ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ. ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ. ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.
Read More »ಮೋದಿ ಪ್ರಧಾನ ಸಲಹೆಗಾರ ಪಿ.ಕೆ ಸಿನ್ಹಾ ರಾಜೀನಾಮೆ PM Modi’s principal advisor P K Sinha resigns
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರರಾಗಿದ್ದ ಪ್ರದೀಪ್ ಕುಮಾರ್ ನಿನ್ಹಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಿಕೆ ಸಿನ್ಹಾ ಅವರು ಈ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 1977ನೇ ಬ್ಯಾಚ್ ನ ನಿವೃತ್ತಿ ಐಎಎಸ್ ಅಧಿಕಾರಿಯಾಗಿರುವ ಸಿನ್ಹಾ ಅವರನ್ನ 2019ರ ಆಗಸ್ಟ್ ತಿಂಗಳಲ್ಲಿ ಮೋದಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಇದಲ್ಲದೆ ಸಿನ್ಹಾ ಅವರು ನಾಲ್ಕು ವರ್ಷಗಳ ಕಾಲ ಕ್ಯಾಬಿನೆಟ್ …
Read More »ಬಾಲಸುಟ್ಟ ಶಿವಸೇನೆ ಹುಲಿ : ಬೆಳಗಾವಿ ಕೇಂದ್ರಾಡಳಿತವಾಗದು ಎಂದು ಕೇಂದ್ರ ಸ್ಪಷ್ಟನೆ
ಹೊಸದಿಲ್ಲಿ/ ಮುಂಬಯಿ : ಬೆಳಗಾವಿ ವಿಚಾರಕ್ಕೆ ಕೈಹಾಕಿದ ಶಿವಸೇನೆ ಬಾಲ ಸುಟ್ಟುಕೊಂಡಿದೆ. “ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ’ ಎನ್ನುವ ಮೂಲಕ ಉದ್ಧವ್ ಠಾಕ್ರೆಯ “ಮಹಾಉದ್ಧಟತನ’ದ ಕನಸಿಗೆ ಕೇಂದ್ರ ಸರಕಾರ ತಣ್ಣೀರು ಎರಚಿದೆ. ತನ್ನ ಮುಖವಾಣಿ “ಸಾಮ್ನಾ’ದಲ್ಲಿ ಶಿವಸೇನೆ “ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು’ ಎಂದಿತ್ತು. ಲೋಕಸಭೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ ರಾಯ್, “ಕಾಲ ಕಾಲಕ್ಕೆ ಕೆಲವರು ಮತ್ತು ಸಂಘಟನೆಗಳು ಬೆಳಗಾವಿಯನ್ನು …
Read More »ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ
ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಒಟ್ಟು ಮತದಾರರ ಪೈಕಿ 11,36,293 ಪುರುಷ, 11,21,101 ಮಹಿಳೆ ಮತ್ತು 75 ಇತರ ಮತದಾರರಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 18,11,642 ಮತದಾರರಿದ್ದರೆ, ಬಸವಕಲ್ಯಾಣದಲ್ಲಿ 2,39,473 ಮತ್ತು ಮಸ್ಕಿ (ಪರಿಶಿಷ್ಟ ಪಂಗಡ)ದಲ್ಲಿ 2,06,354 ಮತದಾರರಿದ್ದಾರೆ. ಬೆಳಗಾವಿಯಲ್ಲಿ …
Read More »ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಬಸವರಾಜ್ ಬೊಮ್ಮಾಯಿ ಮಾಹಿತಿ!
ಬೆಂಗಳೂರು, ಮಾ. 16: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ …
Read More »Big breakingಬೆಳಗಾವಿ ಲೋಕಸಭಾ ಚುನಾವಣೆ ದಿನಾಂಕ ನಿಗದಿ…ಯಾವಾಗ ಗೊತ್ತಾ..?
ಬೆಳಗಾವಿ: ಬಹುದಿನದ ಜನರ ನಿರೀಕ್ಷೆ ಬೆಳಗಾವಿಯ ಲೋಕಸಭಾ ಚುನಾವಣೆ ದಿನಾಂಕ ಏಪ್ರಿಲ್ 17ರಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ… ಬೆಳಗಾವಿ ಲೋಕಸಭಾ ಚುನಾವಣೆ ಕಾವು ಜೋರಾಗಿಯೇ ಇತ್ತು ಒಂದು ಲೋಕಸಭೆ ಹಾಗೂ ಮೂರು ವಿಧಾನ ಸಭಾ ಚುನಾವಣೆ ನಡೆಸಲು ಮುಂದಾಗಿದೆನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ 30 ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ ಇನ್ನೆರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. …
Read More »ಸುದೀಪ್ ‘ಬೆಳ್ಳಿಹಬ್ಬ’: 25 ವರ್ಷದ ಪಯಣಕ್ಕೆ ಶುಭಹಾರೈಸಿದ ಸಿಎಂ ಯಡಿಯೂರಪ್ಪ>ಭಾವುಕರಾದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರಿಗಾಗಿ (ಮಾರ್ಚ್ 15) ರಂದು ‘ಸುದೀಪ್ ಬೆಳ್ಳಿಹಬ್ಬ’ ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ, ನಟ ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್, ರವಿಶಂಕರ್, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹಾಗೂ ಇನ್ನೂ ಕೆಲವು ಸಿನಿ ಹಾಗೂ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ‘ನನಗಿಂತಲೂ ಹಿರಿಯರು ಇಲ್ಲಿದ್ದಾರೆ. ನನಗಿಂತಲೂ ಮುಂಚೆ ಅವರು ಸಿನಿಯಾನ ಆರಂಭಿಸಿದ್ದಾರೆ, ಅವರ ನೆರಳಿನಲ್ಲಿ ನಾನು …
Read More »ಕೆಲ ದಿನಗಳಲ್ಲಿ ಆರಂಭವಾಗಲಿದೆ ಜನಗಣತಿಯ ಕಾರ್ಯಕಲಾಪ
ದೆಹಲಿ: 2021ನೇ ಸಾಲಿನ ಜನಗಣತಿಯ ಕಾರ್ಯ ಕಲಾಪಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಎಂದು ಗೃಹ ಸಚಿವಾಲಯ ಸಂಸತ್ ಸಮಿತಿಗೆ ತಿಳಿಸಿದೆ. ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿ 2011ರಲ್ಲಿ ನಡೆದಿತ್ತು. ಅದೇ ಪ್ರಕಾರ ಈ ವರ್ಷ ಮತ್ತೊಮ್ಮೆ ಜನಗಣತಿ ನಡೆಯಬೇಕಿತ್ತು. 2021ರ ಜನಗಣತಿಗೆ 2020ರ ಸೆಪ್ಟೆಂಬರ್ ತಿಂಗಳಿನಿಂದಲೇ ತಯಾರಿ ಪ್ರಕ್ರಿಯೆ ಆರಂಭವಾಗಬೇಕಿತ್ತಾದರೂ, ಕೊರೊನಾ ಸೋಂಕು ಪಿಡುಗಿನಿಂದ ಜನಗಣತಿ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಸ್ಥಗಿತಗೊಂಡಿದ್ದವು. ಇದೀಗ ಜನಗಣತಿಗೆ ಸಂಬಂಧಿಸಿ …
Read More »‘ವೈದ್ಯಕೀಯ ಸೀಟು ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮ’
ಬೆಂಗಳೂರು: ‘ವೈದ್ಯಕೀಯ ಕಾಲೇಜುಗಳಲ್ಲಿನ ಸೀಟ್ ಬ್ಲಾಕಿಂಗ್ ದಂಧೆ ತಡೆಯಬೇಕು ಮುಂದಿನ ವರ್ಷದಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ ನೀಡಿದರು. ವಿಧಾನಪರಿಷತ್ನಲ್ಲಿ ಬಿಜೆಪಿಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾನೂನಿನಲ್ಲಿರುವ ಲೋಪಗಳನ್ನು ಬಳಸಿಕೊಂಡು ಸೀಟ್ ಬ್ಲಾಕಿಂಗ್ ವ್ಯವಹಾರ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದಲ್ಲಿರುವ 65 ವೈದ್ಯಕೀಯ ಕಾಲೇಜುಗಳ ಪೈಕಿ 45 ಕಾಲೇಜುಗಳು ಖಾಸಗಿಯವರ ಒಡೆತನದಲ್ಲಿವೆ. ಈ ಕಾಲೇಜುಗಳು ಸುಪ್ರೀಂ ಕೋರ್ಟ್ ಆದೇಶವನ್ನು …
Read More »ಪುಣೆ: ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ; 25 ಅಂಗಡಿಗಳು ನಾಶ
ಪುಣೆ: ‘ಮಹಾರಾಷ್ಟ್ರದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು. ‘ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿವೆ’ ಎಂದು ಅಧಿಕಾರಿಯೊಬ್ಬರು ಹೇಳಿದರು. ‘ನಮಗೆ ಈ ಬಗ್ಗೆ ಮಾಹಿತಿ …
Read More »
Laxmi News 24×7