Breaking News

ರಾಷ್ಟ್ರೀಯ

ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ.

ಉಡುಪಿ, ಜುಲೈ 04; ಕರ್ನಾಟಕ ಸರ್ಕಾರ ಜುಲೈ 5ರಿಂದ ಅನ್ವಯವಾಗುವಂತೆ ಅನ್‌ಲಾಕ್ ಮಾರ್ಗಸೂಚಿ ಪ್ರಕಟಿಸಿದೆ. ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಅದರಲ್ಲೂ ಭಕ್ತರಿಗಂತೂ ದೇವಾಲಯದ ಬಾಗಿಲು ತೆರೆದಿರೋದು ಖುಷಿಯನ್ನು ಇಮ್ಮಡಿಗೊಳಿಸಿದೆ. ಆದರೆ ಉಡುಪಿಯ ಶ್ರೀ ಕೃಷ್ಣನನ್ನು ಕಾಣಲು ಇನ್ನೂ ಒಂದು ವಾರ ಕಾಯಲೇಬೇಕಿದೆ. ಉಡುಪಿಯ ಕೃಷ್ಣಮಠ ಇನ್ನೂ ಒಂದು ವಾರಗಳ ಕಾಲ ತೆರೆಯುವುದಿಲ್ಲ ಎಂದು ಪರ್ಯಾಯ ಅದಮಾರು ಈಶಪ್ರೀಯ ತೀರ್ಥ ಸ್ವಾಮಿಜಿ ಹೇಳಿದ್ದಾರೆ. ಒಂದುವಾರ …

Read More »

ಕಿಡ್ನಿ ಮಾರಾಟ ದಂಧೆಯಲ್ಲಿ ತೊಡಗಿದ್ದ ಬೃಹತ್ ಜಾಲವನ್ನು ಪತ್ತೆ ಮಾಡಿರುವ ಬೇಗೂರು ಪೊಲೀಸರು

ಬೆಂಗಳೂರು: ಕಿಡ್ನಿ ಮಾರಾಟ ದಂಧೆಯಲ್ಲಿ ತೊಡಗಿದ್ದ ಬೃಹತ್ ಜಾಲವನ್ನು ಪತ್ತೆ ಮಾಡಿರುವ ಬೇಗೂರು ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಡ್ನೂಡಿನ್ ಓಬಿನ್ನಾ ಕಿಂಗ್ ಲೈ ಬಂಧಿತ ಆರೋಪಿಯಾಗಿದ್ದು, ಈತ ನೈಜೀರಿಯಾ ಮೂಲದವ ಎನ್ನಲಾಗಿದೆ. ಡ್ರಗ್ಸ್ ಮಾರಾಟ ಹಾಗೂ ಕಿಡ್ನಿ ಮಾರಾಟ, ಖರೀದಿ ದಂಧೆಯಲ್ಲಿ ಗ್ಯಾಂಗ್ ಕಟ್ಟಿಕೊಂಡು ಜನರನ್ನು ವಂಚಿಸುತ್ತಿದ್ದ. ಈತನನ್ನು ಕಳೆದ ಒಂದು ವರ್ಷದಿಂದ ಗುಜರಾತ್ ಪೊಲೀಸರು ಹುಡುಕಾಡುತ್ತಿದ್ದರು. ಕಿಡ್ನಿ ಮಾರಾಟ ಹಾಗೂ ಖರೀದಿ ಮಾಡಲಾಗುವುದು ಎಂದು ಜಾಹೀರಾತಿನ …

Read More »

ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್‌ ಮಾದರಿಗಳು ಪತ್ತೆಯಾಗಿವೆ.

ಬೆಂಗಳೂರು(ಜು.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಭೀಕರತೆಗೆ ಡೆಲ್ಟಾ ರೂಪಾಂತರಿ ಕೊರೋನಾ ವೈರಾಣುವೇ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ರೂಪಾಂತರಿ ವೈರಾಣುಗಳು ಸೃಷ್ಟಿಸಬಹುದಾದ ಅವಾಂತರದ ಬಗ್ಗೆ ನಿಗಾವಹಿಸಲು ಸತತವಾಗಿ ಜಿನೋಮಿಕ್‌ ಸೀಕ್ವೆನ್ಸ್‌ ಪರೀಕ್ಷೆ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ.   ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್‌ ಮಾದರಿಗಳು ಪತ್ತೆಯಾಗಿವೆ. ಉಳಿದಂತೆ ಅಲ್ಫಾ 14, ಬೀಟಾ 06, ಕಪ್ಪಾ 145 ಪ್ರಕರಣ ಪತ್ತೆಯಾಗಿವೆ. ಇವೆಲ್ಲವುಗಳ ಪೈಕಿ ರಾಜ್ಯದಲ್ಲಿ ಪಾಸಿಟಿವಿಟಿ …

Read More »

UNLOCK 3.0 : ಪಬ್‌ ಇಲ್ಲ, ಬಾರ್‌ನಲ್ಲಿ ಕೌಂಟರ್‌ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್​ವೈ

  ಬೆಂಗಳೂರು : ಅನ್​ಲಾಕ್​ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್‌ಲಾಕ್‌ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್‌ವೈ ಹೇಳಿದಾರೆ. ಮಾಲ್​ಗಳನ್ನು ಓಪನ್​ ಮಾಡಲು, ಬಾರ್​ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್​ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …

Read More »

ಭಾರತೀಯ ಕ್ರೈಸ್ತರ ದಿನಾಚರಣೆ ಅಂಗವಾಗಿ ಕೋವಿಡ್ ಪೀಡಿತರಿಗೆ ಹಣ್ಣು, ಹಂಪಲು ವಿತರಣೆ

  ಬೆಳಗಾವಿ : ಬೆಳಗಾವಿ ಫಾಸ್ಟರ್ಸ್ ಅಂಡ್ ಕ್ರಿಸ್ಟಿನ್ ಲೀಡರ್ಸ್ ಅಸೋಸಿಯೇಷನ್, ಶನಿವಾರ – ಭಾರತೀಯ ಕ್ರೈಸ್ತ ದಿನಾಚರಣೆ – ಅಂಗವಾಗಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಕೋವಿಡ್ 19 ನಿಯಮಗಳನ್ನು ಪಾಲಿಸಿ, ಹಣ್ಣು ಹಂಪಲವನ್ನು ವಿತರಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಪಾಸ್ಟರ್ ಜೆ ಥೋಮಸ್ ನೇತೃತ್ವದಲ್ಲಿ ಕೋವಿಡ್ ಹಾಗು ಇತರ ಒಳರೋಗಿಗಳಿಗೆ ಹಣ್ಣು, ಹಾಲು, ಬಿಸ್ಕೆಟ್, ನೀರು ನೀಡಿ ಅವರು ಶೀಘ್ರ ಗುಣವಾಗಲೆಂದು ಅವರಿಗಾಗಿ ಪ್ರಾರ್ಥಿಸಲಾಯಿತು. ಬೆಳಗಾವಿ ಫಾಸ್ಟರ್ಸ್ …

Read More »

ಡಿವೋರ್ಸ್ ಘೋಷಿಸಿದ ನಟ ಅಮೀರ್ ಖಾನ್-ಕಿರಣ್ ರಾವ್ ದಂಪತಿ

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, 15 ವರ್ಷಗಳ ವಿವಾಹ ಬಂಧನಕ್ಕೆ ಗುಡ್ ಬೈ ಹೇಳಿದ್ದಾರೆ. ನಟ ಅಮೀರ್ ಖಾನ್ ಹಾಗು ಕಿರಣ್ ರಾವ್ ಪರಸ್ಪರ ಸಮ್ಮತಿ ಮೂಲಕ ಇಂದು ( ಜುಲೈ 03) ವಿಚ್ಛೇಧನ ಘೋಷಿಸಿದ್ದಾರೆ. ತಮ್ಮ ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರುವ ಈ ದಂಪತಿ, ಪರಸ್ಪರ ಒಪ್ಪಿಗೆ ಮೂಲಕವೇ ದೂರವಾಗಲು ನಿರ್ಧರಿಸಿದ್ದೇವೆ ಎಂದಿದ್ದಾರೆ. ಇನ್ನು …

Read More »

ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

    ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು .   ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …

Read More »

ಕಸಾಯಿಖಾನೆಯಿಂದ ಮರಳಿದ ಎತ್ತಿಗೆ ಭರ್ಜರಿ ಬರ್ತ್‌ಡೇ

ಧಾರವಾಡ: ಕಸಾಯಿ ಖಾನೆಯಿಂದ ಮರಳಿ ಮನೆಗೆ ತಂದಿದ್ದ ಎತ್ತಿಗೆ ಭರ್ಜರಿ ಹುಟ್ಟುಹಬ್ಬ ಆಚರಿಸುವ ಮೂಲಕ ದೇವರಹುಬ್ಬಳ್ಳಿಯ ಯುವ ರೈತ ಎಲ್ಲರ ಗಮನ ಸೆಳೆದಿದ್ದಾನೆ. 10 ಕೆಜಿ ತೂಕದ ಕೇಕ್‌ನಲ್ಲಿ ಮೈಲಾರಿ ಎಂದು ಎತ್ತಿನ ಹೆಸರು ಬರೆಯಿಸಿ, ಮನೆ ಮುಂದೆ ಪೆಂಡಾಲ್‌ ಹಾಕಿಸಿ, ಇಡೀ ಗ್ರಾಮದ ಜನರಿಗೆ ಸಿಹಿ ಊಟ ನೀಡಿದ ನಾಗಪ್ಪ ಓಮಗಣ್ಣವರ ಎತ್ತಿನ ಹುಟ್ಟುಹಬ್ಬ ಆಚರಿಸಿದ್ದಾನೆ. ಗ್ರಾಮದ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಎಲ್ಲರೂ ಬಸವನ ಹುಟ್ಟು ಹಬ್ಬದಲ್ಲಿ ಭಾಗಿಯಾಗಿ …

Read More »

ಮಗನ ಮೇಲೆಯೇ ತಾಯಿಯ ಲೈಂಗಿಕ ದೌರ್ಜನ್ಯ: ಪೊಲೀಸರು ಇಂತಹ ಕೀಳು ಮಟ್ಟಕ್ಕೆ ಇಳಿದರಾ?

ತಿರುವನಂತಪುರಂ: ಕಡಕ್ಕವೂರ್​ ಪೊಕ್ಸೊ ಪ್ರಕರಣದಲ್ಲಿ ತಾಯಿಯೊಬ್ಬಳು ತನ್ನ ಮಗನ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆಂದು ತಪ್ಪಾಗಿ ಆರೋಪಿಸಲಾಗಿದ್ದು, ಘಟನೆಯ ಬಗ್ಗೆ ಪೊಲೀಸ್​ ವರದಿ ಮೇಲೆಯೇ ಅನುಮಾನ ಮೂಡಿದೆ. ಸಂತ್ರಸ್ತ ಮಹಿಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಕರಣದಿಂದ ನನ್ನನ್ನು ಖುಲಾಸೆಗೊಳಿಸಲಾಗಿದೆ. ಆದರೆ, ನನ್ನ ಮಗನನ್ನು ಅಪರಾಧಿ ಎಂಬಂತೆ ವರದಿಯಲ್ಲಿ ಬಿಂಬಿಸಲಾಗಿದೆ ಎಂದು ತಿಳಿಸಿದ್ದಾರೆ. ನನ್ನ ವಿರುದ್ಧ ನಕಲಿ ಪ್ರಕರಣ ದಾಖಲಿಸಿದವರ ಬಗ್ಗೆ ವರದಿಯಲ್ಲಿ ಯಾವುದೇ ಉಲ್ಲೇಖ ಇರಲಿಲ್ಲ. ಹೀಗಾಗಿ ಕಡಕ್ಕವೂರ್ ಪೊಲೀಸರ ವಿರುದ್ಧ …

Read More »