ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.
Read More »ಇಂತಹ ಕೆಟ್ಟ ಸರ್ಕಾರವನ್ನ ಹಿಂದೆಯೂ ನೋಡಿರಲಿಲ್ಲ.. ಮುಂದೆಯೂ ಬರುವುದಿಲ್ಲ: ಹೆಚ್.ಡಿ ಕುಮಾರಸ್ವಾಮಿ
ಬೀದರ್: ಕರ್ನಾಟಕದಲ್ಲಿ ಇಂತಹ ಕೆಟ್ಟ ಸರಕಾರ ನೋಡಿರಲಿಲ್ಲ. ಹಿಂದೆಯೂ ಇಂತಹ ಸರ್ಕಾರ ಬಂದಿರಲಿಲ್ಲ.. ಮುಂದೆಯೂ ಬರುವುದಿಲ್ಲ.. ಕೊರೊನಾದಿಂದ ಜನರನ್ನ ದೇವರೇ ಕಾಪಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಮಾತನಾಡಿದ ಮಾಜಿ ಸಿಎಂ ‘ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಗಮನಿಸಿದೆ. 18ರ ನಂತ್ರ ಸರ್ವಪಕ್ಷ ಸಭೆ ಕರೆದು ಸಲಹೆ ಪಡೆಯುವುದಾಗಿ ಕೇಳ್ತಾರಂತೆ. ಯಾವ ಪುರುಷಾರ್ಥಕ್ಕಾಗಿ ಸಭೆ ಕರೆಯುತ್ತಾರೆ.. ಸಲಹೆ ಪಡೆಯುತ್ತಾರೆ? ಎಂದು ಪ್ರಶ್ನಿಸಿದರು. ಇನ್ನು ಈಗಾಗಲೇ …
Read More »ನೌಕರರ ಮುಷ್ಕರದ ಎಫೆಕ್ಟ್: ಸಾರಿಗೆ ನಿಗಮಗಳಿಗೆ ʼ₹152 ಕೋಟಿ ಲಾಸ್ʼ..!
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದ ಸಾರಿಗೆ ನೌಕರರು ಕಳೆದ 8 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಆದ್ರೆ, ಈ ಮುಷ್ಕರದಿಂದ ನಾಲ್ಕೂ ನಿಗಮಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಹೌದು, ಈ ಮುಷ್ಕರದಿಂದ ಸಾರಿಗೆ ಇಲಾಖೆಯ 4 ವಿಭಾಗಗಳಿಗೂ ಕೋಟಿಗಟ್ಟಲೇ ನಷ್ಟವಾಗಿದೆ. ಅದ್ರಂತೆ, ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 70 ಕೋಟಿ ರೂಪಾಯಿ ನಷ್ಟವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ- 20 ಕೋಟಿ ರೂಪಾಯಿ ನಷ್ಟವಾಗಿದೆ. ಇನ್ನು ವಾಯುವ್ಯ …
Read More »ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದರೂ ಸರಿ 6ನೇ ವೇತನ ಆಯೋಗ ಜಾರಿ ಅಸಾಧ್ಯ:B.S.Y.
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ಸಿಬ್ಬಂದಿಗಳು ಹಾಗೂ ಸರ್ಕಾರದ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಮುಷ್ಕರ ನಿರತ ಸಿಬ್ಬಂದಿಗಳ ವಿರುದ್ಧ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರೊಂದಿಗೆ ಮಾತುಕತೆಯ ಪ್ರಶ್ನೆಯೇ ಇಲ್ಲ, ಮುಷ್ಕರ ನಿರತ ಸಿಬ್ಬಂದಿಗಳ ಸಂಬಳ ನೀಡಲೂ ಸಾಧ್ಯವಿಲ್ಲ. ಒಂದು ತಿಂಗಳ ಕಾಲ ಪ್ರತಿಭಟನೆ …
Read More »3 ವರ್ಷದ ಬಾಲಕನಿಗೆ ತಂಪು ಪಾನೀಯದ ಜತೆ ಮದ್ಯ ಬೆರೆಸಿ ಕುಡಿಸಿದ್ರು; 2 ಗಂಟೆ ಕಾಲ ಪ್ರಜ್ಞಾಹೀನನಾದ.
ಮಧುಗಿರಿ: ಮೂರು ವರ್ಷದ ಬಾಲಕನಿಗೆ ಕಿಡಿಗೇಡಿಗಳು ತಂಪು ಪಾನೀಯದಲ್ಲಿ ಮದ್ಯವನ್ನು ಬೆರೆಸಿ ಕುಡಿಸಿ ವಿಕೃತಿ ಮೆರೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಏ. 10ರಂದು ಸಂಜೆ 6 ಗಂಟೆ ಸಮಯದಲ್ಲಿ ಗ್ರಾಮದ ಗುರುಸ್ವಾಮಿ ಎಂಬುವವರ ಮಗನಿಗೆ ಕಿಡಿಗೇಡಿಗಳು ತಂಪು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿದ್ದಾರೆ. ತಂಪು ಪಾನೀಯ ಎಂದು ಭಾವಿಸಿ ಮದ್ಯ ಕುಡಿದ ಬಾಲಕ ಸುಮಾರು …
Read More »ಫ್ಲಿಪ್ ಕಾರ್ಟ್ ಹಾಗೂ ಅದಾನಿ ಗ್ರೂಪ್ ಒಪ್ಪಂದ : ಉಭಯ ಸಂಸ್ಥೆಗಳ ಮುಂದಿನ ಯೋಜನೆ ಏನು..?
ನವ ದೆಹಲಿ : ವಾಲ್ ಮಾರ್ಟ್ ಒಡೆತನದ ಫ್ಲಿಪ್ ಕಾರ್ಟ್ ಸಂಸ್ಥೆ ಅದಾನಿ ಗ್ರೂಪ್ ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಲಾಜಿಸ್ಟಿಕ್ ಮತ್ತು ಡಾಟಾ ಸೆಂಟರ್ ಗಳ ಸಾಮರ್ಥ್ಯಗಳನ್ನು ಹೆಚ್ಚಿಸಲು ಹಾಗೂ 2,500ಕ್ಕೂ ಹೆಚ್ಚು ಹೊಸ ಉದ್ಯೋಗಗಳನ್ನು ಸೃಷ್ಟಿಸುವ ದೃಷ್ಟಿಯಲ್ಲಿ ಉಭಯ ಸಂಸ್ಥೆಗಳು ಒಪ್ಪಂದಕ್ಕೆ ಮುಂದಾಗಿವೆ ಎಂದು ವರದಿಯಾಗಿದೆ. ಈ ಪಾಲುದಾರಿಕೆಯ ಭಾಗವಾಗಿ, ಅದಾನಿ ಲಾಜಿಸ್ಟಿಕ್ಸ್ ಮುಂಬಯಿಯಲ್ಲಿರುವ ತನ್ನ ಮುಂಬರುವ ಲಾಜಿಸ್ಟಿಕ್ಸ್ 5,34,000 ಚದರ ಅಡಿ ಪೂರೈಸುವ ಕೇಂದ್ರವನ್ನು ನಿರ್ಮಿಸಲಿದ್ದು, ಪಶ್ಚಿಮ …
Read More »ಅಕ್ರಮವಾಗಿ ಆಧಾರ್ ಕಾರ್ಡ್ ತಯಾರಿಸಿದ್ದ ಮೂವರ ಬಂಧನ
ಡಿಸ್ಪೂರ್: ಅಕ್ರಮವಾಗಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ನಡೆದಿದೆ. ಆರೋಪಿಗಳನ್ನು ಡಿಪೆನ್ ಡೋಲಿ(29), ಬಿಟುಪನ್ ಡಿಯೋರಿ(27) ಮತ್ತು ಐಬಿ ಡಿಯೋರಿ(30) ಎಂದು ಗುರುತಿಸಲಾಗಿದೆ. ಈ ಮೂವರು ದಿಬ್ರುಗಢದಿಂದ 120ಕಿ.ಮೀ ದೂರದಲ್ಲಿರುವ ಲಖಿಂಪುರದವರು. ಆರೋಪಿಗಳು ಒಂದು ಆಧಾರ್ ಕಾರ್ಡ್ ತಯಾರಿಸಲು ತಲಾ 300 ರೂ. ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಅವರ ಬಳಿ ಇದ್ದ …
Read More »ಸಾರಿಗೆ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಆಕ್ರೋಶ
ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಕಳೆದ ಆರು ದಿನಗಳಿಂದ ಸಾರಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾರಿಗೆ ಸಿಬ್ಬಂದಿ ಕುಟುಂಬ ಸಮೇತರಾಗಿ ರಸ್ತೆಗಿಳಿದು ತಟ್ಟೆ ಹಾಗೂ ಲೋಟ ಬಡಿಯುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕೆಎಸ್ಆರ್ಟಿಸಿ ಸಾರಿಗೆ ನೌಕರರು ಕುಟುಂಬ ಸಮೇತ ಬಂದು ರಸ್ತೆ ಮಧ್ಯೆ ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ …
Read More »ಪಶ್ಚಿಮ ಬಂಗಾಳದ ಜನರು ಹೇಳಿದರೆ ರಾಜಿನಾಮೆ ನೀಡಲು ಸಿದ್ದ: ಅಮಿತ್ ಷಾ
ಕೊಲ್ಕತ್ತಾ:ಪಶ್ಚಿಮ ಬಂಗಾಳದ ಜನರು ಹಾಗೆ ಕೇಳಿದರೆ ಮಾತ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಆದಾಗ್ಯೂ, ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲುವುದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇ 2 ರಂದು ತ್ಯಜಿಸಬೇಕಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ಅಮಿತ್ ಷಾ ಪ್ರತಿಪಾದಿಸಿದರು. ಕೂಚ್ ಬೆಹಾರ್ ಜಿಲ್ಲೆಯ ಸಿಟಾಲ್ಕುಚಿಯಲ್ಲಿ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ …
Read More »ಮೋದಿ ಗಡ್ಡಬಿಟ್ಟರೆ ಟ್ಯಾಗೋರ್ ಆಗೋದಿಲ್ಲ: ಖರ್ಗೆ
ಮಸ್ಕಿ (ರಾಯಚೂರು): ‘ಪ್ರಧಾನಿ ನರೇಂದ್ರ ಮೋದಿ ಗಡ್ಡಬಿಟ್ಟರೆ ರವೀಂದ್ರನಾಥ ಟ್ಯಾಗೋರ್ ಆಗೋದಿಲ್ಲ. ಪಶ್ಚಿಮ ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಡಿರುವ ನಕಲು ಇದಾಗಿದೆ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮಸ್ಕಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಪರ ಬಹಿರಂಗ ಸಭೆಯಲ್ಲಿ ಮಾತನಾಡಿದರು. ‘ಪಶ್ಚಿಮ ಬಂಗಾಳಕ್ಕೆ ಹೋಗಿದ್ದ ಪ್ರಧಾನಿ ಪಕ್ಷದ ನೀತಿಗಳನ್ನು ಹೇಳುವ ಬದಲಾಗಿ, ಮಮತಾ ಬ್ಯಾನರ್ಜಿ ಅವರನ್ನು ವ್ಯಂಗ್ಯ ಮಾಡಿದ್ದಾರೆ. ಪ್ರಧಾನಿ ಜೋಕರ್ ರೀತಿ ವರ್ತನೆ ತೋರಿಸಿದ್ದಾರೆ’ …
Read More »
Laxmi News 24×7