Breaking News

ರಾಷ್ಟ್ರೀಯ

ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಧನಸಹಾಯ ಒದಗಿಸಿದ ಪ್ರಿಯಾಂಕಾ ಜಾರಕಿಹೊಳಿ

    ಗೋಕಾಕ: ನೇಪಾಳದಲ್ಲಿ ಅಗಸ್ಟ್ 10 ರಂದು ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಹಾಗೂ ತಪಸಿ ಗ್ರಾಮದ ಮಲ್ಲಪ್ಪ ನಾಯಕ ಎಂಬ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ ಸಹಾಯ ಒದಗಿಸಿದರು.   ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ …

Read More »

ಯಡಿಯೂರಪ್ಪನ್ನು ತೆಗೆದು ಹಾಕಿದ್ದು ವಯಸ್ಸಾಗಿದೆ ಎಂದಲ್ಲ; ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು ಅಂತಾ ತೆಗೆದ್ರು: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಬಿ ಎಸ್​ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಿದ್ದಾರೆ. ವಯಸ್ಸು ಆಗಿದೆ ಎಂದು ತೆಗೆದಿಲ್ಲ. ಬದಲಾಗಿ ದುಡ್ಡು ಹೊಡೆದ್ರು ಅಂತಾ ತೆಗೆದಿದ್ದು. ಅಪ್ಪ-ಮಗ ಜೋಡಿ ಲೂಟಿ ಮಾಡಿದರು ಅಂತಾ ತೆಗೆದರು ಎಂದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಐಟಿ, ಇಡಿ ಇದೆ ಎಂದು ಹೇಳಿ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದಾರೆ. ಆರ್​ಟಿಜಿಎಸ್ ಮೂಲಕ ಯಡಿಯೂರಪ್ಪ ಹಣ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪ ಮದುವೆ ಊಟ ಮಾಡೇ ಇಲ್ಲ. …

Read More »

ಇಂದಿನಿಂದ ನೈಟ್​ ಕರ್ಫ್ಯೂ: ಅನಗತ್ಯವಾಗಿ ಓಡಾಡಿದ್ರೆ ಬೀಳುತ್ತೆ ಕೇಸ್- ಯಾವುದಕ್ಕೆಲ್ಲ ವಿನಾಯಿತಿ?

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್​ ಕರ್ಫ್ಯೂ ಘೋಷಿಸಲಾಗಿದೆ. ಇಂದಿನಿಂದ ನೈಟ್​ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 10 ಗಂಟೆ ನಂತರ ಅನಗತ್ಯವಾಗಿ ರಸ್ತೆಗಿಳಿಯುವ ಸಾರ್ವಜನಿಕರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಮತ್ತು ಪೊಲೀಸ್​ ಇಲಾಖೆ ತಿಳಿಸಿದೆ. ಪೊಲೀಸರು, ಮಾರ್ಷಲ್ಸ್ ನೇತೃತ್ವದಲ್ಲಿ ಇಂದಿನಿಂದ ಕಾರ್ಯಾಚರಣೆ ಆರಂಭವಾಗುತ್ತಿದೆ. ಆದ್ದರಿಂದ ಇಂದು (ಮಂಗಳವಾರ- ಜುಲೈ 3) ರಾತ್ರಿ 10 ಗಂಟೆಯಿಂದ ರಾತ್ರಿ …

Read More »

ದಿಢೀರ್ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 30,549 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ:ಭಾರತದಲ್ಲಿ ದಿಢೀರ್ ಏರಿಕೆ ಕಂಡಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, 30,549 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಆಗಸ್ಟ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.   ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಸೋಂಕಿನಿಂದ 422 ಮಂದಿ ಸಾವನ್ನಪ್ಪಿದ್ದು, 38,887 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,17,26,507ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ 4,25,195ಕ್ಕೆ ತಲುಪಿದೆ. …

Read More »

ರಸ್ತೆ ಅಪಘಾತ: ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಸಾವು

ಮಡಿಕೇರಿ : ಕಾರು ಅಪಘಾತದಲ್ಲಿ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರವೀಂದ್ರನ್ ಮೃತಪಟ್ಟಿರುವ ಘಟನೆ ಹುಣಸೂರು ಸಮೀಪದ ಚಿಲ್ಕುಂದ ಗ್ರಾಮದ ಸಮೀಪ ನಡೆದಿದೆ. ಕರ್ತವ್ಯಕ್ಕಾಗಿ ತಮ್ಮ ಕಾರಿನಲ್ಲಿ ಮೈಸೂರಿನಿಂದ ಸೋಮವಾರಪೇಟೆಗೆ ತೆರಳುತ್ತಿದ್ದ ಸಂದರ್ಭ ಚಿಲ್ಕುಂದ ಗ್ರಾಮದ ಸಮೀಪ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಪರಿಣಾಮ ತೀವ್ರಗಾಯ ಗೊಂಡಿದ್ದರು. ತಕ್ಷಣವೇ ಮೈಸೂರಿನ ಅಪಲೋ ಆಸ್ಪತ್ರೆಗೆ ಸಾಗಿಸಲಾಯಿತಾದರು ದಾರಿ ಮಧ್ಯೆ ಮೃತಪಟ್ಟಿದ್ದರು. ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ತಂಗಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ …

Read More »

ಪ್ರವಾಸಿಗರಿಗೆ ಸುರಕ್ಷತೆಯ ಕೊರತೆ

ರಬಕವಿ ಬನಹಟ್ಟಿ: ತಾಲ್ಲೂಕಿನ ಹಿಪ್ಪರಗಿ ಜಲಾಶಯ ಈಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರತಿನಿತ್ಯ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಅಥಣಿ ತಾಲ್ಲೂಕಿನ ನೂರಾರು ಜನರು ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಆದರೆ ಜಲಾಶಯದ ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ವೀಕ್ಷಣೆ ಮಾಡಲು ಬಂದ ಜನರು ಜಲಾಶಯದ ಎಲ್ಲ ಕಡೆಗೂ ಓಡಾಡುತ್ತಾರೆ. ಇಲ್ಲಿ ಹಾಕಲಾದ ಕಬ್ಬಿಣ …

Read More »

ಶರಾವತಿಗೆ ಕೆಪಿಸಿಯಿಂದ ಬಾಗಿನ ಅರ್ಪಣೆ

ಕಾರ್ಗಲ್: ನಾಡಿಗೆ ಬೆಳಕು ನೀಡಲು ಲಿಂಗನಮಕ್ಕಿ ಅಣೆಕಟ್ಟೆಯ ಒಡಲಿನಲ್ಲಿ ಭರ್ತಿಯಾಗುವ ಶರಾವತಿಗೆ ಸೋಮವಾರ ಕೆಪಿಸಿ ಇಲಾಖೆಯ ಪರವಾಗಿ ಬಾಗಿನ ಸಮರ್ಪಿಸಲಾಗುತ್ತಿದೆ ಎಂದು ಕೆಪಿಸಿ ಮುಖ್ಯ ಎಂಜಿನಿಯರ್ ನಾರಾಯಣ ಗಜಕೋಶ್ ತಿಳಿಸಿದರು. ಇಲ್ಲಿಗೆ ಸಮೀಪದ ಲಿಂಗನಮಕ್ಕಿ ಜಲಾಶಯದಲ್ಲಿ ಸೋಮವಾರ ಶರಾವತಿ ನದಿಗೆ ಬಾಗಿನ ಸಮರ್ಪಿಸಿ ಅವರು ಮಾತನಾಡಿದರು. ‘ಸಮುದ್ರ ಮಟ್ಟದಿಂದ ಗರಿಷ್ಠ 1,819 ಅಡಿ ಎತ್ತರದವರೆಗೂ ಜಲಸಂಗ್ರಹ ಸಾಮರ್ಥ್ಯವಿರುವ ಲಿಂಗನಮಕ್ಕಿ ಜಲಾಶಯದಲ್ಲಿ, 1,795 ಅಡಿ ನೀರು ಭರ್ತಿಯಾದಾಗ ಜಲಾಶಯದ ಅರ್ಧ ಭಾಗ …

Read More »

ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಐಜಿಪಿ ಪ್ರವೀಣ್ ಸೂದ್ ಖಡಕ್ ಸೂಚನೆ..

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಆದೇಶ ಹೊರಡಿಸಿದ್ದಾರೆ. ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ …

Read More »

ಆ. 10 ರಂದು ಕತ್ತಲಲ್ಲಿ ಮುಳುಗಲಿದೆ ಇಡೀ ದೇಶ, ದೇಶಾದ್ಯಂತ ವಿದ್ಯುತ್ ಸ್ಥಗಿತಕ್ಕೆ ನಿರ್ಧಾರ

ದೇಶಾದ್ಯಂತ ಆಗಸ್ಟ್ 10 ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುವುದು. ವಿದ್ಯುತ್ ಕಾಯ್ದೆ – 2003ರ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಅಧಿಕಾರಿಗಳ ಅಸೋಸಿಯೇಷನ್ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2003 ರ ತಿದ್ದುಪಡಿಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ್ದು ಇದನ್ನು ವಿರೋಧಿಸಿ ವಿದ್ಯುತ್ ನೌಕರರ ಸಂಘಟನೆಯ ಅಧಿಕಾರಿಗಳು, ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಹೋರಾಟಕ್ಕೆ ರೈತ ಸಂಘಟನೆಗಳು, …

Read More »

ಡಿಸಿಎಂ ಹುದ್ದೆ ಆಸೆ ಇಟ್ಟುಕೊಂಡವರಿಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್!

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರೇಸ್‌ನಲ್ಲಿದ್ದವರು, ಅದು ತಪ್ಪಿದ್ದರಿಂದ ಉಪ ಮುಖ್ಯಮಂತ್ರಿ ಆದರೂ ಆಗಬಹುದು ಎಂಬ ಲೆಕ್ಕಾಚಾರವನ್ನಿಟ್ಟುಕೊಂಡಿದ್ದರು. ಆದರೆ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ಎಂಬ ಮಾಹಿತಿ ದೆಹಲಿಯಿಂದ ಬಂದಿದೆ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಇದೀಗ ಸಚಿವ ಸಂಪುಟ ವಿಸ್ತರಣೆ ಕಸರತ್ತು ಬಿಜೆಪಿಯಲ್ಲಿ ನಡೆದಿದೆ. ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಪಕ್ಷದ ವರಿಷ್ಠರನ್ನು ಭೇಟಿ …

Read More »