Breaking News

ರಾಷ್ಟ್ರೀಯ

ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …

Read More »

ಬ್ರೇಕಿಂಗ್: ಸಿಎಂ ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು,ಏ.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಪುನಃ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಿಗೆ ನೆಗೆಟಿವ್ ಬಂದಿರುವುದರಿಂದ ಮಣಿಪಾಲ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾದರು. ಕಳೆದ ವಾರ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಟ್ಟಿದ್ದರು. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕೆಲ ದಿನಗಳ ಮಟ್ಟಿಗೆ ಮನೆಯಲ್ಲೇ ಹೋಂ ಕ್ವಾರಂಟೈನ್‍ಗೆ ಒಳಗಾಗಲಿದ್ದಾರೆ ಎಂದು …

Read More »

ವಾರದ ಸಂತೆಗೆ ಪರ್ಯಾಯ ವ್ಯವಸ್ಥೆ : ಗೋಕಾಕ ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ

ಗೋಕಾಕ : ಸಾಮಾಜಿಕ ಅಂತರ ಕಾಯ್ದುಕೊಂಡು ವಾರದ ಸಂತೆಯನ್ನು ನಡೆಸಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿರುವ ಮಾರುಕಟ್ಟೆಯನ್ನು ವಾಲ್ಮೀಕಿ ಕ್ರೀಡಾಂಗಣಕ್ಕೆ  ಸ್ಥಳಾಂತರ ಮಾಡಲಾಗಿದೆ. ಮೈದಾನದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ಗುರುತು( ಮಾರ್ಕಿಂಗ್ ) ಮಾಡಿದ್ದಾರೆ.  ಅಂಗಡಿಗಳಿಗೆ ಹಾಗೂ ಗ್ರಾಹಕರಿಗೆ ಮಾರ್ಕಿಂಗ್ ಮಾಡಲಾಗಿದ್ದು, ಆ ವ್ಯಾಪ್ತಿಯಲ್ಲೇ  ನಿಂತು ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಕಿಂಗ್ ಮಾಡಲಾಗಿದ್ದು, ಅಲ್ಲಿಯೇ ನಿಂತು ತರಕಾರಿಗಳನ್ನು ಖರೀದಿ ಮಾಡಬೇಕಾಗಿದೆ. …

Read More »

ನಿಟ್ಟೆ :ಕಸ ಹಾಕಿದವರಿಂದಲೇ ವಿಲೇವಾರಿ : ನಿಟ್ಟೆ ಗ್ರಾ.ಪಂ. ಸದಸ್ಯೆಯ ದಿಟ್ಟತನಕ್ಕೆ ಮೆಚ್ಚುಗೆ

ಬೆಳ್ಮಣ್: ಸ್ವತ್ಛ ಭಾರತದ ಪರಿಕಲ್ಪನೆ ಕೇವಲ ಭಾಷಣ, ಬ್ಯಾನರ್‌ಗಳ ಪ್ರಚಾರಕ್ಕೆ ಸೀಮಿತವಾಗಿರದೆ ಕಾರ್ಯ ರೂಪದಲ್ಲಿಯೂ ಅಳವಡಿಕೆಯಾಗಬೇಕು ಎಂಬ ಚಿಂತನೆಯೊಂದಿಗೆ ನಿಟ್ಟೆ ಗ್ರಾ.ಪಂ. ಸ‌ದಸ್ಯೆಯೋರ್ವರು ಕಸ ಹಾಕುತ್ತಿದ್ದವರನ್ನು ಹಿಡಿದು ಅವರಿಂದಲೇ ಕಸ ವಿಲೇವಾರಿ ಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಿಟ್ಟೆ ಗ್ರಾ.ಪಂ. ಸದಸ್ಯೆ ರಶ್ಮಿ ಸದಾನಂದ ಶೆಟ್ಟಿ ಅವರು ರಸ್ತೆ ಬದಿಯಲ್ಲಿ ಕಸ ಹಾಕುತ್ತಿದ್ದವರನ್ನು ಪತ್ತೆ ಹಚ್ಚಿ ಅವರಿಂದಲೇ ಕಸ ವಿಲೇವಾರಿಗೊಳಿಸಿ ಪಂಚಾಯತ್‌ಗೆ ದಂಡ ಕಟ್ಟಿಸಿದ್ದಾರೆ. ಪಂಚಾಯತ್‌ ಸದಸ್ಯೆ ರಶ್ಮಿಯವರ ಈ …

Read More »

ಗೋಕಾಕ: ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ಹಾಕುತ್ತಿರುವುದು.

ಗೋಕಾಕ: ಜನತೆ ಸ್ವಪ್ರೇರಣೆಯಿಂದ ಕೋವಿಡ್ ಲಸಿಕೆ ಪಡೆದು ಮಹಾಮಾರಿ ಕೋರೋನಾದಿಂದ ರಕ್ಷಣೆ ಪಡೆಯುವಂತೆ ಕೆಎಲ್‍ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ಬುಧವಾರದಂದು ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಕೋವಿಡ್ ಮಹಾಮಾರಿ ಹೆಚ್ಚಾಗುತ್ತಿದೆ. ಜನತೆ ಜಾಗೃತರಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋರೋನಾ …

Read More »

ಧೋನಿ ತಂದೆ-ತಾಯಿಗೆ ಕರೊನಾ ಸೋಂಕು! ಆಸ್ಪತ್ರೆಗೆ ದೌಡಾಯಿಸಿದ ದಂಪತಿ

ರಾಂಚಿ: ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂಎಸ್​ ಧೋನಿ ಅವರ ತಂದೆ ತಾಯಿಗೆ ಕರೊನಾ ಸೋಂಕು ದೃಢವಾಗಿದೆ. ವರದಿ ಬಂದ ತಕ್ಷಣ ದಂಪತಿ ರಾಂಚಿಯ ಪ್ಲಸ್​ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ ಪಡೆದಿರುವುದಾಗಿ ತಿಳಿಸಲಾಗಿದೆ. ಧೋನಿಯವರ ತಂದೆ ಪಾನ್​ ಸಿಂಗ್​ ಹಾಗೂ ತಾಯಿ ದೇವಕಿ ದೇವಿ ಅವರ ಆರೋಗ್ಯ ಸ್ಥಿರವಾಗಿದೆ. ಕರೊನಾ ದೃಢವಾಗಿದೆ ಹಾಗೂ ಅವರಲ್ಲಿ ಯಾವುದೇ ಗಂಭೀರ ಸಮಸ್ಯೆ ಕಾಣಿಸಿಕೊಂಡಿಲ್ಲ. ಆಕ್ಸಿಜನ್​ ಲೆವೆಲ್​ ಉತ್ತಮವಾಗಿದೆ ಮತ್ತು ಶ್ವಾಸಕೋಶಗಳು …

Read More »

ನಾಸಿಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆ : 22 ಮಂದಿ ಸಾವು

ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ನಲ್ಲಿ ಕೋವಿಡ್ -19 ರೋಗಿಗಳಿಗೆ ಸಿವಿಕ್ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ರೋಗಿಗಳು ಬುಧವಾರ (ಏಪ್ರಿಲ್ 21) ಸಾವನ್ನಪ್ಪಿದ್ದಾರೆ ಎಂಬ ವರದಿಯಾಗಿದೆ.   ಜಾಕಿರ್ ಹುಸೇನ್ ಪುರಸಭೆಯ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ಜನರು ಸಾವನ್ನಪ್ಪಿದ್ದಾರೆ. ರೋಗಿಗಳು ವೆಂಟಿಲೇಟರ್‌ ಗಳಲ್ಲಿದ್ದರು ಮತ್ತು ಆಮ್ಲಜನಕದ ಪೂರೈಕೆಯಾಗುತ್ತಿದ್ದರೂ, ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯ ಕಾರಣದಿಂದ ಈ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ …

Read More »

ಆಕ್ಸಿಜನ್ ಕೊರತೆ ನೀಗಿಸಲು ಟಾಟಾ ಸಹಾಯ ಹಸ್ತ ! 24 ಕ್ರಯೋಜೆನಿಕ್ ಕಂಟೇನರ್​ಗಳ ಆಮದು

ನವದೆಹಲಿ : ಭಾರತದಲ್ಲಿ ಉಂಟಾಗುತ್ತಿರುವ ಆಕ್ಸಿಜನ್ ಕೊರತೆಯನ್ನು ಕಡಿಮೆ ಮಾಡಲು ದ್ರವರೂಪದ ಆಕ್ಸಿಜನ್​​ಅನ್ನು ಸಾಗಣೆ ಮಾಡುವುದಕ್ಕಾಗಿ 24 ಕ್ರಯೋಜೆನಿಕ್ ಕಂಟೇನರ್​ಗಳನ್ನು ಆಮದು ಮಾಡುವುದಾಗಿ ಟಾಟಾ ಕಂಪೆನಿಗಳ ಗುಂಪು ಪ್ರಕಟಿಸಿದೆ. ಕರೊನಾ ವಿರುದ್ಧದ ಹೋರಾಟದಲ್ಲಿ ಇಡೀ ದೇಶ ಒಂದಾಗಿ ನಿಲ್ಲಬೇಕು ಎಂದು ನಿನ್ನೆ ಪ್ರಧಾನಿ ಮೋದಿ ಮಾಡಿದ ಮನವಿಗೆ ಸ್ಪಂದಿಸಿ, ಈ ಘೋಷಣೆ ಮಾಡಿದೆ. ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರೊನಾ ರೋಗಿಗಳಿಗೆ ಉಂಟಾಗುತ್ತಿರುವ ಆಕ್ಸಿಜನ್ …

Read More »

ಹೆಚ್ಚುತ್ತಿರುವ ಸಾವಿನ ಸಂಖ್ಯೆ :ಚಟ್ಟಗಳಿಗೆ ಡಿಮ್ಯಾಂಡ್, ಜನರಲ್ಲಿ ಆತಂಕ

ಮೈಸೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಿದಿರು ಚಟ್ಟಕ್ಕೆ ಬೇಡಿಕೆ ಕೂಡ ಹೆಚ್ಚಾಗತೊಡಗಿದೆ. ನಂಜುಮಳಿಗೆ ವೃತ್ತದ ಬಳಿ ಬಿದಿರಿನಿಂದ ಗೃಹೋಪಯೋಗಿ ಸೇರಿದಂತೆ ನಾನಾ ವಸ್ತುಗಳನ್ನು ಮಾಡುತ್ತಿದ್ದ ವ್ಯಾಪಾರಿಗಳು ಇದೀಗ ಅಂತ್ಯ ಸಂಸ್ಕಾರಕ್ಕಾಗಿ ಚಟ್ಟ ತಯಾರಿಸಲು ಮುಂದಾಗಿದ್ದಾರೆ. ಪ್ರತಿದಿನ 20ಕ್ಕೂ ಹೆಚ್ಚು ಚಟ್ಟಗಳ ವ್ಯಾಪಾರ ನಡೆಯುತ್ತಿದೆ.  

Read More »

ಬಸ್ಸಿನಿಂದ ಕೆಳಗಿಳಿಸಿದ ಉಡುಪಿ ಡಿಸಿ: ವಿದ್ಯಾರ್ಥಿನಿಯ ಆಕ್ರೋಶ; ವಿಡಿಯೋ ವೈರಲ್

ಉಡುಪಿ, ಏಪ್ರಿಲ್ 20: ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರನ್ನು ಕೆಳಗಿಳಿಸಿದ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಆಕ್ರೋಶ ಹೊರಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉಡುಪಿಯ ಸಂತೆಕಟ್ಟೆ ಬಳಿ ಬಸ್ ಅಡ್ಡಗಟ್ಟಿ ತಪಾಸಣೆ ನಡೆಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ವಿಪರೀತ ಪ್ರಯಾಣಿಕರನ್ನು ತುಂಬಿದ್ದಕ್ಕೆ ಸ್ಥಳದಲ್ಲೇ ಚಾಲಕನಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿ, ಮಣಿಪಾಲ ನಗರದಲ್ಲಿ ಪ್ರತಿನಿತ್ಯ ನೂರಕ್ಕೂ …

Read More »