Breaking News

ರಾಷ್ಟ್ರೀಯ

ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್​ ವಾರ್​ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.   ಅನೇಕ ಫೇಸ್​ಬುಕ್​ …

Read More »

ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ: ಸಂಕಷ್ಟದಲ್ಲಿ ಡಬ್ಬಾವಾಲಾಗಳು

ಮುಂಬೈ, ಏಪ್ರಿಲ್ 15: ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಜನರಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈ ಮಧ್ಯೆ ಮುಂಬೈ ಡಬ್ಬಾವಾಲಾಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನಲ್ಲಿ ಒಟ್ಟು 5 ಸಾವಿರ ಡಬ್ಬಾವಾಲಾಗಳಿದ್ದರು, ಆದರೆ ಕೊರೊನಾ ಬಳಿಕ ಅವರಲ್ಲಿ ಕೇವಲ 400,500ರಷ್ಟು ಡಬ್ಬಾವಾಲಾಗಳು ಮಾತ್ರ ಕೆಲಸ ಮಾಡುತ್ತಿದ್ದರು. ಇದೀಗ ಮತ್ತೆ ಹೊಸ ನಿಯಮಗಳು ಜಾರಿಗೊಂಡಬಳಿಕ 200-250 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಇದೀಗ ಡಬ್ಬಾವಾಲಾಗಳ ಪರಿಸ್ಥಿತಿ ತೀವ್ರ ಸಂಕಷ್ಟಕ್ಕೆ …

Read More »

ರಿಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ಹುಮ್ನಾಬಾದ್ : ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರಿಮಿಡೆಸಿವಿರ್ ( Remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಮಿಡೆಸಿವಿರ್ ಔಷಧ ಕೊರತೆ ಇಲ್ಲ …

Read More »

ಕರೋನಾ ಮಾರ್ಗಸೂಚಿ ಪಾಲಿಸಲು ವಿಫಲ: ಕುಂಭಮೇಳ ಇಂದೇ ಅಂತ್ಯಗೊಳ್ಳುವ ಸಾಧ್ಯತೆ!

ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಕುರಿತಂತೆ ಉತ್ತರಾಖಂಡ್‌ ಸರ್ಕಾರ ಮತ್ತು ಧಾರ್ಮಿಕ ನೇತಾರರ ನಡುವೆ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ, ಇದೀಗ ಕುಂಭಮೇಳವನ್ನು ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಕೋವಿಡ್‌ ಎರಡನೇ ಅಲೆ ವಿಪರೀತವಾಗುತ್ತಿದ್ದರೂ ಕುಂಭಮೇಳದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ, ಯಾವುದೇ ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿಕೊಳ್ಳುತ್ತಿದ್ದಾರೆ. ಗಂಗಾನದಿಯ ತೀರದಲ್ಲಿ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೋವಿಡ್ …

Read More »

ಅದಾನಿಗೆ ಆಘಾತ, ಯುಎಸ್ ಷೇರುಪೇಟೆಯಿಂದ ಹೊರಕ್ಕೆ

ನ್ಯೂಯಾರ್ಕ್: ಗಲಭೆ ಪೀಡಿತ ಮ್ಯಾನ್ಮಾರ್ ದೇಶದ ಮಿಲಿಟರಿ ಪಡೆ ಜೊತೆ ಸಂಪರ್ಕ, ವ್ಯವಹಾರ ಹೊಂದಿರುವ ಕಾರಣಕ್ಕೆ ಭಾರತ ಮೂಲದ ಅದಾನಿ ಅವರ ಅದಾನಿ ಪೋರ್ಟ್ಸ್ ಸಂಸ್ಥೆಯನ್ನು ನ್ಯೂಯಾರ್ಕ್ ಷೇರುಪೇಟೆ ಪಟ್ಟಿಯಿಂದ ಹೊರ ಹಾಕಲಾಗಿದೆ. ಅದಾನಿ ಬಂದರುಗಳು ಮತ್ತು ಭಾರತದ ವಿಶೇಷ ಆರ್ಥಿಕ ವಲಯ ಲಿಮಿಟೆಡ್ ಸಂಸ್ಥೆಗೆ ಯುಎಸ್ ಷೇರುಪೇಟೆ ಎಸ್ & ಪಿ ಡೌ ಜೋನ್ಸ್ ಭಾರಿ ಆಘಾತ ನೀಡಿದೆ. ಮಾನವ ಹಕ್ಕು ಉಲ್ಲಂಘನೆ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಳುಗೆಡವಿರುವ …

Read More »

ಹನುಮ ಜನ್ಮಭೂಮಿಯಿಂದ ರಾಮ ಜನ್ಮಭೂಮಿಗೆ ಸೈಕಲ್ ಯಾತ್ರೆ ಹೊರಟ ಹಾವೇರಿ ಯುವಕ

ಹಾವೇರಿ: ಯಾಲಕ್ಕಿ ಕಂಪಿನ ನಾಡಿನ ರಾಮಭಕ್ತ ಯುವಕ ಹನುಮ ಜನ್ಮಸ್ಥಳ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಿಂದ ರಾಮಜನ್ಮಭೂಮಿ ಅಯೋಧ್ಯೆ ವರೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಈ ಸೈಕಲ್ ಯಾತ್ರೆಗೆ ಹುಕ್ಕೇರಿಮಠದ ಸದಾಶಿವ ಶ್ರೀಗಳು ಹಾಗೂ ಗಣ್ಯರು ಚಾಲನೆ ನೀಡಿದರು. ನಗರದ ವಿವೇಕಾನಂದ.ಎಸ್.ಇಂಗಳಗಿ ತಮ್ಮ ಒತ್ತಡದ ಕೆಲಸಗಳ ನಡುವೆ ದೇಶದ ಒಳಿತಿಗಾಗಿ ಸಂಕಲ್ಪ ಮಾಡಿಕೊಂಡು ಯಾತ್ರೆಯನ್ನು ಕೈಗೊಂಡಿದ್ದಾರೆ. ಕೊರೊನಾ ಮುಕ್ತ ಭಾರತವಾಗಬೇಕು. ಜಿಲ್ಲೆಯ ಅಭಿವೃದ್ಧಿ, ಸಮಸ್ತ ಕರ್ನಾಟಕ ಜನರ ಒಳಿತಿಗಾಗಿ ಹಾಗೂ …

Read More »

ಕೊನೆಯ ಸ್ಲಾಗ್ ಓವರ್ ಗಳಲ್ಲಿ ಬೌಲರ್ ಗಳ ಅತ್ಯುತ್ತಮ ಪ್ರದರ್ಶನದಿಂದ ಆರ್ ಸಿಬಿ ಹೈದರಾಬಾದ್ ವಿರುದ್ಧ 6 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ.

ಚೆನ್ನೈ: ಕೊನೆಯ ಸ್ಲಾಗ್ ಓವರ್ ಗಳಲ್ಲಿ ಬೌಲರ್ ಗಳ ಅತ್ಯುತ್ತಮ ಪ್ರದರ್ಶನದಿಂದ ಆರ್ ಸಿಬಿ ಹೈದರಾಬಾದ್ ವಿರುದ್ಧ 6 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ. ಗೆಲ್ಲಲು 150 ರನ್ ಗಳ ಸವಾಲು ಪಡೆದ ಹೈದರಾಬಾದ್ ಅಂತಿಮವಾಗಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಸೋಲನ್ನು ಅನುಭವಿಸಿತು. 96 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಹೈದರಾಬಾದ್ 46 ರನ್ ಗಳಿಸುಷ್ಟರಲ್ಲಿ 8 …

Read More »

ಗೋಕಾಕ: ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.

ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …

Read More »

ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ

ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.

Read More »

ಇಂತಹ ಕೆಟ್ಟ ಸರ್ಕಾರವನ್ನ ಹಿಂದೆಯೂ ನೋಡಿರಲಿಲ್ಲ.. ಮುಂದೆಯೂ ಬರುವುದಿಲ್ಲ: ಹೆಚ್‌.ಡಿ ಕುಮಾರಸ್ವಾಮಿ

ಬೀದರ್: ಕರ್ನಾಟಕದಲ್ಲಿ ಇಂತಹ ಕೆಟ್ಟ ಸರಕಾರ ನೋಡಿರಲಿಲ್ಲ. ಹಿಂದೆಯೂ ಇಂತಹ ಸರ್ಕಾರ ಬಂದಿರಲಿಲ್ಲ.. ಮುಂದೆಯೂ ಬರುವುದಿಲ್ಲ.. ಕೊರೊನಾದಿಂದ ಜನರನ್ನ ದೇವರೇ ಕಾಪಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಮಾತನಾಡಿದ ಮಾಜಿ ಸಿಎಂ ‘ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಗಮನಿಸಿದೆ. 18ರ ನಂತ್ರ ಸರ್ವಪಕ್ಷ ಸಭೆ ಕರೆದು ಸಲಹೆ ಪಡೆಯುವುದಾಗಿ ಕೇಳ್ತಾರಂತೆ. ಯಾವ ಪುರುಷಾರ್ಥಕ್ಕಾಗಿ ಸಭೆ ಕರೆಯುತ್ತಾರೆ.. ಸಲಹೆ ಪಡೆಯುತ್ತಾರೆ? ಎಂದು ಪ್ರಶ್ನಿಸಿದರು. ಇನ್ನು ಈಗಾಗಲೇ …

Read More »