Breaking News

ರಾಷ್ಟ್ರೀಯ

ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ಯತ್ನಾಳ್

ಬೆಂಗಳೂರು: ಬಿಜೆಪಿಯಿಂದ ನನ್ನನ್ನು ಯಾಕೆ ಉಚ್ಛಾಟನೆ ಮಾಡುತ್ತಾರೆ. ನನ್ನನ್ನು ಉಚ್ಛಾಟಿಸಲಾಗುತ್ತದೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಜೊತೆಗೂ ಸಹ ನನಗೆ ಅಡ್ಜಸ್ಟ್​ಮೆಂಟ್ ಇಲ್ಲ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …

Read More »

ಹಾವೇರಿಯಲ್ಲಿ ಗಾಡಾ ಸ್ಪರ್ಧೆ

ಹಾವೇರಿ : ಜಿಲ್ಲೆಯ ಜಾನಪದ ಸೊಗಡಿನ ಕ್ರೀಡೆಗಳು ಎಂದು ಹೋರಿ ಬೆದರಿಸುವ ಸ್ಪರ್ಧೆ, ಗಾಡಾ ಓಡಿಸುವ ಸ್ಪರ್ಧೆ ಮತ್ತು ಟಗರು ಕಾಳಗ. ಸುಗ್ಗಿ ಮುಗಿಯುತ್ತಿದ್ದಂತೆ ರೈತರು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಈ ರೀತಿಯ ಸ್ಪರ್ಧೆ ಆಯೋಜಿಸುತ್ತವೆ. ಹೊಸವರ್ಷ ಮತ್ತು ಸಂಕ್ರಾಂತಿ ಅಂಗವಾಗಿ ಹಾವೇರಿಯಲ್ಲಿ ಖಾಲಿ ಗಾಡಾ ಓಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೂ ಸಾವನ್ನಪ್ಪಿದ ಕೊಬ್ಬರಿ ಹೋರಿಗಳ ಸವಿನೆನಪಿಗಾಗಿ ಗಾಡಾ ಸ್ಫರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಹಾವೇರಿ, ಬೆಳಗಾವಿ, ಮಹಾರಾಷ್ಟ್ರ …

Read More »

ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.

ಬೆಂಗಳೂರು: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ. ಸ್ಮಾರ್ಟ್‌ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ – ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಬೈರತಿ ಸುರೇಶ್​ ಅವರು ಇಂದು …

Read More »

ಗಂಡನ ದೇಹವನ್ನು ಎರಡು ತುಂಡಾಗಿ ಕತ್ತರಿಸಿ ಕೊಲೆ

ಚಿಕ್ಕೋಡಿ (ಬೆಳಗಾವಿ) : ಮದ್ಯಪಾನ ಸೇವನೆಗೆ ಹೆಂಡತಿಗೆ ಆಗಾಗ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಗಂಡನನ್ನು ಪತ್ನಿಯೇ ಎರಡು ತುಂಡಾಗಿ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ (50) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ಡಿಸೆಂಬರ್ 10 ರಂದು ಈ ಘಟನೆ ನಡೆದಿದೆ. ಆರೋಪಿಯಾದ ಸಾವಿತ್ರಿ ಇಟ್ನಾಳೆ(30)ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು …

Read More »

ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ

ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ. ಇಂತಹ ಫೈನಾನ್ಸಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾದಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ ರಾಜ್ಯ …

Read More »

ಧಾರವಾಡದಲ್ಲಿ ವ್ಯವಸ್ಥಿತವಾಗಿ ಅಯ್ಯಪ್ಪನ ಮೂರ್ತಿ ಪ್ರತಿಷ್ಠಾಪನೆ…. ಸ್ಥಳದಲ್ಲಿ ಜಮಾಯಿಸಿದ ಮಾಲಾಧಾರಿಗಳು, ತೆರವಿಗೆ ಬಂದು ಸ್ಥಳೀಯರ ವಿರೋದಕ್ಕೆ ಮರಳಿದ ಜೆಸಿಬಿ….

ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಅದರೆ ಧಾರವಾಡದಲ್ಲಿ ಯುವ ಸಮುದಾಯ‌ ಹೊಸ ವರ್ಷ ಸಂಭ್ರಮ ಮುಗಿಸಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಧಾರವಾಡದಲ್ಲಿ ವಿಚಿತ್ರ ಘಟನೆವೊಂದು ನಡೆದು ಹೋಗಿದೆ. ಅರೇ ಅದೇನಪ್ಪಾ ಘಟನೆ ಅಂತೀರಾ ಅದರ‌ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.. ಹೀಗೆ ಖುಲ್ಲಾ ಜಾಗದಲ್ಲಿ ವಿರಾಜಮಾನರಾಗಿರುವ ಅಯ್ಯಪ್ಪನ ಮೂರ್ತಿ. ಅದರ ಎದುರುಗಡೆಯೇ ನಾಗರ ಮೂರ್ತಿ. ಎರಡೂ ಮೂರ್ತಿಗಳಿಗೆ ಪೂಜೆ ಪುನಸ್ಕಾರ. ಮತ್ತೊಂದೆಡೆ ಅಯ್ಯಪ್ಪ ಮಾಲಾಧಾರಿಗಳ ಸಮಾಗಮ. …

Read More »

ಅಂಬೇಡ್ಕರ್ ಕುರಿತು ಅಮಿತ್​​​ ಶಾ ಹೇಳಿಕೆ ಖಂಡಿಸಿ ಬಳ್ಳಾರಿಯ ಕಂಪ್ಲಿ ಸಂಪೂರ್ಣ ಬಂದ್​!

ಬಳ್ಳಾರಿ: ಡಾ. ಬಿ.ಆರ್​​​. ಅಂಬೇಡ್ಕರ್​​​​ ಅವರ ಕುರಿತಾದ ಕೇಂದ್ರ ಗೃಹ ಸಚಿವ ಅಮಿತ್​​​ ಶಾ ಹೇಳಿಕೆ ಖಂಡಿಸಿ ಇಂದು ಜಿಲ್ಲೆಯ ಕಂಪ್ಲಿ ತಾಲೂಕು ಸಂಪೂರ್ಣ ಬಂದ್​ ಆಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್​​​ ಅವರ ಬಗ್ಗೆ ಬಿಜೆಪಿಗರು ಅವಮಾನ ಮಾಡುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ವಿವಿಧ ಸಂಘಟನೆಗಳ ಪ್ರತಿಭಟನಕಾರರು ಬೆಳಗ್ಗೆ 6 ಗಂಟೆಯಿಂದಲೇ ಬಂದ್​ ಆರಂಭಿಸಿದ್ದಾರೆ. ಬಂದ್​ ಇದ್ದರೂ ಕಂಪ್ಲಿಯಲ್ಲಿ ಎಂದಿನಂತೆ ದಿನಸಿ ಮಾರುಕಟ್ಟೆಗಳು, ಮತ್ತು ಆಟೋ, ಕ್ಯಾಬ್​ ಮಾತ್ರ ಓಪನ್ …

Read More »

ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ:ಡಿ. ಕೆ ಶಿ

ಬೆಂಗಳೂರು : ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ತಿಳಿಸಿದರು. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯದಮವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿ ಅವರ ಹೆಸರು ಯಾರೂ ಬರೆದಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ …

Read More »

ಜ.15ರಂದು ಸಿಎಂ ಜೊತೆ ಸಭೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ: ಮುಷ್ಕರ ಕೈಬಿಟ್ಟ ಸಾರಿಗೆ ನೌಕರರ ಒಕ್ಕೂಟ

ಬೆಂಗಳೂರು: ಜನವರಿ 15ರಂದು ಸಿಎಂ ಸಿದ್ದರಾಮಯ್ಯ ರಸ್ತೆ ಸಾರಿಗೆ ನೌಕರರ ಜೊತೆ ಸಭೆ ನಡೆಸುವ ಭರವಸೆ ನೀಡಿದ್ದು, ಡಿ.31ರಿಂದ ಮಾಡಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯಲು ಕೆಎಸ್​ಆರ್​ಟಿಸಿ ನೌಕರರ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದ ಬೆನ್ನಲ್ಲೇ ಕ್ರಿಯಾ ಸಮಿತಿ ಮುಷ್ಕರದಿಂದ ಹಿಂದೆ ಸರಿಯಲು ತೀರ್ಮಾನಿಸಿದೆ. ಸಭೆಯಲ್ಲಿ ಮಕರ ಸಂಕ್ರಾಂತಿಯಂದು ಸಭೆ ನಡೆಸಿ …

Read More »

ಬೈಕ್ ವ್ಹೀಲಿಂಗ್ ವೇಳೆ ಅಪಘಾತವಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ದೇವನಹಳ್ಳಿ: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಹರ್ಭಾಜ್ (19) ಮೃತರು. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್​ ವ್ಹೀಲಿಂಗ್​ ಮಾಡುತ್ತಿದ್ದರು. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ತೀವ್ರ …

Read More »