ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ …
Read More »ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ
ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರನ್ನು ಕೊರೊನಾ ಸೋಂಕು ಬಲಿ ತೆಗೆದುಕೊಂಡಿದೆ. ಕಳೆದ 12 ಗಂಟೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ …
Read More »ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್; ಶೀಘ್ರ ಸಮಸ್ಯೆಗೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್
ಬೆಳಗಾವಿ;-ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ರಾಜ್ಯದ ಆಕ್ಸಿಜನ್ ಪೂರೈಕೆ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಮೇ 9) ನಡೆದ ಅಧಿಕಾರಿಗಳ …
Read More »ವಿಟ್ಲ: ಎರಡು ಬಟ್ಟೆ ಅಂಗಡಿಗಳ ಮಾಲಕರ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಕೋವಿಡ್-19 ಸೋಂಕು ಹರಡದಂತೆ ಸರ್ಕಾರವು ರೂಪಿಸಿರುವ ಸೂಚನೆಗಳನ್ನು ಹಾಗೂ ದ.ಕ.ಜಿಲ್ಲಾ ದಂಡಾಧಿಕಾರಿಯವರ ಆದೇಶವನ್ನು ಪಾಲನೆ ಮಾಡದೇ ಉಲ್ಲಂಘಿಸಿದ ವಿಟ್ಲ ಕಸಬಾ ಗ್ರಾಮದ, ಪುತ್ತೂರು ರಸ್ತೆಯಲ್ಲಿರುವ ಕ್ಯೂಬಿ ಮತ್ತು ಫಿಟ್ ಫ್ಯಾಷನ್ ಬಟ್ಟೆ ಅಂಗಡಿಗಳ ಮಾಲಕರು ಮೇ 7ರಂದು ಬೆಳಗ್ಗೆ 7 ಗಂಟೆಗೆ ಬಾಗಿಲು ತೆರೆದು ಗ್ರಾಹಕರಿಗೆ ಬಟ್ಟೆಯನ್ನು ಮಾರಾಟ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ. ಕ್ಯೂಬಿ ಬಟ್ಟೆ ಅಂಗಡಿಗೆ ಪಟ್ಟಣ ಪಂಚಾಯತ್ ಅಧಿಕಾರಿಗಳು ದಾಳಿ …
Read More »ಹೊಳೆನರಸೀಪುರದ ಛತ್ರಕ್ಕೆ ಬಂದ ಶಿರಸ್ತೇದಾರ್- ಮದುಮಕ್ಕಳಿಗೆ ಗಿಫ್ಟ್ ಬದಲು ಕೊಟ್ಟರು ದಂಡದ ಬಿಲ್!
ಹಾಸನ: ಕರೊನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ವಿವಾಹ ಸೇರಿದಂತೆ ಎಲ್ಲ ಸಭೆ – ಸಮಾರಂಭಗಳಿಗೆ ಮಾರ್ಗಸೂಚಿ ಹೊರಡಿಸಿ ತಿಂಗಳೇ ಕಳೆದಿದೆ. ಮದುವೆ ಸಮಾರಂಭಗಳಲ್ಲಿ 50 ಜನಕ್ಕಿಂತ ಹೆಚ್ಚಿನ ಮಂದಿ ಇರಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಆದರೆ ಜೀವನದಲ್ಲಿ ಒಮ್ಮೆ ಆಗುವ ಮದುವೆಗೆ ಜನರನ್ನು ಕರೆಯದಿದ್ದರೆ ಹೇಗೆ ಎಂದುಕೊಂಡು ತಮಗೇನೂ ಆಗುವುದಿಲ್ಲ ಎಂದುಕೊಂಡು ಅಲ್ಲಲ್ಲಿ ಈ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಮದುವೆಗೆ ಭರ್ಜರಿ ತಯಾರಾಗಿ ಬಂದವರು ಮಾಸ್ಕ್ ಧರಿಸದಿದ್ದರೆ, ಮದುವೆ ಮನೆಯಲ್ಲಿ …
Read More »ಡಿಸಿ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್, ಜಿಮ್! ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಮುಖಂಡನ ಗಂಭೀರ ಆರೋಪ
ಮೈಸೂರು: ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಮುಖಂಡ ಕೆ.ವಿ. ಮಲ್ಲೇಶ್ ಗಂಭೀರ ಆರೋಪ ಮಾಡಿದ್ದಾರೆ. ಡಿಸಿ ಅಧಿಕೃತ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ. ಜಲದರ್ಶಿನಿ ಅತಿಥಿ ಗೃಹ ಪಾರಂಪರಿಕ ಕಟ್ಟಡಗಳ ವ್ಯಾಪ್ತಿಗೆ ಸೇರಿದೆ. ಕರೊನಾ ಸಂಕಷ್ಟ ಕಾಲದಲ್ಲಿ ಇಂತಹ ಮೋಜು ಮಸ್ತಿ ಏಕೆ …
Read More »ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ
ಕಲಬುರಗಿ: ರಾಜ್ಯಸಬೆಯ ಮಾಜಿ ಸದಸ್ಯ, ಮಾಜಿ ಸಚಿವ, ಹಿರಿಯ ನಾಯಕ ಕೆ.ಬಿ ಶಾಣಪ್ಪ ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕು ದೃಢವಾಗಿದ್ದ ಅವರನ್ನು ಮೂರು ದಿನಗಳ ಹಿಂದೆ ಇಲ್ಲಿನ ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಇಂದು ಕೊನೆಯುಸಿರೆಳೆದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಆರಂಭದಲ್ಲಿ ಕಾರ್ಮಿಕ ನಾಯಕರಾಗಿ ಗುರುತಿಸಿಕೊಂಡ ಶಾಣಪ್ಪ ಅವರು ಎರಡು ಸಲ ಶಹಾಬಾದ ಮೀಸಲು ಕ್ಷೇತ್ರದಿಂದ ಕಮ್ಯುನಿಸ್ಟ್ ಪಕ್ಷದಿಂದ ಶಾಸಕರಾಗಿದ್ದರು. ಅದರಲ್ಲೂ ಒಂದು …
Read More »ಕೊಡಗು: ಲಾಕ್ಡೌನ್ನಿಂದ ಊಟವಿಲ್ಲದೆ ಉಪವಾಸವನ್ನೇ ರೂಢಿಸಿಕೊಂಡ ಕುಟುಂಬ!
ಕೊಡಗು : ದೇಶದಲ್ಲಿ ಕೋವಿಡ್ ಮಹಾಮಾರಿ ವ್ಯಾಪಿಸುತ್ತಿದ್ದಂತೆ ಇನ್ನಷ್ಟು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ 2020 ರಲ್ಲಿ ಇಡೀ ದೇಶವನ್ನೇ ಸಂಪೂರ್ಣ ಲಾಕ್ಡೌನ್ ಮಾಡಿತ್ತು. ಆ ಸಂದರ್ಭ ಎಷ್ಟೋ ಲಕ್ಷಾಂತರ ಕುಟುಂಬಗಳು ಅನುಭವಿಸಿದ ನೋವು, ಸಂಕಷ್ಟ ಅಷ್ಟಿಷ್ಟಲ್ಲಾ. ಇದರಿಂದ ಕೊಡಗು ಜಿಲ್ಲೆ ಏನು ಹೊರತ್ತಾಗಿರಲಿಲ್ಲ. ಅದೇ ರೀತಿಯಲ್ಲಿ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಗುಹ್ಯ ಗ್ರಾಮದ ಪವಿತ್ರನ್ ಎಂಬುವರ ಕುಟುಂಬ ಒಂದೊತ್ತಿನ ಊಟಕ್ಕೂ ಪರದಾಡಿತ್ತು. ದುಡಿದು ದಿನ್ನೋದಕ್ಕೂ ಅವಕಾಶ ಇಲ್ಲದಿದ್ದರಿಂದ …
Read More »‘ಹಿಂದೂಸ್ತಾನಿ ಭಾವು’ ಎಂದೂ ಕರೆಯಲ್ಪಡುವ ಹಿಂದಿ ಬಿಗ್ ಬಾಸ್ 3 ಖ್ಯಾತಿಯ ವಿಕಾಸ್ ಫಾಟಕ್ ಹೊಸದೊಂದು ವಿವಾದ
ಮುಂಬೈ : ‘ಹಿಂದೂಸ್ತಾನಿ ಭಾವು’ ಎಂದೂ ಕರೆಯಲ್ಪಡುವ ಹಿಂದಿ ಬಿಗ್ ಬಾಸ್ 3 ಖ್ಯಾತಿಯ ವಿಕಾಸ್ ಫಾಟಕ್ ಹೊಸದೊಂದು ವಿವಾದ ಸೃಷ್ಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರುವ ಮುಂಬೈ ನಗರದಲ್ಲಿ ಆಂಬುಲೆನ್ಸ್ ಬಳಸಿಕೊಂಡು ಶಿವಾಜಿ ಪಾರ್ಕ್ ತಲುಪಿ, ಪ್ರತಿಭಟನೆ ಕೈಗೊಂಡ ಫಾಟಕ್ರನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ವಿವಾದಾತ್ಮಕ ವಿಡಿಯೋಗಳಿಗೆ ಹೆಸರಾಗಿರುವ ಗಾಯಕ ಫಾಟಕ್, 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದರು. ನಗರದಲ್ಲಿ ಓಡಾಟದ ಮೇಲೆ ನಿರ್ಬಂಧ ಇರುವ …
Read More »ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಪ್ರಾಣಬಿಟ್ಟ ಪೇಂಟರ್!
ಮೈಸೂರು: ಏಣಿಯಿಂದ ಬಿದ್ದು ಗಾಯಗೊಂಡಿದ್ದ ಪೇಂಟರ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಮೃತಪಟ್ಟ ದಾರುಣ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಕೆ.ಆರ್. ನಗರ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ ಶ್ರೀಕಾಂತ್ (34) ಮೃತ ದುರ್ದೈವಿ ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದ ಶ್ರೀಕಾಂತ್ ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಏಣಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೈ ಸೇರಿ ದೇಹದ ಹಲವು ಕಡೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ …
Read More »