Breaking News

ರಾಷ್ಟ್ರೀಯ

₹13,165 ಕೋಟಿ ರಕ್ಷಣಾ ಉಪಕರಣಗಳ ಖರೀದಿಗೆ ರಾಜನಾಥ್​​ ಸಿಂಗ್​​ ಅನುಮೋದನೆ

ನವದೆಹಲಿ: ಸೇನಾ ಪಡೆಗಳಿಗೆ ಮತ್ತಷ್ಟು ಶಕ್ತಿ ತುಂಬಲು ರಕ್ಷಣಾ ಸ್ವಾಧೀನ ಮಂಡಳಿ ಮುಂದಾಗಿದೆ. ಹೀಗಾಗಿಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್​​​​ ಅಧ್ಯಕ್ಷತೆಯಲ್ಲಿ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ₹13,165 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಿದೆ. ಭಾರತೀಯ ಮೂರು ಸೇನಾ ಪಡೆಗಳಿಗೂ ಎಎಲ್‌ಎಚ್‌ ಹೆಲಿಕಾಪ್ಟರ್‌ ಸೇರಿದಂತೆ ಹಲವು ರಕ್ಷಣಾ ಉಪಕರಣಗಳನ್ನು ಈ ಯೋಜನೆಯಡಿ ಖರೀದಿಸಲಾಗುತ್ತದೆ. ಈ ಕ್ರಮದಿಂದಾಗಿ ಸ್ಥಳೀಯವಾಗಿ ಅವಲಂಬನೆಯಾಗುವ ಮೂಲಕ ಆತ್ಮ ನಿರ್ಭರ …

Read More »

ಮೈಸೂರಲ್ಲಿ ದಸರಾ ಸಂಭ್ರಮ.. ರಾತ್ರಿ ಕಟ್ಟುನಿಟ್ಟಿನ ನೈಟ್ ಬೀಟ್​​ಗೆ DCP ಪಾಠ​..!

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಹೈ-ಅಲರ್ಟ್ ಆಗಿದೆ. ರಾತ್ರಿ ವೇಳೆ ಗಸ್ತು ಹೆಚ್ಚಿಸಿ, ಅಪರಾಧ ಪ್ರಕರಣಗಳ ಕಡಿವಾಣಕ್ಕೆ ಮುಂದಾಗಿದೆ. ನಗರದಲ್ಲಿ ಕಟ್ಟುನಿಟ್ಟಿನ ನೈಟ್ ಬೀಟ್ ಕಾರ್ಯಾಚರಣೆ ನಡೆಯುತ್ತಿದ್ದು, ಸಾರ್ವಜನಿಕರಿಗೆ ಮೈಸೂರು ಪೊಲೀಸರು ಅಭಯ ನೀಡುತ್ತಿದ್ದಾರೆ. ಜೊತೆಗೆ ನೈಟ್ ಬೀಟ್ ಸಂಬಂಧ ವಿವಿಧ ಠಾಣಾ ಸಿಬ್ಬಂದಿಗೆ ಡಿಸಿಪಿ ಮಾರ್ಗದರ್ಶನ ನೀಡಿದ್ದಾರೆ. ಸಾರ್ವಜನಿಕವಾಗಿ ರಸ್ತೆಯಲ್ಲೇ ಸಿಬ್ಬಂದಿಗೆ ಮಾರ್ಗದರ್ಶನವನ್ನ ಡಿಸಿಪಿ ಗೀತಾಪ್ರಸನ್ನ ನೀಡಿದ್ದಾರೆ. ರಾತ್ರಿ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಮಹಾ ಮಳೆ 13 ಸಾವು; 560ಕ್ಕೂ ಹೆಚ್ಚು ಮಂದಿಯ ರಕ್ಷಣೆ

ಮುಂಬೈ: ಗುಲಾಬ್​ ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರದ ಹಲವೆಡೆ ಸುರಿದ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಈವರೆಗೆ ಒಟ್ಟು 13 ಜನ ಸಾವನ್ನಪ್ಪಿದ್ದಾರೆ. ಮರಾಠವಾಡ, ಮಹಾರಾಷ್ಟ್ರದ ಉತ್ತರ ಭಾಗಗಳಲ್ಲಿ ಮಳೆಗೆ ಅಪಾರ ಹಾನಿ ಉಂಟಾಗಿದೆ. ಎನ್​ಡಿಆರ್​ಎಫ್ ಪಡೆ ಸಂಕಷ್ಟದಲ್ಲಿ ಸಿಲುಕಿದ್ದ 560 ಮಂದಿಯನ್ನ ರಕ್ಷಣೆ ಮಾಡಿದೆ. 200ಕ್ಕೂ ಹೆಚ್ಚು ರಾಸುಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಕೆಲವು ಮನೆಗಳಿಗೂ ಹಾನಿಯಾಗಿದೆ. ಭಾರೀ ಮಳೆ …

Read More »

ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್‌ ಯಡಿಯೂರಪ್ಪ …

Read More »

ತಾಲಿಬಾನ್ ಹೇಳಿಕೆ ನೀಡಿದ ಸಿದ್ದರಾಮಯ್ಯ ಮಾನಸಿಕತೆ ಬಗ್ಗೆ ನೋವಿದೆ- ಕೋಟ ಶ್ರೀನಿವಾಸ ಪೂಜಾರಿ

ಬೀದರ್: ರಾಷ್ಟ್ರ ಭಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾನಸಿಕತೆ ಬಗ್ಗೆ ನೋವಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಅವರು ಆರ್‌ಎಸ್‌ಎಸ್‌ನ್ನು ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಸಿದ್ದರಾಮಯ್ಯನವರು ಕಾಂಗ್ರೆಸ್‌ನ್ನು ಪರಂಪರೆಯನ್ನು ಒಪ್ಪಿಕೊಂಡವರು ಮತ್ತು ನೆಹರು ಅವರನ್ನು ಗೌರವಿಸುತ್ತಾರೆ ಎಂದಾದರೆ ಆರ್‌ಎಸ್‌ಎಸ್‌ನ್ನು …

Read More »

ಕಿಚ್ಚನ ಕೋಟಿಗೊಬ್ಬ-3ಗೆ ಪೈರಸಿ ಭಯ..!

ಬೆಂಗಳೂರು: ಬಿಡುಗಡೆಗೂ ಮುನ್ನವೇ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾವನ್ನು ಬಿಡುಗಡೆಗೂ ಮುನ್ನ ಪೈರಸಿ ಮಾಡೋದಾಗಿ ಕೋಟಿಗೊಬ್ಬ 3 ಸಿನಿಮಾ ನಿರ್ಮಾಪಕ ಸೂರಪ್ಪಬಾಬುಗೆ ಟೆಲಿಗ್ರಾಂನಲ್ಲಿ ಬೆದರಿಕೆಗಳು ಬಂದಿವೆಯಂತೆ. ಈ ಹಿನ್ನೆಲೆ ಸೂರಪ್ಪ ಬಾಬು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದಿದ್ದಾರೆ. ಕೋಟಿಗೊಬ್ಬ 3 ಸಿನಿಮಾ ಅಕ್ಟೋಬರ್ 1 ರಂದು ರಿಲೀಸ್ ಆಗಲಿದೆ. ಆದ್ರೆ ಅದಕ್ಕೂ ಮುನ್ನ ಇದೀಗ ಪೈರಸಿಯ ಬೆದರಿಕೆ ಬಂದಿದ್ದು ಮುನ್ನೆಚ್ಚರಿಕೆ …

Read More »

ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಮಧುಮೇಹ ತಪಾಸಣಾ ಕಾರ್ಯಕ್ರವiಕ್ಕೆ ತಹಶೀಲ್ದಾರ ಅವರು ಚಾಲನೆ ನೀಡುತ್ತಿರುವುದು.

ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …

Read More »

ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ನಡೆದ ಗಲಾಟೆ; ಶಾಸಕ ಯತ್ನಾಳ್ ಸೇರಿ ಎಲ್ಲ 134 ಜನರು ಖುಲಾಸೆ

ಬೆಂಗಳೂರು: ವಿಜಯಪುರ ನಗರದಲ್ಲಿ 2014 ಮೇ 26 ರಂದು ನಡೆದಿದ್ದ ಗಲಾಟೆ ಪ್ರಕರಣದ ತೀರ್ಪು ಪ್ರಕಟಗೊಂಡಿದ್ದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲ 134 ಜನರು ಖುಲಾಸೆಗೊಂಡಿದ್ದಾರೆ. ಪ್ರಚೋದನಕಾರಿ ಭಾಷಣ ಮತ್ತು ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೇಲಿತ್ತು. ನಗರದ ಗಾಂಧಿಚೌಕ್ ಪೊಲೀಸರು ದಾಖಲಿಸಿದ್ದ ಎರಡು ಪ್ರಕರಣಗಳಲ್ಲಿ‌ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಎಲ್ಲರೂ ನಿರಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು …

Read More »

ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮದಲ್ಲಿ ಬಸವರಾಜ ದೇಶನೂರ ಮಾತನಾಡುತ್ತಿರುವುದು. 

ಗೋಕಾಕ  ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ ವಾಹನಗಳಿಗೆ ನೀಡಬೇಕು. …

Read More »

ರಾಯಚೂರು: ಕೌಟುಂಬಿಕ ಕಲಹ; ಒಂದೇ ಮನೆಯ ಮೂವರ ಬರ್ಬರ ಕೊಲೆ‌‌

ರಾಯಚೂರು: ಸಮೀಪದ ಯರಮರಸ್ ಕ್ಯಾಂಪ್ ನಲ್ಲಿ ಕೌಟುಂಬಿಕ ಕಲಹದಿಂದ ಮೂವರ ಕೊಲೆಯಾದ ಧಾರುಣ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಒಂದೇ ಕುಟುಂಬದ ಸಂತೋಷಿ(45) ವೈಷ್ಣವಿ(18) ಮತ್ತು ಆರತಿ(16)ಎಂಬುವವರ ಕೊಲೆಯಾಗಿದೆ. ಅಳಿಯ ಸಾಯಿ ಎಂಬಾತನೆ ಅತ್ತೆ ಹೆಂಡತಿ ಹಾಗೂ ಸೊಸೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ಮಗಳು ವೈಷ್ಣವಿ ಮದುವೆ ಜರುಗಿತ್ತು. ಆದರೆ, ಅಳಿಯ ಮಗಳ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇಪದೆ ಜಗಳ ಆಡುತ್ತಿದ್ದರು. ಕಳೆದ ಒಂದು ತಿಂಗಳ …

Read More »