ಹಾವೇರಿ, ನವೆಂಬರ್ 23: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್ಗೆ ಆರಂಭದಲ್ಲಿ ತುಸು ಹಿನ್ನಡೆ ತಂದಿತ್ತು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಯಶಸ್ಸು ಕಾಣುವಲ್ಲಿ ಕಾಂಗ್ರೆಸ್ …
Read More »ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಡಿ ಒಂದು ದಿನದ ಧರಣಿ ನಡೆಸಿದ ಬಿಜೆಪಿ
ರೈತರ ಪಹಣಿ ಪತ್ರಿಕೆಯಲ್ಲಿ ಹಾಗೂ ರಾಜ್ಯದ ಬೇರೆ ಬೇರೆ ಆಸ್ತಿಗಳು ವಕ್ಫಗೆ ಒಳಪಟ್ಟಿವೆ ಎಂದು ನಮೂದಾಗಿರುವುದನ್ನು ವಿರೋಧಿಸಿ ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹಿಸಿ, ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಡಿ ಒಂದು ದಿನದ ಧರಣಿ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಜಿಲ್ಲಾ ಬಿಜೆಪಿ ಘಟಕದ ನೇತ್ರತ್ವದಲ್ಲಿ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು, ರಾಜ್ಯ ಕಾಂಗ್ರೆಸ್ ಸರ್ಕಾರ ಸೇರಿ …
Read More »ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆ
ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆ ಘೋಟಗಾಳಿ-ರಂಜನಕುಡಿ ಮಾರ್ಗದಲ್ಲಿ ಆನೆಗಳ ದರ್ಶನ್ ಆನೆಯನ್ನು ಮತ್ತೆ ಕಾಡಿಗೆ ಥಳಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು! ಆಂಕರ್ ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆಯನ್ನು ಆಕಸ್ಮಿಕ ದರ್ಶನ ಪಡೆದು ಭಯ ಭೀತಗೊಂಡ ನಾಗರಿಕರು, ಸ್ವಲ್ಪ ಹೊತ್ತಿನಲ್ಲೇ ಆನೆ ರಸ್ತೆ ದಾಟಿ ರಸ್ತೆ ಪಕ್ಕದ ಜಾಧವ್ ಅವರ ಜಮೀನಿಗೆ ನುಗ್ಗಿತ್ತು. ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯ ಪ್ರಗತಿಯಲ್ಲಿತು. ಆನೆಯನ್ನು ಕಂಡು ರಸ್ತೆಯಲ್ಲಿ ಹೊಲಗಳಲ್ಲಿ ಕೆಲಸ ಮಾಡುವ …
Read More »ಚಳಿಗಾಲದ ಅಧಿವೇಶನವು ಪೂರ್ಣಾವಧಿಯ ಅಧಿವೇಶನವಾದರೆ ಅದಕ್ಕೆ ಅರ್ಥ:ಡಾ. ಪ್ರಭಾಕರ್ ಕೋರೆ
ಬೆಳಗಾವಿ : ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನವು ಪೂರ್ಣಾವಧಿಯ ಅಧಿವೇಶನವಾದರೆ ಅದಕ್ಕೆ ಅರ್ಥ ಬರುತ್ತದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ 2006ರಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿವೇಶನ ನಡೆಸುವುದಕ್ಕೆ ಸ್ಥಳಾವಕಾಶ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಟ್ಟು, ಸಂಪೂರ್ಣ ಮುತುವರ್ಜಿವಹಿಸಿ ಯಶಸ್ವಿಯಾಗಲು ಕಾರಣೀಭೂತರಾಗಿರುವ ಡಾ.ಪ್ರಭಾಕರ ಕೋರೆ, ಅಧಿವೇಶನ ನಡೆಸುವ ಉದ್ದೇಶ ಈವರೆಗೂ ಯಶಸ್ವಿಯಾಗಲಿಲ್ಲ. ಈ ಭಾಗದ ಜನರ ಕನಸು …
Read More »ನವನಗರದ ಸರಾಯಿ ಅಂಗಡಿ ವಿರುದ್ಧ ಮಹಿಯರಿಂದ ಮುಂದುವರೆದ ಪ್ರೊಟೆಸ್ಟ್
ನವನಗರದ ಸರಾಯಿ ಅಂಗಡಿ ವಿರುದ್ಧ ಮಹಿಯರಿಂದ ಮುಂದುವರೆದ ಪ್ರೊಟೆಸ್ಟ್….ಮಹಿಳೆಯರ ಹೋರಾಟಕ್ಕೆ ಸಾಥ್ ನೀಡಿದ ಪುರುಷರ್ …. ಕಳೆದೊಂದು ವಾರದಿಂದ ಧಾರವಾಡ ಹುಬ್ಬಳ್ಳಿಯ ನಡುವೆ ಬರೋ ನವನಗರದಲ್ಲಿ ನೂತನ ಎಂಆರ್ಪಿ ಶಾಪ್ ಸೇರಿ ಸಂಗಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ನೂತನ ಎಂಆರ್ಪಿ ಶಾಪ ಮುಂದೆ ಮಹಿಳೆಯರು ಪ್ರತಿದಿನ ಸಂಜೆ ನಡೆಸುತ್ತಿರೂವ ಪ್ರತಿಭಟನೆ ಮುಂದುವರೆದಿದ್ದು, ಕಳೆದ ಮಂಗಳವಾರ ತಡ ರಾತ್ರಿಯು ಮಹಿಳೆಯರು ಪ್ರತಿಭಟನೆ ಮಾಡಿ ಅಬಕಾರಿ ಇಲಾಖೆ …
Read More »HSRP ನಂಬರ್ ಪ್ಲೇಟ್ ಅಳವಡಿಕೆಗೆ ನ.30 ಕೊನೇ ದಿನ
ಬೆಂಗಳೂರು, ನ.15- ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ನಿಗದಿಪಡಿಸಿರುವ ಕಾಲಮಿತಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಕಳೆದ 2019ರ ಏಪ್ರಿಲ್ ಒಂದಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಬೇಕಾಗಿದೆ. ಈಗಾಗಲೇ ಈ ನೋಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಸುಮಾರು ನಾಲ್ಕು ಬಾರಿ ವಿಸ್ತರಣೆ ಮಾಡಿದೆ.
Read More »ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
ಬೆಳಗಾವಿ: ಇತ್ತೀಚೆಗೆ ಮೈಸೂರು ಜಿಲ್ಲೆ ಎಚ್.ಡಿ. ಕೋಟೆಯಲ್ಲಿ ನಡೆದಿದ್ದ ಸಮಾರಂಭದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದ ಬೆನ್ನಲ್ಲೇ, ಇದೀಗ ಸಚಿವ ಸ್ಥಾನಕ್ಕೆ ಇಬ್ಬರು ಶಾಸಕರು ಬೇಡಿಕೆ ಇಟ್ಟಿದ್ದಾರೆ. ಅಪರೇಷನ್ ಕಮಲ ಚರ್ಚೆಯ ನಡುವೆಯೇ, ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ …
Read More »ಮಹಾರಾಷ್ಟ್ರದ 288, ಜಾರ್ಖಂಡ್ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ
ನವದೆಹಲಿ: ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಇತ್ತ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, …
Read More »ಹೇರ್ ಡ್ರೈಯರ್’ ಸ್ಪೋಟಗೊಂಡು ಮಹಿಳೆಯ ಮುಂಗೈ. ಬೆರಳು ಕಟ್!
ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೋರಿಯರ್ ಓಪನ್ ಮಾಡಿ …
Read More »ಮೀನುಗಾರಿಕೆಗೆ ಹೋದಾಗ ನೀರುಪಾಲು: ಇಬ್ಬರು ಮಕ್ಕಳ ಮೃತದೇಹ ಪತ್ತೆ; ತಂದೆಗಾಗಿ ಶೋಧ
ಯಮಕನಮರಡಿ(ಬೆಳಗಾವಿ ಜಿಲ್ಲೆ): ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ. ಬೆನಕನಹೊಳಿಯ ರಮೇಶ ಅಂಬಲಿ(15), ಯಲ್ಲಪ್ಪ ಅಂಬಲಿ(13) ಮೃತರು. ಅವರ ತಂದೆ ಲಕ್ಷ್ಮಣ ಅಂಬಲಿ(45) ಪತ್ತೆಗಾಗಿ ಅಗ್ನಿಶಾಮಕ ದಳ ತಂಡ ಹಾಗೂ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ. ‘ಲಕ್ಷ್ಮಣ ಅವರು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ರಾತ್ರಿ ಬೈಕ್ ನಿಲ್ಲಿಸಿ ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನುಗಾರಿಕೆಗಾಗಿ …
Read More »