Breaking News

ರಾಷ್ಟ್ರೀಯ

ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ನಂಬಿಸಿ ಸೆಕ್ಸ್ ದಂಧೆ : ನಿರ್ಮಾಪಕ ಸೇರಿದಂತೆ ಮೂವರು ಅರೆಸ್ಟ್

ಸಿನಿಮಾದಲ್ಲಿ ಛಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ಆಡಿಷನ್ ಗೆ ಕರೆಯಿಸಿ ವೇಶ್ಯವಾಟಿಕೆ ದಂಧೆಗೆ ತಳ್ಳುತ್ತಿದ್ದ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಪ್ರದೇಶದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ವೇಶ್ಯಾವಾಟಿಕೆ ಅಡ್ಡಾಗೆ ತಳಳ್ಳುತ್ತಿದ್ದನು ಎನ್ನಲಾಗಿದೆ. ಗ್ರಾಹಕರ ಸೋಗಿನಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ದಾಳಿ ನಡೆಸಿ ನಿರ್ಮಾಪಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. …

Read More »

ಆಮ್ಲಜನಕ ಸಿಗದೇ ಒಬ್ಬರೂ ಸತ್ತಿಲ್ಲ ಎಂದು ಹಸೀಸುಳ್ಳು ಹೇಳಿದ ಮೋದಿ ಆಡಳಿತ!

ದೇಶದಲ್ಲಿ ಕರೊನಾ ಎರಡನೇ ಅಲೆಯಲ್ಲಿಆಮ್ಲಜನಕ ಕೊರತೆಯಿಂದ ಒಂದೇ ಒಂದು ಸಾವು ಸಂಭವಿಸಿಲ್ಲ” – ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ನೀಡಿದ ಆಘಾತಕಾರಿ ಹೇಳಿಕೆ. ದೇಶದಲ್ಲಿ ಕಳೆದ ಏಪ್ರಿಲ್-ಮೇ ಅವಧಿಯಲ್ಲಿ ಕರೋನಾ ಎರಡನೇ ಅಲೆ ಭೀಕರ ಸಾವು-ನೋವುಗಳ ರುದ್ರನರ್ತನ ನಡೆಯುತ್ತಿರುವಾಗ ದೇಶದ ಉದ್ದಗಲಕ್ಕೆ ಆಮ್ಲಜನಕ ಕೊರತೆಯಿಂದ, ಸಕಾಲದಲ್ಲಿ ಜೀವವಾಯು ಲಭ್ಯವಾಗದೆ ಲಕ್ಷಾಂತರ ಮಂದಿ ಸಾವು ಕಂಡಿದ್ದರು. ಜನ ಹಾಗೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಗದೆ ಸಾವು ಕಾಣುತ್ತಿರುವುದನ್ನು ರೋಗಿಗಳ …

Read More »

ವಾರಣಾಸಿಗೆ ಭೇಟಿ ನೀಡಿದ ಶಾಸಕ ಬೆಲ್ಲದ್; ಕುತೂಹಲ ಮೂಡಿಸಿದ ಸಿಎಂ ಸ್ಥಾನದ ಆಕಾಂಕ್ಷಿಗಳ ಕಾಶಿ ಯಾತ್ರೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸ್ಥಾನದ ಆಕಾಂಕ್ಷಿಗಳು ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ಗಣಿ ಸಚಿವ ಮುರುಗೇಶ್ ನಿರಾಣಿ ಕಾಶಿ ವಿಶ್ವನಾಥ ದೇವರ ದರ್ಶನ ಪಡೆದು ವಾಪಸ್ ಆಗಿದ್ದ ಬೆನ್ನಲ್ಲೇ ಇದೀಗ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಪ್ರದೇಶದ ವಾರಣಾಸಿಗೆ ತೆರಳಿದ್ದು, ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಇಬ್ಬರು …

Read More »

ಹೊಲಕ್ಕೆ ಹೋಗಿದ್ದ ಮಹಿಳೆ ಶವವಾಗಿ ಪತ್ತೆ, ರುಂಡ, ಕೈ ಕಾಲು ನಾಪತ್ತೆ; ಬಾಗಲಕೋಟೆಯಲ್ಲಿ ನರಬಲಿ ಶಂಕೆ

ಬಾಗಲಕೋಟೆ: ಮೇವು ತರಲೆಂದು ಹೊಲಕ್ಕೆ ಹೋದ ವೇಳೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ (Dead Body) ಪತ್ತೆಯಾದ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಮುಧೋಳ ತಾಲೂಕಿನ ಶಿರೋಳ ಬಳಿ ನಡೆದಿದೆ. ಜುಲೈ 16ರಂದು ಮೇವು ತರಲು ಹೊಲಕ್ಕೆ ಹೋಗಿದ್ದ ಮಹಿಳೆ (Women) ಮನೆಗೆ ವಾಪಾಸ್ಸಾಗಿರಲಿಲ್ಲ. ಇದೀಗ ನಾಪತ್ತೆಯಾಗಿದ್ದ ಮಹಿಳೆಯ ದೇಹ ರುಂಡ, ಕೈಕಾಲು ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ (Death) ಸುತ್ತ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮೃತ ಮಹಿಳೆಯನ್ನು ರಮೀಜಾ ಅಲಾಸ …

Read More »

ನಾಳೆಯಿಂದ ಆ.15ರವರೆಗೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ನವದೆಹಲಿ: ಭಾರತದ ಪುರಾತತ್ವ ಸಮೀಕ್ಷೆಯ ಆದೇಶದ ಪ್ರಕಾರ ಜುಲೈ 21 ರಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಾಮಾನ್ಯವಾಗಿ, ಸ್ವಾತಂತ್ರ್ಯ ದಿನಾಚರಣೆಗೂ ಒಂದು ವಾರ ಮೊದಲೇ ಕೋಟೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘2021ರ ಜುಲೈ 21ರ ಬೆಳಿಗ್ಗೆಯಿಂದ 2021ರ ಆಗಸ್ಟ್ 15 ರಿಂದ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಯೊಳಗೆ ಯಾವುದೇ ಪ್ರವೇಶವಿರಬಾರದು’ ಎಂದು ಭಾರತದ …

Read More »

ಬುಧವಾರ ಬೆಳಿಗ್ಗೆ ದೇಶದ ಹಲವೆಡೆ ಲಘು ಭೂಕಂಪ

ನವದೆಹಲಿ: ಬುಧವಾರ ಬೆಳಗಿನ ಜಾವ ದೇಶದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ರಾಜಸ್ಥಾನದ ಬಿಕಾನೆರ್‌ನಲ್ಲಿ 5.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವುದು ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ವೀಕ್ಷಣಾ ಕೇಂದ್ರದ (ಎನ್‌ಸಿಎಸ್‌) ಪ್ರಕಾರ, ಬಿಕಾನೆರ್‌ನಲ್ಲಿ ಬೆಳಗಿನ ಜಾವ 5:24ಕ್ಕೆ ಭೂಕಂಪ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಸಾವು-ನೋವು ಅಥವಾ ಆಸ್ತಿ-ಪಾಸ್ತಿಗೆ ಹಾನಿಯಾಗಿಲ್ಲ. ಮೇಘಾಲಯದ ಪಶ್ಚಿಮ ಗಾರೊ ಹಿಲ್ಸ್‌ ಮತ್ತು ಲಡಾಖ್‌ ಪ್ರದೇಶಗಳಲ್ಲಿ ಕ್ರಮವಾಗಿ ಬೆಳಗಿನ ಜಾವ 2:10 ಮತ್ತು …

Read More »

ರಾಜ್ಯದ 27 ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು – ರಾಜ್ಯದ 27 ವಲಯ ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಜುಲೈ 22ರ ವರೆಗೆ ವರ್ಗಾವಣೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ವಲಯಾರಣ್ಯಾಧಿಕಾರಿಗಳ ವರ್ಗಾವಣೆ ವಿವರ ಇಲ್ಲಿದೆ –

Read More »

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್​ಗಳು ವೈರಲ್​ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್​ಗಳು ಕೂಡ ಹರಿದಾಡಿದೆ. ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್​ ಈಗ ಸಾಕಷ್ಟು ವೈರಲ್​ …

Read More »

ನಟಿ ಶಿಲ್ಪಾ ಶೆಟ್ಟಿ ಪತಿ, ರಾಜ್ ಕುಂದ್ರ ಪೋರ್ನ್ ಜಗತ್ತಿನ ಮಾಸ್ಟರ್ ಮೈಂಡ್; ಪೂನಂ

  ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರ ಬಂಧನದ ಬಳಿಕ ಅಡಲ್ಟ್ ಸ್ಟಾರ್ ಪೂನಂ ಪಾಂಡೆ ಹೇಳಿಕೆ ವೈರಲ್ ಆಗುತ್ತಿದೆ. 2019ರಲ್ಲಿ ರಾಜ್ ಕುಂದ್ರ ವಿರುದ್ಧ ದೂರು ದಾಖಲಿಸಿದ್ದ ಪೂನಂ, ರಾಜ್ ಕುಂದ್ರರನ್ನು ‘ಬ್ಲೂ ಫಿಲ್ಮ್ ದಂಧೆಯ ಮಾಸ್ಟರ್ ಮೈಂಡ್’ ಎಂದು ಆರೋಪಿಸಿದ್ದರು ಎನ್ನುವ ಸುದ್ದಿ ಈಗ ಬಾಲಿವುಡ್ ನಲ್ಲಿ ವೈರಲ್ ಆಗುತ್ತಿದೆ. ಕಳೆದ ಒಂದು ವರ್ಷದಿಂದ ಬ್ಲೂ ಫಿಲ್ಮ್ ದಂಧೆಯ ಹಿಂದೆ ಬಿದ್ದಿದ್ದ ಮುಂಬೈ …

Read More »

ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …

Read More »