Breaking News

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ : ಮರು ಮತದಾನಕ್ಕೆ ಆಯೋಗ ತೀರ್ಮಾನ

ಕರೀಂಗಂಜ್, ಏ.2- ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಯಂತ್ರ ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಸ್ಸಾಂನ ರತಬರಿ ವಿಧಾನಸಭಾ ಕ್ಷೇತ್ರದ ಒಂದು ಮತಕೇಂದ್ರಕ್ಕೆ ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.ಇಂದಿರಾ ಎಂ.ವಿ.ಶಾಲೆಯ ಮತ ಕೇಂದ್ರದಲ್ಲಿ ನಡೆದ ಮತದಾನದ ಇವಿಎಂ ಯಂತ್ರಗಳನ್ನು ಬಿಜೆಪಿ ಮುಖಂಡನ ಕಾರಿನಲ್ಲಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಿ ಕೆಲವರು ಆರೋಪಿಸಿ ದಾಂಧಲೆ ನಡೆಸಿದ್ದರು. ಪರಿಸ್ಥಿತಿ …

Read More »

ಬಿಸಿ ಪಾಟೀಲ್‍ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು

ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲ್ಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಟಿಎಚ್‍ಒ ಡಾ.ಝಡ್.ಆರ್.ಮಕಾಂದಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 2 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮನೆಯಲ್ಲಿಯೇ ದಂಪತಿಗೆ ವಾಕ್ಸಿನ್ ನೀಡಿದ್ದು ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿಯೇ ಲಸಿಕೆ ನೀಡಿದ್ದಕ್ಕೆ ಹಾವೇರಿಯ ಡಿಎಚ್‍ಓ ಕಾರಣ ಕೇಳಿ ನೋಟಿಸ್ ನೀಡಿದ್ದರು. …

Read More »

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಅವರನ್ನು ಸ್ಮರಿಸಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯ ಮುಖೇನ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, …

Read More »

ಜೈನ ಸಂತರಿಗೂ ಉಚಿತ ಕೋವಿಡ್‌ ಲಸಿಕೆ?

ದಾವಣಗೆರೆ: ಲೋಕ ಸಂಚಾರ ಮಾಡುತ್ತಿರುವ ಜೈನ ಸಾಧು- ಸಾಧ್ವಿಯರಿಗೆ ಯಾವುದೇ ದಾಖಲೆ ಕಡ್ಡಾಯಗೊಳಿಸದೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಲು ಅನುಮತಿ ಕೋರಿ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಲೋಕ ವಿಹಾರಿಗಳಾದ ಜೈನ ಸಾಧು-ಸಾಧ್ವಿಯರಿಗೆ ಕೋವಿಡ್ ಲಸಿಕೆ ನೀಡುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ನಿರ್ದೇಶಕ ಗೌತಮ್‌ ಜೈನ್‌ ಅವರು ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಅವರಿಗೆ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ …

Read More »

ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು

ಗೋಕಾಕ ಬ್ರೇಕಿಂಗ್ ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ ಚಾಲಕ‌ನನ್ನು ವಶಕ್ಕೆ ಪಡೆದ ಪೋಲಿಸರು. ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ

Read More »

96 ದಿನ ಜೈಲಿಗೆ ಹೋಗಿ ಬಂದಿದ್ದರಂತೆ ವೈಲ್ಡ್​ ಕಾರ್ಡ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ! ಕಾರಣ?

ಬಿಗ್​ ಬಾಸ್​ ಐದನೇ ವಾರದಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಪ್ರಶಾಂತ್​ ಸಂಬರಗಿ ಆಪ್ತ ಚಕ್ರವರ್ತಿ ಚಂದ್ರಚೂಡ ಅನ್ನೋದು ವಿಶೇಷ. ಬಂದ ದಿನವೇ ಮನೆಯಲ್ಲಿ ತುಂಬಾನೇ ವಿಚಿತ್ರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ತುಂಬಾನೇ ಚರ್ಚೆಗೂ ಕಾರಣವಾಗಿದ್ದಾರೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಚಕ್ರವರ್ತಿ ಚಂದ್ರಚೂಡ ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ. ಕವಿತೆ ಬರೆಯುವುದರ ಜತೆಗೆ ಸಾಮಾಜಿಕ …

Read More »

ಕಸದ ಗಾಡಿಯಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ ಪರಿಣಿತಿ! ಫೋಟೊ ವೈರಲ್

ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ತನ್ನ ನಟನೆಯಷ್ಟೇ, ತನ್ನ ಮಾದಕ ಮೈಮಾಟದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರತಿಭೆ. ಇತ್ತೀಚೆಗಷ್ಟೇ ಈ ನಟಿಯ ಸೈನಾ ಸಿನಿಮಾ ತೆರೆ ಕಂಡು ಉತ್ತಮ ಪ್ರತಿಕ್ರಿಯೆ ಕಂಡಿದೆ. ಈಗ ಪರಿಣಿತಿ ಮತ್ತೆ ಸುದ್ದಿಯಲ್ಲಿದ್ದಾರೆ. ವಿಭಿನ್ನವಾಗಿ ಫೋಟೋ ಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಖ್ಯಾತ ಫೋಟೊಗ್ರಾಪರ್ ಡಬ್ಬು ರತ್ನಾನಿ ಕೈಚಳಕದಲ್ಲಿ ಸೆರೆಯಾಗಿರುವ ಪರಿಣಿತಿಯ ಹೊಸ ಫೋಟೊ ಪಡ್ಡೆ ಹುಡುಗರ ಮೈ ಬಿಸಿ ಏರಿಸಿದೆ. ಕಸದ ಗಾಡಿಯೊಂದಲ್ಲಿ …

Read More »

ವಿವಿಧೆಡೆ ಯುವತಿ ಜತೆಗೆ ಸ್ಥಳ ಮಹಜರು

ಬೆಂಗಳೂರು: ಸಿ.ಡಿ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಯುವತಿಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದೆ. ಜತೆಗೆ ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌ ನೀಡಲಿದೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗೆ ತಮ್ಮ ಪರ ವಕೀಲರ ಜತೆ ಆಗಮಿಸಿದ ಸಂತ್ರಸ್ತೆಯನ್ನು ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆರ್‌.ಟಿ.ನಗರದ ಗಂಗಾನಗರದಲ್ಲಿರುವ ಪಿ.ಜಿ.ಗೆ ಕರೆದೊಯ್ದು 11 ಗಂಟೆಯಿಂದ ಮಧ್ಯಾಹ್ನ …

Read More »

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

Read More »

ಸಿಡಿ ಪ್ರಕರಣಕ್ಕೆ ಇದೊಂದು ಹೆಸರಿನಿಂದಲೇ ಹೆಚ್ಚು ಮಾರ್ಕೆಟಿಂಗ್”!

ಬೆಂಗಳೂರು, ಏಪ್ರಿಲ್ 1: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ನನ್ನ ಹೆಸರು ಹೇಳಿದರಷ್ಟೇ ಮಾರ್ಕೆಟಿಂಗ್ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅವರಿಗೆ ನನ್ನ ಹೆಸರು ಬಳಸಿಕೊಳ್ಳದೇ ಮಾರುಕಟ್ಟೆಯೇ ಸಿಗುವುದಿಲ್ಲ ಎಂದರು. ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ರೀತಿ ಸಂಬಂಧವಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದಲ್ಲಿ ನನ್ನ …

Read More »