ಬೆಂಗಳೂರು: ಕೊರೋನಾ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ಬಹುತೇಕರಿಗೆ ಈಗಾಗಲೇ ಸಹಾಯ ಮಾಡುತ್ತಿರುವ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕಿ ಡಾ.ಸೀಮಾ ಸಾಧಿಕಾ ಅವರು, ಪ್ರತಿಯೊಂದು ಮಾಹಿತಿಯನ್ನ ನೀಡಲು ಮುಂದಾಗಿದ್ದಾರೆ. ಕೊರೋನಾ ಸಮಯದಲ್ಲಿ ಆರೋಗ್ಯ ಏರುಪೇರಾದ ತಕ್ಷಣ ಏನು ಮಾಡಬೇಕು. ಮನೆಯಲ್ಲಿಯೇ ಹೇಗೆ ಆರೋಗ್ಯ ಸುಧಾರಿಸಿಕೊಳ್ಳಬಹುದು. ನೀವು ಯಾವ ಔಷಧ ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನ ನೀಡಲಿದ್ದಾರೆ. ಅವಶ್ಯಕವಿದ್ದ ಸಮಯದಲ್ಲಿ ಆಸ್ಪತ್ರೆಗಳ ಮಾಹಿತಿಯನ್ನೂ ತಮಗೆ ನೀಡಲಿದ್ದಾರೆ. ಜ್ವರ, ಕೆಮ್ಮು …
Read More »ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು
ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …
Read More »ಲಾಕ್ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …
Read More »ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್ನ ಪೋರಬಂದರ್ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …
Read More »ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ.
ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …
Read More »ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ.
ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ. 52 ವರ್ಷದ ವಿಜಯಶ್ರೀ ನಾಗನೂರೆ ಸೋಂಕಿಗೆ ಬಲಿಯಾದ ಅಧಿಕಾರಿ. ಇವರು ಬೆಳಗಾವಿ ನಗರದ ಯಮನಾಪುರ ನಿವಾಸಿ. ವಿಜಯಶ್ರೀ ನಾಗನೂರೆಗೆ ಮೇ 3 ರಂದು ಕೊರೊನಾ ಸೋಂಕು ದೃಢವಾಗಿತ್ತು. ಕಳೆದ ಹನ್ನೆರಡು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 15) ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ವಿಜಯಶ್ರೀ ಸದ್ಯ …
Read More »ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬದ ಎಲ್ಲರಿಗೂ ಕೊರೊನಾ ಸೋಂಕು
ಮೈಸೂರು, : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದು, ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ …
Read More »ಆರ್ಡರ್ ಮಾಡಿದ್ದ ಮೌಥ್ವಾಶ್ ಬಂದಿದ್ದು ರೆಡ್ಮಿ ನೋಟ್ 10 ಫೋನ್
ಮುಂಬೈ: ಆನ್ಲೈನ್ ಶಾಪಿಂಗ್ ಅಮೇಜಾನ್.ಕಮ್ನಲ್ಲಿ ಕೊಲ್ಗೇಟ್ ಮೌಥ್ವಾಶ್ ಆರ್ಡರ್ ಮಾಡಿದ್ದ ಮುಂಬೈ ನಿವಾಸಿ, ಡೆಲಿವರಿ ಬಾಯ್ ತಂದುಕೊಂಡ ಆರ್ಡರ್ ಪ್ಯಾಕೇಜ್ ತೆರೆದಾಗ ಅಚ್ಚರಿಯೇ ಕಾದಿತ್ತು. ಲೋಕೇಶ್ ದಗಾ ಅವರು ತಾವು ಮೌಥ್ವಾಶ್ ಬುಕ್ ಮಾಡಿದ್ದಾಗಿ ಅದಕ್ಕೆ ಸಂಬಂಧಿಸಿ ಫೋಟೋವನ್ನು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ನನ್ನ ಆರ್ಡರ್ ಬದಲಾವಣೆ ಆಗಿರುವುದಾಗಿ ಸೆಕ್ಯುರಿಟಿ ಗಾರ್ಡ್ ತಿಳಿಸಿದರು. ಪ್ಯಾಕೇಜ್ ಚಿಕ್ಕದಾಗಿದ್ದರಿಂದ ನನಗೂ ಆಶ್ಚರ್ಯವಾಯಿತು. ತೆಗೆದು ನೋಡಿದಾಗ ಮೌಥ್ವಾಶ್ ಬದಲು ರೆಡ್ಮಿ ನೋಟ್ 10 …
Read More »ಜನಿ ಪುತ್ರಿಯಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ
ಚೆನ್ನೈ: ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್ ಹಾಗೂ ಅವರ ಕುಟುಂಬಸ್ಥರು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸೌಂದರ್ಯ ರಜನಿಕಾಂತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೌಂದರ್ಯ ರಜನಿಕಾಂತ್ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಮಾವ ಶ್ರೀ ಎಸ್.ಎಸ್. ವನಂಗಮುಡಿ, ಪತಿ ವಿಶಾಗನ್, ಅವರ ಸಹೋದರಿ ಮತ್ತು ನಾನು ಇಂದು ಬೆಳಗ್ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ರವರನ್ನು ಭೇಟಿ …
Read More »ಪತಿ – ಮಗನಿಗೆ ಕೋವಿಡ್ ಪಾಸಿಟಿವ್ : ಮನನೊಂದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ
ಕಲಬುರಗಿ: ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದ್ದನ್ನು ನೊಂದುಕೊಂಡ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರದ ಜಗತ್ ವೃತ್ತದ ಬಳಿಯಿರೋ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದುಮತಿ (56 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದ ಮಹಿಳೆ ನೊಂದುಕೊಂಡಿದ್ದಳು. ಇಂದುಮತಿ, ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿಯಾಗಿದ್ದು, ಪತಿ ಮತ್ತು ಮಗನಿಗೆ ಸೋಂಕು ದೃಢವಾಗಿದ್ದರಿಂದ …
Read More »
Laxmi News 24×7