ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. …
Read More »ಸೈಕಲ್ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ, ರೋಗ ಬರಲ್ಲ : ದಾವಣಗೆರೆ ಸಂಸದ
ದಾವಣಗೆರೆ: ಸೈಕಲ್ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ. ರೋಗ ಬರಲ್ಲ! ಇದು ದಾವಣಗೆರೆಯ ಬಿಜೆಪಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ರೀತಿ. ದಿನದಿಂದ ದಿನಕ್ಕೆ ಪೆಟ್ರೋಲ್-ಡಿಸೇಲ್ ದರ ಹೆಚ್ಚಾಗುತ್ತಿದ್ದು ಜನರು ಸೈಕಲ್ ಮೇಲೆ ಓಡಾಡುವ ಸ್ಥಿತಿ ಬಂದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಂಸದರು, ಸೈಕಲ್ನಲ್ಲಿ ಓಡಾಡಿದರೆ ಏನ್ ಆಗುತ್ತೆ, ಒಳ್ಳೆಯ ವ್ಯಾಯಾಮ ಆಗುತ್ತೆ ಎಂದು ಲಘುವಾಗಿ ಉತ್ತರಿಸಿದರು. ಬಳಿಕ ಮಾತನಾಡಿದ ಅವರು …
Read More »ಕೈ ನಾಯಕತ್ವದಲ್ಲಿ ಭಾರೀ ಬದಲಾವಣೆ? ಮಲ್ಲಿಕಾರ್ಜುನ ಖರ್ಗೆಗೆ ಪ್ರಮುಖ ಸ್ಥಾನ?
ನವದೆಹಲಿ: ಉತ್ತರಪ್ರದೇಶ ಮತ್ತು ಪಂಜಾಬ್ನಂತಹ ಪ್ರಮುಖ ರಾಜ್ಯಗಳ ಚುನಾವಣೆ ಹತ್ತಿರದಲ್ಲಿರುವುದರಿಂದ ಕಾಂಗ್ರೆಸ್ ತನ್ನ ಸಂಘಟನಾತ್ಮಕ ಸ್ವರೂಪದಲ್ಲಿ ಭಾರೀ ಬದಲಾವಣೆ ಮಾಡುವ ನಿರೀಕ್ಷೆಯಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಯುವ ನಾಯಕ ಸಚಿನ್ ಪೈಲಟ್, ಟಿ.ಎಸ್.ಸಿಂಗ್ ದೇವ್ ಅವರು ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಇಷ್ಟಾದರೂ ಗಾಂಧಿ ಕುಟುಂಬದವರೇ ಪಕ್ಷದ ಅಗ್ರನಾಯಕತ್ವ ಉಳಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನ …
Read More »ಮತ್ತೆ ಏರಿಕೆಯತ್ತ ಪೆಟ್ರೋಲ್, ಡೀಸೆಲ್ ಬೆಲೆ
ನವದೆಹಲಿ: ದೇಶಾದ್ಯಂತ ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಪೆಟ್ರೋಲ್ ಪ್ರತಿ ಲೀಟರ್ಗೆ 100.91ರೂ ಮತ್ತು ಡೀಸೆಲ್ 89.88 ರೂಗೆ ಏರಿಕೆಯಾಗಿದೆ. ಮಧ್ಯಪ್ರದೇಶದ ಭೋಪಾಲ್ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ಗೆ 109.24 ರೂ. ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಲೀಟರ್ ಗೆ 92.97 ರೂ ರಷ್ಟಾಗಿದೆ. ಗುರುವಾರ ಪೆಟ್ರೋಲಿಯಂ ಖಾತೆ ಸಚಿವರಾಗಿ ಅಧಿಕಾರಿ ವಹಿಸಿಕೊಂಡ ಹರ್ದೀಪ್ ಸಿಂಗ್ ಪುರಿ ಮಾತನಾಡಿ, …
Read More »ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ: ಚಾಕು, ಗಾಂಜಾ ಸೇರಿದಂತೆ ಹಲವು ವಸ್ತು ವಶಕ್ಕೆ
ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿ ಕೈದಿಗಳ ಬಳಿ ಇದ್ದ ಗಾಂಜಾ, ಚಾಕು, ಮೊಬೈಲ್ಸ್, ಸಿಮ್ಸ್, ಮೆಮೋರಿ ಕಾರ್ಡ್ಗಳನ್ನು ವಶಪಡಿಸಿಕೊಂಡರು. ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕೈದಿಗಳು ಮೊಬೈಲ್ ಬಳಸಿ ಅಕ್ರಮ ಚಟುವಟಿಕೆಗಳ ನಡೆಸುತ್ತಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ. ಶನಿವಾರ ನಸುಕಿನ 5 ಗಂಟೆಗೆ ಶ್ವಾನ ದಳದ ಮೂಲಕ ಸಿಸಿಬಿ ತಂಡ ದಾಳಿ ನಡೆಸಿದೆ ಎಂದು ಸಿಸಿಬಿ …
Read More »ಭರ್ಜರಿ ಬೇಟೆ: 2,500 ಕೋಟಿ ಮೌಲ್ಯದ 350 ಕೆಜಿ ಹೆರಾಯಿನ್ ಜಪ್ತಿ: ನಾಲ್ವರ ಬಂಧನ
ದೆಹಲಿ: ದೆಹಲಿ ಪೊಲೀಸರ ವಿಶೇಷ ತಂಡ ಅಂತರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಪತ್ತೆಹಚ್ಚಿದ್ದು, ಬರೋಬ್ಬರಿ 2,500 ಕೋಟಿ ರೂಪಾಯಿ ಮೌಲ್ಯದ 354 ಕಿಲೋ ಗ್ರಾಮ್ ಉತ್ತಮ ಗುಣಮಟ್ಟದ ಹೆರಾಯಿನ್ ಅನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಹರ್ಯಾಣದ ಮೂವರು ಹಾಗೂ ದೆಹಲಿ ಓರ್ವ ವ್ಯಕ್ತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ತಂಡ ಈವರೆಗೆ ಪತ್ತೆ ಹಚ್ಚಿದ ಅತೀ ದೊಡ್ಡ ಡ್ರಗ್ಸ್ ಜಾಲ ಇದಾಗಿದೆ. ಈ ಮೂಲಕ …
Read More »ಕೇಂದ್ರ ಸಂಪುಟ: 33 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, 70 ಸಚಿವರು ಕೋಟ್ಯಧೀಶ್ವರರು!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟವನ್ನು ವಿಸ್ತರಿಸಿ 36 ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಒಟ್ಟು ಕೇಂದ್ರ ಸಂಪುಟದ ಸಚಿವರ ಸಂಖ್ಯೆ 78ಕ್ಕೆ ಏರಿಕೆಯಾಗಿತ್ತು. ಇದರಲ್ಲಿ 33 ಸಚಿವರ ವಿರುದ್ಧ (ಶೇ.42) ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದಾಗಿ ಎಡಿಆರ್ ತಿಳಿಸಿದೆ. 24 ಸಚಿವರು ಕ್ರಿಮಿನಲ್ ಪ್ರಕರಣಗಳಲ್ಲಿ ಕೊಲೆ, ಕೊಲೆ ಯತ್ನ ಮತ್ತು ದರೋಡೆಯಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ವಿವರಿಸಿದೆ. ಸಚಿವರು ಚುನಾವಣಾ ಆಯೋಗಕ್ಕೆ …
Read More »ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ: ಡಾ.ಕೆ ಸುಧಾಕರ್
ದಾವಣಗೆರೆ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿಗಳಿವೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾಸ್ಪತ್ರೆಯ ಭೇಟಿಗಿಂತ ಮೊದಲು ಜಿಎಂಐಟಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿ ಹೇಳುತ್ತಿದ್ದು, ಹಾಗಂತ ಯಾವ ಪೋಷಕರು ಮೈಮರೆಯುವಂತಿಲ್ಲ. ಲಾಕ್ಡೌನ್ ಸಡಿಲಿಕೆ ಆಗಿದೆ ಎಂದು ಜನರು ಕೂಡ ಮೈಮೆರಯುವಂತಿಲ್ಲ. ಪ್ರತಿಯೊಬ್ಬರು ಎರಡನೇ ಡೋಸ್ ಪಡೆಯುವವರೆಗೂ ಎಲ್ಲರೂ …
Read More »ಕೇಂದ್ರ ಸಚಿವೆ ಕರಂದ್ಲಾಜೆಯನ್ನು ಹಾಡಿ ಹೊಗಳಿದ ಬಿಎಸ್ವೈ
ಕಲಬುರಗಿ: ಬಿಜೆಪಿ ಸರ್ಕಾರ ಬಂದು ಎರಡು ವರ್ಷವಾದರೂ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ತುಟಿ ಬಿಚ್ಚದ ಸಿಎಂ ಬಿ.ಎಸ್ ಯಡಿಯೂರಪ್ಪ ಕಲಬುರಗಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಕರಂದ್ಲಾಜೆ ಅವರನ್ನು ಹಾಡಿ ಹೊಗಳಿದ್ದಾರೆ. ಕಲಬುರಗಿ ನಗರದಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಬಿಎಸ್ವೈ, ರೈತರ ಬಗ್ಗೆ ಸದಾ ಕಾಳಜಿ ವಹಿಸುವ ಶೋಭಾ ಕರಂದ್ಲಾಜೆ ಅವರನ್ನು ಪ್ರಧಾನಿ ಮೋದಿ ಕೃಷಿ ಸಚಿವರನ್ನಾಗಿ …
Read More »ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ವರ್ಚುವಲ್ ಸಭೆ
ಬೆಳಗಾವಿ: ಕಾರ್ಯಕರ್ತರ ಸಹನೆ, ಸಹಕಾರ ಹಾಗೂ ಅವರ ನಿಸ್ವಾರ್ಥ ಸೇವೆಯಿಂದ ಬಿಜೆಪಿ ಪಕ್ಷ ಇಂದು ಪ್ರಪಂಚದಲ್ಲಿಯೆ ಅತಿಹೆಚ್ಚು ಕಾರ್ಯಕರ್ತರನ್ನು ಹೊಂದಿದ ಸಮರ್ಥ ಪಕ್ಷ ಎನ್ನುವದು ಜಗಜ್ಜನಿತವಾಗಿದೆ ಎಂದು ಉಪಸಭಾಪತಿ ಆನಂದ ಮಾಮನಿ ಹೇಳಿದರು. ನಗರದ ಗೋಮಟೇಶ್ವರ ಸಭಾ ಭವನದಲ್ಲಿ ಶನಿವಾರ ನಡೆದ ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ವರ್ಚುವಲ್ ಸಭೆಯನ್ನು ಉದ್ಘಾಟಸಿ ಮಾತನಾಡಿ, ಚುನಾವಣೆಗೆ ಮಾತ್ರ ಸೀಮಿತವಾಗದೆ ಜನರ ಸಂಕಷ್ಟಕ್ಕೆ ಸದಾ ಸ್ಪಂದಿಸುವದೆ ಪಕ್ಷದ ಸಿದ್ದಾಂತವಾಗಿದೆ. ಬಿಡುವಿಲ್ಲದೆ ದೇಶದ ಜನರ …
Read More »
Laxmi News 24×7