Breaking News

ರಾಷ್ಟ್ರೀಯ

ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ

ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಕಾರ್ತಿಕ್ ಭಟ್, ಮುಲ್ಕಿಯಲ್ಲಿನ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರೈಲು ಹಳಿ ಬಳಿ …

Read More »

ಈ ಸರ್ಕಾರ ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ:ಹೆಚ್‌ ಡಿ ದೇವೇಗೌಡ

ಬೆಂಗಳೂರು, ನವೆಂಬರ್‌ 09: ನಾನು ನನ್ನ ಕಡೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರ್ತಿನಿ. ಮೊಮ್ಮಗನಿಗಾಗಿ ಈಗ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ಪ್ರಾದೇಶಿಕ ಪಕ್ಷ ಉಳಿಸಲು ನಾನು ಬಂದಿದ್ದೀನಿ. ಈ ಸರ್ಕಾರ ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ. ಮೊಮ್ಮಗ ನಿಖಿಲ್ ಗೆದ್ದ ಮೇಲೆಯೂ ನಾನು ಮನೆಯಲ್ಲಿ ಮಲಗಲ್ಲ‌. ಆಮೇಲೆ ಕೂಡ ಹೋರಾಟ ಪಕ್ಷ ಕಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ್ರು ಹೇಳಿದರು. ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ …

Read More »

ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮಹಾ ವಿಕಾಸ ಅಘಾಡಿ ಮೈತ್ರಿಕೂಟದ ಅಂಗ ಪಕ್ಷದವಾದ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ಪುರುಷ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವುದಾಗಿ ಭರವಸೆ ನೀಡಿದೆ. ಜತೆಗೆ ದಿನ ಬಳಕೆ ವಸ್ತುಗಳ ಬೆಲೆಯನ್ನು ಸ್ಥಿರೀಕರಣಗೊಳಿಸಲಾಗುವುದು ಹಾಗೂ ಧಾರಾವಿ ಕೊಳಗೇರಿ ಮರು ಅಭಿವೃದ್ಧಿ ಯೋಜನೆಯನ್ನು ಕೈ ಬಿಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದೆ.   ಈಗಾಗಲೇ ಸರ್ಕಾದಿಂದ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ದೊರೆಯುತ್ತಿದೆ. ಅದೇ …

Read More »

ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

ಮಂಗಳೂರು: ಗುರುಪುರ ಅಡ್ಡೂರು ಸಮೀಪದ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಕಾರಿಗಳು ದಾಳಿ ನಡೆಸಿದ್ದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.   ನೀರಿನಲ್ಲಿ ಮುಳುಗಿಸಿಟ್ಟ ದೋಣಿಗಳು ಸ್ಥಳದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾ ಧಿಕಾರಿ ಹರ್ಷವರ್ಧನ್‌ ಅವರ ಮಾರ್ಗದರ್ಶನದಲ್ಲಿ …

Read More »

ಜಾನಪದ ಸಿಂಗ‌ರ್ ಮೇಲೆ ಹಲ್ಲೆ ಆರೋಪ – ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸ್‌

ಜಾನಪದ ಸಿಂಗ‌ರ್ ಮೇಲೆ ಹಲ್ಲೆ ಆರೋಪ – ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸ್‌ ಚಿಕ್ಕೋಡಿ : ಮೊನ್ನೆ ಅಷ್ಟೇ ಕಾರ್ ಡ್ರೈವ್ ಮಾಡುತ್ತಾ ಶೇಖರ ಹಕ್ಯಾಗೋಳ, ಅಶ್ವಿನಿ ಇರಗಾರ, ರೂಪಾ ಹಕ್ಯಾಗೋಳ ಮೇಲೆ ಪುಂಡತನ ಮೆರೆದಿದ್ದ ಮಾಳು ಉರ್ಪ ಮಾಳಪ್ಪ ನಿಪನಾಳ ಇವನಿಗೆ ರಾಯಬಾಗ ಸರ್ಕಲ್ ಇನ್ಸ್‌ಪೆಕ್ಟ‌ರ್ ಅವರು ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಸೂಕ್ತ ಕಾನೂನು ಕ್ರಮಕ್ಕೆ ಕೈಗೊಂಡಿದ್ದಾರೆ. ಆಧುನಿಕ …

Read More »

ಬಡ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದ ಬಿಗ್ ಗಿಫ್ಟ್ !

ನವದೆಹಲಿ : ಮಧ್ಯಮ ವರ್ಗ ಅಥವಾ ಆರ್ಥಿಕವಾಗಿ ದುರ್ಬಲ ಜನರು ಹಣಕಾಸಿನ ಅಡಚಣೆಗಳಿಂದ ತಮ್ಮ ಅಧ್ಯಯನವನ್ನ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅವರ ಕನಸುಗಳನ್ನ ಈಡೇರಿಸಿಕೊಳ್ಳಲು ವಿಫಲರಾಗುತ್ತಾರೆ. ಈ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.   ಬುಧವಾರ, ಸಚಿವ ಸಂಪುಟವು ಪ್ರಧಾನಮಂತ್ರಿ ವಿದ್ಯಾ ಲಕ್ಷ್ಮಿ ಶಿಕ್ಷಣ ಯೋಜನೆ ಎಂಬ ಯೋಜನೆಗೆ ಅನುಮೋದನೆ ನೀಡಿದ್ದು, ಇದರ ಅಡಿಯಲ್ಲಿ ಕುಟುಂಬದ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ …

Read More »

ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

ವಾಷಿಂಗ್ಟನ್:‌ ಇಡೀ ಜಗತ್ತಿನ ಕುತೂಹಲಕ್ಕೆ ಕಾರಣವಾಗಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ನೇತೃತ್ವದ ರಿಪಬ್ಲಿಕನ್‌ ಪಕ್ಷ ಜಯಭೇರಿ ಬಾರಿಸಿರುವುದಾಗಿ ಬುಧವಾರ (ನ.06) ಘೋಷಿಸುವ ಮೂಲಕ ಟ್ರಂಪ್‌ 2ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.   ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ 270ಕ್ಕೂ ಅಧಿಕ ಎಲೆಕ್ಟ್ರೊರಲ್‌ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್‌ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ …

Read More »

ಸವಣೂರ ವಿಧಾನಸಭಾ ಕ್ಷೇತ್ರ ಪ್ರಚಾರದಲ್ಲಿ ಭಾಗವಹಿಸಿದ ಸತೀಶ್ ಜಾರಕಿಹೊಳಿ

ಶಿಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ್ ಖಾನ್ ಪಠಾಣ ಪರ ಪ್ರಚಾರ ನಡೆಸುತ್ತಿರುವ ಮುಖಂಡರು, ‘ಜನಪರವಾದ ಐದು ಗ್ಯಾರಂಟಿ ಯೋಜನೆ ನೋಡಿ ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಕೋರುತ್ತಿದ್ದಾರೆ. ಶಿಗ್ಗಾವಿ ಕ್ಷೇತ್ರದ ಚಾಕಾಪುರದಲ್ಲಿ ಭಾನುವಾರ ಪ್ರಚಾರ ನಡೆಸಿದ ಸಚಿವ ಸತೀಶ ಜಾರಕಿಹೊಳಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ …

Read More »

ಎಂಇಎಸ್‌ನಿಂದ ಕರಾಳ ದಿನ: 46 ಮಂದಿ ವಿರುದ್ಧ ದೂರು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನಗರದಲ್ಲಿ ನ.1ರಂದು ಕರಾಳ ದಿನ ಆಚರಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯ 46 ನಾಯಕರು ಸೇರಿ ಹಲವರ ವಿರುದ್ಧ ಇಲ್ಲಿನ ಮಾರ್ಕೆಟ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯೋತ್ಸವ ದಿನದಂದೇ ಎಂಇಎಸ್‌ನವರು ಪ್ರತಿವರ್ಷ ಕರಾಳ ದಿನ ಆಚರಿಸುತ್ತಾರೆ. ಈ ಬಾರಿ ಅದಕ್ಕೆ ಅನುಮತಿ ಕೋರಿ ಬಂದಿದ್ದ ಎಂಇಎಸ್‌ ನಿಯೋಗಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ‘ಯಾವ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ಕೊಡುವುದಿಲ್ಲ’ ಎಂದು ತಿಳಿಸಿದ್ದರು. ನಗರ ಪೊಲೀಸ್‌ …

Read More »

ದಾರಿ ಮಧ್ಯೆಯೇ ಕೆಟ್ಟು ನಿಂತ ನಟ ಗುರುಪ್ರಸಾದ್ ಶವ ಸಾಗಿಸುತ್ತಿದ್ದ ಆಂಬುಲೆನ್ಸ್

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ದಾರಿಯ ಮಧ್ಯೆಯೇ ಆಂಬುಲೆನ್ಸ್ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಗುರುಪ್ರಸಾದ್ ಅವರು ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿದ್ದಂತ ಬಾಡಿಗೆ ಫ್ಲ್ಯಾಟ್ ನಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು, ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ನಟ ಗುರುಪ್ರಸಾದ್ ಶವವನ್ನು ಸಾಗಿಸುತ್ತಿದ್ದಂತ …

Read More »