Breaking News

ರಾಷ್ಟ್ರೀಯ

ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ -ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೇಕೆದಾಟು ಜಲಾಶಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಿಎಮ ಚರ್ಚಿಸಲಿದ್ದಾರೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ, ಡಿಸಿಎಂ ಗೋವಿಂದ …

Read More »

ವಿದ್ಯುತ್ ಕಂಬಕ್ಕೆ ಟಾಟಾ ಸುಮೋ ಡಿಕ್ಕಿ – ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವರನಹೊಂಡ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ನೀಲಮ್ಮ (60) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆಗೆ ಆಗಮಿಸುತ್ತಿದ್ದ ಟಾಟಾ …

Read More »

ಸುಮಲತಾ ಹೋರಾಟಕ್ಕೆ ರೈತ ಸಂಘದಿಂದ ಸಂಪೂರ್ಣ ಬೆಂಬಲ: ಚಾಮರಸ ಮಾಲಿಪಾಟೀಲ್

ರಾಯಚೂರು: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಹೋರಾಟಕ್ಕೆ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಚಾಮರಸ ಮಾಲಿಪಾಟೀಲ್‍ರವರು, ರಾಜ್ಯದ ಹಲವೆಡೆ ಅಕ್ರಮ ಕಲ್ಲುಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ಬೇಬಿಬೆಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಅದೂ ಕೆಆರ್‍ಎಸ್ ನಿಂದ 5-6 ಕಿ.ಮೀನಲ್ಲಿ ಗಣಿಗಾರಿಕೆ ನಡೆಯುತ್ತಿದೆ. 20 ಕಿ.ಮೀ ಒಳಗೆ …

Read More »

16 ವರ್ಷ ತಲೆಮರೆಸಿಕೊಂಡಿದ್ದ ಮಂಗಳೂರಿನ ಆರೋಪಿ ಮುಂಬೈನಲ್ಲಿ ಬಂಧನ

ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಗ್ರಾಮದಲ್ಲಿ ನಡೆದ ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ಮೂಲ್ಕಿ ನಿವಾಸಿ, ಸದ್ಯ ಮುಂಬೈನ ಸಕಿ ನಾಕಾದಲ್ಲಿ ವಾಸವಿರುವ ಚಂದ್ರಕಾಂತ್ ಪೂಜಾರಿ ಯಾನೆ ಅಣ್ಣು(55) ಬಂಧಿತ ಆರೋಪಿ ಎಂದು ವರದಿಯಾಗಿದೆ. ಏನಿದು ಪ್ರಕರಣ? ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10 ರಂದು ರಾತ್ರಿ ವಿಶ್ವನಾಥ್, ಅಮೀನ್ ಎಂಬವರ …

Read More »

ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …

Read More »

ದೇಸಿ ಬೀಡಿ ಪ್ರಚಾರಕ್ಕಿಳಿದ್ರಾ ಫುಟ್​ಬಾಲ್​ ಆಟಗಾರ ಲಿಯೋನೆಲ್ ಮೆಸ್ಸಿ?

ದಕ್ಷಿಣ ಅಮೆರಿಕಾ ತಂಡ ಬ್ರೆಜಿಲ್​ಅನ್ನು ಸೋಲಿಸಿ ಕೋಪಾ ಅಮೇರಿಕಾ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ, ಅರ್ಜೆಂಟೀನಾದ ಫುಟ್​ಬಾಲ್​ ಆಟಗಾರ ಲಿಯೋನೆಲ್​ ಮೆಸ್ಸಿ. ಇದೀಗ ಭಾರೀ ಸುದ್ದಿಯಲ್ಲಿರುವ ವಿಷಯ ಏನಂದ್ರೆ.. ಮೆಸ್ಸಿ ಬಿಡಿ ಪ್ಯಾಕೆಟ್​. ತಂಬಾಕು ಉತ್ಪನ್ನದ ಪ್ಯಾಕೆಟ್​ನಲ್ಲಿರುವ ಮೆಸ್ಸಿ ಅವರ ಫೋಟೋ ಫುಲ್​ ವೈರಲ್​ ಆಗುತ್ತಿದೆ. ಹಳದಿ ಬಣ್ಣದ ಬಾಕ್ಸ್​ ಒಳಗೆ ಮೆಸ್ಸಿ ಅವರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೀಡಿ, ತಂಬಾಕು ಪದರಗಳಿಂದ ತುಂಬಿದ ತೆಳುವಾದ ಸಿಗರೇಟ್​ ಮತ್ತು ಸಾಮಾನ್ಯವಾಗಿ …

Read More »

ರಸ್ತೆಯಲ್ಲೇ ಚಾಕಲೇಟ್‌ ಎಸೆದ ವ್ಯಾಪಾರಿ ..!

ಕಾರವಾರ: ಸಗಟು ವ್ಯಾಪಾರಿಯೊಬ್ಬರು ಒಬ್ಬರು ಕ್ವಿಂಟಾಲ್ ಗೂ ಹೆಚ್ಚು ತೂಕದ ಚಾಕ್ಲೇಟ್ ಅನ್ನು ರಸ್ತೆಯಲ್ಲಿ ಎಸೆದು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಡ್ಲಮನೆ ರಸ್ತೆಯಲ್ಲಿ ನಡೆದಿದೆ. ಕ್ಯಾಂಡಿ ಕಂಪನಿಗೆ ಸೇರಿದ ವಿವಿಧ ಬಗೆಯ ಪ್ಲೇವರ್ ಹೊಂದಿದ ಚಾಕ್ಲೇಟ್ ಇದಾಗಿದ್ದು ಕೊರೊನಾ ಲಾಕ್ ಡೌನ್ ನಿಂದ ಈ ಕಂಪನಿಯ ಚಾಕ್ಲೇಟ್ ಗಳು ಮಾರುಕಟ್ಟೆಯಲ್ಲಿ ಮಾರಾಟವಾಗಿಲ್ಲ. ಈ ಕಾರಣದಿಂದ ಇದರ ಅವಧಿ ಮುಗಿದಿದ್ದು, ಕಂಪನಿಯ ಡೀಲರ್ ನಗರಸಭೆಯ ಕಸ …

Read More »

ಬಾಲಕಿಯನ್ನು ಕಾಪಾಡಲು ಹೋದವರನ್ನು ಒಬ್ಬರ ಹಿಂದೆ ಒಬ್ಬರಂತೆ ಹೊತ್ತೊಯ್ದ ಜವರಾಯ..!

ಚೆನ್ನೈ: ಅವರೆಲ್ಲರೂ ಒಂದೇ ಗ್ರಾಮಕ್ಕೆ ಸೇರಿದವರು. ಎಲ್ಲರೂ ಒಟ್ಟಿಗೆ ತಮ್ಮ ಗ್ರಾಮದ ದೇವಸ್ಥಾನದ ಬಳಿಯಿರುವ ಕೆರೆಗೆ ಮಕ್ಕಳ ಜತೆಯಲ್ಲಿ ತೆರಳಿದ್ದರು. ಮಕ್ಕಳೆಂದ ಮೇಲೆ ಅಲ್ಲಿ ತುಂಟಾಟ, ಕಿತ್ತಾಟ ಇದ್ದೇ ಇರುತ್ತದೆ. ಮಹಿಳೆಯರು ನದಿಯಲ್ಲಿ ಬಟ್ಟೆ ಹೊಗೆಯುತ್ತಿರಬೇಕಾದರೆ ಮಕ್ಕಳು ನೀರಿನಲ್ಲಿ ಆಟವಾಡುತ್ತಿದ್ದರು. ಹೀಗಿರುವಾಗ ಬಾಲಕಿಯೊಬ್ಬಳು ನೀರಿನಲ್ಲಿ ಸಿಲುಕಿಕೊಂಡಾಗ ಆಕೆಯ ರಕ್ಷಣೆಗೆ ಹೋದ ಐವರು ನೀರುಪಾಲಾಗಿರುವ ದುರಂತ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ಬುಧವಾರ ನಡೆದಿದೆ. ಮೃತರನ್ನು ರಾಜು ಪತ್ನಿ ಸುಮತಿ (35), ಮಗಳು …

Read More »

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:

ಗೋಕಾಕ ತಾಲೂಕಿನ ಪ್ರವಾಸಿ ಕೇಂದ್ರಗಳ ವೀಕ್ಷಣೆಗೆ ನಿರ್ಭಂದ:   ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ …

Read More »

ಡೇಟಿಂಗ್ ಅಪ್ ಮೂಲಕ ಕೋಟ್ಯಧಿಪತಿಯಾಗುವ ಕನಸು ಕಂಡಿದ್ದಳು ಆಕೆ. ಆದರೆ ಮುಂದೆ ಆದದ್ದೇ ಬೇರೆ

ನ್ಯೂಸ್ ಡೆಸ್ಕ್ : ಪ್ರೀತಿ ವ್ಯಕ್ತಿಯನ್ನು ಕುರುಡನನ್ನಾಗಿ ಮಾಡುತ್ತದೆ ಎಂದು ಹೇಳಲಾಗುತ್ತದೆ. ಬ್ರಿಟನ್ ನಲ್ಲಿ ಮಹಿಳೆಯೊಬ್ಬಳು ಇಂತಹುದೇ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಡೇಟಿಂಗ್ ಅಪ್ ಮೂಲಕ ಪರಿಚಯವಾದ ವ್ಯಕ್ತಿಯ ಮೋಸದ ಪ್ರೀತಿಗೆ ಬಲಿಯಾಗುವ ಮೂಲಕ ಲಕ್ಷಾಂತರ ಹಣ ಕಳೆದುಕೊಂಡಿದ್ದಾಳೆ. ಮಹಿಳೆ ವ್ಯಕ್ತಿಯನ್ನು ಮುಖತಃ ಭೇಟಿಯಾಗದೆ ತನ್ನ ಜೀವಿತಾವಧಿಯ ಗಳಿಕೆಯನ್ನು ಆ ವ್ಯಕ್ತಿಗೆ ಹಸ್ತಾಂತರಿಸಿದಳು. ಅದಾದ ಬಳಿಕ ಮತ್ತೆ ಆ ವ್ಯಕ್ತಿ ಆಕೆಯನ್ನು ಭೇಟಿಯಾಗಲು ಬರಲಿಲ್ಲ ಅಥವಾ ಮಾತನಾಡಲಿಲ್ಲ. ಡೈಲಿ ಮೇಲ್ ವರದಿಯ …

Read More »