ಕಾರವಾರ: ಜುಲೈ ತಿಂಗಳಿನ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಮಲ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಪ್ರತೀ ವರ್ಷ ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಎದುರಾಗುತ್ತದೆ. ಮುನ್ಸೂಚನೆ ನೀಡದೆ ಏಕಾಏಕಿ ಕದ್ರಾ ಡ್ಯಾಂನಿಂದ ನೀರು ಬಿಡುತ್ತಾರೆ. ಗಂಗಾವಳಿ ನದಿ ದಡದಲ್ಲಿರುವ ಜನರ …
Read More »ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸುತ್ತಿರುವುದು.
ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಗದಾಡಿ ಅವರ ನೇತ್ರತ್ವದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸಿದರು. ಕಳೆದ 2019ನೇ ಸಾಲಿನಲ್ಲಿ ಪ್ರವಾಹ ಹಾಗೂ ಮಳೆಯಿಂದ ಹಾನಿಯಾದ ಮನೆಗಳಿಗೆ ಇನ್ನೂವರೆಗೂ ಪರಿಹಾರ ದೊರಕಿಲ್ಲವಲ್ಲದೇ ಸರ್ವೆ ಮಾಡುವಲ್ಲಿ ಅಧಿಕಾರಿಗಳು ತಾರ್ಯತ್ಯಮ ಮಾಡಿದ್ದಾರೆಂದು ಆರೋಪಿಸಿದರು. ಕಲಾರಕೊಪ್ಪ, ಮೆಳವಂಕಿ ಗ್ರಾಮದಲ್ಲಿ ಮೂರು ಸಲ ಸರ್ವೆ ಕಾರ್ಯವನ್ನು …
Read More »20 ಮಂದಿಯ ಹೆಸರು ಫೈನಲ್, ಆ.4 ಸಂಪುಟ ವಿಸ್ತರಣೆ ಫಿಕ್ಸ್..?
ಬೆಂಗಳೂರು, ಆ.2- ಬಹುನಿರೀಕ್ಷಿತ ಸಚಿವ ಸಂಪುಟ ರಚನೆ ದಿನಾಂಕ ಇಂದು ಸಂಜೆ ನಿಗದಿಯಾಗು ವುದು ಬಹುತೇಕ ಖಚಿತವಾಗಿದ್ದು, ಬುಧವಾರ ಪ್ರಮಾಣವಚನ ನಡೆಯುವ ಸಾಧ್ಯತೆಗಳಿವೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರ್ಜಾ ಬೊಮ್ಮಾಯಿ ಅವರು ಇಂದು ಬೆಳಗ್ಗೆ 9.30ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಬೇಕಿತ್ತಾದರೂ ಅದು ಸಂಜೆಗೆ ಮುಂದೂಡಲ್ಪಟ್ಟಿದೆ. ಸಂಜೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿ ಸಂಪುಟ ರಚನೆ ಕುರಿತಂತೆ ಸಂಭವನೀಯರ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬುಧವಾರ …
Read More »ಬೊಮ್ಮಾಯಿ ಸಂಪುಟದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸಚಿವ ಸ್ಥಾನ?
ದೆಹಲಿ : ರಾಜ್ಯದ ಸಚಿವ ಸಂಪುಟ ರಚನೆ ಸಂಬಂಧ ದೆಹಲಿಗೆ ಹೋಗಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ನಡುವೆ ತಮ್ಮ ಪುತ್ರ ವಿಜಯೇಂದ್ರರಿಗೆ ಸಚಿವ ಸ್ಥಾನ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ರಚನೆ ಕುರಿತಂತೆ ಈಗಾಗಲೇ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ ಅವರು …
Read More »ನಗ್ನ ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್ ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್ ವಂಚನೆ;
: ಸೈಬರ್ ವಂಚಕರು ಫೇಸ್ ಬುಕ್ ನಲ್ಲಿ ಯುವತಿಯರ ಹೆಸರಲ್ಲಿ ಫ್ರೆಂಡ್ ರಿಕ್ವೆಷ್ಟಗಳನ್ನು ಸಾರ್ವಜನಿಕರಿಗೆ ಕಳುಹಿಸಿ ಬಳಿಕ ನಗ್ನ ವಿಡಿಯೋ ಕರೆಗಳನ್ನು ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಕುಂದಾನಗರಿ ಬೆಳಗಾವಿಯಲ್ಲೂ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಯುವತಿಯರ ರೂಪದಲ್ಲಿ ವಂಚಕರು ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ಸಾರ್ವಜನಿಕರ ಸಂಪರ್ಕ ಸಾಧಿಸುತ್ತಾರೆ. ರಿಕ್ವೆಸ್ಟ್ ಸ್ವೀಕರಿಸಿದ ನಂತರ ಅವರೊಂದಿಗೆ ಫೇಸ್ಬುಕ್ ಮೆಸೆಂಜರ್ನಲ್ಲಿ ಚಾಟ್ ಮಾಡಿ ಅವರ ವ್ಯಾಟ್ಸ್ಅಪ್ ನಂಬರ್ ಪಡೆದುಕೊಳ್ಳುತ್ತಾರೆ. ನಂತರ …
Read More »ಅಸಭ್ಯ ವರ್ತನೆ ತೋರಿದ್ದಕ್ಕೆ ಸ್ಕೂಟರ್ ಎತ್ತಿ ಚರಂಡಿಗೆ ಎಸೆದ ಮಹಿಳೆ; ನೆಟ್ಟಿಗರಿಂದ ಶ್ಲಾಘನೆ
ಮಹಿಳೆಯರು ಅವಮಾನ, ಲೈಂಗಿಕ ದೌರ್ಜನ್ಯ ಈ ರೀತಿಯ ಕೃತ್ಯಗಳಿಗೆ ಬಲಿಯಾಗುತ್ತಲೇ ಇದ್ದಾರೆ. ಅವಮಾನಿಸಿದ ವ್ಯಕ್ತಿಗೆ ಇರ್ಲೋರ್ವ ಮಹಿಳೆ ತಕ್ಕ ಪಾಠ ಕಲಿಸಿದ್ದಾಳೆ. ಘಟನೆ ಅಸ್ಸಾಂನಲ್ಲಿ(Assam) ನಡೆದಿದೆ. ಫೊಟೋದ ಜತೆಗೆ, ನಡೆದ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ(Social Media) ಹೇಳುತ್ತಿದ್ದಂತೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ. ಗುಹಾವಟಿಯಲ್ಲಿ ಭಾವನಾ ಕಶ್ಯಪ್ ನಿಂತಿದ್ದರು. ಅಡ್ರೆಸ್ ಕೇಳುವ ನೆಪದಲ್ಲಿ ಬಂದ ಅಪರಿಚಿತ ವ್ಯಕ್ತಿ ಅಸಭ್ಯವರ್ತನೆ ತೋರಿದ್ದಾನೆ. ನನಗೆ ಅಡ್ರೆಸ್ ಕುರಿತಾದ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಂತೆಯೇ ಮಹಿಳೆಯ …
Read More »ಕಾಗವಾಡ, ಕುಗನೊಳ್ಳಿ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …
Read More »ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.
ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, …
Read More »ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ
ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …
Read More »ಕುರಿ, ಕೋಳಿ ಮಾಂಸಕ್ಕಿಂತ ಗೋಮಾಂಸ ಹೆಚ್ಚು ಸೇವಿಸಿ ಎಂದ ಬಿಜೆಪಿ ಸಚಿವ!
ಶಿಲ್ಲಾಂಗ್ : ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮೇಘಾಲಯದ ನೂತನ ಪಶು ಸಂಗೋಪನೆ ಮತ್ತು ಪಶುವೈದ್ಯ ಖಾತೆ ಸಚಿವ ಸಣ್ಬೂರ್ ಶುಲ್ಲೈ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುತ್ತದೆ ಎಂಬ ಜನರಲ್ಲಿರುವ ಆತಂಕವನ್ನು ದೂರ ಮಾಡಲು ಮುಂದಾಗಿದ್ದಾರೆ. ಕಳೆದವಾರವಷ್ಟೇ ಸಚಿವರಾಗಿ …
Read More »
Laxmi News 24×7