Breaking News

ರಾಷ್ಟ್ರೀಯ

ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ರೆ 16 ರಾಜ್ಯಗಳ ವಿದ್ಯುತ್ ಸಂಪರ್ಕ ಕಟ್- ರಾಕೇಶ್ ಟಿಕಾಯತ್

ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ 16 ರಾಜ್ಯಗಳ ವಿದ್ಯುತ್ ಸಂಪರ್ಕವನ್ನೇ ಕಟ್ ಮಾಡ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ರಾಜಸ್ಥಾನದಲ್ಲಿ ನಡೆಯುತ್ತಿದ್ದ ಮಹಾಪಂಚಾಯತ್​​ನಲ್ಲಿ ಪಾಲ್ಗೊಳ್ಳಲು ತೆರಳುವ ವೇಳೆ ರಾಕೇಶ್ ಟಿಕಾಯತ್ ಈ ಹೇಳಿಕೆ ನೀಡಿದ್ದಾರೆ. ಮುಂದುವರೆದು ಕೇಂದ್ರದಲ್ಲಿ ಸರ್ಕಾರವೇ ಇಲ್ಲ. ವ್ಯಾಪಾರಿಗಳು ದೇಶವನ್ನ ಆಳುತ್ತಿದ್ದಾರೆ. ಅವರು ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡಿದ್ದಾರೆ. ದೇಶದ ಜನರು ಅವರನ್ನ ಸರ್ಕಾರದಿಂದ …

Read More »

ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ, ಅಚ್ಛೇ ದಿನ್‌ ಬರುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ. ಅಚ್ಛೇ ದಿನ್‌ ಯಾವತ್ತೂ ಬರುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡಿನ ಥಳಿ, ಹೊಸೂರು ಹಾಗೂ ವೇಪನಪಲ್ಲಿ ವಿಧಾನಸಭೆ ಕ್ಷೇತ್ರಗಳಲ್ಲಿ ಶನಿವಾರ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನ ಜನತೆ ಈವರೆಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅವರಿಗೆ ನಮೋ ನಮಃ ಎಂದು ತಿಳಿಸಿದರು. ಎಐಎಡಿಎಂಕೆ ಹೆಗಲ ಮೇಲೆ ಕುಳಿತು ಬಿಜೆಪಿ ತಮಿಳುನಾಡಿನಲ್ಲಿ …

Read More »

ಉಪ ಚುನಾವಣೆ ಕಣ : ಕೈ, ಕಮಲಕ್ಕೆ ಅಗ್ನಿಪರೀಕ್ಷೆ, ತೆನೆಗೆ ಅಸ್ತಿತ್ವದ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ಕಣ ಸಜ್ಜಾಗಿದೆ. ಕಾಂಗ್ರೆಸ್‌ ಮತ್ತು ಬಿಜೆಪಿಗೆ ಇದು ಮತ್ತೂಂದು ಅಗ್ನಿಪರೀಕ್ಷೆಯಾದರೆ ಜೆಡಿಎಸ್‌ಗೆ ಅಸ್ತಿತ್ವ ಸಾಬೀತುಪಡಿಸುವ ಸವಾಲಿನ ಪ್ರಶ್ನೆಯಾಗಿದೆ. ಉಪ ಚುನಾವಣೆ ಫ‌ಲಿತಾಂಶದಿಂದ ದೊಡ್ಡ ಮಟ್ಟದ ರಾಜಕೀಯ ಬದಲಾವಣೆ ಆಗದು. ಆದರೆ ಸಿ.ಡಿ. ಪ್ರಕರಣ ಎಬ್ಬಿಸಿರುವ ರಾಡಿಯ ಹಿನ್ನೆಲೆಯಲ್ಲಿ ಜನರ ನಾಡಿ ಮಿಡಿತ ತಿಳಿಯಲಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಉಪ ಚುನಾವಣೆ ಪ್ರತಿಷ್ಠೆ. …

Read More »

ಪುದುಚೇರಿಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಏನೇನು ಭರವಸೆ?

ಪುದುಚೇರಿ: ಪುದುಚೇರಿ ವಿಧಾನಸಭೆಗೆ ಬಿಜೆಪಿಯ ಪ್ರಣಾಳಿಕೆ, ‘ಬೆಸ್ಟ್‌ (BEST) ಪುದುಚೇರಿ’ ಅನ್ನು ಶುಕ್ರವಾರ ಇಲ್ಲಿ ಬಿಡುಗಡೆ ಮಾಡಲಾಯಿತು. ಕೆ.ಜಿ. ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ, ಜವಳಿ ಉದ್ದಿಮೆಗಳನ್ನು ಪುನರಾರಂಭಿಸುವುದು, ಜವಳಿ ಪಾರ್ಕ್‌ ಆರಂಭ ಸೇರಿದಂತೆ ಅನೇಕ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಪುದುಚೇರಿಯನ್ನು ವ್ಯಾಪಾರ (B), ಶಿಕ್ಷಣ (E), ಅಧ್ಯಾತ್ಮ (S) ಹಾಗೂ ಪ್ರವಾಸೋದ್ಯಮ (T) ಕೇಂದ್ರವಾಗಿಸುವ ಭರವಸೆಯನ್ನು ನೀಡಲಾಗಿದೆ. …

Read More »

ಸಿಡಿ ಲೇಡಿಯ ಆಡಿಯೋ ವೈರಲ್: ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಇಂದು ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಮೇಶ್ ಜಾರಕಿಹೊಳಿ, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಇದೆ. ಸಂಜೆ 4-6 ರೊಳಗೆ ಬಿಡುಗಡೆಯಾಗಲಿದೆ …

Read More »

ಪ್ರಿಯತಮೆಗೆ ಪ್ರೇಮ ನಿವೇದನೆ ಮಾಡಲು 2.5 ಕಿ.ಮೀ ರಸ್ತೆ ಪೂರ್ತಿ ‘I Love You, I Miss You’ ಎಂದು ಬರೆದ ಪಾಗಲ್ ಪ್ರೇಮಿ

ಕೊಲ್ಹಾಪುರ: ಸಣ್ಣ ಪುಟ್ಟ ವಿಚಾರಗಳಿಂದ ಸಂಗಾತಿಯನ್ನು ಸೆಳೆಯುವುದು ಅಥವಾ ಪ್ರೀತಿಯನ್ನು ವಿಶೇಷವಾಗಿ ಹೇಳುವ ಮೂಲಕ ಸಂಗಾತಿಯ ಮುಖದಲ್ಲಿ ಮಂದಹಾಸವನ್ನು ತರಿಸಲು ಪರದಾಡುವ ಪ್ರೇಮಿಗಳನ್ನು ನಾವು ನೋಡಿದ್ದೇವೆ. ಆದರೆ ಮಹಾರಾಷ್ಟ್ರದ ಕೊಲ್ಲಾಪುರದ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಬಗ್ಗೆ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಹೋಗಿ ವ್ಯಕ್ತಿಯೊಬ್ಬ ಸಿನಿಮಾದಲ್ಲಿ ಮಾಡುವಂತೆ ಮಾಡಿದ್ದಾನೆ. ಶಿರೋಲ್ ತಾಲೂಕಿನ ಧರಂಗುಟಿ ಗ್ರಾಮದ ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮದ ಮುಖ್ಯ ರಸ್ತೆಯಲ್ಲಿ 2.5 ಕಿ.ಮೀ.ದೂರದವರೆಗೆ ಪೈಂಟ್ ನಿಂದ ‘ಐ ಲವ್ ಯೂ’ …

Read More »

1-5 ಶಾಲೆಗಳ ಪ್ರಾರಂಭಕ್ಕೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು.?

ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ಖಾಸಗಿ ಶಾಲೆಗಳೂ ಅನುಸರಿಸಬೇಕು ಎಂದು ಹೇಳಿದ್ದಾರೆ. …

Read More »

ಸತತ ಎರಡನೇ ದಿನ ಪೆಟ್ರೋಲ್ ಡೀಸೆಲ್ ದರದಲ್ಲಿ ಇಳಿಕೆ

ನವದೆಹಲಿ: ಸತತ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರಎರಡು ದಿನಗಳಿಂದ ಇಳಿದು ಮುಖದಲ್ಲಿ ಸಾಗುತ್ತಿದ್ದು, ಇಂದು ಕೂಡ ದರದಲ್ಲಿ ಇಳಿಕೆ ಕಂಡಿದೆ. ಪೆಟ್ರೋಲ್ ದರ 21 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 20 ಪೈಸೆ ಇಳಿಕೆಯಾಗಿದೆ. ಫೆಬ್ರವರಿ ತಿಂಗಳ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಇಂದು …

Read More »

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಉಪಚುನಾವಣಾ ಅಖಾಡ ರಂಗೇರುತ್ತಿದ್ದು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಂದಾನಗರಿ ಬೆಳಗಾವಿಗೆ ಆಗಮಿಸಲಿದ್ದಾರೆ. ಮರುದಿನ, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಮಾರ್ಚ್ 28ರಿಂದ ಉತ್ತರ ಕರ್ನಾಟ ಭಾಗದಲ್ಲಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು ಹಾಗೂ …

Read More »

ಕಲ್ಲು ಕ್ವಾರಿಗಳ ಮೇಲೆ ಗಣಿ ಇಲಾಖೆ, ಪರಿಸರ ಇಲಾಖೆ ಸರ್ಜಿಕಲ್ ಸ್ಟ್ರೈಕ್

ಗೋಕಾಕ: ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಚಿಕ್ಕೋಡಿ ಪರಿಸರ ಇಲಾಖೆಯ ಅಧಿಕಾರಿಗಳು ಉಪ ನಿರ್ದೇಶಕಿ ಶ್ರೀ ಬಿಂದನ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಗೋಕಾಕ್ ನ ಬಿಲಕುಂದಿ ಗ್ರಾಮದಲ್ಲಿರುವ ಕಲ್ಲು ಕ್ರಷರ್ ಗಳಿಗೆ ಭೇಟಿಕೊಟ್ಟು ನಿಯಮಗಳನ್ನು ಉಲ್ಲಂಘನೆ ಮಾಡಿರುವ 5 ಕಲ್ಲು ಕ್ವಾರಿ ಗಳನ್ನು ಸೀಜ್ ಮಾಡಲಾಯಿತು. ಶಿವಮೊಗ್ಗದಲ್ಲಿ ಆದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪರಿಸರ ಇಲಾಖೆ …

Read More »