ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …
Read More »ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ’: ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ಬಗ್ಗೆ ಎಲ್ಲರಿಗೂ ನೋವಿದೆ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿದ್ದಾರೆ, ಆದರೂ ಮಾಧ್ಯಮಗಳಲ್ಲಿ ಹಲವಾರು ಊಹಾಪೋಹಗಳು ಬರುತ್ತಿವೆ, ವದಂತಿಗಳನ್ನು ಹಬ್ಬಿಸಿ ಜನತೆಯನ್ನು ತಪ್ಪು ದಾರಿಗೆಳೆಯುವುದು ಬೇಡ, ಸರ್ಕಾರ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ. ರೋಗಿಗಳು ಎಲ್ಲಿ ಸಾವಾದರೂ ಅದು ನಮಗೆ ನೋವಿನ ಸಂಗತಿಯೇ, ಅದು ನಮ್ಮ …
Read More »ಸ್ಮಶಾನದಲ್ಲಿಯೇ ಸೋಂಕಿತನ ಶವ ಬಿಸಾಡಿದ ಪಾಪಿಗಳು?
ಚಿಕ್ಕಬಳ್ಳಾಪುರ : ಇಲ್ಲಿಯ ನಿಮ್ಮಾಕಲಕುಂಟೆ ಹತ್ತಿರದ ಸ್ಮಶಾನದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಕೋವಿಡ್ ಸೋಂಕಿತ ಶವವನ್ನು ಮಣ್ಣು ಮಾಡದೆ ಬಿಸಾಡಿ ಹೋಗಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮೃತ ದೇಹವನ್ನು ಬಿಸಾಡಿ ಮೂರ್ನಾಲ್ಕು ದಿನಗಳೇ ಕಳೆದಿವೆ. ಮೃತ ದೇಹ ಆಸ್ಪತ್ರೆಯಲ್ಲಿ ಪ್ಯಾಕ್ ಮಾಡಿದ ರೀತಿಯಲ್ಲಿದೆ. ನಾಯಿಗಳು ಮೃತದೇಹದ ಭಾಗಗಳನ್ನು ಎಳೆದು ತಿನ್ನುತ್ತಿವೆ. ಅಷ್ಟೇ ಇಲ್ಲ, ಈ ಸ್ಮಶಾನದ ಅಕ್ಕ ಪಕ್ಕದಲ್ಲಿಯೇ …
Read More »ನಟಿ ಕಂಗನಾಗೆ ಮತ್ತೊಂದು ಶಾಕ್: ಟ್ವಿಟರ್ ಬಳಿಕ ಫ್ಯಾಶನ್ ಡಿಸೈನರ್ಗಳಿಂದಲೂ ಬಹಿಷ್ಕಾರ..!
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಗ್ಗೆ ಸಾಲು ಸಾಲು ಟ್ವೀಟ್ಗಳನ್ನ ಮಾಡಿದ ಕಂಗನಾ ರಣಾವತ್ ಖಾತೆಗೆ ಟ್ವಿಟರ್ ಇಂಡಿಯಾ ಕೊಕ್ ನೀಡಿದೆ. ಟ್ವಿಟರ್ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಹಿನ್ನೆಲೆ ಕಂಗನಾ ರಣಾವತ್ರ ಟ್ವಿಟರ್ ಖಾತೆಯನ್ನ ಶಾಶ್ವತವಾಗಿ ಅಮಾನತು ಮಾಡಲಾಗಿದೆ. ಕಂಗನಾ ರಣಾವತ್ರನ್ನ ಟ್ವಿಟರ್ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಫ್ಯಾಷನ್ ಡಿಸೈನರ್ಗಳೂ ಸಹ ಕಂಗನಾರನ್ನ ಬಹಿಷ್ಕರಿಸಿದ್ದಾರೆ. ಡಿಸೈನರ್ ರಿಮಜಿನ್ ದಾದು ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನ ಶೇರ್ ಮಾಡಿದ್ದಾರೆ. ಒಳ್ಳೆಯ …
Read More »ಬಳ್ಳಾರಿ; ವಿಮ್ಸ್ನಲ್ಲಿ ಬೆಡ್ ಸಿಗದೇ ಆಸ್ಪತ್ರೆ ಮುಂದೆ ವ್ಯಕ್ತಿ ನರಳಾಟ
ವಿಜಯನಗರ, ಮೇ 04; ಬೆಂಗಳೂರು ನಗರದಲ್ಲಿ ಬೆಡ್ ಸಿಗದೇ ಕೋವಿಡ್ ಸೋಂಕಿತರು ಪರದಾಡುತ್ತಿದ್ದಾರೆ. ಬಳ್ಳಾರಿಯ ವಿಮ್ಸ್ನಲ್ಲಿಯೂ ಇಂತಹ ಪ್ರಕರಣ ಈಗ ಬೆಳಕಿಗೆ ಬಂದಿದೆ. ಬೆಡ್ ಸಿಗದೆ ಕೋವಿಡ್ ಸೋಂಕಿತ ನರಳಾಡಿದ ಘಟನೆ ಮಂಗಳವಾರ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಬಳ್ಳಾರಿಯಲ್ಲಿಯೂ ಬೆಡ್ನ ಕೊರತೆ ಶುರುವಾಗಿದೆಯೇ? ಎಂಬ ಅನುಮಾನ ಈಗ ಉಂಟಾಗಿದೆ. ಎರಡು ಗಂಟೆಯಿಂದ ಬೆಡ್ ಸಿಗದೆ ಕೋವಿಡ್ ಸೋಂಕಿತ ರೋಗಿ ಆಸ್ಪತ್ರೆಯ ಬಾಗಿಲ ಮುಂದೆ ಮಲಗಿ ನರಳಾಡಿದ್ದಾನೆ. ಮಗನಿಗೆ ಬೆಡ್ …
Read More »ಮೈಸೂರಿನಲ್ಲಿ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ;ಓರ್ವನನ್ನು ಬಂಧಿಸಿದ ಸಿಸಿಬಿ ಪೊಲೀಸರು
ಮೈಸೂರು: ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ನಂಜನಗೂಡು ಸಮೀಪದ ಪೆಟ್ರೋಲ್ ಬಂಕ್ ಬಳಿ ದಾಖಲೆ ಇಲ್ಲದೆ, ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಧುಕುಮಾರ್(37) ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂಜನಗೂಡು ತಾಲೂಕು ಹೊಸಕೋಟೆಯ ಮಧುಕುಮಾರ್ ಎನ್ನುವ ವ್ಯಕ್ತಿ ಅಕ್ರಮವಾಗಿ ಆಕ್ಸಿಜನ್ ಮಾರಾಟ ಮಾಡುತ್ತಿದ್ದ. ಆರೋಪಿ ಬಳಿ ಇದ್ದ ತುಂಬಿದ ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದಿರುವ …
Read More »ವಿದ್ಯಾರ್ಥಿನಿ ಸಾವಿಗೆ ಬೆಡ್ ಸಿಗದಿರುವುದೇ ಕಾರಣ: ಆರೋಪ
ದಾವಣಗೆರೆ: ಭಾರತ್ ಕಾಲೊನಿಯ 17 ವರ್ಷದ ಬಾಲಕಿ ಮಂಗಳವಾರ ಮೃತಪಟ್ಟಿದ್ದಾಳೆ. ಎಲ್ಲ ಆಸ್ಪತ್ರೆಗಳಿಗೆ ಅಲೆದಾಟ ನಡೆಸಿದರೂ ಬೆಡ್ ಸಿಗದೇ, ಸಕಾಲದಲ್ಲಿ ಚಿಕಿತ್ಸೆ ಸಿಗದೇ ಇದ್ದಿದ್ದರಿಂದ ಈ ಸಾವು ಉಂಟಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ನಗರದ ಭಾರತ್ ಕಾಲೊನಿಯ 12ನೇ ಕ್ರಾಸ್ ನಿವಾಸಿ ಮಂಜಪ್ಪ-ವೇಡಿಯಮ್ಮ ದಂಪತಿಯ ಮಗಳು ಸಂಗೀತ ಮೃತಪಟ್ಟವಳು. ಸಂಗೀತಾಳಿಗೆ ಸೋಮವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಸ್ಥಳೀಯ ಕ್ಲಿನಿಕ್ನಲ್ಲಿ ಗ್ಲುಕೋಸ್ ಕೊಡಿಸಿ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ಅಲೆದಾಡಿದ್ದಾರೆ. ಎಲ್ಲಿಯೂ ಬೆಡ್ …
Read More »ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತ: ಮಂಡ್ಯದಲ್ಲಿ ಕೋವಿಡ್ ಸೋಂಕಿತ ಯುವಕ ಸಾವು
ಮಂಡ್ಯ: ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಕೋವಿಡ್ ಸೋಂಕಿತ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ಇಂಡುವಾಳು ಗ್ರಾಮದ ಸುನೀಲ್(29) ಮೃತಪಟ್ಟ ಯುವಕ. ಈತನಿಗೆ 14 ದಿನದ ಹಿಂದೆ ಸೋಂಕು ದೃಢಪಟ್ಟಿತ್ತು. ಮೊದಲ ಮೂರು ದಿನ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದನು. ಮನೆಗೆ ಬಂದ ಎರಡು ದಿನದಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವೆಂಟಿವೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. …
Read More »ಚಾಮರಾಜನಗರ: ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಯುವಕ ಸಾವು: ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರೋಶ
ಚಾಮರಾಜನಗರ: ರಕ್ತದ ಆಮ್ಲಜನಕ ಮಟ್ಟ ಕಡಿಮೆಯಾಗಿ ಉಸಿರಾಟದ ತೊಂದರೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಯುವಕನಿಗೆ ಬೆಡ್ ದೊರಕದೇ ಮೃತಪಟ್ಟ ಘಟನೆ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಯುವಕನ ಕಡೆಯವರು ಜಿಲ್ಲಾಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ ಅಭಿಷೇಕ್ (25) ಮೃತ ಯುವಕ. ಕಳೆದ ಆರು ದಿನದ ಹಿಂದೆಯೇ ಯುವಕನಿಗೆ ಸೋಂಕು ಧೃಢಪಟ್ಟಿತ್ತು. ಹೋಂ ಐಸೋಲೇಷನ್ ನಲ್ಲಿದ್ದರು. ಉಸಿರಾಟದ …
Read More »ಹೊಸ ಗೈಡ್ ಲೈನ್ ಬಿಡುಗಡೆ: ಆರೋಗ್ಯವಂತರಿಗೆ, ಸೋಂಕಿತರಾಗಿದ್ದವರಿಗೆ ಕೋವಿಡ್ ಟೆಸ್ಟ್ ಬೇಕಿಲ್ಲ
ನವದೆಹಲಿ: ಐಸಿಎಂಆರ್ ನಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಪಾಸಿಟಿವ್ ಬಂದವರಿಗೆ ಟೆಸ್ಟ್ ಮಾಡಬೇಕಿಲ್ಲ. ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ ಎಂದು ಕೊರೋನಾ ಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಮ್ಮೆ ಪಾಸಿಟಿವ್ ಆದವರಿಗೆ ಮತ್ತೆ ಟೆಸ್ಟ್ ಮಾಡಬೇಕಿಲ್ಲ ಎಂದು ಹೇಳಲಾಗಿದೆ. ಆರೋಗ್ಯವಂತರು ಅಗತ್ಯ ಕಾರ್ಯಗಳಿಗಾಗಿ ಅಂತರಾಜ್ಯ ಪ್ರಯಾಣಮಾಡುವಾಗ ಅವರಿಗೆ RTPCR ಪರೀಕ್ಷೆ ಕಡ್ಡಾಯ ಬೇಡವೆಂದು ಕೇಂದ್ರ ಸರ್ಕಾರ ಹೊಸ ಕೋವಿಡ್ ಪರೀಕ್ಷೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯೋಗಾಲಯಗಳ ಮೇಲೆ ಹೆಚ್ಚಿನ …
Read More »
Laxmi News 24×7