ಮೈಸೂರು: ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಮುಖಂಡ ಕೆ.ವಿ. ಮಲ್ಲೇಶ್ ಗಂಭೀರ ಆರೋಪ ಮಾಡಿದ್ದಾರೆ. ಡಿಸಿ ಅಧಿಕೃತ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ. ಜಲದರ್ಶಿನಿ ಅತಿಥಿ ಗೃಹ ಪಾರಂಪರಿಕ ಕಟ್ಟಡಗಳ ವ್ಯಾಪ್ತಿಗೆ ಸೇರಿದೆ. ಕರೊನಾ ಸಂಕಷ್ಟ ಕಾಲದಲ್ಲಿ ಇಂತಹ ಮೋಜು ಮಸ್ತಿ ಏಕೆ …
Read More »ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ
ಕಲಬುರಗಿ: ರಾಜ್ಯಸಬೆಯ ಮಾಜಿ ಸದಸ್ಯ, ಮಾಜಿ ಸಚಿವ, ಹಿರಿಯ ನಾಯಕ ಕೆ.ಬಿ ಶಾಣಪ್ಪ ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕು ದೃಢವಾಗಿದ್ದ ಅವರನ್ನು ಮೂರು ದಿನಗಳ ಹಿಂದೆ ಇಲ್ಲಿನ ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಇಂದು ಕೊನೆಯುಸಿರೆಳೆದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಆರಂಭದಲ್ಲಿ ಕಾರ್ಮಿಕ ನಾಯಕರಾಗಿ ಗುರುತಿಸಿಕೊಂಡ ಶಾಣಪ್ಪ ಅವರು ಎರಡು ಸಲ ಶಹಾಬಾದ ಮೀಸಲು ಕ್ಷೇತ್ರದಿಂದ ಕಮ್ಯುನಿಸ್ಟ್ ಪಕ್ಷದಿಂದ ಶಾಸಕರಾಗಿದ್ದರು. ಅದರಲ್ಲೂ ಒಂದು …
Read More »ಕೊಡಗು: ಲಾಕ್ಡೌನ್ನಿಂದ ಊಟವಿಲ್ಲದೆ ಉಪವಾಸವನ್ನೇ ರೂಢಿಸಿಕೊಂಡ ಕುಟುಂಬ!
ಕೊಡಗು : ದೇಶದಲ್ಲಿ ಕೋವಿಡ್ ಮಹಾಮಾರಿ ವ್ಯಾಪಿಸುತ್ತಿದ್ದಂತೆ ಇನ್ನಷ್ಟು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ 2020 ರಲ್ಲಿ ಇಡೀ ದೇಶವನ್ನೇ ಸಂಪೂರ್ಣ ಲಾಕ್ಡೌನ್ ಮಾಡಿತ್ತು. ಆ ಸಂದರ್ಭ ಎಷ್ಟೋ ಲಕ್ಷಾಂತರ ಕುಟುಂಬಗಳು ಅನುಭವಿಸಿದ ನೋವು, ಸಂಕಷ್ಟ ಅಷ್ಟಿಷ್ಟಲ್ಲಾ. ಇದರಿಂದ ಕೊಡಗು ಜಿಲ್ಲೆ ಏನು ಹೊರತ್ತಾಗಿರಲಿಲ್ಲ. ಅದೇ ರೀತಿಯಲ್ಲಿ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಗುಹ್ಯ ಗ್ರಾಮದ ಪವಿತ್ರನ್ ಎಂಬುವರ ಕುಟುಂಬ ಒಂದೊತ್ತಿನ ಊಟಕ್ಕೂ ಪರದಾಡಿತ್ತು. ದುಡಿದು ದಿನ್ನೋದಕ್ಕೂ ಅವಕಾಶ ಇಲ್ಲದಿದ್ದರಿಂದ …
Read More »‘ಹಿಂದೂಸ್ತಾನಿ ಭಾವು’ ಎಂದೂ ಕರೆಯಲ್ಪಡುವ ಹಿಂದಿ ಬಿಗ್ ಬಾಸ್ 3 ಖ್ಯಾತಿಯ ವಿಕಾಸ್ ಫಾಟಕ್ ಹೊಸದೊಂದು ವಿವಾದ
ಮುಂಬೈ : ‘ಹಿಂದೂಸ್ತಾನಿ ಭಾವು’ ಎಂದೂ ಕರೆಯಲ್ಪಡುವ ಹಿಂದಿ ಬಿಗ್ ಬಾಸ್ 3 ಖ್ಯಾತಿಯ ವಿಕಾಸ್ ಫಾಟಕ್ ಹೊಸದೊಂದು ವಿವಾದ ಸೃಷ್ಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರುವ ಮುಂಬೈ ನಗರದಲ್ಲಿ ಆಂಬುಲೆನ್ಸ್ ಬಳಸಿಕೊಂಡು ಶಿವಾಜಿ ಪಾರ್ಕ್ ತಲುಪಿ, ಪ್ರತಿಭಟನೆ ಕೈಗೊಂಡ ಫಾಟಕ್ರನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ವಿವಾದಾತ್ಮಕ ವಿಡಿಯೋಗಳಿಗೆ ಹೆಸರಾಗಿರುವ ಗಾಯಕ ಫಾಟಕ್, 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದರು. ನಗರದಲ್ಲಿ ಓಡಾಟದ ಮೇಲೆ ನಿರ್ಬಂಧ ಇರುವ …
Read More »ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಪ್ರಾಣಬಿಟ್ಟ ಪೇಂಟರ್!
ಮೈಸೂರು: ಏಣಿಯಿಂದ ಬಿದ್ದು ಗಾಯಗೊಂಡಿದ್ದ ಪೇಂಟರ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಮೃತಪಟ್ಟ ದಾರುಣ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಕೆ.ಆರ್. ನಗರ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ ಶ್ರೀಕಾಂತ್ (34) ಮೃತ ದುರ್ದೈವಿ ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದ ಶ್ರೀಕಾಂತ್ ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಏಣಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೈ ಸೇರಿ ದೇಹದ ಹಲವು ಕಡೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ …
Read More »ಮುಧೋಳ, ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ, ಮೇ 17 ರಿಂದ ಕಾರ್ಯಾರಂಭ
ಕಲಬುರಗಿ: ಮುಧೋಳ ಮತ್ತು ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ ಸಿಕ್ಕಿದ್ದು, ಶೀಘ್ರವೇ ಉತ್ಪಾದನೆ ಆರಂಭಿಸಲಿವೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಧೋಳ ಮತ್ತು ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ ದೊರೆತಿದೆ. ದೇಶದಲ್ಲಿ ಈ ಹಿಂದೆ ರೆಮ್ ಡೆಸಿವರ್ ಉತ್ಪಾದನೆಗೆ ಕೇವಲ ಎರಡು ಕಡೆ ಅನುಮತಿ ನೀಡಲಾಗಿತ್ತು. ಇತ್ತೀಚಿಗೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ …
Read More »‘ರಾಜ್ಯಗಳಿಗೆ ಕೊರೊನಾ ಲಸಿಕೆಯನ್ನು ಕೇಂದ್ರ ಉಚಿತವಾಗಿ ನೀಡಲಿ’
ನವದೆಹಲಿ: ಏಕರೂಪದ ಲಸಿಕೆ ನೀತಿ ಇರಬೇಕು ಮತ್ತು ಇತ್ತೀಚಿನ ಹಂತದ ನೂತನ ಭೇದಾತ್ಮಕ ಬೆಲೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.ಲಸಿಕೆಗಳು ಲಭ್ಯವಾಗುವಂತೆ ಮತ್ತು ರಾಜ್ಯಗಳಿಗೆ ಉಚಿತವಾಗಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಂಗಾಳ ಹೇಳಿದೆ. ಲಸಿಕೆ ಬೆಲೆಗಳ ಬಗ್ಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲು ಮತ್ತು ಚೌಕಾಶಿ ಮಾಡಲು ರಾಜ್ಯಗಳಿಗೆ ಸಾಧ್ಯವಿಲ್ಲ.ಲಸಿಕೆಗಳಿಗೆ ಹಣವನ್ನು ವಿನಿಯೋಗಿಸಲು …
Read More »ಹಿಮಾಚಲಕ್ಕೆ ಹೋಗಲು ಬಿಗ್ ಬಿ, ಟ್ರಂಪ್ ಹೆಸರಿನಲ್ಲಿ ನಕಲಿ ಇ-ಪಾಸ್ : FIR ದಾಖಲು
ಶಿಮ್ಲಾ : ಹಿಮಾಚಲಕ್ಕೆ ಪ್ರವಾಸ ಕೈಗೊಳ್ಳಲು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಹೆಸರಿನಲ್ಲಿ ನಕಲಿ ಇ-ಪಾಸ್ ನೋಂದಣಿ ಮಾಡಲಾಗಿದ್ದು, ಆರೋಪಿ ವಿರುದ್ಧ FIR ದಾಖಲಾಗಿದೆ. ಹಿಮಾಚಲ ಪ್ರದೇಶ ಸರ್ಕಾರವು ಕೋವಿಡ್ ಸಮಯದಲ್ಲಿ ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಇ-ಪಾಸ್ ಕಡ್ಡಾಯ ಮಾಡಿದೆ. ಈ ವೇಳೆ ಇಬ್ಬರು ಖ್ಯಾತ ನಾಮರ ಹೆಸರುಗಳನ್ನು ಬಳಿಸಿಕೊಂಡು, ಈ ಇಬ್ಬರು ಚತ್ತೀಸ್ ಗಡದಿಂದ ಶಿಲ್ಲಾಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ …
Read More »ಇದೆಂತಹ ಲಾಕ್ ಡೌನ್ ಗೈಡ್ಲೈನ್ಸ್: ಕೊರೊನಾ ಚೈನ್ ಬ್ರೇಕ್ ಮಾಡುವ ಸದುದ್ದೇಶ ಇಲ್ಲವೇ?
ಜನತಾ ಕರ್ಫ್ಯೂ ಒಂದು ವಾರದಿಂದ ಜಾರಿಯಲ್ಲಿದೆ, ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರು ಇದಕ್ಕೆ ಸ್ಪಂದಿಸುತ್ತಿಲ್ಲ ಎಂದು ಖುದ್ದು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಹಾಗಾಗಿ, ಕಠಿಣ ಕ್ರಮ ಅನಿವಾರ್ಯ ಎಂದಿದ್ದಾರೆ. ಸಿಎಂ ಹೇಳಿಕೆಯ ನಂತರ, ಲಾಕ್ ಡೌನ್ ಘೋಷಣೆಯಾಗಬಹುದು ಎಂದು ಬೆಳಗ್ಗೆಯಿಂದಲೇ ನಿರೀಕ್ಷಿಸಲಾಗಿತ್ತು. ಈ ಬಾರಿ ಲಾಕ್ ಡೌನ್ ನಲ್ಲಿ ಬಿಗಿಯಾದ ಮಾರ್ಗಸೂಚಿ ಇರಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಜನತಾ ಕರ್ಫ್ಯೂನಲ್ಲಿದ್ದ ಮಾರ್ಗಸೂಚಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿ ಲಾಕ್ ಡೌನ್ ಗೈಡ್ಲೈನ್ಸ್ ಅನ್ನು ಕಟ್ …
Read More »ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್
ಬೆಂಗಳೂರು: ಗೇಮಿಂಗ್ ಪ್ರಿಯರಿಗೆ ಸಂತಸದ ವಿಚಾರವೊಂದು ಹೊರಬಿದ್ದಿದ್ದು ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ದೇಸಿ ಅವತಾರದ ಪಬ್ ಜಿ ಗೇಮ್ ಭಾರತಕ್ಕೆ ಲಗ್ಗೆಯಿಡುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್ ಸಂಸ್ಥೆಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲಿ ಅತ್ಯುನ್ನತ ಗುಣಮಟ್ಟದೊಂದಿಗೆ ಹೊಸ ಮಾದರಿಯ ಪಬ್ ಜಿ ಬಳಕೆದಾರರನ್ನು ತಲುಪಲಿದೆ ಎಂದು ತಿಳಿಸಿದೆ. ಗಮನಿಸಬೇಕಾದ ಅಂಶವೆಂದರೇ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಈಗಾಗಲೇ ವೆಬ್ …
Read More »
Laxmi News 24×7