ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »ತಗ್ಗಿದ ಮಳೆಯ ಅಬ್ಬರ: ಜಲಾಶಯಗಳಲ್ಲಿ ಹೆಚ್ಚಿದ ನೀರು
ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಆರ್ಭಟಿಸಿದ್ದ ಮಳೆ ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಶಿವಮೊಗ್ಗ ಸೇರಿ ಹಲವೆಡೆ ಬಿಸಿಲ ದರ್ಶನವಾದರೆ, ಸೊರಬ, ಹೊಸನಗರ, ತೀರ್ಥಹಳ್ಳಿ, ಸಾಗರದ ಕೆಲವೆಡೆ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ. ಮಳೆ ಕ್ಷೀಣಿಸಿದರೂ ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಹೊಸನಗರ ತಾಲ್ಲೂಕಿನಲ್ಲಿ 17.1 ಸೆಂ.ಮೀ, ಹುಲಿಕಲ್ನಲ್ಲಿ 13.6 ಸೆಂ.ಮೀ, ಮಾಣಿಯಲ್ಲಿ 11.5 …
Read More »ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …
Read More »ವಿದ್ಯಾಕಾಶಿ ಧಾರವಾಡದಲ್ಲಿ SSLC ಪರೀಕ್ಷೆ : ವಿದ್ಯಾರ್ಥಿಗಳಿಗೆ ಚಾಕೊಲೇಟ್ ಸ್ವಾಗತ
ಧಾರವಾಡ : ಜಿಲ್ಲೆಯಲ್ಲಿ ಎಸ್ಎಸ್ಎಲಸಿ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ರೆಡ್ ಕಾರ್ಪೆಟ್ ಹಾಸಿ, ಚಾಕೊಲೇಟ್ ನೀಡಿ ಸ್ವಾಗತಿಸಿ ಗಮನ ಸೆಳೆದಿವೆ. ಇಲ್ಲಿನ.ಮಾಳಮಡ್ಡಿಯಲ್ಲಿರುವ ಕೆ.ಇ.ಬೋರ್ಡ್ ಶಾಲೆಯ ಆಡಳಿತ ಮಂಡಳಿಯ ಸದಸ್ಯರೆಲ್ಲಾ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿಗಳಿಗೆ ಚಾಕೊಲೇಟ್ ನೀಡಿ ಅವರಿಗೆ ಸ್ವಾಗತಿಸಿದರು. ಶಾಲೆಯ ದ್ವಾರ ಬಾಗಿಲಿಗೆ ಬಲೂನಿನಿಂದ ಅಲಂಕಾರ ಮಾಡಿ, ತಳಿರು ಕಟ್ಟಿಸಿಂಗರಿಸಲಾಗಿತ್ತು. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳುಅಂಜಿಕೊಳ್ಳುವ ಅಗತ್ಯವಿಲ್ಲ. …
Read More »ಸಿಎಂ ಬದಲಾದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತದೆ: ರಂಭಾಪುರಿ ಶ್ರೀ
ರಾಯಚೂರು: ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ, ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ. ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ ಆಗಿ ಇರುತ್ತಾರೆ. ಆಕಸ್ಮಿಕವಾಗಿ ಸಿಎಂ ಬದಲಾವಣೆ ಮಾಡಿದ್ರೆ ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬೀಳುವುದು ಅಂತ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಭಾಗವತ್ಪಾದರು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಶ್ರೀಗಳು ತಮ್ಮ ಸ್ಪಷ್ಟನೆ ನೀಡಿದರು. ಯಡಿಯೂರಪ್ಪ ಇಳಿ ವಯಸ್ಸಿನಲ್ಲಿಯೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. …
Read More »ಗೊಂದಲದಲ್ಲಿರುವ ಬಿಜೆಪಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ: ಎನ್.ಎಸ್.ಬೋಸರಾಜು
ರಾಯಚೂರು: ಬಿಜೆಪಿ ಪಕ್ಷದಲ್ಲಿ ಕಳೆದ ಒಂದು ವರ್ಷದಿಂದ ಬಹಳ ಗೊಂದಲಗಳಿವೆ. ಪಕ್ಷದ ಗೊಂದಲಗಳಿಂದ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿಲ್ಲ. ಗೊಂದಲದಲ್ಲಿರುವ ಪಕ್ಷದ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಅಂತ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಎಸ್.ಬೋಸರಾಜು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಆಡಳಿತ ಚುಕ್ಕಾಣಿ ಹಿಡಿದ ಪಕ್ಷ ಸ್ಥಿರ ಸರ್ಕಾರ ಕೊಡಬೇಕು. ಬಿಜೆಪಿ ರಾಜ್ಯಾಧ್ಯಕ್ಷರ ಮಾತುಗಳನ್ನ ನೋಡಿದರೆ ಪಕ್ಷದಲ್ಲಿ ಸರಿಯಿಲ್ಲ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಪಕ್ಷದ …
Read More »ಕುಟುಂಬದಲ್ಲಿ ಆದ ಗೊಂದಲ ಬಗೆಹರಿದಿದೆ: ಮೇಘಾ ಶೆಟ್ಟಿ
ಬೆಂಗಳೂರು: ಸ್ಯಾಂಡಲ್ವುಡ್ನ ಕಿರುತೆರೆ ನಟಿ ಮೇಘಾ ಶೆಟ್ಟಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಮೇಘಾ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ ನಾನು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜವಾಗಿರುತ್ತದೆ. ಈಗ ಗೊಂದಲ ಬಗೆಹರಿದಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ. ಈ ಗೊಂದಲದಿಂದ ವೀಕ್ಷಕರಲ್ಲಿ …
Read More »ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಅವೈಜ್ಞಾನಿಕ: ಸತೀಶ ಜಾರಕಿಹೊಳಿ
ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ; ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಕೆಳಗಿಳಿಯುವವರಿಂದ ಯಾವ ವಾಣಿ (ಸಂದೇಶ) ಹೊರಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ಗೆ ಯಾವ ಲಾಭವೂ ಇಲ್ಲ; ನಷ್ಟವೂ ಇಲ್ಲ. ಮುಖ್ಯಮಂತ್ರಿ ಬದಲಾದರೂ ಸರ್ಕಾರ ಅವರದ್ದೇ ಇರುತ್ತದೆ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು. ಮಧ್ಯಂತರ ಚುನಾವಣೆ ಬಂದರೂ …
Read More »KSRTC ಬಸ್ ಅಪಘಾತ : ಚಾಲಕ ಸಾವು, 15 ಜನರಿಗೆ ಗಾಯ
ಮಂಗಳೂರು: ಬೆಂಗಳೂರಿನಿಂದ ಕೇರಳದ ಕಣ್ಣೂರು ಜಿಲ್ಲೆಯ ಮಂಕುಟ್ಟಂಗೆ ಪ್ರಯಾಣಿಸುತ್ತಿದ್ದ ಬಸ್ ಮತ್ತೊಂದು ಬಸ್ʼಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಚಾಲಕ ಮೃತಪಟ್ಟಿದ್ದು, ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ವೋಲ್ವೋ ಉದ್ಯೋಗಿಯಾಗಿದ್ದಾರೆ. ಕೇರಳ-ಕರ್ನಾಟಕ ಗಡಿ ಬಳಿ ಮುಂಜಾನೆ ವಾಹನದ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ‘ಈ ಘಟನೆ ಸುಮಾರು 4.45ಕ್ಕೆ ಸಂಭವಿಸಿದೆ. ಪೆರುಂಬಾಡಿ ಚೆಕ್ ಪಾಯಿಂಟ್ ದಾಟಿ ಮರಕ್ಕೆ ಡಿಕ್ಕಿ …
Read More »
Laxmi News 24×7