ಬೆಂಗಳೂರು: ‘ಜಾನುವಾರು ಸಾಗಣೆ ಮಾಡುವವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಕಾಯ್ದೆ-2020 ಅನ್ನು ಸದ್ಯಕ್ಕೆ ಕಠಿಣವಾಗಿ ಅನ್ವಯ ಮಾಡುವುದಿಲ್ಲ’ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ನೀಡಿರುವ ತನ್ನ ಭರವಸೆ ಮುಂದುವರಿಸಿದೆ. ಈ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನು ಗಮನದಲ್ಲಿ ಇಟ್ಟುಕೊಂಡು ತಿದ್ದುಪಡಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸಮಯ ನೀಡಿತು. ಇದೇ ವೇಳೆ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯ ಬೇಕು …
Read More »ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ
ಬೆಂಗಳೂರು. ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಹಿಸವರು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ …
Read More »ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ
ಗೋಕಾಕ: ಇಲ್ಲಿಯ ಎನ್ಇಎಸ್ ಶಾಲಾ ಆವರಣದಲ್ಲಿ ಶನಿವಾರದಂದು ನಡೆಯಲಿರುವ ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ ಬಸವಣ್ಣೆಪ್ಪ ಹೊಸಮನಿ ವೇದಿಕೆ.
Read More »ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ
ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು. ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ …
Read More »ಸುಧಾಕರ್ ಅವರ ಕಚೇರಿ ಮುಂದೆ ನಾನು ಪ್ರತಿಭಟನೆ ಮಾಡುತ್ತೇನೆ: ರೇಣುಕಾಚಾರ್ಯ
ಬೆಂಗಳೂರು (ಫೆ. 26): ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಂಪುಟ ವಿಸ್ತರಣೆಯ ಸಮಯದಿಂದಲೂ ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಮತ್ತೊಮ್ಮೆ ಸರ್ಕಾರದ ಕೆಲವು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು ತಮ್ಮದೇ ಸರ್ಕಾರದ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಕೆಲವು ಸಚಿವರು ಕೈಗೇ ಸಿಗೋದಿಲ್ಲ. ಅವರ ಪಿ.ಎಗಳು, ಪಿ.ಎಸ್ಗಳು ಫೋನೇ …
Read More »ಜಿಎಸ್ ಟಿ, ತೈಲ ಬೆಲೆ ಏರಿಕೆ ಖಂಡಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್, ಮಿಶ್ರ ಪ್ರತಿಕ್ರಿಯೆ
ನವದೆಹಲಿ:ಜಿಎಸ್ ಟಿಯಲ್ಲಿ ಕೆಲವು ವಿವಾದಾತ್ಮ ಅಂಶಗಳು ತೈಲ ಬೆಲೆ ಏರಿಕೆ ಖಂಡಿಸಿ ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ ಶುಕ್ರವಾರ(ಫೆ.26, 2021) ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ಇದರಲ್ಲಿ 40 ಸಾವಿರ ವ್ಯಾಪಾರಿಗಳ ಸಂಘಟನೆಯ 8 ಕೋಟಿ ವರ್ತಕರು ಭಾಗಿಯಾಗಿದ್ದು, ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅತೀಯಾದ ‘ಮದ್ಯ’ ಸೇವನೆಯಿಂದ ‘ಸ್ತನ ಕ್ಯಾನ್ಸರ್’ ..ಮಹಿಳೆಯರೇ ಹುಷಾರ್ ಜಿಎಸ್ ಟಿ ವ್ಯವಸ್ಥೆಯಲ್ಲಿ ಇತ್ತೀಚೆಗೆ ಮಾಡಿರುವ ತಿದ್ದುಪಡಿಯನ್ನು ತೆಗೆದು ಹಾಕಬೇಕು, ತೆರಿಗೆ ಸ್ತರವನ್ನು ಇನ್ನಷ್ಟು ಸರಳೀಕರಣಗೊಳಿಸಬೇಕು, …
Read More »ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ
ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ. ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತದೆಯೋ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು …
Read More »ಚೆನ್ನೈ-ಮಂಗಳೂರು ರೈಲಿನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ, ಮಹಿಳೆ ಸೆರೆ
ಕೋಯಿಕ್ಕೋಡ್: ಚೆನ್ನೈ- ಮಂಗಳೂರು ರೈಲಿನಲ್ಲಿ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಬಳಿ ಶುಕ್ರವಾರ ಭಾರಿ ಪ್ರಮಾಣದಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದು ರೈಲ್ವೆ ಸಂರಕ್ಷಣಾ ಪಡೆ ಇವನ್ನು ವಶಪಡಿಸಿಕೊಂಡಿದೆ. ಮುಂಬರುವ ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ವಿಭಾಗೀಯ ಭದ್ರತಾ ಆಯುಕ್ತ ಜಿತಿನ್ ಬಿ ರಾಜ್ ಅವರ ನೇತೃತ್ವದ ರೈಲ್ವೆ ಸಂರಕ್ಷಣಾ ಪಡೆಯು (ಆರ್ಪಿಎಫ್) ಶೋಧ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಅವರಿಗೆ ಮಹಿಳಾ ಪ್ರಯಣಿಕರೊಬ್ಬರ ಬಳಿ ಸ್ಫೋಟಕಗಳು ಸಿಕ್ಕಿವೆ. ‘ತಿರುವಣ್ಣಮಲೈ …
Read More »ಬಸವಕಲ್ಯಾಣ ಉಪಚುನಾವಣೆ: ಲಕ್ಷ್ಮಣ ಸವದಿ, ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕೆ!
ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. 18 ಟಿಕೆಟ್ ಆಕಾಂಕ್ಷಿಗಳ ಜೊತೆ ನಾವು ಸಭೆ ನಡೆಸಿದೆವು, ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಶುಕ್ರವಾರದಿಂದ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಪ್ರಚಾರ ಕಾರ್ಯದ ಉಸ್ತುವಾರಿಯೂ ಆಗಿರುವ ಲಕ್ಷ್ಮಣ ಸವದಿ ಹೇಳಿದ್ದಾರೆ, ಚುನಾವಣಾ ದಿನಾಂಕ ಪ್ರಕಟಿಸುವ ಮೊದಲೇ ಕ್ಷೇತ್ರದ ಎಲ್ಲಾ …
Read More »ಬಸವಕಲ್ಯಾಣ ಉಪಚುನಾವಣೆ : ಬಿಜೆಪಿಯಿಂದ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕೆ?
ಬೆಂಗಳೂರು : ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಲ್ಲಿ 18 ಆಕಾಂಕ್ಷಿಗಳಿದ್ದು, ಅವರ ಜೊತೆಗೆ ಸಭೆ ನಡೆಸಲಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಒಬ್ಬರು ಕಣಕ್ಕಿಳಿಯಬಹುದು ಎಂದು ಹೇಳಿದ್ದಾರೆ. ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪಕ್ಷ …
Read More »
Laxmi News 24×7