Breaking News

ರಾಷ್ಟ್ರೀಯ

ಸಿಗದ ಆಯಂಬುಲೆನ್ಸ್: ತಾಯಿ ಶವ ಬೈಕ್ ಮೇಲೆ ಸಾಗಿಸಿದ ಮಗ

ಆಂಧ್ರ ಪ್ರದೇಶ : ಕೋವಿಡ್ ಎರಡನೇ ಅಲೆ ಮತ್ತೊಂದು ಬಾರಿ ಕರುಣಾಜನಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ದೇಶದಲ್ಲಿ ಮಹಾಮಾರಿ ಸೋಂಕು ರಣಕೇಕೆ ಹಾಕುತ್ತಿದ್ದರೆ, ಬಡಜನರು ಅಸಹಾಯಕತೆಯ ನೋಟ ಬೀರುತ್ತ ಜೀವನ ಸಾಗಿಸುತ್ತಿದ್ದಾರೆ. ಇದೀಗ ಆಂಧ್ರ ಪ್ರದೇಶದಲ್ಲಿ ಆಯಂಬುಲೆನ್ಸ್ ಸಿಗದಿದ್ದರಿಂದ ಕೋವಿಡ್ ರೋಗಿಯ ಶವವನ್ನು ಬೈಕ್‍ ಮೇಲೆ ಸಾಗಿಸಿರುವ ಮನಕಲಕುವಂತಹ ಘಟನೆ ನಡೆದಿದೆ. ಆಂಧ್ರದ ಶ್ರೀಕಾಕುಲಂ ಜಿಲ್ಲೆಯ ಮಂದಾಸ್ ಮಂಡಲ್ ಎಂಬ ಗ್ರಾಮ ಈ ಘಟನೆಗೆ ಸಾಕ್ಷಿಯಾಗಿದೆ. ಈ ಗ್ರಾಮದ 50 ವರ್ಷದ …

Read More »

ಪಂಜಾಬ್‌ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದ ಕೆಕೆಆರ್..!

ಅಹಮದಾಬಾದ್​: ಉತ್ತಮ ಬೌಲಿಂಗ್ ಪ್ರದರ್ಶನ, ರಾಹುಲ್ ತ್ರಿಪಾಠಿ ಹಾಗೂ ನಾಯಕ ಇಯಾನ್ ಮೋರ್ಗಾನ್ ಅಬ್ಬರದ ಬ್ಯಾಟಿಂಗ್‌ನಿಂದ ಪಂಜಾಬ್ ಕಿಂಗ್ಸ್‌ಅ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 5 ವಿಕೆಟ್‌ಗಳಿಂದ ಗೆಲುವು ದಾಖಲಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 124 ರನ್‌ಗಳ ಗುರಿ ನೀಡಿತ್ತು. ಈ ಸಾಧಾರಣ ಟಾರ್ಗೆಟ್ ಗುರಿ ಬೆನ್ನಟ್ಟಿದ ಕೆಕೆಆರ್ 20 ಎಸೆತಗಳು ಬಾಕಿ ಇರುವಂತೆ 5 …

Read More »

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ’ಯಿಂದಲೇ ‘ಕೊರೋನಾ ರೂಲ್ಸ್’ ಬ್ರೇಕ್ : ‘ಮಾಸ್ಕ್ ಧರಿಸದೇ’ ಮದುವೆ ಕಾರ್ಯಕ್ರಮದಲ್ಲಿ ಭಾಗಿ

ಕಾರವಾರ : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ. ಆದ್ರೇ.. ಈ ನಿಯಮ ಮೀರಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರೇ, ಮಾಸ್ಕ್ ಧರಿಸದೇ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೊರೋನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಟೋ ಶೇರ್ ಮಾಡಿ, ಸಾರ್ವಜನಿಕರು ಕಿಡಿಕಾರಿದ್ದಾರೆ. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ನಿನ್ನೆಯ ಭಾನುವಾರದಂದು ಸಿದ್ದಾಪುರದಲ್ಲಿ ನಡೆದಂತ ಆಪ್ತರ ಮದುವೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದರು. …

Read More »

ತಾಲೂಕು, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲು ಶಿಫಾರಸ್ಸು

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳನ್ನೂ ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ. ಮುಂದಿನ 14 ದಿನ ಜನತಾ ಕರ್ಫ್ಯೂ ಜಾರಿಯಾಗಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗುವುದು. ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು. ತಾಲೂಕು, ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ …

Read More »

ಚೆನ್ನೈ ಅದ್ಭುತ ಆಟ, ಆರ್‌ಸಿಬಿಯ ಕೆಟ್ಟ ದಿನಗಳಲ್ಲಿ ಇದೂ ಒಂದು: ಕಿಚ್ಚ

ಬೆಂಗಳೂರು: ಐಪಿಎಲ್‍ನ ಹೈ ವೋಲ್ಟೇಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಕುರಿತು ಎಲ್ಲೆಡೆ ಚರ್ಚೆ ನಡೆಯುತ್ತಿದ್ದು, ಜಡೇಜಾ ಮ್ಯಾಜಿಕ್‍ನಿಂದಾಗಿ 69 ರನ್ ಗಳಿಂದ ಚೆನ್ನೈ ಭರ್ಜರಿ ಜಯ ಸಾಧಿಸಿದೆ. ಈ ಬಗ್ಗೆ ನಟ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವೆಲ್ ಪ್ಲೇಯ್ಡ್ ಚೆನ್ನೈ ಸೂಪರ್ ಕಿಂಗ್ಸ್, ಇಲ್ಲಿಂದ ಇನ್ನೂ ಹೆಚ್ಚು ಆಸಕ್ತಿದಾಕವಾಗಿದೆ. ಅಲ್ಲದೆ ಆರ್ ಸಿಬಿಯ …

Read More »

ನಿಧನ ವಾರ್ತೆ ರಾಮಣ್ಣ ತೋಳಿನವರ ನಿಧನ

ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ನಿವಾಸಿ, ಉಪ್ಪಾರ ಸಮಾಜದ ತಾಲೂಕಾಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ರಾಮಣ್ಣ ಭೀಮಪ್ಪ ತೋಳಿನವರ(68) ರವಿವಾರ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಉಪ್ಪಾರ ಸಮಾಜದ ಮುಖಂಡರು ರಾಮಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read More »

ದೇಶೀಯ ಲಸಿಕೆ ಕೋವ್ಯಾಕ್ಸಿನ್ ದರ ನಿಗದಿ

ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ತಾಂಡವಾಡುತ್ತಿದ್ದು, ಹತೋಟಿಗೆ ತರಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ. ಇದರ ಭಾಗವಾಗಿ ಮೇ ತಿಂಗಳಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಹೀಗಿರುವಾಗಲೇ ದೇಶೀಯ ಕೊರೊನಾ ಲಸಿಕೆ ಕೋವ್ಯಾಕ್ಸಿನ್‍ಗೆ ದರ ನಿಗದಿಪಡಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್‍ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,200 ರೂ. ದರ ನಿಗದಿಪಡಿಸಲಾಗಿದೆ. ಈ ಕುರಿತು ಹೈದರಾಬಾದ್ ಮೂಲದ ಕೋವ್ಯಾಕ್ಸಿನ್ …

Read More »

ಸ್ವಂತ ಟಿವಿ ಚಾನೆಲ್ ಆರಂಭಿಸಿದ ‘ಕಾಂಗ್ರೆಸ್’

ದೇಶದ ಜನತೆಯನ್ನು ತಲುಪಲು ಕಾಂಗ್ರೆಸ್ ಪಕ್ಷ ಇದೀಗ ತನ್ನ ಸ್ವಂತ ಟಿವಿ ಚಾನೆಲ್ ಆರಂಭಿಸಿದೆ. ಐ.ಎನ್.ಸಿ. ಟಿವಿಗೆ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ (ಏಪ್ರಿಲ್ 24)ವಾದ ಶನಿವಾರದಂದು ಚಾಲನೆ ನೀಡಲಾಗಿದೆ. ದೇಶದಲ್ಲಿ ವಿವಿಧ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಸಹ ಇದು ಬಹಳಷ್ಟು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿಲ್ಲ. ಹೀಗಾಗಿ ನೈಜ ವಿಷಯವನ್ನು ಜನರಿಗೆ ತಲುಪಿಸಲು ಟಿವಿ ಚಾನೆಲ್ ಆರಂಭಿಸಿರುವುದಾಗಿ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಈ ನೂತನ ಟಿವಿ ಚಾನೆಲ್ …

Read More »

ಖಾಸಗಿ ಆಸ್ಪತ್ರೆಗಳಿಗೆ ₹600, ರಾಜ್ಯಗಳಿಗೆ ₹400, ಕೇಂದ್ರಕ್ಕೆ 150 ರೂಪಾಯಿಗೆ ಕೊರೊನಾ ಲಸಿಕೆ ಮಾರಾಟ: ಸೀರಮ್ ಸ್ಪಷ್ಟನೆ

ನವದೆಹಲಿ: ಕೋವಿಶೀಲ್ಡ್ ಕೊರೊನಾ ವೈರಸ್ ಲಸಿಕೆಯ ಮುಕ್ತ ಮಾರುಕಟ್ಟೆ ಬೆಲೆ ನಿಗದಿ ಕುರಿತು ಟೀಕೆಗೆ ಸೀರಮ್ ಸಂಸ್ಥೆ ಶನಿವಾರ ಪ್ರತಿಕ್ರಿಯಿಸಿದ್ದು, ‘ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ ಗೆ ₹600 ಮಾರಾಟ ಮಾಡಲಾಗುವುದು, ರಾಜ್ಯಗಳಿಗೆ ₹400 ಮತ್ತು ಕೇಂದ್ರಕ್ಕೆ 150 ರೂಪಾಯಿಗೆ ನೀಡಲಾಗುವುದು’ ಎಂದಿದ್ದಾರೆ. ತಯಾರಕರು ‘ಭಾರತದೊಂದಿಗೆ ಲಸಿಕೆಯ ಜಾಗತಿಕ ಬೆಲೆಗಳ ನಡುವೆ ಮಾಡಲಾದ ನಿಖರವಲ್ಲದ ಹೋಲಿಕೆ’ಯಾಗಿದೆ. ಪ್ರಸ್ತುತ ದೇಶದಲ್ಲಿ ಬಳಸಲಾಗುತ್ತಿರುವ ಎರಡು ಲಸಿಕೆಗಳಲ್ಲಿ ಒಂದಾದ ಕೋವಿಶೀಲ್ಡ್, ಇಂದು ಮಾರುಕಟ್ಟೆಯಲ್ಲಿ ಲಭ್ಯವಿರುವ …

Read More »

ಮುಂಗಡ ಹಣ ವಾಪಸ್ ನೀಡಲು ಕಲ್ಯಾಣ ಮಂಟಪ ಮಾಲೀಕರಿಂದ ನಕಾರ

ಚಿಕ್ಕಮಗಳೂರು: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಿಗೆ ಕಠಿಣ ನಿಯಮವನ್ನು ಹೇರಲಾಗಿದೆ. ಸಾವಿರಾರು ಜನರನ್ನ ಸೇರಿಸಿ ಮದುವೆ ಮಾಡಬೇಕು ಎಂದು ಆಸೆಪಟ್ಟವರು ಇದೀಗ 50 ಮಂದಿಯನ್ನ ಸೇರಿಸಿ ಮದುವೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ದೊಡ್ದ ದೊಡ್ಡ ಹಾಲ್​ಗಳಲ್ಲಿ ಬುಕ್ ಮಾಡಿದ ಮದುವೆಗಳೇಲ್ಲ ಮನೆಗಳಲ್ಲಿ ಮತ್ತು ದೇವಸ್ಥಾನಗಳಲ್ಲಿ ಮಾಡಲು ನಿರ್ಧರಿಸಲಾಗಿದೆ. ಆದರೆ ಕನ್ಷೆಷನ್ ಹಾಲ್​ಗಳಿಗೆ ಮುಂಗಡವಾಗಿ ಕಟ್ಟಿದ ಹಣವನ್ನ ಮಾತ್ರ ಕೇಳಬೇಡಿ ಎಂದು ಮಾಲೀಕರು ಹೇಳುತ್ತಿದ್ದಾರೆ. ಹೀಗಾಗಿ ಕುಟುಂಬಸ್ಥರಲ್ಲಿ …

Read More »