Breaking News

ರಾಷ್ಟ್ರೀಯ

ಕಂದಾಯ ಇಲಾಖೆ ಕಾವೇರಿ 2.0 ಸಾಫ್ಟ್​ವೇರ್ ಹ್ಯಾಕ್: ಅಪರಿಚಿತರ ವಿರುದ್ಧ ಎಫ್ಐಆರ್

ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್ ಅನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆೆ ನೊಂದಣಿ ಮಹಾ ನಿರೀಕ್ಷಕ (ಐಜಿಆರ್) ಕೆ.ಎ.ದಯಾನಂದ ಅವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸರ್ವರ್ ಸಮಸ್ಯೆೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. …

Read More »

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು …

Read More »

ಶಿಕ್ಚಣ, ಸಂಶೋಧನೆಗೆ ಒತ್ತು ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ

ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, …

Read More »

ಪ್ರಯಾಗ್​​ರಾಜ್​ನಿಂದ ಹಿಂತಿರುಗುತ್ತಿದ್ದ ಬೆಳಗಾವಿಯ ನಾಲ್ವರ ಸಾವು

ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗಿನ ಜಾವ ಮಧ್ಯ ಪ್ರದೇಶದ ಇಂಧೋರ್ ಜಿಲ್ಲೆಯ ಮಾಣಪುರ ಬಳಿ ಟೆಂಪೋ ಟ್ರಾವೆಲರ್​, ಟ್ರಕ್​ ಹಾಗೂ ಬೈಕ್​ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಬಸವನಗಲ್ಲಿಯ ಸಾಗರ್​ ಶಾಪುರಕರ್ (ಟಿಟಿ ಚಾಲಕ), ಕ್ರಾಂತಿ ನಗರದ ನಿವಾಸಿ ನೀತಾ ಬಡಮಂಜಿ, ಶಿವಾಜಿನಗರದ ಸಂಗೀತಾ ಮೇತ್ರಿ, ವಡಗಾವಿಯ ಜ್ಯೋತಿ ಖಾಂಡೇಕರ್ ಮೃತರು. ಜನವರಿ 24ರಂದು …

Read More »

ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಳಸಾರೋಹಣ ಕಾರ್ಯಕ್ರಮವ

ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮದೇವತೆ ಶ್ರೀ ಲಕ್ಷ್ಮಿ ದೇವಸ್ಥಾನದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಾತೋಶ್ರೀ ಶ್ರೀಮತಿ ಗಿರಿಜಾತಾಯಿ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಉದ್ಘಾಟಿಸಿದರು. ನನ್ನ ತಾಯಿಯ ತವರೂರಾದ ಬಡಾಲ ಅಂಕಲಗಿ ಗ್ರಾಮಕ್ಕೂ‌ ನನಗೂ ಅವಿನಾಭಾವ ಸಂಬಂಧವಿದೆ, ನಾನು‌ ಆಟ ಆಡಿ ಬೆಳೆದಂತ ಗ್ರಾಮ ನನ್ನ ಕ್ಷೇತ್ರದಲ್ಲಿರುವುದೂ ಜೊತೆಗೆ ಗ್ರಾಮದ ಅಭಿವೃದ್ಧಿ ಸೇರಿದಂತೆ …

Read More »

ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ 19ನೇ ವಾರ್ಷಿಕೋತ್ಸವ ಸಾಧನೆಗೈದ ಸ್ಕೇಟರ್ಸ್ ಮತ್ತು ಪೋಷಕರ ಸನ್ಮಾನ

ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ 19ನೇ ವಾರ್ಷಿಕೋತ್ಸವ ಸಾಧನೆಗೈದ ಸ್ಕೇಟರ್ಸ್ ಮತ್ತು ಪೋಷಕರ ಸನ್ಮಾನ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ 19ನೇ ವಾರ್ಷಿಕೋತ್ಸವದ ನಿಮಿತ್ಯ ಅಂತರರಾಷ್ಟ್ರೀಯ, ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸ್ಕೇಟರ್‌ಗಳು ಮತ್ತು ಅವರ ಪೋಷಕರನ್ನು ಸನ್ಮಾನಿಸಲಾಯಿತು. ಈಜು ತರಬೇತುದಾರ ವಿಶ್ವಾಸ್ ಪವಾರ್, ಪ್ರಸಿದ್ಧ ಚಿತ್ರಕಾರ ವಸಂತ್ ನಿರ್ಮಲೆ ಗುರೂಜಿ ಮತ್ತು ಸಮಾಜ ಸೇವಕ ಗಣೇಶ್ ದಡ್ಡಿಕರ್ ಅವರು ಕಾರ್ಯಕ್ರಮವನ್ನು …

Read More »

ಮುಡಾದಲ್ಲಿ ಸಿಎಂ ಗೆ ರಿಲೀಫ್…ಮೂರನೇ ಏಜೆನ್ಸಿಗೆ ತನಿಖೆಗಿಲ್ಲ ಅವಕಾಶ ; ಡಿ.ಕೆ.ಶಿವಕುಮಾರ್

ಮುಡಾದಲ್ಲಿ ಸಿಎಂ ಗೆ ರಿಲೀಫ್…ಮೂರನೇ ಏಜೆನ್ಸಿಗೆ ತನಿಖೆಗಿಲ್ಲ ಅವಕಾಶ ; ಡಿ.ಕೆ.ಶಿವಕುಮಾರ್ ಬಿಜೆಪಿಗರ ಪ್ರತಿಭಟನೆಗೆ ನ್ಯಾಯಾಲಯ ನೀಡಿದೆ ಉತ್ತರ ಎಂದ ಗೃಹ ಸಚಿವ ಜಿ. ಪರಮೇಶ್ವರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನಾಯ್ಯಾಲಯವು ತನ್ನ ತೀರ್ಪನ್ನು ನೀಡಿದೆ. ಇನ್ನೊಂದೆಡೆ ಈ ಪ್ರಕರಣವನ್ನು ಮೂರನೇ ತನಿಖಾ ಏಜೆನ್ಸಿಗೆ ನೀಡಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಅಲ್ಲದೇ ಗೃಹ ಸಚಿವ ಜಿ. ಪರಮೇಶ್ವರ ಅವರು ವಿಪಕ್ಷಿಯರ ಪ್ರತಿಭಟನೆಗಳಿಗೆ ನ್ಯಾಯಾಲಯವು ಉತ್ತರ ನೀಡಿದೆ …

Read More »

ಸ್ಮಾರ್ಟಸಿಟಿ ಜನರಿಗೆ ಇಲ್ಲಿದೆ ಸಿಹಿ ಸುದ್ಧಿ…

ಶೇ. 75 ರಷ್ಟು ರಿಯಾಯಿತಿಯೊಂದಿಗೆ ಬೆಳಗಾವಿಯಲ್ಲಿ ಬೃಹತ್ ಫರ್ನಿಚರ್ಸ್ ಎಕ್ಸಪೋ… ಬೆಳಗಾವಿ ಸ್ಮಾರ್ಟಸಿಟಿ ಜನರಿಗೆ ತಮ್ಮ ಮನೆಗೆ ಸ್ಮಾರ್ಟ್ ಲೂಕ್ ನೀಡಲು ಇಲ್ಲಿದೆ ಒಂದು ಸುವರ್ಣಾವಕಾಶ. ಶೇ.75 ರಷ್ಟು ರಿಯಾಯಿತಿ ಹಾಗೂ ಝೀರೋ ಪರ್ಸೆಂಟ್ ಇಂಟರೆಸ್ಟ್ ಜೊತೆಗೆ ಜೀರೋ ಡೌನ್ ಪೇಮೆಂಟ್ ನಲ್ಲಿ ನಿಮ್ಮ ಮನೆಗೆ ಬೇಕಾಗುವ ಫರ್ನಿಚರ್ಸಗಳನ್ನು ಕೇವಲ 999 ಇಜಿ ಇ ಎಂ ಐನೊಂದಿಗೆ ನಿಮ್ಮ ಮನೆಗೆ ಒಯ್ಯಬಹುದಾಗಿದೆ. ಈ ಸುವರ್ಣವಕಾಶ ಕೇವಲ ಫೆಬ್ರುವರಿ 17 ರ …

Read More »

ಮಂತುರ್ಗಾ ಮರಾಠಿ ಶಾಲೆಯ ನವೀಕರಣಕ್ಕೆ 3 ಲಕ್ಷದ ಅನುದಾನಕ್ಕೆ ಅನುಮೋದನೆ ನೀಡಿದ ಶಾಸಕ ವಿಠ್ಠಲ ಹಲಗೇಕರ

ಮಂತುರ್ಗಾ ಮರಾಠಿ ಶಾಲೆಯ ನವೀಕರಣಕ್ಕೆ 3 ಲಕ್ಷದ ಅನುದಾನಕ್ಕೆ ಅನುಮೋದನೆ ನೀಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದಲ್ಲಿನ ಮರಾಠಿ ಪ್ರಾಥಮಿಕ ಶಾಲಾ ಕಟ್ಟಡದ ಸಂಪೂರ್ಣ ಛಾವಣಿ ಕುಸಿದಿದ್ದು, ಇದರಿಂದಾಗಿ ಮಳೆಗಾಲದ ಸಮಯದಲ್ಲಿ ಬಹಳ ಸುರಿ ಗೋಡೆ ಮತ್ತು ಬಾಗಿಲುಗಳಿಗೆ ಹಾನಿಯಾಗಿ ಬಹಳ ಅನಾನುಕೂಲ ವಾಗುತ್ತಿತ್ತು ಇದರ ಬಗ್ಗೆ ಗ್ರಾಮದ ಯುವ ಬಿಜೆಪಿ ಮುಖಂಡ ಶಾಲಾ ಮುಖ್ಯೋಪಾಧ್ಯಾಯರಿಂದ ಶಾಲಾ ಸ್ಥಿತಿಗತಿ ಬಗ್ಗೆ ಮಾಹಿತಿ ಸಾರುವ ಪತ್ರ ಶಾಸಕ …

Read More »

ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ*

ರಾಜ್ಯ ಸರ್ಕಾರದ ಜನಪ್ರಿಯ ಗೃಹಲಕ್ಷ್ಮೀ ಯೋಜನೆ ಒಂದೆಲ್ಲ ಒಂದು ಒಳ್ಳೆ ಕಾರಣಕ್ಕೆ ಸುದ್ದಿಯಲ್ಲಿದೆ. ಮಹಿಳೆಯರು ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸದ್ಬಳಕೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ್ದಾರೆ. ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಎಂಬುವರು ಹಣ ಉಳಿಸಿ 24,000ರೂ. ಗಳನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ನೀಡಿದ್ದಾರೆ. ಗಂಗಮ್ಮಳ ಕಾರ್ಯಕ್ಕೆ …

Read More »