Breaking News

ರಾಷ್ಟ್ರೀಯ

ಬೆಳಗಾವಿಯಿಂದ ಕಡಿಮೆ ಸರಬರಾಜು: ಗೋವಾದಲ್ಲಿ ತರಕಾರಿಗೆ ಹಾಹಾಕಾರ

ಪಣಜಿ: ಗೋವಾ ತೋಟಗಾರಿಕಾ ನಿಗಮಕ್ಕೆ ಬೆಳಗಾವಿಯಿಂದ ಸದ್ಯ ವಾರದಲ್ಲಿ ಮೂರು ದಿನಗಳ ಕಾಲ ತರಕಾರಿ ಪೂರೈಕೆಯಾಗುತ್ತಿದೆ, ಇದರಿಂದಾಗಿ ಅಲ್ಲಿರುವ ನಿಗಮದ ಹಲವು ತರಕಾರಿ ಅಂಗಡಿಗಳನ್ನು ಅನಿವಾರ್ಯವಾಗಿ ಬಂದ್ ಮಾಡುವಂತಾಗಿದೆ. ಕೋವಿಡ್ ನಿರ್ಬಂಧದಿಂದಾಗಿ ಬೆಳಗಾವಿ ತರಕಾರಿ ಮಾರುಕಟ್ಟೆ ಬಂದ್ ಆಗಿದೆ. ಗೋವಾ ರಾಜ್ಯಾದ್ಯಂತ ನಿಗಮದ ಸುಮಾರು 1400 ತರಕಾರಿ ಅಂಗಡಿಗಳಿವೆ. ಈ ಅಂಗಡಿಗಳ ಮೂಲಕ ಸರ್ಕಾರವು ರಾಜ್ಯದಲ್ಲಿ ಜನತೆಗೆ ಸಬ್ಸಿಡಿ ದರದಲ್ಲಿ ತರಕಾರಿ ಮಾರಾಟ ಮಾಡುತ್ತದೆ. ಆದರೆ ಬೆಳಗಾವಿಯಿಂದ ಪ್ರತಿದಿನ ತರಕಾರಿ …

Read More »

ಸ್ನೇಹಿತರ ಸಹಾಯ; ಧಾರವಾಡಕ್ಕೆ ಬಂತು ಆಕ್ಸಿಜನ್ ಕಾನ್ಸ್‌ನ್‌ಟ್ರೇಟರ್

ಧಾರವಾಡ, ಮೇ 27; ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ತಮ್ಮ ಸ್ನೇಹಿತರು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಮುನ್ನಡೆಸುತ್ತಿರುವ ‘ಮೆಡಿಕಲ್ ಆಕ್ಸಿಜನ್ ಫಾರ್ ಆಲ್’ ತಂಡದಿಂದ ಪಡೆದ ಆಕ್ಸಿಜನ್ ಕಾನ್ಸನ್‍ಟ್ರೇಟರ್‌ಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಿದರು. ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಿವಿಧ ಕಡೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ, ಅಲ್ಲಿ ದಾಖಲಿರುವ ಸೋಂಕಿತರಿಗೆ ಉಸಿರಾಟ ತೊಂದರೆ ಉಂಟಾದರೆ ತಕ್ಷಣ ಅವರ ಸಹಾಯಕ್ಕೆ ನೆರವಾಗಲು ಆಕ್ಸಿಜನ್ ಕಾನ್ಸನ್‍ಟ್ರೇಟರ್ …

Read More »

BSY ಬಿಟ್ಟು ಬಿಜೆಪಿಯಲ್ಲಿ ಯಾರು ಸ್ಟಾರ್ ಲೀಡರ್ ಇದ್ದಾರೆ ತೋರಿಸಿ: ಎಂ.ಪಿ. ಕುಮಾರಸ್ವಾಮಿ

ಚಿಕ್ಕಮಗಳೂರು: ಬಿ.ಎಸ್. ಯಡಿಯೂರಪ್ಪ ಬಿಟ್ಟು ಬಿಜೆಪಿಯಲ್ಲಿ ಯಾರು ಸ್ಟಾರ್ ಲೀಡರ್ ಇದ್ದಾರೆ ತೋರಿಸಲಿ. ನಾಯಕತ್ವ ಬದಲಾವಣೆ, ಚರ್ಚೆ ಈಗ ಅಪ್ರಸ್ತುತ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಎಸ್ ವೈ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿ ಮಾತನಾಡಿದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ನಾಯಕತ್ವ ಬದಲಾವಣೆ, ಚರ್ಚೆ ಈಗ ಅಪ್ರಸ್ತುತ. ಈ ಕುರಿತು ಕೇಂದ್ರದ ನಾಯಕರ ಬಳಿ ಶಾಸಕರ ನಿಯೋಗ ಹೋಗಲು ತಯಾರಿದ್ದೇವೆ. ನಾಯಕತ್ವ ಬದಲಾವಣೆ ಮಾಡದಂತೆ …

Read More »

ಜನ್ಮದಿನಕ್ಕೆ ಬಟ್ಟೆ ಕೊಡಿಸಲಿಲ್ಲ ಅಂತ ನವವಿವಾಹಿತೆ ಆತ್ಮಹತ್ಯೆ: ಕೊಲೆ ಕೇಸು ದಾಖಲು!

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸದೇ ಗಂಡ ರೇಗಾಡಿದ್ದರಿಂದ ನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಗ್ರಾಮದಲ್ಲಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ರಾಜು ಅವರ ಪುತ್ರಿ ಮಮತಾ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಯುವಕ ಮಹದೇವ ಅಲಿಯಾಸ್ ಮಣಿಕಂಠ ಮೂರು ತಿಂಗಳ ಅಪ್ರಾಪ್ತೆಯಾಗಿದ್ದ ಮಮತಾಳನ್ನು ಅಪಹರಿಸಿ ಮದುವೆಯಾಗಿದ್ದ. ಜನ್ಮದಿನವಾದ ಇಂದು ಹೊಸಬಟ್ಟೆ ಕೊಡಿಸುವಂತೆ ಗಂಡ ಮಣಿಕಂಠನಿಗೆ ಕೇಳಿದ್ದಾಳೆ. …

Read More »

ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ …

Read More »

ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ದಾವಣಗೆರೆಯಲ್ಲಿ ಸೋಂಕಿತೆ ಸಾವು

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಆಕ್ಸಿಜನ್ ಸಮಸ್ಯೆಯೂ ದೊಡ್ಡ ಮಟ್ಟದಾಗಿ ಕಾಡುತ್ತಿದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದೆ ಈಗಾಗಲೇ ಹಲವರು ಮೃತಪಟ್ಟಿದ್ದಾರೆ. ಹರಿಹರ ತಾಲೂಲು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ಸೋಂಕಿತೆ ಸಾವನ್ನಪ್ಪಿದ್ದಾರೆ. ಸಾಯುವುದಕ್ಕೂ ಮುನ್ನ ಸೋಂಕಿತೆ ವಿಡಿಯೋ ಮಾಡಿದ್ದಾರೆ. ಸಾಯುವುದಕ್ಕೂ ಮುನ್ನ ಅಕ್ಸಿಜನ್ ಬರುತ್ತಿಲ್ಲ ಎಂದು ಸೋಂಕಿತ ಮಹಿಳೆ ವಿಡಿಯೋ ಮಾಡಿದ್ದಾರೆ. ಸರಿಯಾದ ಸಮಯಕ್ಕೆ …

Read More »

ಫೋಟೋ ಮೇಲೆ ಹಾಲು ಸುರಿಯದೆ ಹಸಿದವರಿಗೆ ನೀಡಿ ಎಂದ ಸೋನು ಸೂದ್‌

ಮುಂಬೈ: ಕೊರೊನಾ ಸಂಕಷ್ಟದಲ್ಲಿ ನೆರವಿಗೆ ನಿಂತಿರು ಬಾಲಿವುಡ್ ನಟ ಸೋನು ಸೂದ್ ಅಭಿಮಾನಿಗಳಿಗೆ ದೊಡ್ಡ ಕರೆಯೊಂದನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ದಯಮಾಡಿ ಎಲ್ಲರೂ ಹಾಲನ್ನು ಉಳಿಸಿ, ಅಗತ್ಯ ಇರುವವರಿಗೆ ನೀಡಿ. ಯಾರೂ ನನ್ನ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಬೇಡಿ ಎಂದು ಮನವಿ ಮಾಡಿಕೊಂಡು ಟ್ವೀಟ್ ಮಾಡಿ ಸೋನು ಅವರ ಭಾವ ಚಿತ್ರಕ್ಕೆ ಹಾಲಿನ ಅಭೀಷೆಕ ಮಾಡುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಆಂಧ್ರಪ್ರದೇಶದ ಕುರ್ನೂಲ್ ಮತ್ತು ನೆಲ್ಲೂರಿನಲ್ಲಿ ಸೋನು ಸೂದ್ ಫೋಟೋಗೆ ಹಾಲಿನ …

Read More »

: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು

ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ ಈ ಮಾಹಿತಿ ಖಚಿತವಾಗಿಲ್ಲ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ. “ಮಾಹಿತಿಯ ಪ್ರಾಥಮಿಕ …

Read More »

ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ

ಬೆಳಗಾವಿ : ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಯಮಕನಮರಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ 2.5 ಕೋಟಿ ಬೆಲೆ ಬಾಳುವ ಐದು ಕೆ.ಜಿ. ಚಿನ್ನ ಪ್ರಕರಣದಲ್ಲಿ ಅದರ ಸಿಐಡಿ ಅಧಿಕಾರಿಗಳು ಕಿರಣ್ ವೀರನಗೌಡರ್ ಎಂಬ ಡಿಲ್ ನ ಮಧ್ಯವರ್ತಿ ವ್ಯಕ್ತಿಯ ಜನ್ಮ ಜಾಲಾಡಿದ್ದಾರೆ. ಕಿರಣ ವೀರನಗೌಡರ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದು, ಅಕ್ರಮಗಳ ಬಗ್ಗೆ ಪೊಲೀಸರಿಗೆ …

Read More »

ಪಿಎಂ ಕೇರ್ಸ್‌ ಗೆ 2.5 ಲಕ್ಷ ದೇಣಿಗೆ ಕೊಟ್ಟವರ ತಾಯಿಗೆ ಆಸ್ಪತ್ರೆಯಲ್ಲಿ ಸಿಗಲಿಲ್ಲ ಹಾಸಿಗೆ..!

ಕೋವಿಡ್ ಎರಡನೇ ಅಲೆಗೆ ದೇಶವೇ ತತ್ತರಿಸಿ ಹೋಗಿದೆ ಎನ್ನುವಷ್ಟರ ಮಟ್ಟಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯ ಸುದ್ದಿಗಳು ತೇಲಿ ಬರುತ್ತಲೇ ಇವೆ. ಒಮ್ಮೆಲೇ ಈ ಜಾಗತಿಕ ಸೋಂಕಿನ ಅಬ್ಬರ ದೇಶದಲ್ಲೆಲ್ಲಾ ವ್ಯಾಪಿಸಿದ ಕಾರಣ ಲಭ್ಯವಿರುವ ವೈದ್ಯಕೀಯ ಸವಲತ್ತುಗಳ ಮೇಲೆ ಮಿತಿಮೀರಿದ ಒತ್ತಡ ಬಿದ್ದು ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದೆ.   ಟ್ವಿಟರ್‌ ಬಳಕೆದಾರ ವಿಜಯ್‌ ಪರೀಖ್ ಅವರು ಇಂಥದ್ದೇ ಸನ್ನಿವೇಶದಲ್ಲಿ ತಮಗೆ ಉಂಟಾದ ಹೃದಯವಿದ್ರಾವಕ ಅನುಭವದ ಕುರಿತು ಹಂಚಿಕೊಂಡಿದ್ದಾರೆ. ಕೋವಿಡ್ ವಿರುದ್ಧದ ದೇಶದ …

Read More »