ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …
Read More »ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡೀತಾನಂತೆ…!!
ಬೆಳಗಾವಿ: ಕನ್ನಡಿಗರನ್ನೆ ಅಟ್ಟಾಡಿಸಿ ಹೊಡ್ತಿವಿ ಎಂದು ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಹೂಂಕರಿಸಿ ಸಂಕಷ್ಟಕ್ಕೆ ಬಿದ್ದಿದ್ದಾನೆ. ಬೆಳಗಾವಿ ನೆಲದಲ್ಲಿ ನಿಂತುಕೊಂಡು ಈ ರೀತಿ ಧಮ್ಕಿ ಹಾಕಿದವ ಎಂಇಎಸ ಮುಖಂಡ ಶುಭಂ ಸಾಳುಂಕೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡು ಒಂದಾಗಿವೆ ಎಂದಿರುವ ಸಾಳುಂಕೆ, ಹಳದಿ ಕೆಂಪು ಬಣ್ಣದ ಶಾಲು ಧರಿಸಿದವರನ್ನು ಸಿಕ್ಕ ಸಿಕ್ಕಲ್ಲಿ ನಾವು ಹೊಡ್ತಿವಿ ಎಂದಿದ್ದಾನೆ. ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ಕನ್ನಡಿಗರು ಮತ್ತು ಸರಕಾರಕ್ಕೆ ಎಚ್ಚರ …
Read More »ಮತ್ತೆ ಲಾಕ್ಡೌನ್ ಆಗದಿರಲಿ; ಸಾರ್ವಜನಿಕರ ಪಾತ್ರ ಮುಖ್ಯ
ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಎಲ್ಲೆ ಮೀರುತ್ತಿದ್ದು, ಒಂದೊಂದೇ ಜಿಲ್ಲೆಗಳು ಲಾಕ್ಡೌನ್ಗೆ ಮೊರೆ ಹೋಗುತ್ತಿವೆ. ಕರ್ನಾಟಕದಲ್ಲಿ ಸದ್ಯಕ್ಕೆ ಅಂಥ ಪರಿಸ್ಥಿತಿ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲವಾದರೂ ಇದು ಅಷ್ಟೊಂದು ಸರಳವಾದ ವಿಚಾರ ವಂತೂ ಅಲ್ಲ. ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಏರಿಕೆ ಯಾಗುತ್ತಿರುವುದನ್ನು ಗಮನಿಸಿದರೆ ನಾವು ಇನ್ನೊಮ್ಮೆ ಲಾಕ್ಡೌನ್ನತ್ತ ಮುಖ ಮಾಡದೆ ಇರುವಂತೆ ನೋಡಿಕೊಳ್ಳಬೇಕಾಗಿದೆ. ಇದನ್ನೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಿ ಒತ್ತಿ ಹೇಳುತ್ತಿರುವುದು. ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳುವ ಮೂಲಕ ನಾವು …
Read More »ಪೆಟ್ರೋಲ್, ಡೀಸೆಲ್ ಜಿಎಸ್ಟಿ ವ್ಯಾಪ್ತಿಗೆ ಇಲ್ಲ: ನಿರ್ಮಲಾ ಸೀತಾರಾಮನ್
ನವದೆಹಲಿ: ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ವಿಮಾನ ಇಂಧನ (ಎಟಿಎಫ್) ಮತ್ತು ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ತರುವ ಪ್ರಸ್ತಾವ ಈ ಹಂತದಲ್ಲಿ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ‘ಈ ಉತ್ಪನ್ನಗಳನ್ನು ಜಿಎಸ್ಟಿ ವ್ಯವಸ್ಥೆಯ ಅಡಿ ತರುವುದು ಯಾವಾಗಿನಿಂದ ಎಂಬ ಬಗ್ಗೆ ಜಿಎಸ್ಟಿ ಮಂಡಳಿ ಶಿಫಾರಸು ಮಾಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ, ರಾಜ್ಯಗಳಿಗೂ ಪ್ರಾತಿನಿಧ್ಯ ಇರುವ ಜಿಎಸ್ಟಿ …
Read More »GST ಪರಿಹಾರʼವಾಗಿ ರಾಜ್ಯಗಳಿಗೆ ಕೊನೆಯ ಕಂತಾಗಿ ʼ1.10 ಲಕ್ಷ ಕೋಟಿ ರೂʼ. ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!
ನವದೆಹಲಿ: 2020ರಲ್ಲಿ ಕೋವಿಡ್ -19 ಹರಡಿಯನ್ನ ತಡೆಗಟ್ಟಲು ಲಾಕ್ ಡೌನ್ ಮಾಡಿದ್ದರಿಂದ ಕೇಂದ್ರ ಮತ್ತು ರಾಜ್ಯಗಳ ಆದಾಯವು ತೀವ್ರವಾಗಿ ಕುಸಿಯಿತು. ಮಾರ್ಚ್-ಸೆಪ್ಟೆಂಬರ್ 2020ರ ಅವಧಿಯ ಡೇಟಾ ನೋಡೋದಾದ್ರೆ, ಈ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಜಿಎಸ್ಟಿ ಆದಾಯದ ಗ್ರಾಫ್ ತೀವ್ರವಾಗಿ ಕುಸಿಯಿತು. ಮಾರ್ಚ್ 22ರಿಂದ ದೇಶಾದ್ಯಂತ ಲಾಕ್ ಡೌನ್ ನಂತ್ರ ಹಲವಾರು ತಿಂಗಳುಗಳ ಕಾಲ ಆರ್ಥಿಕ ಚಟುವಟಿಕೆ, ಉತ್ಪಾದನೆ, ಉತ್ಪಾದನೆ ಮತ್ತು ಕಾರ್ಯಚಟುವಟಿಕೆಗಳು ಸ್ಥಗಿತಗೊಂಡವು. ಈ ಕಾರಣದಿಂದಾಗಿ ಮಾರ್ಚ್-ಆಗಸ್ಟ್ 2020ರ …
Read More »ಇನ್ಮುಂದೆ ಪಡಿತರ ಚೀಟಿ ಬೇಕೆಂದಿಲ್ಲ..! ಯಾಕೆ..? ಪೂರ್ಣ ಮಾಹಿತಿ ಇಲ್ಲಿದೆ.
ನವ ದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಗೆ ಈಗ ತಾಂತ್ರಿಕ ಬೆಂಬಲ ದೊರಕಿದೆ. ದೇಶದ ಯಾವುದೇ ಭಾಗದಲ್ಲಿ ಪಡಿತರ ಪಡೆಯಲು ಜನರಿಗೆ ಅನುಕೂಲವಾಗುವ ಈ ಒನ್ ನೇಷನ್ ಒನ್ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಸ್ಮಾರ್ಟ್ ಫೋನ್ ಆಪ್ ವೊಂದನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ. ಪಡಿತರ ಕಾರ್ಡ್ ಹೊಂದಿದವರಿಗೆ ಸುಲಭವಾಗುವ ಹಾಗೆ ಕೇಂದ್ರ ಸರ್ಕಾರ ‘ಮೇರಾ ರೇಷನ್’ ಮೊಬೈಲ್ ಆಯಪ್ ನ್ನು …
Read More »ಮತ್ತೆ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚಿಗಷ್ಟೆ ಕಣ್ಣಿನ ಸರ್ಜರಿಗಾಗಿ ಆಸ್ಪತ್ರೆ ಸೇರಿದ್ದ ಅಮಿತಾಬ್ ಇದೀಗ 2ನೇ ಎರಡನೇ ಕಣ್ಣಿನ ಸರ್ಜರಿಗಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಮಾರ್ಚ್ 15) ಅಮಿತಾಬ್ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿದ್ದು, ಸರ್ಜರಿ ಯಶಸ್ವಿಯಾಗಿದೆ ಎಂದು ಸ್ವತಃ ಅಮಿತಾಬ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆಕೊಂಡಿರುವ ಬಿಗ್ ಬಿ, ‘ನನ್ನ ಎರಡನೇ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆರೋಗ್ಯದಲ್ಲೂ ಚೇತರಿಕೆ ಕಾಣುತ್ತಿದೆ’ ಎಂದು ಟ್ವೀಟ್ …
Read More »ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕರ್ನಾಟಕ ಭವನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ವೃಂದಕ್ಕೆ 7, ಉಳಿಕೆ ಮೂಲ ವೃಂದದ 25 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು, ಸ್ವಾಗತಕಾರರು, ಕಿಚನ್ ಮೇಟ್, ಪ್ಯೂನ್ ಕಂ ವಾಚ್ ಮೆನ್, ಗಾರ್ಡನರ್ ಕಂ ಸ್ವೀಪರ್ ಸೇರಿ ಒಟ್ಟು 32 ಹುದ್ದೆಗಳ ನೇಮಕಾತಿಗೆ …
Read More »ಶಿವಸೇನೆ ಕಚೇರಿ ಮುಚ್ಚಿಸಲು ವಾಹನಗಳ ಜಪ್ತಿಗೆ ಕನ್ನಡ ಕ್ರಿಯಾ ಸಮಿತಿ ಆಗ್ರಹ
ಕರ್ನಾಟಕ, ಕನ್ನಡಿಗರ ವಿರುದ್ಧವೇ ನಾಡದ್ರೋಹಿ ಚಟುವಟಿಕೆ ನಡೆಸುವ ಶಿವಸೇನೆಗೆ ಕರ್ನಾಟಕದ ನೆಲದಲ್ಲಿಯೇ ಕಾರ್ಯಾಲಯ ನಡೆಸಲು ಅವಕಾಶ ಮಾಡಿಕೊಡುವದು ಎಷ್ಟು ಸರಿ? ನಮ್ಮ ವಿರುದ್ಧವೇ ಪಿತೂರಿ ನಡೆಸುವ ಇಂಥ ಸಂಘಟನೆಯ ವಾಹನಗಳು ನಮ್ಮ ಮುಂದೆಯೇ ನಾಮಫಲಕ ಹಾಕಿಕೊಂಡು ಸಂಚರಿಸಲು ಅವಕಾಶ ಮಾಡಿಕೊಡುವದು ಎಷ್ಟು ಸಮಂಜಸ? ಕೂಡಲೇ ಶಿವಸೇನೆಯ ಬೆಳಗಾವಿ ಕಾರ್ಯಾಲಯವನ್ನು ಮುಚ್ಚಿಸಬೇಕು ಮತ್ತು ಈ ಸಂಘಟನೆಯ ವಾಹನಗಳನ್ನು ಜಪ್ತಿ ಮಾಡಬೇಕೆಂದು ಆಗ್ರಹಿಸುವ ಮನವಿಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …
Read More »ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …
Read More »
Laxmi News 24×7