟು ನಷ್ಟ ಅನುಭವಿಸಿದ ಜುಕರ್ಬರ್ಗ್
ವಾಷಿಂಗ್ಟನ್: ಫೇಸ್ಬುಕ್ ಒಡೆತನದ ಸೋಷಿಯಲ್ ಮೀಡಿಯಾ ವೇದಿಕೆಗಳ ಸೇವೆಯಲ್ಲಿ ಸೋಮವಾರ ವ್ಯತ್ಯಯವಾಗಿದ್ದರಿಂದ ಮಾರ್ಕ್ ಜುಕರ್ಬರ್ಗ್ ಅವರಿಗೆ ಸುಮಾರು 6 ಬಿಲಿಯನ್ ಡಾಲರ್ (44,728 ಕೋಟಿ ರೂ.) ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ. ಸೋಮವಾರ ಕೆಲವೇ ಗಂಟೆಗಳ ಅವಧಿಯಲ್ಲಿನ ಸೇವೆ ವ್ಯತ್ಯಯದಿಂದಾಗಿ ಕೋಟ್ಯಂತರ ನಷ್ಟವಾಗಿದೆ. ಪರಿಣಾಮವಾಗಿ ಜುಕರ್ಬರ್ಗ್ ಅವರು ವಿಶ್ವದ ಸಿರಿವಂತರ ಪಟ್ಟಿಯಲ್ಲಿಯೂ ಕೆಲವು ಸ್ಥಾನ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಫೇಸ್ಬುಕ್ನ ಷೇರು ಮೌಲ್ಯ ಸೋಮವಾರ ಒಂದೇ ದಿನ ಶೇ. 4.9 ರಷ್ಟು …
Read More »ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್
ರಾಯಚೂರು: ಮಾನ್ವಿ ಪಟ್ಟಣದ ಪಕ್ಷಿ ಪ್ರೇಮಿ ಪಬ್ಲಿಕ್ ಹೀರೋ ಸಲ್ಲಾವುದ್ದೀನ್ ಗಾಯಗೊಂಡಿದ್ದ ನವಿಲೊಂದನ್ನ ಮನೆಯಲ್ಲಿಟ್ಟುಕೊಂಡು ಆರೈಕೆ ಮಾಡಿ ಪುನಃ ಕಾಡಿಗೆ ಬಿಡುವ ಮೂಲಕ ಪಕ್ಷಿ ಪ್ರೇಮ ಮೆರೆದಿದ್ದಾರೆ. ಪಕ್ಷಿಗಳ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಸಲ್ಲಾವುದ್ದೀನ್ ಈಗ ನವಿಲೊಂದಕ್ಕೆ ಪುನರ್ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 26 ರಂದು ಮಾನ್ವಿ ತಾಲೂಕಿನ ಬಾಪೂರಿನ ಜಮೀನೊಂದರಲ್ಲಿ ಅನಾರೋಗ್ಯದಿಂದ ಬಿದ್ದಿದ್ದ ನವಿಲನ್ನು ಸ್ಥಳೀಯರಾದ ಫಯಾಜ್ ರುಮಾಲ್ ವಾಲೆ ಹಾಗೂ ಅವರ ಸ್ನೇಹಿತರು ಸಲ್ಲಾವುದ್ದೀನ್ ಅವರಿಗೆ ತಂದು ಒಪ್ಪಿಸಿದ್ದಾರೆ. ಬಳಿಕ …
Read More »ಮಕ್ಕಳಿಂದ ಅನುಕಂಪ ಗಿಟ್ಟಿಸಿ ಮನೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್, 5 ಮಕ್ಕಳು ಬಾಲಮಂದಿರಕ್ಕೆ ಶಿಫ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಖತರ್ನಾಕ್ ಕಳ್ಳಿಯ ಬಂಧನವಾಗಿದೆ. ಆರ್.ಟಿ.ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಲಕ್ಷ್ಮೀಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಲಕ್ಷ್ಮೀ ವಿರುದ್ಧ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪೊಲೀಸರಿಗೆ ಸಿಕ್ಕಿಬಿದ್ದಾಗ ಮಕ್ಕಳಿದ್ದಾರೆ, ಗರ್ಭಿಣಿ ಎಂದು ಅನುಕಂಪದ ಅಸ್ತ್ರ ಪ್ರಯೋಗ ಮಾಡಿದ್ದಾಳೆ. ಆದ್ರೆ ಕಳ್ಳಿಯ ಚಲಾಕಿತನ ತಿಳಿದಿದ್ದ ಪೊಲೀಸರು ಅನುಕಂಪದ ಅಲೆಗೆ ಮೋಸ ಹೋಗಿಲ್ಲ. ಆರೋಪಿ ಲಕ್ಷ್ಮೀಗೆ ಬರೋಬ್ಬರಿ ಆರು ಮಕ್ಕಳಿದ್ದಾರೆ. ಕಳ್ಳಿ ಲಕ್ಷ್ಮೀಯಿಂದ ಪೊಲೀಸರು ಮಕ್ಕಳನ್ನು …
Read More »