ಚೆನ್ನೈ: ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್ ಹಾಗೂ ಅವರ ಕುಟುಂಬಸ್ಥರು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸೌಂದರ್ಯ ರಜನಿಕಾಂತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೌಂದರ್ಯ ರಜನಿಕಾಂತ್ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಮಾವ ಶ್ರೀ ಎಸ್.ಎಸ್. ವನಂಗಮುಡಿ, ಪತಿ ವಿಶಾಗನ್, ಅವರ ಸಹೋದರಿ ಮತ್ತು ನಾನು ಇಂದು ಬೆಳಗ್ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ರವರನ್ನು ಭೇಟಿ …
Read More »ಪತಿ – ಮಗನಿಗೆ ಕೋವಿಡ್ ಪಾಸಿಟಿವ್ : ಮನನೊಂದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ
ಕಲಬುರಗಿ: ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದ್ದನ್ನು ನೊಂದುಕೊಂಡ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರದ ಜಗತ್ ವೃತ್ತದ ಬಳಿಯಿರೋ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದುಮತಿ (56 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದ ಮಹಿಳೆ ನೊಂದುಕೊಂಡಿದ್ದಳು. ಇಂದುಮತಿ, ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿಯಾಗಿದ್ದು, ಪತಿ ಮತ್ತು ಮಗನಿಗೆ ಸೋಂಕು ದೃಢವಾಗಿದ್ದರಿಂದ …
Read More »ಲಸಿಕೆ ಸ್ಲಾಟ್ ಪಡೆಯಲು ಅಲರ್ಟ್ ಮೆಸೇಜ್ ಪಡೆಯಿರಿ
ಹೊಸದಿಲ್ಲಿ: ದೇಶದಲ್ಲಿ ಲಸಿಕೆಗಾಗಿ ಕೋವಿನ್ ಪೋರ್ಟಲ್ನಲ್ಲಿ ನೋಂದಣಿಗೆ ಇಂಟರ್ನೆಟ್ ಲಭ್ಯವಿಲ್ಲದ ಸ್ಥಳದಲ್ಲಿ ಅಡಚಣೆ ಉಂಟಾಗುತ್ತಿದೆ. ಅದಕ್ಕಾಗಿ ಚೆನ್ನೈಯಲ್ಲಿ ಬ್ಯುಸಿನೆಸ್ ಅನಾಲಿಸ್ಟ್ ವೃತ್ತಿಯಲ್ಲಿರುವ ಬ್ರೆಟಿ ಥಾಮಸ್ (35) ಎಂಬುವರು ಲಸಿಕೆ ಹಾಕಿಸಲು ಸ್ಲಾಟ್ಗಳು ಯಾವಾಗ ಲಭ್ಯವಾಗುತ್ತವೆ ಎಂಬ ಬಗ್ಗೆ ಹೊಸ ತಂತ್ರಾಂಶ ಕಂಡುಹಿಡಿದಿದ್ದಾರೆ. ಅದಕ್ಕೆ ಟೆಲಿಗ್ರಾಂ ಮೂಲಕ ಸದಸ್ಯತ್ವ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿ ಸುಮಾರು 4 ಲಕ್ಷ ಮಂದಿ ಸದಸ್ಯರು ಈಗ ಇದ್ದಾರೆ. “ಹೆಚ್ಚಿನ ನಗರ ಮತ್ತು ಪಟ್ಟಣಗಳನ್ನು ಕೇಂದ್ರೀಕರಿಸಿ …
Read More »ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವಕ್ಕೆ ಇಲ್ಲಿದೆ ಸಾಕ್ಷ್ಯ
ನವದೆಹಲಿ, ಮೇ 14: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವ ಸೃಷ್ಟಿಯಾಗಿರುವುದು ಅಂಕಿ-ಅಂಶಗಳ ಸಹಿತ ಸಾಬೀತಾಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಇಳಿಮುಖ ಆಗುತ್ತಿರುವುದು ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಒಂದು ದಿನದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡುತ್ತಿದ್ದ ಸಂಖ್ಯೆ ಇದೀಗ ಅರ್ಧಕ್ಕರ್ಧ ತಗ್ಗಿದೆ. ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 118 ದಿನಗಳಲ್ಲಿ 17,91,77,029 ಜನರಿಗೆ ಲಸಿಕೆ ನೀಡಲಾಗಿದೆ. ಗುರುವಾರ ರಾತ್ರಿ 8 ಗಂಟೆ …
Read More »ಕೋವಿಡ್: 12ದಿನದಲ್ಲಿ ಒಂದೇ ಕುಟುಂಬದ ನಾಲ್ವರ ಸಾವು; ಇಬ್ಬರು ಮಕ್ಕಳು ಅನಾಥ
ನವದೆಹಲಿ: ಭಾರತದಲ್ಲಿ ಕೋವಿಡ್ ನ ಎರಡನೇ ರೂಪಾಂತರಿ ಅಲೆ ತೀವ್ರಗತಿಯಲ್ಲಿ ಹರಡುತ್ತಿದೆ. ಕೋವಿಡ್ ಸೋಂಕಿನಿಂದ ಕುಟುಂಬಗಳು ಒಡೆದು ಹೋಗಿದ್ದು, ಜನರ ಬದುಕು ಹಳಿತಪ್ಪಿದ ರೈಲಿನಂತಾಗಿದೆ ಎಂದು ತಿಳಿಸಿದೆ. ಕೋವಿಡ್ ಸೋಂಕಿನಿಂದ ಸಂಭವಿಸಿದ ಹೃದಯವಿದ್ರಾವಕ ಘಟನೆಗಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದು, ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲೂ ಇಂತಹ ಘಟನೆಯೊಂದು ನಡೆದಿದೆ. ಕೋವಿಡ್ ಸೋಂಕಿನಿಂದಾಗಿ ತಂದೆ, ತಾಯಿ ಮತ್ತು ಅಜ್ಜ, ಅಜ್ಜಿ ನಿಧನರಾಗಿದ್ದು, ಇದರ ಪರಿಣಾಮ ಅರು ಮತ್ತು ಎಂಟು ವರ್ಷದ ಇಬ್ಬರು ಹೆಣ್ಣುಮಕ್ಕಳು …
Read More »ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತುಹೋಗಿದೆ – KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್
ಬೆಂಗಳೂರು : ‘ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ‘ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು …
Read More »ಲಸಿಕೆಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯಗಳು ಪರಸ್ಪರ ಕಿತ್ತಾಟಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ನವದೆಹಲಿ: ಲಸಿಕೆಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯಗಳು ಪರಸ್ಪರ ಕಿತ್ತಾಟಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಭಾರತದ ರಾಜ್ಯಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಸ್ಪರ ಸ್ಪರ್ಧಿಸುವಂತಾಗಿದೆ. ಯುಪಿ ವಿರುದ್ಧ ಮಹಾರಾಷ್ಟ್ರ, ಮಹಾರಾಷ್ಟ್ರ ವಿರುದ್ದ ಒರಿಸ್ಸಾ, ಒರಿಸ್ಸಾ ದೆಹಲಿಯ ವಿರುದ್ಧ ಹೋರಾಡುತ್ತಿದೆ” ಎಂದು ಹೇಳಿದ್ದಾರೆ. “ಭಾರತ ಎಲ್ಲಿದೆ?” ಎಂದು ಪ್ರಶ್ನಿಸಿರುವ ಅವರು, “ಈ ಎಲ್ಲ ಬೆಳವಣಿಗೆಗಳು ಭಾರತದ …
Read More »ಆಮ್ಲಜನಕ ಕೊರತೆ: ಯೋಗಿ ಸರ್ಕಾರದ ಹುಳುಕು ಬಹಿರಂಗಪಡಿಸಿದ ಹೈಕೋರ್ಟ್
ಲಕ್ನೋ, ಮೇ 12: ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ನೀಡಿರುವ ಅಂಕಿ ಅಂಶಗಳ ದೋಷವನ್ನು ಅಲಹಾಬಾದ್ ಹೈಕೋರ್ಟ್ ಬಹಿರಂಗಪಡಿಸಿದೆ. ಆಸ್ಪತ್ರೆಯ ಹಾಸಿಗೆಗಳ ಲಭ್ಯತೆಯ ಬಗ್ಗೆ ಸರ್ಕಾರದ ಸಹಾಯವಾಣಿ ಮತ್ತು ಪೋರ್ಟಲ್ ನಡುವೆ ಸರಿಯಾದ ಹೊಂದಾಣಿಕೆಯಿಲ್ಲ,ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಉತ್ತರ ಪ್ರದೇಶ ಆಡಳಿತ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಯೋಗಿ ಸರ್ಕಾರದ ಹುಳುಕನ್ನು ಕೋರ್ಟ್ ಬಹಿರಂಗಪಡಿಸಿದೆ. ”ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯಾಗದೆ ಕೋವಿಡ್ …
Read More »ಕುತೂಹಲಕ್ಕೆ ಕಾರಣವಾಗಿದೆ ಆಕಾಶದಲ್ಲಿ ಕಂಡುಬಂದ ವಿಚಿತ್ರ ಆಕೃತಿ.!
ಕಳೆದ ವರ್ಷ ಜನವರಿ ತಿಂಗಳಲ್ಲಿ ಲಾಹೋರ್ನಲ್ಲಿ ವಿಚಿತ್ರವಾದ ಕಪ್ಪು ಬಣ್ಣದ ವರ್ತುಲ ಆಕಾಶದಲ್ಲಿ ಕಾಣಿಸಿಕೊಂಡ ಘಟನೆ ನಿಮಗೆ ನೆನಪಿದ್ದಿರಬಹುದು. ಈ ದೃಶ್ಯದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವಿವಿಧ ವೇದಿಕೆಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆಯೇ ಅನೇಕರು ಇದನ್ನ ಹಾರುವ ತಟ್ಟೆ ಇರಬಹುದು ಎಂದು ಭಾವಿಸಿದ್ದರು. ಆದರೆ ಬಳಿಕ ತಜ್ಞರು ಈ ಬಗ್ಗೆ ಸಂಶೋಧನೆ ನಡೆಸಿ ಇದೊಂದು ಕೈಗಾರಿಕಾ ಪ್ರದೇಶದಲ್ಲಿ ಆದ ಸಮಸ್ಯೆಯಿಂದಾಗಿ ಈ ರೀತಿ …
Read More »ಕೊರೊನಾ ಸೋಂಕು ವರದಿ ನೆಗೆಟಿವ್ ಬರುತ್ತಿದ್ದಂತೆ ಮಕ್ಕಳನ್ನು, ಕುಟುಂಬದವರನ್ನು ಭೇಟಿಯಾದ ಅಲ್ಲು ಅರ್ಜುನ್..!
ನವದೆಹಲಿ: ಕೊರೊನಾ ಸೋಂಕು ದೃಢಪಟ್ಟು ಕ್ವಾರಂಟೈನ್ನಲ್ಲಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ವರದಿ ನೆಗೆಟಿವ್ ಬರುತ್ತಿದ್ದಂತೆ ತಮ್ಮ ಮಕ್ಕಳನ್ನು ಮುದ್ದಾಡಿದ್ದಾರೆ. ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಕಳೆದ 14 ದಿನಗಳ ಹಿಂದೆ ಕೊರೊನಾ ಸೋಂಕು ಹಿನ್ನೆಲೆ ಕ್ವಾರಂಟೈನ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಸೋಂಕಿನಿಂದ ಗುಣಮುಖರಾಗಿದ್ದು, ಅವರ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ. 15 ದಿನಗಳ ಬಳಿಕ ಅವರು ತಮ್ಮ ಮಕ್ಕಳನ್ನು ಹಾಗೂ ಕುಟುಂಬದರನ್ನು …
Read More »
Laxmi News 24×7