Breaking News

ರಾಷ್ಟ್ರೀಯ

ಠಾಕ್ರೆ ಬಗ್ಗೆ ಮಾತಾಡಿದರೆ ಆಸಿಡ್‌ ದಾಳಿ ಮಾಡುತ್ತೇವೆ ಎಂದು ಶಿವಸೇನೆ ಬೆದರಿಕೆ’ – ನವನೀತ್‌ ಕೌರ್‌

ವದೆಹಲಿ: ಲೋಕಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತಾಡಿದಕ್ಕಾಗಿ ನನಗೆ ಮಹಾರಾಷ್ಟ್ರ ಶಿವಸೇನಾ ಸಂಸದ ಅರವಿಂದ ಸಾವಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿರುವ ಅಮರಾವತಿಯ ಪಕ್ಷೇತರ ಸಂಸದೆ ನವನೀತ್ ಕೌರ್ ರಾಣಾ ಅವರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತನಾಡಿದ ಕಾರಣಕ್ಕೆ ನನಗೆ ಫೋನ್ ಕರೆ ಹಾಗೂ ಪತ್ರಗಳ ಮೂಲಕ ಆಸಿಡ್‌ ದಾಳಿ ಬೆದರಿಕೆ ಹಾಕಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ದೂರು ನೀಡಿದ್ದಾರೆ. ಆದರೆ ಈ ಆರೋಪವನ್ನು ಅಲ್ಲಗಳೆದಿರುವ …

Read More »

ವಿಜಯೇಂದ್ರಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಅವರು ಖರೀದಿಸಿದ ಜಮೀನಿನ ಮೇಲೆ ಪ್ರಭಾವಿಗಳು ಕಣ್ಣಿಟ್ಟಿದ್ದು ಕಬಳಿಸಲು ಮುಂದಾಗಿ ಮಹಿಳೆಗೆ ನಿರಂತರವಾಗಿ ಹಿಂಸೆ ಕೊಡುತ್ತಿದ್ದಾರೆ. ಇದರಿಂದ ಬೇಸತ್ತ ಮಹಿಳೆ ದಯಾಮರಣಕ್ಕಾಗಿ ಬಿ.ವೈ. …

Read More »

ಹಬ್ಬದ ವಿಶೇಷ, ಪ್ಯಾಸೆಂಜರ್ ರೈಲುಗಳು ಜೂನ್ ತನಕ ವಿಸ್ತರಣೆ

ಹುಬ್ಬಳ್ಳಿ, ಮಾರ್ಚ್ 22: ನೈಋತ್ಯ ರೈಲ್ವೆ ಸದ್ಯ ಸಂಚಾರ ನಡೆಸುತ್ತಿರುವ ಹಬ್ಬದ ವಿಶೇಷ ರೈಲು ಮತ್ತು ಪ್ಯಾಸೆಂಜರ್ ವಿಶೇಷ ರೈಲುಗಳ ವೇಳಾಪಟ್ಟಿಯನ್ನು ವಿಸ್ತರಣೆ ಮಾಡಿದೆ. ಮಾರ್ಚ್ ಅಂತ್ಯಕ್ಕೆ ರೈಲುಗಳ ಸಂಚಾರ ಕೊನೆಗೊಳ್ಳಬೇಕಿತ್ತು. ಹಬ್ಬದ ವಿಶೇಷ ಎಕ್ಸ್‌ಪ್ರೆಸ್ ರೈಲು ಮತ್ತು ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಜೂನ್ ತನಕ ವಿಸ್ತರಣೆ ಮಾಡಲಾಗಿದೆ. ಯಾವ-ಯಾವ ರೈಲುಗಳ ಸೇವೆ ವಿಸ್ತರಣೆ ಮಾಡಲಾಗಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹುಬ್ಬಳ್ಳಿ-ಸಿಕಂದರಾಬಾದ್ ರೈಲು ಮಾರ್ಚ್ 31 ರಿಂದ ಜೂನ್ …

Read More »

ಗೋವಾ ಪ್ರವಾಸಿಗರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ. ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.   ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ …

Read More »

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

ಕೊಪ್ಪಳ: ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರಿನ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ್ದಾರೆ. ಚಾಲಕ ಅವಾಚ್ಯ ಶಬ್ದ ಉಪಯೋಗಿಸಿದ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಕಾರು ಚಾಲಕ ವಿಜಯ್​ ನನ್ನನ್ನು ನಿಂದಿಸಿದ್ದಾನೆಂದು ಆರೋಪಿಸಿ, ಕೊಪ್ಪಳ ಜಿಲ್ಲಾಡಳಿತದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More »

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್‌ 1ರ ಬಳಿಕ ಸಾಧ್ಯವಾಗುವುದಿಲ್ಲ…?

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಪ್ರಸ್ತಾವನೆಯು ಅಂತಿಮಗೊಂಡರೆ, 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್‌ 1ರ ಬಳಿಕ ಸಾಧ್ಯವಾಗುವುದಿಲ್ಲ. ಸರ್ಕಾರದ ಎಲ್ಲಾ ವಾಹನಗಳಿಗೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರೋದ್ಯಮಗಳು, ಮಹಾನಗರ ಪಾಲಿಕೆ ಮತ್ತು ಸ್ವಾಯತ್ತ ಸಂಸ್ಥೆಗಳ ಎಲ್ಲಾ ವಾಹನಗಳಿಗೂ ಇದು ಅನ್ವಯವಾಗಲಿದೆ. ಈ ಕುರಿತು ಸಚಿವಾಲಯವು ಶನಿವಾರ ಟ್ವೀಟ್ ಮಾಡಿದೆ. ಕರಡು ನಿಯಮಗಳ ಕುರಿತು ಪ್ರತಿಕ್ರಿಯೆ, ಸಲಹೆ, …

Read More »

ತ್ರಿವರ್ಣ ಧ್ವಜ, ಭಾರತದ ನಕ್ಷೆ ಇರುವ ಕೇಕ್‌ ಕತ್ತರಿಸುವುದು ‘ಅವಮಾನವಲ್ಲ’ : ಮದ್ರಾಸ್ ಹೈಕೋರ್ಟ್

ಚನ್ನೈ: ತ್ರಿವರ್ಣ ಧ್ವಜ ಮತ್ತು ಅಶೋಕ ಚಕ್ರ ವಿನ್ಯಾಸವಿರುವ ಕೇಕ್ ಕತ್ತರಿಸುವುದರಿಂದ 1971ರ ರಾಷ್ಟ್ರೀಯ ಗೌರವ ಕಾಯಿದೆ 1971ರ ಅಡಿಯಲ್ಲಿ ‘ಅವಮಾನ’ ವಲ್ಲವೆಂದು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ಆನಂದ್ ವೆಂಕಟೇಶ್ ಅವರಿದ್ದ ನ್ಯಾಯಾಪೀಠ ತೀರ್ಪು ನೀಡಿದೆ. ಈ ಮೂಲಕ ಅವರು 2013ರಲ್ಲಿ ಕೇಕ್ ಕತ್ತರಿಸುವ ಪ್ರಕರಣದ ಬಗ್ಗೆ ಕೊಯಮತ್ತೂರ್ ಮ್ಯಾಜಿಸ್ಟ್ರೇಟ್ ಅವರು ಆರಂಭಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿ, ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಸ್ವಾಭಿಮಾನದ ಹಲವು ಮಹತ್ವದ ಮಾಹಿತಿಗಳನ್ನು ನ್ಯಾಯಾಪೀಠ ತಿಳಿಸಿದೆ. …

Read More »

ಮಾರ್ಚ್ 22, 2020 : ಸರಿ ಒಂದು ವರ್ಷದ ಹಿಂದೆ ಈ ದಿನ ಏನಾಯಿತು ನೆನಪಿದೆಯೇ? ಇಲ್ಲಿದೆ ವೈರಲ್ ವಿಡೀಯೋ

ನವದೆಹಲಿ : ಮಾರ್ಚ್ 22, 2020 ರ ದಿನವನ್ನು ಯಾರು ಮರೆಯಲು ಸಾಧ್ಯವಿಲ್ಲ? ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಭಾರತದ ಜನತೆ ಮನೆಗಳಲ್ಲಿ ಬಂಧಿಯಾಗಿ, ನಂತರ ಸಂಜೆ ಕೊರೋನಾ ಯೋಧರಿಗೆ ಗೌರವವನ್ನು ವ್ಯಕ್ತಪಡಿಸಲು ಐದು ನಿಮಿಷಗಳ ಕಾಲ ಚಪ್ಪಾಳೆ ತಟ್ಟಿದರು. 2020ರ ಮಾರ್ಚ್ 22ರ ದಿನವನ್ನು ಜನತಾ ಕರ್ಫ್ಯೂ ಎಂದು ಕರೆಯಲಾಗುತ್ತದೆ. ಇಂದು, ಸಾರ್ವಜನಿಕ ಕರ್ಫ್ಯೂ ಆಗಿ ಒಂದು ವರ್ಷ ಕಳೆದಿದೆ. ಅನೇಕ ಮೋಜಿನ ನೆನಪುಗಳು ಜನರ …

Read More »

ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ

ರಾಯಪುರ, ಮಾ. 17: ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ರವಿವಾರ ತನ್ನ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ ಎಂದು ಹೇಳಿದ್ದಾರೆ. ರಾಜ್ಯ ಸರಕಾರದ ಎರಡು ಯೋಜನೆಗಳ ಅಡಿಯಲ್ಲಿ ಜಾನುವಾರು ಸಾಕುವವರು ಹಾಗೂ ರೈತರಿಗೆ ನಗದು ವಿತರಿಸಲು ಚತ್ತೀಸ್ಗಢದ …

Read More »

ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಿ ತೋರಿಸು: ಯತ್ನಾಳ್‍ಗೆ ರೇಣುಕಾಚಾರ್ಯ ಸವಾಲ್

ದಾವಣಗೆರೆ: ನಿನಗೆ ಸವಾಲು​ ಹಾಕ್ತೀನಿ.. ತಾಕತ್ತಿದ್ದರೆ ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡಿ ನೋಡು ಅಂತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳೆಗೆ ಸವಾಲೆಸೆದಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ನಂತರ ನೂರಕ್ಕೆ ನೂರರಷ್ಟು ಸಿಎಂ ಬದಲಾವಣೆ ಖಚಿತ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ರೇಣುಕಾಚಾರ್ಯ ಏಕವಚನದಲ್ಲೇ​​ ಯತ್ನಾಳ್​ ವಿರುದ್ಧ ಕಿಡಿಕಾರಿದ್ದಾರೆ. ​ರಾಜ್ಯದಲ್ಲಿ ಬಿಜೆಪಿಯನ್ನ ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್​. ಯಡಿಯೂರಪ್ಪನವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರಮೋದಿ …

Read More »