Breaking News

ರಾಷ್ಟ್ರೀಯ

ಕೇಂದ್ರ ಸರ್ಕಾರದಿಂದ ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ : 50 ಲಕ್ಷ ರೂ. ವಿಮೆ ಸೌಲಭ್ಯ ರದ್ದು!

ನವದೆಹಲಿ : ಕೇಂದ್ರ ಸರ್ಕಾರವು ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ಈ ಕುರಿತು ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣೆ ಪತ್ರ ಬರೆದಿದ್ದು, 2020 ರ ಮಾರ್ಚ್ 20 ರಂದು ಘೋಷಣೆಯಾಗಿದ್ದ ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ …

Read More »

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್

ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಬೆಟ್ಟಿಂಗ್ ಕೃತ್ಯದಲ್ಲಿ ತೊಡಗಿದ್ದ 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 92 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ಸಂಜೆ ಮುಂಬೈ ಇಂಡಿಯನ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಇಂಡಿ ಪಟ್ಟಣದಲ್ಲಿರುವ ರೋಹಿತ್ ಶಹಾ ಕಾಂಪ್ಲೆಕ್ ಮೇಲ್ಭಾಗದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. …

Read More »

ಖರೀದಿದಾರರಿಗೆ ಬಿಗ್ ಶಾಕ್: ಚಿನ್ನದ ದರ 3000 ರೂಪಾಯಿ ಏರಿಕೆ -ಇನ್ನಷ್ಟು ಜಿಗಿಯುವ ಸಾಧ್ಯತೆ

ಮುಂಬೈ: ಚಿನ್ನದ ದರ ಒಂದು ತಿಂಗಳಲ್ಲಿ 3000 ರೂಪಾಯಿ ಏರಿಕೆಯಾಗಿದೆ. ಚಿನ್ನದ ದರ ಏರಿಕೆಯಾಗಿದ್ದರೂ ಖರೀದಿಗೆ ಇದು ಸಕಾಲ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಅಮೆರಿಕದಲ್ಲಿ ಹಣದುಬ್ಬರ ಹೆಚ್ಚಿಸುವ ಸಾಧ್ಯತೆ ಇರುವುದರಿಂದ ಡಾಲರ್ ದುರ್ಬಲವಾಗಲಿದೆ. ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯಿಂದಾಗಿ ಚಿನ್ನದ ದರ ಏರಿಕೆಯಾಗಬಹುದು ಎಂದು ಹೇಳಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಚಿನ್ನದ ದರ 10 ಗ್ರಾಂಗೆ …

Read More »

ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೋರೋನಾ ಸೋಂಕು ದೃಢಪಟ್ಟಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಚಾರಕ್ಕೆ ಆಗಮಿಸಿದ್ದ …

Read More »

ಬೆಳಗಾವಿಗೆ ಕೊರೊನಾ ಆತಂಕ ಶುರು ಇಂದು ಬರಲಿದೆ 500 ಜನರ ವರದಿ

ಬೆಳಗಾವಿ: ಉಪಚುನಾವಣೆ ಮುಗಿದ ಬೆನ್ನಲ್ಲೇ ಗಡಿಜಿಲ್ಲೆ ಬೆಳಗಾವಿಗೆ ಕೊರೊನಾ ಆತಂಕ ಶುರುವಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರ ಕೋವಿಡ್ ಟೆಸ್ಟ್ ವರದಿ ಇಂದು ಬರಲಿದೆ. ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕೆಲ ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಬೆಳಗಾವಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿಎಂ ಸಂಪರ್ಕಕ್ಕೆ ಬಂದ 500 …

Read More »

ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟಾಗಿ ಪ್ರಚಾರ ಕಾರ್ಯ ನಡೆಸಿದ್ದೇವೆ. ಮತದಾರರು ಸಹ ಬಿಜೆಪಿ ಜನೋಪಯೋಗಿ …

Read More »

ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಶನಿವಾರ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.

ಪಾಟ್ನಾ, ಏಪ್ರಿಲ್ 17: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಶನಿವಾರ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ. ಇದೇ ಫೆಬ್ರವರಿಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಎರಡು ತಿಂಗಳ ನಂತರ ಹೊಸ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಶನಿವಾರ ಜಾಮೀನು ನೀಡಿದ್ದು, ಜೈಲಿನಿಂದ ಶೀಘ್ರವೇ ಅವರು ಹೊರ ಹೋಗಲಿರುವುದಾಗಿ ತಿಳಿದುಬಂದಿದೆ.   ಲಾಲೂ ಪ್ರಸಾದ್ ಅವರು …

Read More »

ಕೆಂಪುಕೋಟೆ ಮೇಲೆ ಬಾವುಟ ಪ್ರಕರಣ- ನಟ ದೀಪ್ ಸಿಧುಗೆ ಜಾಮೀನು

ನವದೆಹಲಿ: ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳ ಟ್ರಾಕ್ಟರ್ ರ‍್ಯಾಲಿಯಲ್ಲಿ ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದ್ದ ನಟ ದೀಪ್ ಸಿಧುಗೆ ದೆಹಲಿ ಕೋರ್ಟ್ ಜಾಮೀನು ನೀಡಿದೆ. ಜನವರಿ 26 ರ ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ದೀಪ್ ಸಿಧುಗೆ ಜಾಮೀನು ನೀಡಿದೆ. ಕಳೆದ ವಿಚಾರಣೆಯ ವೇಳೆ, ಜನವರಿ 26 ರಂದು ಕೆಂಪು ಕೋಟೆಗೆ ಹೋಗುವಂತೆ ಆಂದೋಲನ ನಡೆಸುತ್ತಿರುವ ರೈತರಿಗೆ ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ಮನವಿ …

Read More »

ತಮಿಳು ಚಿತ್ರರಂಗದ​ ಹಿರಿಯ ಹಾಸ್ಯ ಕಲಾವಿದ ವಿವೇಕ್​ ವಿಧಿವಶ

ಚೆನ್ನೈ: ನಿನ್ನೆ (ಏಪ್ರಿಲ್​ 16) ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ (ಏಪ್ರಿಲ್​ 17) ವಿಧಿವಶರಾಗಿದ್ದಾರೆ.​ ಎಡ ಮುಂಭಾಗದ ಅಪಧಮನಿ ನಾಳವು ಶೇ 100 ರಷ್ಟು ಬ್ಲಾಕ್​ ಆಗಿದ್ದು, ತೀವ್ರತರವಾದ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿವೇಕ್ ಅವರ ಹೃದಯಾಘಾತಕ್ಕೆ ಗುರುವಾರ ತೆಗೆದುಕೊಂಡ ಕೋವಿಡ್​ ಲಸಿಕೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ …

Read More »

ರೈಲು ಇಳಿಯುತ್ತಿದ್ದಂತೆ ನಿಲ್ದಾಣದಿಂದ ಎದ್ನೋ ಬಿದ್ನೋ ಎಂದು ಓಡಿದ ಜನರು: ಕಾರಣ ಕೇಳಿದ್ರೆ ದಂಗಾಗ್ತೀರಾ!

ಪಟನಾ: ಎಲ್ಲಿ ನಮ್ಮನೆಲ್ಲ ಹಿಡಿದು ಕರೊನಾ ವೈರಸ್​ ಟೆಸ್ಟ್​ ಮಾಡಿಸುತ್ತಾರೋ ಎಂಬ ಭಯದಲ್ಲಿ ಮಕ್ಕಳು, ಯುವಕರು ಸೇರಿದಂತೆ ಅನೇಕರು ರೈಲು ನಿಲ್ದಾಣದಲ್ಲಿ ಯರ್ರಾಬಿರ್ರಿ ಓಡಿದ ಘಟನೆ ಬಿಹಾರದ ಬುಕ್ಸರ್​ನಲ್ಲಿ ಗುರುವಾರ ನಡೆದಿದೆ.​ ರೈಲು ಇಳಿದು ನಿಲ್ದಾಣದಿಂದ ಹೊರ ಹೋಗುವ ಮುಂಚೆ ಕರೊನಾ ಟೆಸ್ಟ್​ ಮಾಡಿಸಲು ಅಲ್ಲಿನ ಆರೋಗ್ಯ ಕಾರ್ಯಕರ್ತರು ಕೇಳಿದಾಗ, ಟೆಸ್ಟ್​ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ಜನರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರೈಲು …

Read More »