Breaking News

ರಾಷ್ಟ್ರೀಯ

ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ನಾಳೆ `ಭಾರತ್ ಬಂದ್’ ಗೆ ಕರೆ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿರುವ ರೈತ ಸಂಘಟನೆಗಳು ಮಾರ್ಚ್ 26 ರ ನಾಳೆ ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಿವೆ. ‘ 40 ರೈತ ಸಂಘಗಳ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದ್ದು, ಕಾರ್ಮಿಕ ಸಂಘಗಳು, ಸಾರಿಗೆ ಮತ್ತು ಚಿಲ್ಲರೆ ವ್ಯಾಪಾರಿಗಳ ಸಂಘಗಳು ಮತ್ತು ಇತರೆ ಸಾಮೂಹಿಕ ಸಂಸ್ಥೆಗಳು ಭಾರತ್ ಬಂದ್ …

Read More »

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು. ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, …

Read More »

ಗೋಕಾಕ: ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ …

Read More »

ಮಸ್ಕಿ ಉಪ ಚುನಾವಣೆ; ಪ್ರತಾಪ್ ಗೌಡ ಪಾಟೀಲ್ ನಾಮಪತ್ರ

ರಾಯಚೂರು, ಮಾರ್ಚ್ 24: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಪ್ರತಾಪ್ ಗೌಡ ಪಾಟೀಲ್ ಬುಧವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಇನ್ನೂ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ. ಬುಧವಾರ ಪ್ರತಾಪ್ ಗೌಡ ಪಾಟೀಲ್ ಅಂಕಲಿಮಠಕ್ಕೆ ಭೇಟಿ ನೀಡಿದರು. ಗಚ್ಚಿನಮಠಕ್ಕೆ ಭೇಟಿ ಕೊಟ್ಟರು. ಬಳಿಕ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲಿಂದ ಕಾರ್ಯಕರ್ತರ ಜೊತೆ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಬಂದರು.   ಚುನಾವಣಾಧಿಕಾರಿ ಹಾಗೂ …

Read More »

ಸಿ.ಡಿ. ಪ್ರಕರಣ: ಕಾರು ಚಾಲಕನ ಸಮೇತ ಉದ್ಯಮಿ ನಾಪತ್ತೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಿದ್ದಂತೆ ಗ್ರಾನೈಟ್ ಉದ್ಯಮಿ ಶಿವಕುಮಾರ್ ಕಾರು ಚಾಲಕನ ಸಮೇತ ನಾಪತ್ತೆಯಾಗಿದ್ದಾರೆ. ಸಿ.ಡಿ ಸೃಷ್ಟಿಸಿದ್ದ ಆರೋಪಿಗಳಿಗೆ ನೆರವು ನೀಡಿದ್ದ ಮಾಹಿತಿ ಮೇರೆಗೆ ಎಸ್‌ಐಟಿ ಅಧಿಕಾರಿಗಳು, ಜೆ.ಪಿ.ನಗರದಲ್ಲಿರುವ ಶಿವಕುಮಾರ್ ಮನೆ ಮೇಲೆ ಇತ್ತೀಚೆಗೆ ದಾಳಿ ಮಾಡಿದ್ದರು. ಕೆಲ ದಾಖಲೆಗಳನ್ನೂ ಜಪ್ತಿ ಮಾಡಿದ್ದರು. ಅದಾದ ಮರುದಿನದಿಂದಲೇ ಶಿವಕುಮಾರ್ ಹಾಗೂ ಅವರ …

Read More »

45+ ಎಲ್ಲರಿಗೂ ಲಸಿಕೆ : ಎ. 1ರಿಂದಲೇ ಜಾರಿಗೆ ಕೇಂದ್ರ ಸಂಪುಟ ನಿರ್ಧಾರ

ಹೊಸದಿಲ್ಲಿ: ನಿಮಗೆ 45 ವರ್ಷ ತುಂಬಿದ್ದರೆ ಎ. 1ರಿಂದ ನೀವು ಕೂಡ ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು. ಇದು ಕೇಂದ್ರ ಸಚಿವ ಸಂಪುಟ ಸಭೆಯ ನಿರ್ಣಯ. ಇದುವರೆಗೆ 45 ವರ್ಷಕ್ಕಿಂತ ಮೇಲ್ಪಟ್ಟ ಇತರ ರೋಗಪೀಡಿತರು ಮಾತ್ರ ಲಸಿಕೆ ಪಡೆಯಬಹುದಾಗಿತ್ತು. ಆದರೆ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸಲು ಮತ್ತು ಲಸಿಕೆಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 45 ವರ್ಷ ತುಂಬಿದ ಆರೋಗ್ಯವಂತರಿಗೂ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ …

Read More »

ʼಕೊರೊನಾʼ ಲಾಕ್ ಡೌನ್ ನಂತ್ರದ ವೈಯಕ್ತಿಕ ಸಾಲ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾದಿಂದ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿದಿದ್ದು, ಇದ್ರ ಮಧ್ಯೆ ವೈಯಕ್ತಿಕ ಸಾಲಗಳ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ. ಮುಂಬೈನಲ್ಲಿ ಶೇಕಡಾ 25ರಷ್ಟು ಜನರು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ವೈಯಕ್ತಿಕ ಸಾಲವನ್ನು ತೆಗೆದುಕೊಂಡಿದ್ದಾರೆ. ಶೇಕಡಾ 17 ರಷ್ಟು ಜನರು ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ತೆಗೆದುಕೊಂಡಿದ್ದಾರೆ. ಮನೆಯಿಂದ ಕೆಲಸ ಮಾಡ್ತಿರುವ ಶೇಕಡಾ 15ರಷ್ಟು ಮಂದಿ ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳಂತಹ ಎಲೆಕ್ಟ್ರಾನಿಕ್ ಉಪಕರಣಗಳನ್ನು ಖರೀದಿಸಲು ಸಾಲ ಪಡೆದಿದ್ದಾರೆ. ಇಂಡಿಯಾ ಲ್ಯಾಂಡ್ಸ್ ಈ …

Read More »

ಮುಂದಿನ 8-10 ವರ್ಷ ಪೆಟ್ರೋಲ್ ಮತ್ತು ಡೀಸೆಲ್ ನ್ನು ಜಿಎಸ್ ಟಿ ವ್ಯಾಪ್ತಿಯಡಿ ತರಲು ಸಾಧ್ಯವಿಲ್ಲ: ಸುಶಿಲ್ ಕುಮಾರ್ ಮೋದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ನ್ನು ಇನ್ನು 8-10 ವರ್ಷ ಜಿಎಸ್ ಟಿ ಆಡಳಿತದಡಿ ತರಲು ಸಾಧ್ಯವಿಲ್ಲ, ಇದರಿಂದ ವಾರ್ಷಿಕವಾಗಿ ಎಲ್ಲಾ ರಾಜ್ಯಗಳಿಗೆ 2 ಲಕ್ಷ ಕೋಟಿ ರೂಪಾಯಿ ಆದಾಯ ನಷ್ಟವಾಗಲಿದೆ ಎಂದು ಬಿಜೆಪಿ ನಾಯಕ ಸುಶಿಲ್ ಕುಮಾರ್ ಮೋದಿ ಹೇಳಿದ್ದಾರೆ. ಹಣಕಾಸು ಮಸೂದೆ 2021ರ ಕುರಿತು ಇಂದು ರಾಜ್ಯಸಭೆಯಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ 5 ಲಕ್ಷ ಕೋಟಿಗಿಂತಲೂ …

Read More »

ಏ.1ಕ್ಕಿಂತ ಮೊದ್ಲೇ ಈ ಕೆಲ್ಸ ಮಾಡಿ.. ಇಲ್ಲದಿದ್ರೆ ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾಗುತ್ತೆ..!

ಪ್ಯಾನ್ ಕಾರ್ಡ್ ಹೊಂದಿರುವವರು ಇದನ್ನ ಎಚ್ಚರಿಕೆಯಿಂದ ಓದಿ. ಯಾಕಂದ್ರೆ, ಆದಾಯ ತೆರಿಗೆ ಇಲಾಖೆಯು 2021ರ ಮಾರ್ಚ್ 31ಕ್ಕೆ ಆಧಾರ್ ಪ್ಯಾನ್ ಲಿಂಕ್ ಗಡುವು ನೀಡಿದೆ. ಒಂದ್ವೇಳೆ ನಿಮ್ಮ ಪ್ಯಾನ್ʼನ್ನ ನಿಮ್ಮ ಆಧಾರ್ʼಗೆ ಲಿಂಕ್ ಮಾಡದಿದ್ದರೆ, ಏಪ್ರಿಲ್ 1 ರಿಂದ ನೀವು ಯಾವುದೇ ಹಣಕಾಸು ವ್ಯವಹಾರವನ್ನ ಮಾಡೋಕೆ ಸಾಧ್ಯವಾಗೋಲ್ಲ. ಪ್ಯಾನ್‌ಗೆ ಆಧಾರ್‌ ಲಿಂಕ್‌ ಮಾಡದಿದ್ರೆ, ಆದಾಯ ತೆರಿಗೆ ಕಾಯ್ದೆಯಡಿ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಆದಾಯ ತೆರಿಗೆ ಇಲಾಖೆ (ಐಟಿ ಇಲಾಖೆ) ಹೇಳಿದೆ. …

Read More »

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕಳೆದ 15 ದಿನಗಳ ಅವಧಿಯಲ್ಲಿ ಕಚ್ಚಾ ತೈಲದ ದರ ಭಾರೀ ಇಳಿಕೆಯಾಗಿದೆ. ಬ್ಯಾರಲ್ ಗೆ 71 ಡಾಲರ್ ನಿಂದ 64 ಡಾಲರ್ ಗೆ ಕಡಿಮೆಯಾಗಿದೆ. ಕಚ್ಚಾತೈಲದ ಬೆಲೆ ಇಳಿಕೆಯಾಗುತ್ತಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಕಡಿಮೆ ಮಾಡಲು ಅವಕಾಶ ಸೃಷ್ಟಿಯಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಿದ್ದು, ಕಚ್ಚಾತೈಲದ ಬೆಲೆ ಏರಿಕೆ ನೆಪ ಹೇಳುತ್ತಿದ್ದ ಕಂಪನಿಗಳು ಈಗ ಬೆಲೆ ಕಡಿಮೆ ಮಾಡಲಿವೆ ಎಂದು …

Read More »