Breaking News

ರಾಷ್ಟ್ರೀಯ

ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ದೆಹಲಿಗೆ ತೆರಳಿದ್ದಾರೆ. ಅವರ ದಿಢೀರ್‌ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆಕಾರಣವಾಗಿದೆ. ಇತ್ತೀಚೆಗೆ ನಾಯಕತ್ವ ಬದಲಾವಣೆಯ ಕುರಿತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ರಾಜ್ಯಕ್ಕೆ ಆಗಮಿಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗಿತ್ತು. ಇದೇ ಬೆಳವಣಿಗೆಗಳ ಕುರಿತು ಸಿಎಂ ಯಡಿಯೂರಪ್ಪ …

Read More »

ಮುಂದಿನ ಸಿಎಂ ಸಿದ್ದರಾಮಯ್ಯ : ಎತ್ತಿನ ಮೇಲೂ ಬಲು ಜೋರು ಬರವಣಿಗೆ

ಗದಗ : ಸದ್ಯ ಬಿಜೆಪಿ ಒಡೆದ ಮನೆಯಂತಾಗಿದೆ. ಮೊದಲಿದ್ದ ಬೆಂಬಲ, ಪ್ರೀತಿ, ವಿಶ್ವಾಸ ಅಷ್ಟಾಗೇನು ಕಾಣ್ತಾ ಇಲ್ಲ. ಇನ್ನೆರಡು ವರ್ಷವಷ್ಟೆ ಎಲೆಕ್ಷನ್ ಗೆ ದಿನಗಳು ಬಾಕಿ ಉಳಿದಿರೋದು. ಈ ನಡುವೆ ಬಿಜೆಪಿಯ ಒಳಮುನಿಸ್ಸನ್ನ ವಿಪಕ್ಷಗಳು ಬಂಡವಾಳವನ್ನಾಗಿಸಿಕೊಳ್ಳುತ್ತಿವೆ. ಜೆಡಿಎಸ್, ಕಾಂಗ್ರೆಸ್ ನಲ್ಲಿ ಸಿಎಂ ಕ್ರೇಜ್ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನೋ ಕೂಗು ಆಗಾಗ ಕೇಳುತ್ತಲೆ ಇರುತ್ತೆ. ಆದ್ರೆ ಈ ಬಾರಿ ಅದು ಎತ್ತುಗಳ ಮೇಲೂ ರಾರಾಜಿಸುತ್ತಿದೆ. …

Read More »

ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು ,

ಮಹಾನಿಯರೆ, ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು , ಆದ್ದರಿಂದ ಗೋಕಾಕ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ • ಬೆಳಿಗ್ಗೆ 6.00 ರಿಂದ ಮದ್ಯಾಹ್ನ 2.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಹಾಲು ಮಾರಾಟ, ತರಕಾರಿ, ಮೀನು ಮತ್ತು ಮಾಂಸ ಮಾರಾಟ, ರೇಷನ್ ಅಂಗಡಿ ಗಳಿಗೆ ಮಾತ್ರ ಅನುಮತಿ ಇರುತ್ತದೆ ಅಲ್ಲದೇ ಲಿಕರ್ ಶಾಪ್ ಗಳಲ್ಲಿ ಪಾರ್ಸೆಲ್ …

Read More »

ಕೇಂದ್ರದೊಂದಿಗೆ ಕಣಿವೆ ನಾಡಿನ ನಾಯಕರ ಸಭೆ: ಮಹತ್ವದ ಬೆಳವಣಿಗೆ ಬಗ್ಗೆ ದೇವೇಗೌಡರು ಹೇಳಿದ್ದೇನು..?

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಜಮ್ಮು ಕಾಶ್ಮೀರದ ರಾಜಕೀಯ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ಗೃಹಸಚಿವ ಅಮಿತ್ ಶಾ ಜಮ್ಮು ಕಾಶ್ಮೀರದ ಭವಿಷ್ಯದ ಬಗ್ಗೆ ಚರ್ಚೆಗಳನ್ನು ನಡೆಸಿದ್ರು. ಸಭೆಯಲ್ಲಿ ಜಮ್ಮು ಕಾಶ್ಮೀರದ ನಾಯಕರು ಮತ್ತು ಪ್ರಧಾನಿ ನಡುವೆ ಮುಕ್ತ ಮಾತುಕತೆ ನಡೆದಿದ್ದು ಹಲವು ಧನಾತ್ಮಕ ನಿರ್ಧಾರಗಳಿಗೆ ಮುನ್ನುಡಿ ಬರೆದಂತಾಗಿದೆ. ಪ್ರಮುಖವಾಗಿ ಜಮ್ಮು ಕಾಶ್ಮೀರಗಳಿಗೆ ರಾಜ್ಯತ್ವ ನೀಡುವುದು.. ಸುರಕ್ಷಿತ, ಭದ್ರತೆಯ ವಾತಾವರಣ ನಿರ್ಮಿಸುವುದು.. ಚುನಾವಣೆಗಳನ್ನ ನಡೆಸುವುದು.. …

Read More »

ಆಸ್ಪತ್ರೆ ಕಪಾಟು ಒಳಗಡೆ ಹೆಬ್ಬಾವು…..

ಬೆಳ್ತಂಗಡಿ: ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡು ಸ್ಥಳದಲ್ಲಿ ಕೆಲಕಾಲ ಸಾರ್ವಜನಿಕರು ಹಾಗೂ ಆಸ್ಪತ್ರೆ ಮಂದಿಯನ್ನು ಆತಂಕಕ್ಕೀಡು ಮಾಡಿದ ಘಟನೆ ಗುರುವಾರ ನಡೆದಿದೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಹೊರ ರೋಗಿ ವಿಭಾಗದ ಕಪಾಟಿನಲ್ಲಿ ಹೆಬ್ಬಾವು ಅವಿತುಕೊಂಡಿದ್ದು, ಕಪಾಟು ಬಾಗಿಲು ತೆರೆಯುವ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತವರಣ ನಿರ್ಮಾಣವಾಯಿತು. ಸಿಬ್ಬಂದಿ, ಸಾರ್ವಜನಿಕರು ಆತಂಕಗೊಂಡರು. ಕೂಡಲೇ ಹಾವು ಸೆರೆ ಹಿಡಿಯುವ ಸ್ನೇಕ್ …

Read More »

ವಿಶ್ವಕ್ಕೆ ಮಾರಕವಾಗಲಿದೆ ಡೆಲ್ಟಾ ರೂಪಾಂತರಿ ವೈರಸ್..!

ವಿಶ್ವಸಂಸ್ಥೆ,ಜೂ.24-ಅತಿ ವೇಗವಾಗಿ ಹರಡಬಲ್ಲ ಸಾಮಥ್ರ್ಯ ಹೊಂದಿರುವ ಡೆಲ್ಟಾ ರೂಪಾಂತರಿ ವೈರಸ್ ಈಗಾಗಲೇ 85 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದು, ಕೆಲವೇ ದಿನಗಳಲ್ಲಿ ಮತ್ತಷ್ಟು ರಾಷ್ಟ್ರಗಳಿಗೆ ಹರಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಅಲ್ಫಾ ರೂಪಾಂತರಿ 170, ಬೀಟಾ 118, ಗಾಮಾ 71 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದವು, ಇದೀಗ ಅತ್ಯಂತ ಮಾರಕ ವೈರಾಣು ಆಗಿರುವ ಡೆಲ್ಟಾ 85 ರಾಷ್ಟ್ರಗಳಲ್ಲಿ ತನ್ನ ಕಬಂಧ ಬಾಹು ಚಾಚಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ …

Read More »

ಕೋವಿಡ್‌ ವಿರುದ್ದ ಹೋರಾಟದಲ್ಲಿ ಸರ್ಕಾರದ ಜತೆ ಭಾಗಿ ಎಂದ ರಿಲಯನ್ಸ್‌ ಮುಖೇಶ್‌ ಅಂಬಾನಿ

ಮುಂಬೈ: ನಮ್ಮ ವ್ಯವಹಾರದ ಕಾರ್ಯಕ್ಷಮತೆಗಿಂತ ಈ ಕಷ್ಟಕರ ಸಮಯದಲ್ಲಿ ರಿಲಯನ್ಸ್‌ನ ಮಾನವೀಯ ಪ್ರಯತ್ನಗಳು ನನಗೆ ಹೆಚ್ಚಿನ ಸಂತೋಷವನ್ನು ನೀಡಿದೆ. ಕೋವಿಡ್ -19 ಬಿಕ್ಕಟ್ಟಿನ ಉದ್ದಕ್ಕೂ, ನಮ್ಮ ರಿಲಯನ್ಸ್ ಕುಟುಂಬದ ಉದ್ದೇಶ ಮತ್ತು ರಾಷ್ಟ್ರೀಯ ಕರ್ತವ್ಯದ ಪ್ರಜ್ಞೆಯೊಂದಿಗೆ ಸಾಗಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಹೆಮ್ಮೆ ಮತ್ತು ವಿನಮ್ರತೆ ಇದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ (ಆರ್​ಐಎಲ್​) ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದರು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ (ಆರ್​ಐಎಲ್​) 44ನೇ ವಾರ್ಷಿಕ …

Read More »

‘ಕ್ರಿಶ್’ ಚಿತ್ರಕ್ಕೆ 15 ವರ್ಷದ ಸಂಭ್ರಮ: ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ ಹೃತಿಕ್

ಬಾಲಿವುಡ್ ನಟ ಹೃತಿಕ್ ರೋಷನ್ ನಟನೆಯ ಕ್ರಿಶ್ ಮೊದಲ ಸರಣಿ ಬಿಡುಗಡೆಯಾಗಿ 15 ವರ್ಷಗಳು ಕಳೆದಿವೆ. ಈಗಾಗಲೇ ಕ್ರಿಶ್ 3 ಸರಣಿಗಳನ್ನು ಯಶಸ್ವಿಯಾಗಿ ಮುಗಿಸಿದೆ. ಚಿತ್ರಾಭಿಮಾನಿಗಳ ನೆಚ್ಚಿನ ಸರಣಿಗಳಲ್ಲಿ ಕ್ರಿಶ್ ಕೂಡ ಒಂದು. 15 ವರ್ಷ ತುಂಬಿದ ಸಂತಸದಲ್ಲೇ ಹೃತಿಕ್ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ. ಕ್ರಿಶ್ 4 ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ. ವಾರ್ ಸಿನಿಮಾ ಬಳಿಕ ಹೃತಿಕ್ ಅಧಿಕೃತವಾಗಿ ಯಾವುದೇ ಅನೌನ್ಸ್ ಮಾಡಿರಲಿಲ್ಲ. ಇದೀಗ ಕ್ರಿಶ್ 4ನೇ …

Read More »

20 ವರ್ಷದ ಹಿಂದಿನ ಕೇಸ್ ಒಪನ್ ಮಾಡಿದ ಕೊಪ್ಪಳ ಪೊಲೀಸರು: ಆರೋಪಿ ಅಂದರ್

ಕೊಪ್ಪಳ: ಎರಡು ದಶಕಗಳ ಹಿಂದಿನ ಕೇಸ್ ಒಪನ್ ಮಾಡಿರುವ ಕೊಪ್ಪಳ ಪೊಲೀಸರು ಸುಮಾರು 175 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಕಾಯಿತಿ, ಕಳ್ಳತನ, ಹಲ್ಲೆ, ಮತ್ತು ಕೊಲೆ ಹಾಗೂ ವಂಚನೆ ಕೇಸ್ ಗಳಲ್ಲಿ ಜಾಮೀನು ಪಡೆದು ನಾಪತ್ತೆಯಾಗಿದ್ದ ರಾಮಬಾಬು ಎಂಬ ಆರೋಪಿಯನ್ನು ಜೂನ್ 21 ರಂದು ಪೊಲೀಸರು ಬಂಧಿಸಿದ್ದಾರೆ. 2003ರಲ್ಲಿ ಕೊಪ್ಪಳದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಆತನನ್ನು ಬಳ್ಳಾರಿಯ ಗಾಂಧಿನಗರದಲ್ಲಿ ಬಂಧಿಸಲಾಗಿದೆ. …

Read More »

ಕಿಡಿಗೇಡಿಗಳಿಂದ ಬೆಂಕಿ; ಶಾಲಾ ಕೊಠಡಿಯಲ್ಲಿದ್ದ ಮಕ್ಕಳ ಸಮವಸ್ತ್ರ ಭಸ್ಮ

ಹೊಸನಗರ: ತಾಲ್ಲೂಕಿನ ಮಾರುತೀಪುರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲು ಸಂಗ್ರಹಿಸಿಟ್ಟಿದ್ದ ಸಮವಸ್ತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಸೋಮವಾರ ಬೆಳಿಗ್ಗೆ ಶಾಲಾ ಕೊಠಡಿ ತೆರೆದಾಗ ಸಮವಸ್ತ್ರದ ರಾಶಿಗೆ ಬೆಂಕಿ ಬಿದ್ದಿದ್ದು ಸುಟ್ಟು ಕರಕಲಾಗಿದ್ದವು. 2020- 21ನೇ ಸಾಲಿನ ಮಕ್ಕಳಿಗೆ ವಿತರಿಸಲು ಶಾಲಾಡಳಿತ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿತ್ತು. ಶನಿವಾರ ಸಂಜೆಯವರೆಗೂ ಸುಸ್ಥಿತಿಯಲ್ಲಿದ್ದವು. ಕೊಠಡಿಯ ಒಂದು ಕಿಟಕಿಯ ಬಾಗಿಲು ಪೂರ್ಣವಾಗಿ ಮುಚ್ಚಲು ಬರುತ್ತಿರಲಿಲ್ಲ. ಇದನ್ನು ಬಳಸಿ ಕಿಡಿಗೇಡಿಗಳು ಹೊರಗಿನಿಂದ ಬಟ್ಟೆಗೆ ಬೆಂಕಿ ಹಚ್ಚಿದ್ದಾರೆ ಎಂದು ಶಾಲಾಡಳಿತ …

Read More »