Breaking News

ರಾಷ್ಟ್ರೀಯ

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು : “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ 2023 ಮತ್ತು 2024ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. “ನಮ್ಮ ಸರ್ಕಾರ ಪತ್ರಕರ್ತರಿಗೆ ನೀಡಿರುವ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾಪ ಮಾಡಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ …

Read More »

ಜಮಖಂಡಿ ತಾಲೂಕ ಆಸ್ಪತ್ರೆ ಹಾಗೂ ಆವರಣದಲ್ಲಿ ಕಣ್ಮರೆಯಾಗಿರುವ ಸ್ವಚ್ಛತೆ ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಅಶುಚಿತ್ವ

ಜಮಖಂಡಿ ತಾಲೂಕ ಆಸ್ಪತ್ರೆ ಹಾಗೂ ಆವರಣದಲ್ಲಿ ಕಣ್ಮರೆಯಾಗಿರುವ ಸ್ವಚ್ಛತೆ ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಅಶುಚಿತ್ವ ಸ್ವಚ್ಛತೆ ಕಾಣದ ಶೌಚಾಲಯಗಳು ಸ್ವಚ್ಛತೆ ಕಾಪಾಡದ ಆಸ್ಪತ್ರೆ ಸಿಬ್ಬಂದಿಗಳು ಸಿಬ್ಬಂದಿಗಳಿಗೆ ರೋಗಿಗಳು ಹಾಗೂ ಸಾರ್ವಜನಿಕರಿಂದ ಹಿಡಿ ಶಾಪ ಜಮಖಂಡಿ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತೆ ಮಾಯವಾಗಿದ್ದು ರೋಗಿಗಳು ಪರದಾಡುವಂತಾಗಿದೆ. ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ   ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಸ್ವಚ್ಛ ತೆ ದೂರಾ ದೂರ. ಮೂಗು ಕಣ್ಣು ಮುಚ್ಚಿಕೊಂಡೇ ತಿರುಗಾಡುವ ಪರಿಸ್ಥಿತಿ ಶೌಚಾಲಯಗಳಂತೂ …

Read More »

ಗಾಂಧೀಜಿ ಕಲ್ಪನೆಯ ಸ್ವದೇಶಿ, ಗ್ರಾಮ ಸ್ವರಾಜ್ ಬಲಪಡಿಸಲು ಖಾದಿ ಖರೀದಿಸಿ: ಚನ್ನರಾಜ ಹಟ್ಟಿಹೊಳಿ

ಬೈಲಹೊಂಗಲ: ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘದ ಸಹಯೋಗದಲ್ಲಿ ಬೈಲಹೊಂಗಲ ನಗರದಲ್ಲಿ ಆರಂಭಿಸಲಾಗಿರುವ ‘ಖಾದಿಲೂಮ್’ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಕೈಯಿಂದ ನೇಯ್ದ ಖಾದಿ ಹಾಗೂ ರೇಷ್ಮೆ ಬಟ್ಟೆಗಳು ಮಳಿಗೆಯಲ್ಲಿ ಲಭ್ಯವಿವೆ. ಖಾದಿ ಬಟ್ಟೆಗಳಿಗೆ ಪ್ರಾಮುಖ್ಯತೆ ನೀಡಲು ಈ ಮಳಿಗೆ ಆರಂಭಿಸಲಾಗಿದ್ದು, ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಸ್ವದೇಶಿ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಖಾದಿ ಖರೀದಿಸೋಣ. ತನ್ಮೂಲಕ ನೇಕಾರರ ಆರ್ಥಿಕ …

Read More »

ಮೈಕ್ರೋ ಫೈನಾನ್ಸ್​ ಸಂಸ್ಥೆಗಳ ಕಿರುಕುಳ ನಿಯಂತ್ರಿಸಲು ಶೀಘ್ರದಲ್ಲೇ ಸುಗ್ರೀವಾಜ್ಞೆ :ಡಿ ಕೆ ಶಿ

ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೋ ಫೈನಾನ್ಸ್​ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ, ಕಾನೂನು ಕೈಗೆ ತೆಗೆದುಕೊಂಡು, ಬಡವರ ಮೇಲೆ ದಬ್ಬಾಳಿಕೆ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಇದನ್ನು ನಿಯಂತ್ರಿಸಲು ಪೊಲೀಸರಿಗೆ ಹೆಚ್ಚಿನ …

Read More »

ಹೈಕಮಾಂಡ್​​ ಮುಂದೆ ಮೂರು ಬೇಡಿಕೆ ಇಟ್ಟ ಯತ್ನಾಳ್

ಬೆಂಗಳೂರು, : ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವರ್ಸಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಅಂತಿಮ ಹಂತದ ಕದನ ದಿಲ್ಲಿಗೆ ಶಿಫ್ಟ್ ಆಗಿದೆ. ಈಗಾಗಲೇ ಬೆಂಗಳೂರಿನಿಂದ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮತ್ತು ಎನ್‌.ಆರ್ ಸಂತೋಷ್ ದೆಹಲಿಗೆ ತೆರಳಿದ್ದು, ಇನ್ನು ನಾಳೆ(ಫೆಬ್ರವರಿ 04) ಬಸನಗೌಡ ಪಾಟೀಲ್ ಯತ್ನಾಳ್, ಬಿ.ಪಿ ಹರೀಶ್ ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ್ ದೆಹಲಿಗೆ ತೆರಳಲಿದ್ದಾರೆ. ಇದಲ್ಲದೇ ಯತ್ನಾಳ್​ ಟೀಮ್ …

Read More »

ಸರ್ಕಾರಿ ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವು

ಚಾಮರಾಜನಗರ, : ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ (death) ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ …

Read More »

ಬೆಂಗಳೂರಲ್ಲಿ ಆರ್​ಟಿಓ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳು ಸೀಜ್‌

ಬೆಂಗಳೂರು, : ತೆರಿಗೆ (tax) ಪಾವತಿ ಮಾಡದೆ ಅನಧಿಕೃತವಾಗಿ ನಗರದಲ್ಲಿ ಸಂಚಾರ ಮಾಡುತ್ತಿದ್ದ ಫೆರಾರಿ, ಪೋರ್ಷೆ ಮತ್ತು ರೇಂಜ್ ರೋವರ್​ ಸೇರಿದಂತೆ 30 ಐಷಾರಾಮಿ ಸ್ಪೋರ್ಟ್ಸ್ ಕಾರುಗಳನ್ನು ಆರ್‌ಟಿಒ ಅಧಿಕಾರಿಗಳು ಸೋಮವಾರ ಸೀಜ್‌ ಮಾಡಿದ್ದಾರೆ. ಜಪ್ತಿಯಾದ ಕಾರುಗಳಿಂದ 3 ಕೋಟಿ ರೂ. ತೆರಿಗೆ ವಸೂಲಿ ಆಗಬೇಕಿದೆ. ನಿನ್ನೆ ನಗರದಲ್ಲಿ ಕಾರ್ಯಚರಣೆ ಮಾಡಿದ ಆರ್‌ಟಿಒ ಅಧಿಕಾರಿಗಳು ಮಾಸೆರಾಟಿ, ಫೆರಾರಿ, ಪೋರ್ಷೆ, ರೇಂಜ್ ರೋವರ್, ಬಿಎಂಡಬ್ಲ್ಯು ಸೇರಿ 30 ಲಕ್ಸುರಿ ಕಾರುಗಳನ್ನು ಜಪ್ತಿ ಮಾಡಲಾಗಿದೆ. ದೆಹಲಿ, …

Read More »

ದೆಹಲಿಯಲ್ಲಿ ಯತ್ನಾಳ್ ಬಣದಿಂದ ಅಂತಿಮ ಹಂತದ ಕದನ

ನವದೆಹಲಿ, (ಫೆಬ್ರವರಿ 03): ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕಿತ್ತಾಟದಿಂದ ಆರಂಭವಾದ ಬಿಜೆಪಿ ಬಣ ಬಡಿದಾಟ ಜಿಲ್ಲಾಧ್ಯಕ್ಷರ ನೇಮಕದವರೆಗೂ ಬಂದು ನಿಂತಿದೆ. ವಿಜಯೇಂದ್ರ ವಿರುದ್ಧ ಸಮರ ಸಾರಿರೋ ಯತ್ನಾಳ್ ಬಣ ದಿನಕ್ಕೊಂದು ಬಾಣ ಪ್ರಯೋಗಿಸ್ತಿದೆ. ಇಷ್ಟು ದಿನ ರಾಜ್ಯದಲ್ಲಿ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಅಸ್ತ್ರ ಪ್ರಯೋಗಿಸುತ್ತಿದ್ದ ಯತ್ನಾಳ್ ಆ್ಯಂಡ್ ಟೀಂ ದೆಹಲಿಗೆ ಶಿಫ್ಟ್ ಆಗಿದ್ದು, ವಿಜಯೇಂದ್ರ ವಿರುದ್ಧ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ಹಂತದ ಪ್ರಹಾರಕ್ಕೆ ಮುಂದಾಗಿದೆ. ಈಗಾಗಲೇ ಯತ್ನಾಳ್ …

Read More »

ಸಚಿವ ಹೆಚ್​ಕೆ ಪಾಟೀಲರಿಗೆ ಸಿಎಂ ಆಗುವ ಯೋಗ?ಇಮ್ಮಡಿ ಸಿದ್ದರಾಮೇಶ್ವರಶ್ರೀ

ಗದಗ, ಫೆಬ್ರವರಿ 02: ಸಚಿವ ಹೆಚ್​​.ಕೆ.ಪಾಟೀಲರಿಗೆ (H. K. Patil) ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ದರಾಮೇಶ್ವರಶ್ರೀ ಹೇಳಿದ್ದಾರೆ. ನಗರದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಇತ್ತು. ಸಚಿವ ಹೆಚ್​​.ಕೆ.ಪಾಟೀಲರು 2-3 ಬಾರಿ ಸಿಎಂ ಆಗಿರುತ್ತಿದ್ದರು. ಎಸ್​ಎಂ ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಅವರ ಹೆಸರು ಕೇಳಿಬಂದಿತ್ತು. ತಡವಾಗಿಯಾದರೂ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಕೂಡಿಬರಲಿ …

Read More »

ಆಸ್ಪತ್ರೆ ಸೇರಿದ ಸೋನು ನಿಗಮ್

ಪ್ರಸಿದ್ಧ ಗಾಯಕ ಸೋನು ನಿಗಮ್ ಅವರಿಗೆ ಲೈವ್ ಪರ್ಫಾರ್ಮೆನ್ಸ್ ಸಮಯದಲ್ಲಿ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ನೋವಿನ ಹೊರತಾಗಿಯೂ ಅವರು ಪ್ರದರ್ಶನ ಮುಂದುವರಿಸಿ, ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ತಮ್ಮ ಅನುಭವವನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಅವರ ಬೇಗನೆ ಚೇತರಿಸಿಕೊಳ್ಳುವಂತೆ ಆಶಿಸಿದ್ದಾರೆ. ಭಾರತದ ಖ್ಯಾತ ಗಾಯಕರಲ್ಲಿ ಸೋನು ನಿಗಮ್ ಕೂಡ ಹೌದು. ಅವರು ಕನ್ನಡದ ಮಗ ಎನಿಸಿಕೊಂಡಿದ್ದಾರೆ. ‘ಕಳೆದ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ ಎಂಬ ಭಾವನೆ ನನ್ನದು’ ಎಂದು ಕೂಡ …

Read More »