ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ …
Read More »ಮೈಸೂರು ಅತ್ಯಾಚಾರ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಚಿವ ಆರಗ ಸಭೆ
ಮೈಸೂರು: ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿರುವ ಹೊತ್ತಿನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಮಧ್ಯಾಹ್ನದವರೆಗೂ ಯಾವುದೇ ಸಭೆ ನಡೆಸಿರಲಿಲ್ಲ. ನಂತರ ಮಧ್ಯಾಹ್ನ 1 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಹಾಗೂ ಚಿನ್ನದಂಗಡಿ ದರೋಡೆ ಪ್ರಕರಣ ಕುರಿತು ಮೊದಲಿಗೆ ಚರ್ಚೆ ಆರಂಭಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕುರಿತೂ ಅಸಮಾಧಾನ ಹೊರಹಾಕಿದ್ದಾರೆ. ಗುರುವಾರ ರಾತ್ರಿ ನಗರಕ್ಕೆ ಬಂದ ಸಚಿವರು, ಶುಕ್ರವಾರ …
Read More »ಗ್ಯಾಂಗ್ ರೇಪ್ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ಸುತ್ತಾಟದಲ್ಲೇ ಕಾಲ ಕಳೆದ ಸಚಿವ!
ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್ನ್ನು ಉದ್ಘಾಟಿಸಿ, ತಾವೂ ಫೈರಿಂಗ್ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ ಹಾಗೂ …
Read More »ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಸತೀಶ್ ಜಾರಕಿಹೊಳಿ ಆಕ್ರೋಶ
ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು. ಅತ್ಯಾಚಾರ …
Read More »ಬೆಳಗಾವಿ: ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.
ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ. 58 ವಾರ್ಡ್ಗಳ ಪೈಕಿ ಬಹುತೇಕ ಕಡೆಗಳಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ. ಕೆಲವೆಡೆ ತ್ರಿಕೋನ ಪೈಪೋಟಿ ಕಂಡುಬಂದಿದೆ. ಶುಕ್ರವಾರದಿಂದ ಪ್ರಚಾರ ಕಣ ರಂಗೇರಲಿದೆ. ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ 468 ಮಂದಿಯ ನಾಮಪತ್ರಗಳು ಕ್ರಮಬದ್ಧವಾಗಿದ್ದವು. ಉಮೇದುವಾರಿಕೆ ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಒಟ್ಟು 83 ಮಂದಿ …
Read More »ಗ್ಯಾಂಗ್ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್
ಚಾಮರಾಜನಗರ: ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. – ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಬೇಕು. ಇಂತಹವನ್ನು ಯಾವುದೇ ಪರಿಸ್ಥಿತಿಯಲ್ಲಿ ಸಹಿಸಬಾರದು. ನ್ಯಾಯಂಗ ವ್ಯವಸ್ಥೆಯಲ್ಲಿ ಸಹ ಶೀಘ್ರ ನ್ಯಾಯ ನೀಡುವಂತಾಗಬೇಕು. ಹತ್ತಾರು ವರ್ಷಗಳ ಕಾಲ ಮುಂದೂಡಿದರೆ ಸಾಕ್ಷ್ಯ ನಾಶ, ಬೆದರಿಕೆ ಹಾಕುವ ಕೃತ್ಯ ನಡೆಸುತ್ತಾರೆ. ಹೀಗಾಗಿ …
Read More »ಆರ್ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೇ ಸಂಚಾರ, ಮಹಾರಾಷ್ಟ್ರ ಗಡಿಯಲ್ಲಿ ಕಾಟಾಚಾರದ ಚೆಕಿಂಗ್
ಚಿಕ್ಕೋಡಿ: ಶೀಘ್ರದಲ್ಲೇ ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹೀಗಾಗಿ ಸರ್ಕಾರ ಮಹಾರಾಷ್ಟ್ರ ಗಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಕೊರೊನಾ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಬಿಡಬೇಕೆಂದು ಆದೇಶಿಸಿದೆ. ಆದರೆ ಚೆಕ್ ಪೋಸ್ಟ್ಗಳಲ್ಲಿ ಕಾಟಾಚಾರಕ್ಕೆ ಚೆಕ್ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರ ವಲಯದಲ್ಲಿ ಮಹಾರಾಷ್ಟ್ರದ ಗಡಹಿಂಗ್ಲಜ್ ತಾಲೂಕಿನ ಗಡಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ನಲ್ಲಿ ಅಧಿಕಾರಿಗಳು ಕಾಟಾಚಾರಕ್ಕೆ ಎನ್ನುವಂತೆ …
Read More »ವಸಿಷ್ಠ ಕೋ-ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣ ಅಧಿಕೃತವಾಗಿ ಸಿಐಡಿಗೆ ಹಸ್ತಾಂತರ
ಕಳೆದ 10 ವರ್ಷಗಳಿಂದ ಈ ಸೊಸೈಟಿ ಚಾಲ್ತಿಯಲ್ಲಿತ್ತು. ಅದರ ನಂಬಿಕೆ ಆಧಾರದ ಮೇಲೆ ಜನ ಹೆಚ್ಚು ಹೆಚ್ಚಾಗಿ ಇತ್ತೀಚೆಗೆ ಠೇವಣಿಗಳನ್ನು ಇಡತೊಡಗಿದ್ದರು. ಜನರ ಆ ಅಮಾಯಕ ನಂಬಿಕೆಯನ್ನೇ ಆಧಾರವಾಗಿಸಿಕೊಂಡು ಹಣ ಕ್ರೋಢೀಕರಣವಾಗುತ್ತಿದ್ದಂತೆ ಸೊಸೈಟಿ ಕಡೆಯಿಂದ ವಂಚನೆ ನಡೆದಿದ್ದು, ಇಬ್ಬರು ಪರಾರಿಯಾಗಿದ್ದರು. ಬೆಂಗಳೂರು: ವಸಿಷ್ಠ ಕೋ-ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ಸಿಐಡಿಗೆ ಅಧಿಕೃತ ಹಸ್ತಾಂತರವಾಗಿದೆ. ಹನುಮಂತನಗರ ಠಾಣೆ ಪೊಲೀಸರು ಸಿಐಡಿಗೆ ಇಂದು (ಆಗಸ್ಟ್ 26) ಅಧಿಕೃತವಾಗಿ ಪ್ರಕರಣದ ತನಿಖೆಯನ್ನು ಮುಂದುವರೆಸುವಂತೆ …
Read More »ರಾಯಚೂರಿನಲ್ಲಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 59 ಮಕ್ಕಳ ರಕ್ಷಣೆ
ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದ ಸುಮಾರು 59 ಮಕ್ಕಳನ್ನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಮತ್ತು ಸಿರವಾರ ಕ್ರಾಸ್ ಬಳಿ ರಕ್ಷಣೆ ಮಾಡಲಾಗಿದೆ. ಜೊತೆಗೆ ಬಾಲ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ 5 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಯಚೂರು: ಸರ್ಕಾರ 14 ವರ್ಷದವರೆಗೆ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು. ಜೊತೆಗೆ ಈ ಅವಧಿಯಲ್ಲಿ ಮಕ್ಕಳು ದುಡಿಯುವಂತಿಲ್ಲ ಎಂದು ಭಾರತ ಸಂವಿಧಾನ ತಿಳಿಸಿದೆ. ತಮ್ಮ ತಮ್ಮ ಮನೆಗಳಲ್ಲಿ ಕೆಲಸಗಳನ್ನು ಮಾಡಬಹುದು. ಆದರೆ ಒತ್ತಾಯದಿಂದ ಕೆಲಸಕ್ಕೆ …
Read More »ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ನವದೆಹಲಿಯ ಕರ್ನಾಟಕ ಭವನಕ್ಕೆ ಜಾರಕಿಹೊಳಿ ಸಹೋದರರು ಆಗಮಿಸಿದ್ದಾರೆ. ನಾವು ಬೇರೆ ಕೆಲಸದ ವಿಚಾರವಾಗಿ ನವದೆಹಲಿಗೆ ಬಂದಿದ್ದೇವೆ. ಸಿಎಂ ಬಂದಿದ್ದಾರೆಂದು ಗೊತ್ತಾಯ್ತು. ಹಾಗಾಗಿ, ಭೇಟಿಗೆ ಆಗಮಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಹೋಗುತ್ತೇವೆ. ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ …
Read More »
Laxmi News 24×7