Breaking News

ರಾಷ್ಟ್ರೀಯ

ನಾಸಿಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆ : 22 ಮಂದಿ ಸಾವು

ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ನಲ್ಲಿ ಕೋವಿಡ್ -19 ರೋಗಿಗಳಿಗೆ ಸಿವಿಕ್ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ರೋಗಿಗಳು ಬುಧವಾರ (ಏಪ್ರಿಲ್ 21) ಸಾವನ್ನಪ್ಪಿದ್ದಾರೆ ಎಂಬ ವರದಿಯಾಗಿದೆ.   ಜಾಕಿರ್ ಹುಸೇನ್ ಪುರಸಭೆಯ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ಜನರು ಸಾವನ್ನಪ್ಪಿದ್ದಾರೆ. ರೋಗಿಗಳು ವೆಂಟಿಲೇಟರ್‌ ಗಳಲ್ಲಿದ್ದರು ಮತ್ತು ಆಮ್ಲಜನಕದ ಪೂರೈಕೆಯಾಗುತ್ತಿದ್ದರೂ, ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯ ಕಾರಣದಿಂದ ಈ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ …

Read More »

ಆಕ್ಸಿಜನ್ ಕೊರತೆ ನೀಗಿಸಲು ಟಾಟಾ ಸಹಾಯ ಹಸ್ತ ! 24 ಕ್ರಯೋಜೆನಿಕ್ ಕಂಟೇನರ್​ಗಳ ಆಮದು

ನವದೆಹಲಿ : ಭಾರತದಲ್ಲಿ ಉಂಟಾಗುತ್ತಿರುವ ಆಕ್ಸಿಜನ್ ಕೊರತೆಯನ್ನು ಕಡಿಮೆ ಮಾಡಲು ದ್ರವರೂಪದ ಆಕ್ಸಿಜನ್​​ಅನ್ನು ಸಾಗಣೆ ಮಾಡುವುದಕ್ಕಾಗಿ 24 ಕ್ರಯೋಜೆನಿಕ್ ಕಂಟೇನರ್​ಗಳನ್ನು ಆಮದು ಮಾಡುವುದಾಗಿ ಟಾಟಾ ಕಂಪೆನಿಗಳ ಗುಂಪು ಪ್ರಕಟಿಸಿದೆ. ಕರೊನಾ ವಿರುದ್ಧದ ಹೋರಾಟದಲ್ಲಿ ಇಡೀ ದೇಶ ಒಂದಾಗಿ ನಿಲ್ಲಬೇಕು ಎಂದು ನಿನ್ನೆ ಪ್ರಧಾನಿ ಮೋದಿ ಮಾಡಿದ ಮನವಿಗೆ ಸ್ಪಂದಿಸಿ, ಈ ಘೋಷಣೆ ಮಾಡಿದೆ. ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರೊನಾ ರೋಗಿಗಳಿಗೆ ಉಂಟಾಗುತ್ತಿರುವ ಆಕ್ಸಿಜನ್ …

Read More »

ಹೆಚ್ಚುತ್ತಿರುವ ಸಾವಿನ ಸಂಖ್ಯೆ :ಚಟ್ಟಗಳಿಗೆ ಡಿಮ್ಯಾಂಡ್, ಜನರಲ್ಲಿ ಆತಂಕ

ಮೈಸೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಿದಿರು ಚಟ್ಟಕ್ಕೆ ಬೇಡಿಕೆ ಕೂಡ ಹೆಚ್ಚಾಗತೊಡಗಿದೆ. ನಂಜುಮಳಿಗೆ ವೃತ್ತದ ಬಳಿ ಬಿದಿರಿನಿಂದ ಗೃಹೋಪಯೋಗಿ ಸೇರಿದಂತೆ ನಾನಾ ವಸ್ತುಗಳನ್ನು ಮಾಡುತ್ತಿದ್ದ ವ್ಯಾಪಾರಿಗಳು ಇದೀಗ ಅಂತ್ಯ ಸಂಸ್ಕಾರಕ್ಕಾಗಿ ಚಟ್ಟ ತಯಾರಿಸಲು ಮುಂದಾಗಿದ್ದಾರೆ. ಪ್ರತಿದಿನ 20ಕ್ಕೂ ಹೆಚ್ಚು ಚಟ್ಟಗಳ ವ್ಯಾಪಾರ ನಡೆಯುತ್ತಿದೆ.  

Read More »

ಬಸ್ಸಿನಿಂದ ಕೆಳಗಿಳಿಸಿದ ಉಡುಪಿ ಡಿಸಿ: ವಿದ್ಯಾರ್ಥಿನಿಯ ಆಕ್ರೋಶ; ವಿಡಿಯೋ ವೈರಲ್

ಉಡುಪಿ, ಏಪ್ರಿಲ್ 20: ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರನ್ನು ಕೆಳಗಿಳಿಸಿದ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಆಕ್ರೋಶ ಹೊರಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉಡುಪಿಯ ಸಂತೆಕಟ್ಟೆ ಬಳಿ ಬಸ್ ಅಡ್ಡಗಟ್ಟಿ ತಪಾಸಣೆ ನಡೆಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ವಿಪರೀತ ಪ್ರಯಾಣಿಕರನ್ನು ತುಂಬಿದ್ದಕ್ಕೆ ಸ್ಥಳದಲ್ಲೇ ಚಾಲಕನಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿ, ಮಣಿಪಾಲ ನಗರದಲ್ಲಿ ಪ್ರತಿನಿತ್ಯ ನೂರಕ್ಕೂ …

Read More »

ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಬಹುದು

ನವದೆಹಲಿ, ಏಪ್ರಿಲ್ 19: ದೇಶದಲ್ಲಿ ಮೂರನೇ ಹಂತದ ಕೊರೊನಾ ಲಸಿಕಾ ಅಭಿಯಾನವು ಮೇ 1ರಿಂದ ಆರಂಭಗೊಳ್ಳಲಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ದೇಶದಲ್ಲಿ ಒಂದು ವರ್ಷದಿಂದಲೂ ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಭಾರತ ಸರ್ಕಾರ ಪರಿಶ್ರಮ ಪಡುತ್ತಿದೆ. ಅತಿ ಕಡಿಮೆ ಅವಧಿಯಲ್ಲಿ ಹೆಚ್ಚೆಚ್ಚು ಭಾರತೀಯರು ಲಸಿಕೆ ಪಡೆಯಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಪ್ರಧಾನಿ ನರೇಂದ್ರ …

Read More »

ನೀತಿಪಾಠ ಹೇಳುವ ಮೋದಿ, ಕೊರೊನಾ ಸಂದಿಗ್ಧತೆಯಲ್ಲೂ ಬಂಗಾಳದಲ್ಲಿ ಜನ ಕಂಡು ಖುಷಿಪಟ್ಟಿದ್ದೇಕೆ?

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕಾರಣಿಗಳು ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ನ್ಯಾಯಾಲಯ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿತು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಕೊರೊನಾ ಸೋಂಕಿನ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಉಪದೇಶ ನೀಡುವ ಪ್ರಧಾನಿ ನರೇಂದ್ರ ಮೋದಿಯವರೇ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಹೆಚ್ಚು …

Read More »

ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!

ಕುಂದಾಪುರ: ಈ ಪಂಚಾಯತ್‌ ಎರಡು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರ, ಇಬ್ಬರು ಸಂಸದರು, ಇಬ್ಬರು ಶಾಸಕರ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಊರು ಸರ್ವ ಸೌಲಭ್ಯಗಳನ್ನೂ ಹೊಂದಿರಬೇಕಿತ್ತು. ಆದರೆ ಇಲ್ಲಿನ ಜನರಿಗೆ ಏನಾದರೂ ಅನಾರೋಗ್ಯ ತಲೆದೋರಿದರೆ ತುರ್ತು ಚಿಕಿತ್ಸೆಗೆ 20-25 ಕಿ.ಮೀ. ದೂರ ಬರಬೇಕು; ಅದೂ ಸಣ್ಣ ಆಸ್ಪತ್ರೆಗೆ. ದೊಡ್ಡ ಆಸ್ಪತ್ರೆ ಆಗಬೇಕೆಂದರೆ 45 ಕಿ.ಮೀ. ದೂರ ಹೋಗಬೇಕು. ಇದು ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರ, ಕುಂದಾಪುರ, …

Read More »

ಖಾತೆದಾರರಿಗೆ ಕೆವೈಸಿ ಸಮಸ್ಯೆ : ಬ್ಯಾಂಕ್‌ಗಳಲ್ಲಿ ವಿವರ ಅಪ್‌ಡೇಟ್‌ಗೆ ತಾಕೀತು

ಹೊಸದಿಲ್ಲಿ/ಮುಂಬಯಿ: “ನಿಮ್ಮ ಗ್ರಾಹಕರನ್ನು ಅರಿಯಿರಿ’ (ಕೆವೈಸಿ) ವಿವರಗಳನ್ನು ಅಪ್‌ಡೇಟ್‌ ಮಾಡಲಾಗಿಲ್ಲ ಎಂಬ ಕಾರಣಕ್ಕೆ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಜತೆಗೆ ಹಿರಿಯ ನಾಗರಿಕರಿಗೆ ಸಿಗಬೇಕಾಗಿದ್ದ ಪಿಂಚಣಿ ಪಾವತಿ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರಿಗೆ ಇಂಥ ಅನುಭವವಾಗುತ್ತಿದೆ. ಕಳೆದ ವರ್ಷದ ಲಾಕ್‌ಡೌನ್‌ ಅವಧಿಯಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದ ವ್ಯಕ್ತಿಗೆ ತತ್‌ಕ್ಷಣವೇ ಕೆವೈಸಿ ವಿವರ ಅಪ್‌ಡೇಟ್‌ ಮಾಡಬೇಕು. …

Read More »

ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿಯಂತ್ರಣಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ 6 ದಿನ ಲಾಕ್ ಡೌನ್ ಘೋಷಿಸಿದೆ. ಸೋಮವಾರ ರಾತ್ರಿಯಿಂದಲೇ ದೆಹಲಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯಪ್ರಿಯರು ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿವೆ. ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಸೋಂಕು ತಡೆಗೆ ಲಾಕ್ಡೌನ್ ಜಾರಿಮಾಡಲಾಗಿದೆ. ಸಿಎಂ ಕೇಜ್ರಿವಾಲ್ ಅವರು, ಇದು ಸಣ್ಣ ಪ್ರಮಾಣದ ಲಾಕ್ ಡೌನ್ ಆಗಿದ್ದು, …

Read More »

ಮೋಯಿನ್ ಅಲಿ ಮೋಡಿ- ರಾಜಸ್ಥಾನ ವಿರುದ್ಧ ಚೆನ್ನೈಗೆ 45 ರನ್‍ಗಳ ಭರ್ಜರಿ ಜಯ

ಮುಂಬೈ: ಚೆನ್ನೈ ತಂಡದ ಸಿನ್ಪರ್ ಮೋಯಿನ್ ಅಲಿಯವರ ಮೋಡಿಗೆ ತಲೆ ಬಾಗಿದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ವಿರುದ್ಧ 45 ರನ್‍ಗಳ ಸೋಲು ಕಂಡಿದೆ. ಚೆನ್ನೈ ಪರ ಬಿಗುವಿನ ದಾಳಿ ಸಂಘಟಿಸಿದ ಮೋಯಿನ್ ಅಲಿ 3 ಓವರ್ ಎಸೆದು 7 ರನ್ ನೀಡಿ ಡೇವಿಡ್ ಮಿಲ್ಲರ್, ರಿಯಾನ್ ಪರಾಗ್ ಮತ್ತು ಕ್ರಿಸ್ ಮೋರಿಸ್ ಅವರ ಪ್ರಮುಖ 3 ವಿಕೆಟ್ ಪಡೆಯುವ ಮೂಲಕ ಚೆನ್ನೈ ಗೆಲುವಿನ ರೊವಾರಿಯಾದರು. ಚೆನ್ನೈ ನೀಡಿದ 189 …

Read More »