Breaking News

ರಾಷ್ಟ್ರೀಯ

ಕಿತ್ತೂರು ಕರ್ನಾಟಕಕ್ಕೆ 371 ಜೆ ವಿಶೇಷ ಸ್ಥಾನ ನೀಡಿ : ಮಾಜಿ ಶಾಸಕ ಕೋನರೆಡ್ಡಿ ಆಗ್ರಹ

ಬೆಳಗಾವಿ : ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳಿಗೆ ನೀಡಿರುವ ಸಂವಿಧಾನದ ಪರಿಚ್ಛೇದ 371 ಜೆ ತಿದ್ದುಪಡಿ ಮಾಡಿ ಮುಂಬೈ ಕರ್ನಾಟಕದ ಪ್ರದೇಶದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವಂತೆ ಮಾಜಿ ಶಾಸಕ ಎನ್.ಹೆಚ್. ಕೋನರೆಡ್ಡಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ವಿಭಾಗದ ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಡಾ. ನಂಜುಂಡಪ್ಪ ವರದಿ ಜಾರಿಯಾದರೂ …

Read More »

ಪಕ್ಕಾ ಸಸ್ಯಾಹಾರಿ ಮಹಿಳೆಯೊಬ್ಬರಿಗೆ ಚಿಕನ್​ ಪಿಜ್ಜಾ ಪಾರ್ಸೆಲ್​ ಕಳುಹಿಸಿ ಇದೀಗ ಒಂದು ಕೋಟಿ ರೂಪಾಯಿ ಪರಿಹಾರವನ್ನು ಪಿಜ್ಜಾ ಕಂಪೆನಿ ತಲೆ ಮೇಲೆ ಹಾಕಿಕೊಂಡಿದೆ.

ಗಾಜಿಯಾಬಾದ್ (ಉತ್ತರ ಪ್ರದೇಶ): ಪಕ್ಕಾ ಸಸ್ಯಾಹಾರಿ ಮಹಿಳೆಯೊಬ್ಬರಿಗೆ ಚಿಕನ್​ ಪಿಜ್ಜಾ ಪಾರ್ಸೆಲ್​ ಕಳುಹಿಸಿ ಇದೀಗ ಒಂದು ಕೋಟಿ ರೂಪಾಯಿ ಪರಿಹಾರವನ್ನು ಪಿಜ್ಜಾ ಕಂಪೆನಿ ತಲೆ ಮೇಲೆ ಹಾಕಿಕೊಂಡಿದೆ. ಮನೆಗೆ ಬಂದ ಪಾರ್ಸೆಲ್​ ನೋಡಿ ವೆಜ್​ ಪಿಜ್ಜಾ ಬಂತೆಂದು ತಿಳಿದು ಚಿಕನ್​ ತಿಂದ ಮಹಿಳೆ ಗರಂ ಆಗಿದ್ದು, ಪಿಜ್ಜಾ ಕಂಪೆನಿ ವಿರುದ್ಧ ಒಂದು ಕೋಟಿ ರೂಪಾಯಿ ಪರಿಹಾರಕ್ಕೆ ದಾವೆ ಹೂಡಿದ್ದಾರೆ. ಅಷ್ಟೊಂದು ಪರಿಹಾರವನ್ನು ನೀಡಲು ಕೋರ್ಟ್​ ಆದೇಶ ಮಾಡದೇ ಹೋದರೂ, ಪಿಜ್ಜಾ …

Read More »

ನನಗೆ SIT ಮೇಲೆ ನಂಬಿಕೆ ಇಲ್ಲ , ಅಲ್ಲಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ..!

ವಿಜಯಪುರ : ನನಗೆ SIT ಮೇಲೆ ನಂಬಿಕೆ ಇಲ್ಲ ಎಷ್ಟು ಪಾರದರ್ಶಕತೆಯಿಂದ ನಡಿಯುತ್ತೋ ನನಗೆ ಸಂಶಯವಿದೆ ಎಂದು ಬಿಜೆಪಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ರಾಜ್ಯಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ಹೌದು ಇಂದು ವಿಜಯಪುರ ನಗರದಲ್ಲಿ ಮಾದ್ಯಮ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ ನನಗೆ SIT ಮೇಲೆ ಸಂಶಯವಿದೆ ಯಾಕಂದ್ರೆ ಅಲ್ಲಿರುವಂತಹ ಒಬ್ಬ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ಈ ಹಿಂದೆ ಡ್ರಗ್ಸ್ …

Read More »

ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ

ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …

Read More »

ಹೃತಿಕ್ ರೋಷನ್ ಅವರ ಮಾಜಿ ಪತ್ನಿ ಸುಸ್ಸೇನ್ ಖಾನ್ಬಿಗ್ ಬಾಸ್ ಸ್ಪರ್ಧಿ ಅರ್ಸ್ಲಾನ್ ಗೋನಿ ಜತೆ ಡೇಟಿಂಗ್‍ನಲ್ಲಿದ್ದಾರೆ

ಮುಂಬೈ : ಬಾಲಿವುಡ್ ನಟ ಹೃತಿಕ್ ರೋಷನ್ ಅವರ ಮಾಜಿ ಪತ್ನಿ ಸುಸ್ಸೇನ್ ಖಾನ್ ಒಬ್ಬಂಟಿ ಜೀವನಕ್ಕೆ ಗುಡ್ ಬೈ ಹೇಳಿದ್ದಾರಂತೆ. ಈಕೆ ಮತ್ತೆ ಲವ್‍ನಲ್ಲಿ ಬಿದ್ದಿದ್ದಾರಂತೆ. ಬಿಗ್ ಬಾಸ್ ಸ್ಪರ್ಧಿ ಅರ್ಸ್ಲಾನ್ ಗೋನಿ ಜತೆ ಡೇಟಿಂಗ್‍ನಲ್ಲಿದ್ದಾರೆ ಎನ್ನುವ ರೂಮರ್ ಬಿಟೌನ್ ಅಂಗಳದಲ್ಲಿ ಜೋರಾಗಿ ಕೇಳಿ ಬರುತ್ತಿದೆ. 2014 ರಲ್ಲಿ ಹೃತಿಕ್ ರೋಷನ್ ಹಾಗೂ ಸುಸ್ಸೇನಾ ಪರಸ್ಪರ ವಿಚ್ಛೇದನ ಪಡೆಯುವ ಮೂಲಕ ತಮ್ಮ 14 ವರ್ಷಗಳ ದಾಂಪತ್ಯ ಜೀವನಕ್ಕೆ ಇತಿಶ್ರೀ …

Read More »

ವರ್ಚಸ್ಸಿಗೆ ಧಕ್ಕೆ ಆಗೋದಿಲ್ಲ,ನಮ್ಮವರು ನಮ್ಮ ಜೊತೆಗಿದ್ದಾರೆ.

ಬೆಳಗಾವಿ-ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ,ಎಸ್‌ಐಟಿ ಪ್ರಕರಣಕ್ಕೆ ತನಿಖೆ ಕೊಟ್ಟಿದ್ದು ಸದ್ಯದ ಮಟ್ಟಿಗೆ ಸ್ವಾಗತ ಮಾಡ್ತೇನೆ,ಎಂದು,ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಹಂತಕ್ಕೆ ತನಿಖೆ ಮಾಡ್ತಾರೆ ಏನ್ ಮಾಡ್ತಾರೆ ಕಾದು ನೋಡಬೇಕು, ನಾವು ಸದ್ಯಕ್ಕೆ ಎಸ್‌ಐಟಿ ತನಿಖೆ ಕೊಟ್ಟಿದ್ದು ಸ್ವಾಗತ ಮಾಡುತ್ತೇವೆ, ಹೇಗೆ ಇನ್ವೆಸ್ಟಿಗೇಷನ್ ಮಾಡ್ತಾರೆ ಅದರ ಮೇಲೆ ಅವಲಂಬಿತವಾಗಿದೆ. ಕೇಸ್ ದಾಖಲಾಗಿಲ್ಲ, ವಿಚಾರಣೆ ಮಾಡುವ ಅಧಿಕಾರ ಮಾತ್ರ ಕೊಟ್ಟಿದ್ದಾರೆ, ನಿನ್ನೆ …

Read More »

ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ

ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Read More »

ವಿಡಿಯೋದಲ್ಲಿರುವುದು ರಮೇಶ್‌ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಎಸ್‌ಐಟಿ ತನಿಖೆಗೆ ವಹಿಸಿರುವ ಸಿಡಿ ಪ್ರಕರಣದ ವಿಡಿಯೋದಲ್ಲಿರುವುದು ರಮೇಶ್‌ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಡಿಯೋದಲ್ಲಿ ಯಾರಿದ್ದಾರೆ ಎನ್ನುವುದಕ್ಕಿಂತ ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು ಹಾಗೂ ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದು ಹೇಳಿರುವುದು ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು ಎಂದು …

Read More »

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ : ಈ ತಿಂಗಳೊಳಗೆ ಪ್ರಯಾಣಿಕ ರೈಲುಗಳ ಸಂಚಾರ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಈ ತಿಂಗಳೊಳಗೆ ಶೇಕಡ 85ರಷ್ಟು ಪ್ರಯಾಣಿಕ ರೈಲುಗಳ ಕಾರ್ಯಾರಂಭ ಮಾಡಲಿವೆ ಎಂದು ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಸದ್ಯ ಉಪನಗರ ರೈಲುಗಳ ಪೈಕಿ ಶೇಕಡ 95ರಷ್ಟು ರೈಲುಗಳು ಸಂಚಾರ ಆರಂಭಗೊಂಡಿದ್ದು, ಶೇ 75ರಷ್ಟು ಮೇಲ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳು ಓಡಾಡುತ್ತಿವೆ. ಈ ಪ್ರಮಾಣವನ್ನ ಶೀಘ್ರವೇ ಶೇಕಡ 85ರಷ್ಟು ಹೆಚ್ಚಿಸಲಾಗುವುದು’ ಎಂದರು.  

Read More »

16 ವರ್ಷ ಮೇಲ್ಪಟ್ಟರೆ ಬಾಲಾರೋಪಿ ಅಲ್ಲ?

ನವದೆಹಲಿ: ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ (ಪೋಸ್ಕೊ) ಅಡಿಯಲ್ಲಿ ವಯಸ್ಕ ಆರೋಪಿಯ ವಯೋಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸಬೇಕು ಎಂದು ಉನ್ನತಮಟ್ಟದ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. 2017ರಲ್ಲಿ ಪೋಸ್ಕೊ ಅಡಿಯಲ್ಲಿ 32,608 ಪ್ರಕರಣಗಳು ದಾಖಲಾಗಿದ್ದವು. 2019ರಲ್ಲಿ ಈ ಪ್ರಮಾಣ 47,325ಕ್ಕೆ (ಶೇ. 45) ಏರಿಕೆ ಆಗಿದೆ. ಆದ್ದರಿಂದ ವಯೋಮಿತಿಯನ್ನು ಪುನರ್ ಪರಿಶೀಲಿಸುವ ಮತ್ತು ಸೈಬರ್ ಅಪರಾಧ ಎಸಗುವವರ ವಯಸ್ಸನ್ನು ಪುನರ್ ವಿಮಶಿಸಬೇಕಿದೆ ಎಂದು ಸಮಿತಿ ಶಿಫಾರಸು …

Read More »