Breaking News

ರಾಷ್ಟ್ರೀಯ

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ತುಮಕೂರು: ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ನಾನು ಹೋರಾಟ ಮಾಡುತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪದೇಪದೆ ವಿಚಾರಣೆ ನೆಪದಲ್ಲಿ ನನಗೆ ಮಾನಸಿಕ ಕಿರುಕುಳ ನೀಡುತಿದ್ದು, ಅನೇಕ ಬಾರಿ ವಿಚಾರಣೆಗೆಂದು ಕರೆದು ಸುಳ್ಳು ಆರೋಪದಡಿ ಬಂಧಿಸಿದ್ದಾರೆ. ಹಿಂದೂ ಸಮಾಜ ನನ್ನ ಬೆಂಬಲಕ್ಕೆ ನಿಲ್ಲದಿರುವುದು ತುಂಬಾ ನೋವು ತಂದಿದೆ. ನನಗೆ ಪೊಲೀಸರ ಕಿರುಕುಳ ಸಹಿಸಲಾಗುತ್ತಿಲ್ಲ. ನನಗೆ ದಯಾಮರಣ ನೀಡಿ ಎಂದು ರಾಜ್ಯಪಾಲರಿಗೆ ಮಧುಗಿರಿಮೋದಿ ಮನವಿ ಪತ್ರ ಸಲ್ಲಿಸಿದ್ದಾರೆ. …

Read More »

ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?

ಬೆಳಗಾವಿ :  ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ.   ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, …

Read More »

ಕಿರಿಯ ವಯಸ್ಸಿನಲ್ಲಿ ವಾಯು ಸೇನೆಗೆ ಬೆಳಗಾವಿ ಯುವಕ ಆಯ್ಕೆ.

ಬೆಳಗಾವಿ:-ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಶ ಸದಾಶಿವ ಬಿಳ್ಳೂರ ಎನ್ ಡಿಎ ಪರೀಕ್ಷೆ ಪಾಸಾಗಿದ್ದು, ವಾಯು ಸೇನೆಯ ಪ್ಲಾಯಿಂಗ್ ಆಪೀಸರ್( ಫೈಟರ್ ಪೈಲಟ್) ಹುದ್ದೆಯನ್ನು ಅಲಂಕರಿಸಲಿದ್ದಾರೆ. ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆ ಗಿರೀಶ ಆಯ್ಕೆಯಾಗಿದ್ದು, ಶೀಘ್ರವೇ ಹೈದರಾಬಾದಿನ ದುಂಡಿಗಲ್ ಕೇಂದ್ರದಲ್ಲಿ ತರಬೇತಿ ಪಡೆದು, ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆ ಸಲ್ಲಿಸಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಬೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ …

Read More »

ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ …

Read More »

ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ : ಪ್ರಧಾನಿ ಮೋದಿ

ನವದೆಹಲಿ: ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 7ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತದಲ್ಲಿ ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ. ಆದರೂ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ, ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ ಎಂದರು. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು …

Read More »

ಆಂಬುಲೆನ್ಸ್ ನಿಂದ ಜಿಗಿದು ರಸ್ತೆ ಮಧ್ಯೆದಲ್ಲೇ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ!

ಚಲಿಸುತ್ತಿದ್ದ ಆಂಬುಲೆನ್ಸ್ ನಿಂದ ಜಿಗಿದ ಮಾನಸಿಕ ಅಸ್ವಸ್ಥನೊಬ್ಬ ರಸ್ತೆ ಮಧ್ಯೆದಲ್ಲೇ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರು ಜಿಲ್ಲೆಯ ತಿ‌. ನರಸೀಪುರ ತಾಲೂಕಿನಲ್ಲಿ ನಡೆದಿದೆ. ತಿ. ನರಸೀಪುರ ತಾಲೂಕಿನ ಕನ್ನಳ್ಳಿ ಮೋಳೆ ಗ್ರಾಮದ ಶಿವಣ್ಣ (42) ಮೃತ ವ್ಯಕ್ತಿ.‌ ಮಾನಸಿಕ‌ ಅಸ್ವಸ್ಥ ಶಿವಣ್ಣನನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಯಬುಲೆನ್ಸ್​ನಿಂದ ಜಿಗಿದು ರಸ್ತೆ ಮಧ್ಯೆ ಕುಳಿತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ‌. ಈತನ ವರ್ತನೆ ಕಂಡು ಸಾರ್ವಜನಿಕರು …

Read More »

ಬಸ್, ಹೋಟೆಲ್, ಚಿತ್ರೀಕರಣ ಪುನಾರಂಭ: ಮಾಲ್, ಈಜುಕೊಳ, ಸಿನಿಮಾ ಮಂದಿರಕ್ಕೆ ನಿರ್ಬಂಧ; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಬಸ್ ಸಂಚಾರ ಸೇರಿ ಬಹುತೇಕ ಎಲ್ಲಾ ಚಟುವಟಿಕೆ ಪುನಾರಂಭವಾಗಲಿವೆ. ಬಸ್‌ ಮತ್ತು ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಿ ಶೇಕಡ 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳನ್ನು ಹೊರತುಪಡಿಸಿ 28 ಜಿಲ್ಲೆಗಳಲ್ಲಿ ಬಸ್ ಸಂಚಾರ ಶುರುವಾಗಿದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಬಸ್ ಗಳ ಸಂಖ್ಯೆ ಕೂಡ ವಿರಳವಾಗಿದೆ. ಇಂದಿನಿಂದ ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆವರೆಗೆ ತೆರೆಯಲು …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …

Read More »

ರಾಮಮಂದಿರ ಟ್ರಸ್ಟ್ ಇನ್ನಷ್ಟು ಭೂ ಹಗರಣ ಬಯಲಿಗೆ

ಲಕ್ನೋ, ಜೂನ್ 20: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ನಿರ್ವಹಣೆ ಹೊಣೆ ಹೊತ್ತುಕೊಂಡಿರುವ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿರುದ್ಧ ಗಂಭೀರ ಭೂಹಗರಣದ ಆರೋಪ ಕೇಳಿ ಬಂದಿದೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಈ ಟ್ರಸ್ಟ್‌ನ ಮೂಲಕ ಮಾಡಲಾಗುತ್ತಿದೆ. ಇದರಲ್ಲಿ 15 ಮಂದಿ ಸದಸ್ಯರಿದ್ದು ಇದರಲ್ಲಿ 12 ಮಂದಿ ಸದಸ್ಯರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ”ಆಸ್ತಿ ಖರೀದಿಯಲ್ಲಿ ಸುಮಾರು 16. 5ಕೋಟಿ ರು ಅವ್ಯವಹಾರ ನಡೆದಿದೆ,” …

Read More »

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದ ಭಕ್ತರಿಗೆ ಪೊಲೀಸರ ಎಚ್ಚರಿಕೆ

ಮಂಗಳೂರು, ಜೂನ್ 20; ಲಾಕ್‌ಡೌನ್ ನಡುವೆಯೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ದೇವಾಲಯಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ ನೊಟೀಸ್ ಕೊಟ್ಟಿದ್ದರು. ಈಗ ತೆರೆದಿದ್ದ ದೇವಾಲಯಗಳು ಪುನಃ ಬಾಗಿಲು ಮುಚ್ಚಿವೆ. ಈಗ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಗಳಿಗೆ ಬರುವ ಭಕ್ತರ ವಾಹನವನ್ನು ಸೀಝ್ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ …

Read More »