Breaking News

ರಾಷ್ಟ್ರೀಯ

ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್

ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್ ₹11,440 ಕೋಟಿ ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ* ನವದೆಹಲಿಯ ಮಾಜಿ ಪ್ರಧಾನಿಗಳ ಮನೆಯಲ್ಲಿ ಭೇಟಿ; ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಲೋಕೇಶ್ ನವದೆಹಲಿ: ಕೇಂದ್ರ ಸರಕಾರವು ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರು ಬೃಹತ್ ಕೈಗಾರಿಕೆ …

Read More »

ದಾವಣಗೆರೆಯಲ್ಲಿ ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ಅನ್ಯ ಕೋಮಿನ ಆರೋಪಿಗೆ ಕಠಿಣ ಶಿಕ್ಷೆ ನೀಡಿ; ಬೆಳಗಾವಿ ಶ್ರೀರಾಮಸೇನೆ ಆಗ್ರಹ

ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ನಡೆದ ವಿದ್ಯಾರ್ಥಿನಿಯರು ಮತ್ತು ಹಿಂದೂ ಮಹಿಳೆಯರನ್ನು ಪುಸಲಾಯಿಸಿ, ಮತ್ತು ಬರುವ ಮಾತ್ರೆ ನೀಡಿ ಬಲಾತ್ಕಾರಗೈದು ವಿಡಿಯೋ ಹರಿಬಿಟ್ಟ ಅನ್ಯ ಕೋಮಿನ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಶ್ರೀರಾಮಸೇನೆ ಬೆಳಗಾವಿ ಆಗ್ರಹಿಸಿದೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ಮೆಡಿಕಲ್ ಶಾಪಗೆ ಬರುತ್ತಿದ್ದ ವಿದ್ಯಾರ್ಥಿನಿಯರು ಮತ್ತು ಹಿಂದೂ ಮಹಿಳೆಯರನ್ನು ಪುಸಲಾಯಿಸಿ, ಮತ್ತು ಬರುವ ಮಾತ್ರೆ ನೀಡಿ ಬಲಾತ್ಕಾರಗೈದು ವಿಡಿಯೋ ಹರಿಬಿಟ್ಟ ಅನ್ಯ ಕೋಮಿನ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ …

Read More »

ಎಕ್ಸಲ್ ಕಟ್ ಆಗಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮುದಗಲ್ ಬಳಿ ಜರುಗಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. 60ಕ್ಕೂ ಹೆಚ್ಚು ಪ್ರಯಾಣಿಕರನ್ನ ಹೊತ್ತುಕೊಂಡು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಬಸ್ ಕಡೆ ತೆರಳುತ್ತಿತ್ತು. ಬಸ್​ನಲ್ಲಿ ಸುಮಾರ 33 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಂಚರಿಸಿದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ …

Read More »

ಯಲ್ಲಮ್ಮ ದೇವಿ ಜಾತ್ರೆಗೆ ವಿಶೇಷ ಬಸ್

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತರು ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 9 ರಿಂದ 28 ರವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಭಾರತ ಹುಣ್ಣಿಮೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ದೇವಿ ಜಾತ್ರೆಯು …

Read More »

ಜಯಮಾಲಾ ಮಗಳ ಹಳದಿಶಾಸ್ತ್ರ ಸಂಭ್ರಮ

ಹಿರಿಯ ನಟಿ ಜಯಮಾಲಾ ಅವರ ಮಗಳು ಸೌಂದರ್ಯಾ ವಿವಾಹ ಫೆಬ್ರವರಿ 7 ಹಾಗೂ 8ರಂದು ಅದ್ದೂರಿಯಾಗಿ ಜರುಗಲಿದೆ. ಇಂದು (ಫೆಬ್ರವರಿ 5) ಅದ್ದೂರಿಯಾಗಿ ಹಳದಿ ಶಾಸ್ತ್ರ ನಡೆದಿದೆ. ನಗರದ ಲಲಿತ್ ಅಶೋಕ್ ಹೋಟೆಲ್​ನಲ್ಲಿ ಹಳದಿ ಶಾಸ್ತ್ರ ಜರುಗಿದೆ. ಇದರಲ್ಲಿ ಸ್ಯಾಂಡಲ್ವುಡ್ ತಾರೆಯರು ಪಾಲ್ಗೊಂಡಿದ್ದರು. ಸುಧಾರಾಣಿ, ಶ್ರುತಿ, ಮಾಳವಿಕಾ ಮೊದಲಾದವರು ಭಾಗಿ ಆಗಿದ್ದಾರೆ.

Read More »

ಶ್ರೀರಾಮುಲುಗೂ ವಿಜಯೇಂದ್ರ ಮುಂದುವರಿಯುವುದು ಬೇಕಿಲ್ಲ, ಅದನ್ನು ಚಾಣಾಕ್ಷತೆಯಿಂದ ಹೇಳುತ್ತಾರೆ!

ಕೋಲಾರ: ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರಿಗೂ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದು ಬೇಕಿಲ್ಲ, ಅದರೆ ಅದನ್ನು ಅವರು ಹೇಳುವ ರೀತಿ ಬೇರೆಯಾಗಿದೆ. ದೆಹಲಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ತನ್ನ ಹೆಸರು ಉಲ್ಲೇಖಿಸಿರುವುದಕ್ಕೆ ಹಿಗ್ಗಿರುವ ಅವರು ಯಡಿಯೂರಪ್ಪರನ್ನು ದಕ್ಷಿಣ ಭಾರತದ ಭೀಷ್ಮ ಮತ್ತು ತನ್ನ ತಂದೆಯ ಸಮಾನ ಹಾಗೂ ವಿಜಯೇಂದ್ರರನ್ನು ತಮ್ಮ ಕಿರಿಯ ಸಹೋದರ ಎನ್ನುತ್ತ ತಾವು ಯಡಿಯೂರಪ್ಪ ಕುಟುಂಬದ ಒಂದು ಭಾಗ ಎನ್ನುತ್ತಾರೆ. ಹಿಂದೆ ಯಡಿಯೂರಪ್ಪ ತಮ್ಮ …

Read More »

ಬಳ್ಳಾರಿ: ಪ್ರೀತಿಸಿದ್ದಕ್ಕೆ ಯುವಕನ ಕೊಲೆ; ಯುವತಿಯ ತಂದೆ, ಅಣ್ಣನ ಬಂಧನ

ಬಳ್ಳಾರಿ: ಮಗಳನ್ನು ಪ್ರೀತಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಪ್ರೀತಿಸುತ್ತಿದ್ದ ಯುವಕನನ್ನು ಹುಡುಗಿಯ ತಂದೆ ಹಾಗೂ ಅಣ್ಣ ಸೇರಿ ಕೊಲೆಗೈದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ ಪ್ರಕರಣದ ಆರೋಪಿಗಳಾದ ಡಿ.ಮಲ್ಲಯ್ಯ (45) ಹಾಗೂ ಸುರೇಶ್ (21) ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಗೌಡ (22) ಕೊಲೆಯಾಗಿದ್ದರು. ಎಸ್​ಪಿ ಡಾ.ಶೋಭಾರಾಣಿ ಮಾತನಾಡಿ, “ಜ.7ರಂದು ಹಗರಿ ಬಳಿ ನದಿಯ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. …

Read More »

ಮಹಾ ಕುಂಭಮೇಳಕ್ಕೆ ತೆರಳಿದ್ದ ಕೊಪ್ಪಳದ ಯುವಕ ಸಾವು

ಕೊಪ್ಪಳ: ಮಹಾ ಕುಂಭಮೇಳಕ್ಕೆ ತೆರಳಿದ್ದ ಯುವಕನೋರ್ವ ವಿದ್ಯುತ್ ತಗುಲಿ ಗೋರಖ್​​ಪುರ ರೈಲ್ವೆ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳವಾರ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಮೃತರು. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಬಳಿಕ ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರವೀಣ್ ಕಳೆದ 15 ದಿನದ ಹಿಂದೆಯೇ ಮಹಾ ಕುಂಭಮೇಳಕ್ಕೆ ತೆರಳಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನವನ್ನೂ ಮಾಡಿದ್ದರು. ಬಳಿಕ ರಾಮನ …

Read More »

ಸರ್ವರ್ ಡೌನ್ : ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಗುತ್ತಿಲ್ಲ ಕೆಲಸ

 : ಕಳೆದ 10 ದಿನಗಳಿಂದ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದರಿಂದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಯಾವುದೇ ಕೆಲಸ ಆಗದೇ ಜನರು ಪರದಾಡುತ್ತಿದ್ದಾರೆ. ಚಾಮರಾಜನಗರದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಸರ್ವರ್ ಡೌನ್ ಆಗುತ್ತಿರುವುದರಿಂದ ಯಾವ ನೋಂದಣಿ ಕಾರ್ಯವೂ ಆಗದೇ ಜನರು ನಿತ್ಯ ಅಲೆದಾಡುತ್ತಿದ್ದಾರೆ. ಯಾವುದೇ ನೋಂದಣಿ ಆಗಲಿ, ಇಸಿಯಾಗಲಿ ಸಾಧ್ಯವಾಗದೆ ಜನರು ಪರದಾಡಿದ್ದು, ಕಳೆದ 10 ದಿನಗಳಿಂದಲೂ ಈ ಸಮಸ್ಯೆ ಮುಂದುವರೆದಿದೆ. ರಾಜ್ಯಾದ್ಯಂತ ಸರ್ವರ್ ಸಮಸ್ಯೆ ತಲೆದೂರಿದ ಪರಿಣಾಮ ಈ …

Read More »

ನಿಂತುಹೋಗಿದ್ದ ಪ್ರಶಸ್ತಿಗಳಿಗೆ ಮರುಜೀವ

  “ಈ ಹಿಂದಿನ ಸರ್ಕಾರ ಪ್ರತಿಷ್ಠಿತ ಟಿಎಸ್ಆರ್ ಪ್ರಶಸ್ತಿ, ಮೊಹರೆ ಹನುಮಂತರಾಯ ಪ್ರಶಸ್ತಿ, ಪರಿಸರ ಪತ್ರಿಕಾ ಪರಿಷತ್ ನೀಡುವ ಪ್ರಶಸ್ತಿಯನ್ನು ಅನೇಕ ವರ್ಷಗಳಿಂದ ನೀಡಿಲ್ಲ. ಅವರನ್ನು ಟೀಕಿಸಿ ಯಾವುದೇ ಪ್ರಯೋಜನವಿಲ್ಲ. ನಮ್ಮ ಸರ್ಕಾರ ಮತ್ತೇ ಇದಕ್ಕೆ ಜೀವ ನೀಡಿದೆ. ರಘುರಾಮ್ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಹೇಳಿದರು. …

Read More »