Breaking News

ರಾಷ್ಟ್ರೀಯ

ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.

ಪಣಜಿ: ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ. ಈ ಕುರಿತಂತೆ ಕ್ಷೇತ್ರೀಯ ಸಂಚಾಲಕ ಸಮೀರ್ ವಾನಖೇಡೆ ಮಾಹಿತಿ ನೀಡಿ- ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಮಾದಕ ಪದಾರ್ಥ ಪ್ರಕರಣವೊಂದರಲ್ಲಿ ಶಂಕಿತರ ಶೋಧ ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಶಂಕಿತರು ಗೋವಾದಲ್ಲಿರುವ ಮಾಹಿತಿಯ ಮೇರೆಗೆ ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿದರು. ಈ ಎರಡೂ ಸ್ಥಳಗಳಲ್ಲಿ ಬೃಹತ್ ಪ್ರಮಾಣದಲ್ಲಿ …

Read More »

ಬೆಳಗಾವಿಯಲ್ಲಿ ಆತ್ಮನಿರ್ಭರ ಮಹಿಳೆ; ರೊಟ್ಟಿ ತಯಾರಿಸಿ 40 ಕುಟುಂಬಗಳಿಗೆ ಆಸರೆಯಾದ ಮಹಾದೇವಿ ಕಬ್ಬೂರು

ಬೆಳಗಾವಿ (ಮಾ. 7): ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಕೇವಲ ಅಡುಗೆ ಮಾಡೋದು ಮಕ್ಕಳು ಸಂಸಾರ ನೋಡಿಕೊಂಡು ಹೋಗುವವರೇ ಜಾಸ್ತಿ. ಆದರೆ, ಇಲ್ಲೋರ್ವ ಮಹಿಳೆ ತನ್ನ ಸಂಸಾರ ಜೊತೆಗೆ ಇತರೆ 40 ಜನರ ಸಂಸಾರಕ್ಕೂ ಆಸರೆಯಾಗಿದ್ದಾರೆ. ಅವರ ಒಂದೇ  ಒಂದು ಕೆಲಸ 40 ಕುಟುಂಬಗಳಿಗೆ ಆಸರೆಯಾಗಿದೆ. ಹಾಗಾದರೆ ಯಾರು ಆ ಮಹಿಳೆ? ಏನು ಆ ಕೆಲಸ ಅಂತೀರಾ? ಈ ಸ್ಟೋರಿ ಓದಿ… ‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ಆಳಬಲ್ಲದು’ ಎಂಬ …

Read More »

ಬಿಗ್​ ಬಾಸ್​ನಲ್ಲಿ ನಿರ್ಮಲಾ ಚೆನ್ನಪ್ಪ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ ಪತಿ ಸರ್ದಾರ್​ ಸತ್ಯ!

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದಾರೆ. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿದೆ. ಅದರ ಬಗ್ಗೆ ಅವರ ಪತಿ ಸರ್ದಾರ್ ಸತ್ಯ ಬಾಯಿ ಬಿಟ್ಟಿದ್ದಾರೆ. ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್​ ಎಂದರೆ, ಅವರು ಕ್ಯಾಮರಾ ಎದುರು …

Read More »

ರಘು ಗೌಡಗೆ ಬಿಗ್ ಗಿಫ್ಟ ಕೊಟ್ಟು ಮನೆಯಿಂದ ಹೊರಬಂದ ಧನುಶ್ರೀ

ಬಿಗ್ ಬಾಸ್ ಕನ್ನಡ 8’ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ.   ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ …

Read More »

ಬಜೆಟ್;ತ್ರಾಸಿ, ಸೋಮೇಶ್ವರ ಸೇರಿ ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿ, ಮತ್ಸ್ಯದರ್ಶಿನಿ ಸ್ಥಾಪನೆ

ಮಣಿಪಾಲ:ಉಡುಪಿ ಜಿಲ್ಲೆಯ ತ್ರಾಸಿ-ಮರವಂತೆ, ಒತ್ತಿನೆಣೆ ಹಾಗೂ ಇತರ ಕಡಲ ತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದರು. ಮೀನುಗಾರಿಕೆಗೆ ಸಿಕ್ಕಿದ್ದೇನು? ಯಾಂತ್ರೀಕೃತ ದೋಣಿಗಳಿಗೆ 1.5 ಲಕ್ಷ ಕಿಲೋ ಲೀಟರ್ …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

  ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು …

Read More »

ರೈತರು ಪ್ರತಿಭಟನೆ ಮಾಡುತ್ತಿರುವ ಸಿಂಘುವಿನಲ್ಲಿ ಗುಂಡಿನ ದಾಳಿ

ದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿ(ಭಾನುವಾರ) ಗುಂಡಿನ ದಾಳಿ ನಡೆದಿದೆ. ಅಪರಿಚಿತ ನಾಲ್ವರು ವ್ಯಕ್ತಿಗಳು ಕಾರಿನಲ್ಲಿ ಬಂದು ಗುಂಡು ಹಾರಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ರೈತರು ಸಾಮೂಹಿಕವಾಗಿ ಊಟ ಮಾಡುತ್ತಿದ್ದ ವೇಳೆ ಬಿಳಿ ಬಣ್ಣ ಆಡಿ ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಕಾರು ಚತ್ತೀಸ್ ಘಡದ ನಂಬರನ್ನು …

Read More »

ಬಜೆಟ್ ಪ್ರಮುಖಾಂಶಗಳು:ಮಹದಾಯಿ ಯೋಜನೆಗೆ 1677 ಕೋಟಿ

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿದವರಿಗೆ ಧನ್ಯವಾದ ಹೇಳಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕಲ್ಲಾಗು ಬೆಟ್ಟದಡಿ ಮನದಿ ಮಲ್ಲಿಗೆಯಾಗು… ಸಾಲುಗಳನ್ನು ಸ್ಮರಿಸುತ್ತಾ ಆಯವ್ಯಯ ಮಂಡನೆ ಮಾಡಿದರು. ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಆರ್ಥಿಕ ವರ್ಷ ಮೊದಲ ಮೂರು ತಿಂಗಳು ರಾಜಸ್ವ ಸಂಗ್ರಹ ಇಳಿಕೆಯಾಗಿದೆ. ಆದರೆ ಈಗ ರಾಜ್ಯದಲ್ಲಿ ಅಹಾರ ಉತ್ಪಾದನೆಯಲ್ಲಿ ನೂತನ ದಾಖಲೆ ನಿರ್ಮಿಸಿರುವುದು ಸಂತಸದ ಸಂಗತಿ ಎಂದರು. ಕೊರೊನಾ …

Read More »

ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ

ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ.     ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ. ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು …

Read More »