Breaking News

ರಾಷ್ಟ್ರೀಯ

ಸಿಎಂ BSY ವಿರುದ್ಧ ಸಚಿವ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಕ್ರಮ: ಅಮಿತ್ ಶಾ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪವಾದಾಗ ಪ್ರತಿಕ್ರಿಯೆ ನೀಡಿದ ಅಮಿತ್ ಶಾ, ಈಶ್ವರಪ್ಪ ಬರೆದ ಪತ್ರದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಮನಹರಿಸಲಿದ್ದಾರೆ. ಚುನಾವಣೆ ಮುಗಿದ ನಂತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ. ಇದು ಪಕ್ಷದ …

Read More »

ಮೃತದೇಹಗಳಿಂದ ತುಂಬಿ ತುಳುಕುತ್ತಿವೆ ಶವಾಗಾರ, ಚಿತಾಗಾರ!

ದುರ್ಗ್ (ಛತ್ತೀಸಗಡ), ಏಪ್ರಿಲ್ 3: ಕೊರೊನಾ ವೈರಸ್ ಎರಡನೆಯ ಅಲೆಯು ದೇಶಾದ್ಯಂತ ಜನರನ್ನು ಮತ್ತೆ ಸಂಕಷ್ಟಕ್ಕೆ ನೂಕಿದೆ. ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಏರಿಕೆಯಾಗುತ್ತಿರುವುದು ಆರೋಗ್ಯ ಕ್ಷೇತ್ರಕ್ಕೆ ಮತ್ತಷ್ಟು ಸವಾಲುಗಳನ್ನು ಉಂಟುಮಾಡಿದೆ. ಛತ್ತೀಸಗಡ ದುರ್ಗ್ ಎಂಬ ಪುಟ್ಟ ಪಟ್ಟಣದಲ್ಲಿ ಉಂಟಾಗಿರುವ ಬಿಕ್ಕಟ್ಟು ಕಂಗೆಡಿಸುವಂತಿದೆ. ದುರ್ಗ್ ಜಿಲ್ಲೆಯು ಛತ್ತೀಸಗಡದಲ್ಲಿ ಕೋವಿಡ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದ ಪ್ರದೇಶ. ಇಲ್ಲಿ ಎರಡನೆಯ ಅಲೆಯ ಹೊಡೆತ ದೊಡ್ಡ ವಿಪತ್ತುಗಳನ್ನು ತಂದೊಡ್ಡಿದೆ. ಕಳೆದ ಏಳು ದಿನಗಳಲ್ಲಿ ಕೋವಿಡ್‌ನಿಂದ …

Read More »

ದೂರದೃಷ್ಟಿ ಹಾಗೂ ಅಭಿವೃದ್ದಿ ಯೋಜನೆಗಳು ನಮ್ಮ ತಂದೆ ಗೆಲುವಿಗೆ ಸಹಕಾರಿಯಾಗಲಿದೆ- ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ

  ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ..     ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ …

Read More »

ಚುನಾವಣಾ ಪ್ರಚಾರಕ್ಕೆ ಇರದ ನಿಯಮ ಚಿತ್ರೋದ್ಯಮಕ್ಕೆ ಯಾಕೆ? ಸರ್ಕಾರ ನಿರ್ಧಾರಕ್ಕೆ ಸ್ಯಾಂಡಲ್ ವುಡ್ ಗರಂ

ದೇಶದಲ್ಲಿ ಪಂಚ ರಾಜ್ಯಗಳ ಚುನಾವಣೆ ಪ್ರಚಾರದ ಕಾರ್ಯ ಜೋರಾಗಿದೆ. ಲಕ್ಷಾಂತರ ಜನ ಪ್ರಚಾರದಲ್ಲಿ ತೋಡಗಿದ್ದಾರೆ. ಗುಂಪು ಗುಂಪಾಗಿ ತಿರುಗಾಡುತ್ತಿದ್ದಾರೆ. ಇವರಿಗೆ ಬರದ ಕೊರೊನಾ ಬಸ್ ನಲ್ಲಿ ಪ್ರಯಾಣಿಸುವವರಿಗೆ, ಚಿತ್ರ ಮಂದಿರದಲ್ಲಿ ಸಿನಿಮಾ ನೋಡುವವರಿಗೆ ಜೀಮ್ ನಲ್ಲಿ ವರ್ಕ್ ಔಟ್ ಮಾಡುವವರಿಗೆ ವಕ್ಕರಿಸಿಕೊಳ್ಳುವುದಾ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ವ್ಯಾಕ್ಸಿನ್ ಹೆಸರಿನಲ್ಲಿ ನಡೆದ ಗೊಲ್ ಮಾಲ್ ಮರೆಮಾಚಲು ಈ ರೀತಿ ಜನ ಸಾಮಾನ್ಯರ ಧಿಕ್ಕು ತಪ್ಪಿಸುವ ಕುತಂತ್ರ …

Read More »

ಸಿಎಂ ಬದಲಾವಣೆಯಾಗಲೇಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೇ ಹೇಳಿದ್ದರು: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಗ್ಗೆ ನನ್ನ ಬಳಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರೇ ಹೇಳಿದ್ದರು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಬದಲಾವಣೆಯಾಗಲೇಬೇಕು. ಬಿ‌ ಎಸ್ ವೈ ಸಿಎಂ ಆಗಿ ಮುಂದುವರಿದರೆ ಬಿಜೆಪಿಗೆ ಭವಿಷ್ಯ ಇಲ್ಲ. ಹಾಗಾಗಿ ಸಿಎಂ ಬದಲಾವಣೆಯಾಗಬೇಕು ಎಂದು ವಿಧಾನಸೌಧದಲ್ಲಿ ರವಿಕುಮಾರ್ ಭೇಟಿಯಾದ ವೇಳೆ ಹೇಳಿದ್ದರು. ನಾನು ಸಿಎಂ …

Read More »

ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಮಲಗು ಬಾ ಎಂದ ಎಸಿಪಿ! ಕಾಮುಕ ಪೊಲೀಸ್​ ವಜಾ

ಜೈಪುರ: ಅತ್ಯಾಚಾರಕ್ಕೊಳಗಾದ ಯುವತಿ ತನ್ನ ಮೇಲೆ ಆಗಿರುವ ಅನ್ಯಾಯದ ವಿರುದ್ಧ ದೂರು ದಾಖಲು ಮಾಡಲು ಬಂದರೆ, ಪೊಲೀಸ್​ ಅಧಿಕಾರಿ ದೂರು ದಾಖಲು ಮಾಡಬೇಕಿದ್ದರೆ ನನ್ನ ಜತೆ ಮಲಗು ಎಂದು ಹೇಳಿರುವ ಭಯಾನಕ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಕಾಮುಕ ಎಸಿಪಿಯ ಹೆಸರು ಕೈಲಾಶ್​ ಬೊಹರಾ. ಮಹಿಳಾ ದೌರ್ಜನ್ಯ ವಿರುದ್ದದ ವಿಶೇಷ ತಂಡದ ಎಸಿಪಿಯಾಗಿದ್ದ ಬೋಹರಾ ಇಂಥದ್ದೊಂದು ನೀಚ ಕೃತ್ಯ ಎಸಗಿದ್ದು, ಈತನ ವಿರುದ್ಧ ಸಂತ್ರಸ್ತೆ ಉನ್ನತ ಅಧಿಕಾರಿಗಳಲ್ಲಿ ದೂರು ದಾಖಲು …

Read More »

ಡಿ.ಕೆ.ಶಿವಕುಮಾರ್ ಕೇಳಿ ಭಾರತೀಯ ಜನತಾ ಪಕ್ಷ ಆಡಳಿತ ಮಾಡಲ್ಲ: ಗೋವಿಂದ ಕಾರಜೋಳ

ಬೆಳಗಾವಿ: ಡಿ.ಕೆ.ಶಿವಕುಮಾರ್ ಕೇಳಿ ಭಾರತೀಯ ಜನತಾ ಪಕ್ಷ ಆಡಳಿತ ಮಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರರ್​ಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಇಂದು ಡಿಸಿಎಂ ಗೋವಿಂದ ಕಾರಜೋಳ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಬಿಜೆಪಿ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ ನಡೆಯುತ್ತಿದ್ದು, ಸಭೆಗೂ ಮುನ್ನ ಮಾತನಾಡಿದರು. ಸಿಎಂ ಬಿಎಸ್​ವೈಗೆ ತಮ್ಮ ಆಡಳಿತ ಸರಿ ಅನಿಸಿದ್ರೆ ಈಶ್ವರಪ್ಪರನ್ನು ಡಿಸ್ಮಿಸ್ ಮಾಡಲಿ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!

ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು     ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …

Read More »

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ …

Read More »

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »