Breaking News

ರಾಷ್ಟ್ರೀಯ

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …

Read More »

ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …

Read More »

ಮಹಾರಾಷ್ಟ್ರದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೊನಾ; ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್​ ಒಂದೇ ರಾಜ್ಯದಲ್ಲಿ ದಾಖಲು

ಮಹಾರಾಷ್ಟ್ರ: ನೆರೆರಾಜ್ಯ ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈಗಾಗಲೇ ದೇಶದ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಿದ್ದು, ರಾಜ್ಯದ ಜನತೆಯಲ್ಲಿ ಆತಂಕ ಮೂಡುವಂತಾಗಿದೆ. ಮೊನ್ನೆ ಸುಮಾರು13,000 ನಿನ್ನೆ ಸುಮಾರು 14,000 ಕೊರೊನಾ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್​ಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಲು ಮೂರು ಮುಖ್ಯ ಕಾರಣಗಳನ್ನ ಆರೋಗ್ಯ ಇಲಾಖೆ ತಿಳಿಸಿದೆ. ಕಡಿಮೆ ಟೆಸ್ಟಿಂಗ್ :​- …

Read More »

ನಮ್ಮ ದೇಶದ ಸರ್ಕಾರಿ ಶಾಲಾ ಮಕ್ಕಳ ಟ್ಯಾಲೆಂಟ್ ಕಡಿಮೆ ಏನೂ ಇಲ್ಲ..!

ನಮ್ಮ ದೇಶದ ಸರ್ಕಾರಿ ಶಾಲಾ ಮಕ್ಕಳ ಟ್ಯಾಲೆಂಟ್ ಕಡಿಮೆ ಏನೂ ಇಲ್ಲ..! ತಮಿಳುನಾಡಿನ ತಿರುಚ್ಚಿಯ ಪ್ರೌಢಶಾಲಾ ಮಕ್ಕಳ ಹೊಸ ಆವಿಷ್ಕಾರ ಇದು…!! ವಾಟರ್ ಕ್ಯಾನ್’ಗಳನ್ನು ಬಳಸಿ ತುಂಬಾ ಕಡಿಮೆ ಖರ್ಚಿನಲ್ಲಿ ಟಾಯ್ಲೆಟ್ ಬಾತ್’ಗಳನ್ನು ಉಪಯೋಗಿಸುವುದನ್ನು ಕಂಡುಹಿಡಿದಿದ್ದಾರೆ…!! ಪಬ್ಲಿಕ್ ಟಾಯ್ಲೆಟ್, ಕಲ್ಯಾಣ ಮಂಟಪ, ಸರ್ಕಾರಿ ಕಚೇರಿ, ಶಾಲೆ ಕಾಲೇಜು, ಇತರೆ ಜಾಗಗಳಲ್ಲಿ ಕಡಿಮೆ ಖರ್ಚಿನಲ್ಲಿ ಟಾಯ್ಲೆಟ್ ಬಾತ್ ಗಳು ಉಪಯೋಗಿಸುತ್ತಿದ್ದಾರೆ…!

Read More »

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.  

Read More »

ಮಾರ್ಚ್ 11ರಂದು ಬಿಟ್ ಕಾಯಿನ್ ಮೌಲ್ಯ ಭಾರಿ ಏರಿಕೆ

ಬೆಂಗಳೂರು, ಮಾರ್ಚ್11: ಕಳೆದ ಕೆಲ ದಿನಗಳು ಕುಸಿತ ಕಾಣುತ್ತಿದ್ದ ಬಿಟ್ ಕಾಯಿನ್ ಮೌಲ್ಯ ಸತತವಾಗಿ ಏರಿಕೆ ಕಾಣುತ್ತಿದೆ. ಗುರುವಾರ(ಮಾರ್ಚ್ 11)ರಂದು ಈ ಸಮಯಕ್ಕೆ ಏರಿಕೆ ಕಂಡು 55, 000 ಡಾಲರ್ ಗಡಿ ದಾಟಿದೆ. ಡಿಜಿಟಲ್ ದುಡ್ಡು ಬಿಟ್ ಕಾಯಿನ್ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿ ಅಚ್ಚರಿ ಮೂಡಿಸಿದ ಬಳಿಕ ಭಾರಿ ಕುಸಿತ ಕಂಡಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 27,734 ಡಾಲರ್ ಮೌಲ್ಯ ಹೊಂದಿದ್ದ ಬಿಟ್ ಕಾಯಿನ್ …

Read More »

ಗೋಕಾಕ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..

ಗೋಕಾಕ ಫಾಲ್ಸ್‌ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಏರುತ್ತಿರುವ ಕೊರೋನಾ ಪ್ರಕರಣ; ನಾಗ್ಪುರದಲ್ಲಿ ಒಂದು ವಾರ ಲಾಕ್​ಡೌನ್

ಮುಂಬೈ (ಮಾರ್ಚ್​ 11); ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಮತ್ತೆ ಕೊರೋನಾ ಸೋಂಕು ಪ್ರಕರಣಗಳು ಏರುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು ಶೇ.85.91 ರಷ್ಟು ಹೊಸ ಕೊರೋನಾ ಪ್ರಕರಣಗಳು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಂತೆ ದೇಶದಲ್ಲಿ ಒಂದೇ ದಿನದಲ್ಲಿ 22,854 ಹೊಸ ಪ್ರಕರಣಗಳು ಕಂಡುಬಂದಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಅತೀ …

Read More »

ಸಮುದ್ರದಲ್ಲಿ ತೇಲಿ ಬಂತು ಫುಲ್​ ಬಾಟಲ್​- ವಿದೇಶಿ ಮದ್ಯ ಎಂದು ಕುಡಿದ ಮೀನುಗಾರರು- ಮುಂದಾದದ್ದು ದುರಂತ!

ಚೆನ್ನೈ: ಸಮುದ್ರದಲ್ಲಿ ದ್ರವ ತುಂಬಿದ ಕೆಲವು ಬಾಟಲಿಗಳು ತೇಲಿ ಬಂದಿದ್ದನ್ನು ನೋಡಿದ ಮೀನುಗಾರರು ಇವು ವಿದೇಶಿ ಮದ್ಯ ಎಂದು ಸೇವನೆ ಮಾಡಿರುವ ಘಟನೆ ತಮಿಳುನಾಡಿನ ರಾಮೇಶ್ವರದಲ್ಲಿ ನಡೆದಿದೆ. ಆದರೆ ಇದು ಅವರ ಜೀವಕ್ಕೆ ಮುಳುವಾಗಿದೆ. ಅದರಲ್ಲಿ ಇದ್ದುದು ಮದ್ಯವಾಗಿರದೇ ಯಾವುದೇ ವಿಷಪೂರಿತ ದ್ರವವಾಗಿತ್ತು. ಅದನ್ನು ಕುಡಿಯುತ್ತಿದ್ದಂತೆಯೇ ಮೂವರು ಮೀನುಗಾರರು ಮೃತಪಟ್ಟಿದ್ದಾರೆ. ಮೃತರನ್ನು ರಾಮೇಶ್ವರಂ ಬಳಿಯ ತಂಗಾಚಿಮಡಂನ ಅಂಥೋನಿಸ್ವಾಮಿ (38) ಅರೋಕಿಯಾ ಪ್ರೋಹಿತ್ (50) ಹಾಗೂ ವಿನೋದ್ ಕುಮಾರ್ (26) ಎಂದು …

Read More »

ನಂಗೆ ಬೇಕು. ನಂಗೆ ಬೇಕು. ಮುಗಿಬಿದ್ದು ಮದ್ಯದಂಗಡಿ ಹರಾಜಿಗೆ ಬಂದ ಜನ- 510 ಕೋಟಿ ರೂ.ಗೆ ಸೇಲ್​!

ಹನುಮಾನ್‌ಗಢ (ರಾಜಸ್ಥಾನ): ವಸ್ತುಗಳನ್ನು, ಅಂಗಡಿಗಳನ್ನು ಹರಾಜು ಮಾಡುವುದು ದೊಡ್ಡ ವಿಷಯವೇನಲ್ಲ. ಕೆಲವೊಮ್ಮೆ ಅಚ್ಚರಿ ಎನ್ನುವಂಥ ದರದಲ್ಲಿ ಅವುಗಳು ಹರಾಜು ಆಗುವುದೂ ಇದೆ. ಅದರಲ್ಲಿಯೂ ದೇವರ ಸನ್ನಿಧಿಯಲ್ಲಿ ಇಟ್ಟಿರುವ ವಸ್ತುಗಳು 2-3 ಪಟ್ಟೆ ಹೆಚ್ಚಿಗೆ ಹಣಕ್ಕೆ ಹರಾಜಾಗುವುದು ಹೊಸ ವಿಷಯವೆನಲ್ಲ. ಆದರೆ ಅಚ್ಚರಿಯೆಂದರೆ, ಇಲ್ಲೊಂದು ಮದ್ಯದಂಗಡಿ ಮಾಲೀಕರೇ ಶಾಕ್​ ಆಗುವಷ್ಟು ಹೆಚ್ಚುವರಿ ದರದಲ್ಲಿ ಹರಾಜು ಆಗಿದೆ. ಅಂಥದ್ದೊಂದು ಅಚ್ಚರಿ ನಡೆದಿರುವುದು ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ನೋಹಾರ್​ ಎಂಬ ಗ್ರಾಮದ ಮದ್ಯದ ಅಂಗಡಿಯೊಂದು …

Read More »