ಬೆಂಗಳೂರು,ಫೆ.25- ಶತಾಯಗತಾಯ ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲೇಬೇಕೆಂಬ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಇಂದು ಸಂಜೆ ಮಹತ್ವದ ದುಂಡುಮೇಜಿನ ಸಭೆ ನಡೆಯಲಿದೆ. ಈ ಸಭೆಗೆ ಸಚಿವರು, ಶಾಸಕರು, ಸಮಾಜದ ಮುಖಂಡರು ಸೇರಿದಂತೆ ಅನೇಕರನ್ನು ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿಗಳೇ ಖುದ್ದು ಆಹ್ವಾನಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಹತ್ವದ …
Read More »ಕ್ರಿಕೆಟ್ ಬೆಟ್ಟಿಂಗ್ ಗೃಹ ಮಂತ್ರಿ ಕಿವಿಗೂ ಬಿತ್ತು
ಬೆಳಗಾವಿ. ಕ್ರಿಕೆಟ್ ಬೆಟ್ಟಿಂಗ್ ಅಷ್ಟೇ ಅಲ್ಲ ಹವಾಲಾ ಮತ್ತಿತರ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಈ ದಂಗೆಯನ್ನು ಮಟ್ಟ ಹಾಕಲು ಕೇವಲ ಜಿಲ್ಲಾ ಪೊಲೀಸರು ಅಷ್ಟೇ ಅಲ್ಲ ಬೆಳಗಾವಿ ನಗರ ಪೊಲೀಸರು ತಯಾರಾಗಿ ಕುಳಿತಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ, ಬೆಟ್ಟಿಂಗ್ ದಂಧೆ ಸಮಗ್ರ ಮಾಹಿತಿ ಈಗ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಿವಿಗೂ ಬಿದ್ದಿದೆ. ಹೀಗಾಗಿ ಈ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದರಲ್ಲಿ ಎರಡು …
Read More »2 ದಿನ ಫಾರ್ಮ್ ಹೌಸ್ ನಲ್ಲಿರಿಸಿ ಯುವತಿ ಮೇಲೆ ಅತ್ಯಾಚಾರ :ಬಿಜೆಪಿ ನಾಯಕ ಸೇರಿ ನಾಲ್ವರು ಅರೆಸ್ಟ್
ಮಧ್ಯಪ್ರದೇಶ : ಶಾಲಾ ಶಿಕ್ಷಕ ಹಾಗೂ ಸ್ಥಳೀಯ ಬಿಜೆಪಿ ನಾಯಕ ಸೇರಿ ನಾಲ್ವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.20 ವರ್ಷದ ಯುವತಿಯನ್ನು 2 ದಿನ ಫಾರ್ಮ್ ಹೌಸ್ನಲ್ಲಿರಿಸಿ ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಫೆ. 18ರಂದು ಈ ಘಟನೆ ನಡೆದಿದ್ದು, ದಿನಸಿ ಸಾಮಾನುಗಳನ್ನು ತರಲು ಯುವತಿ ಹೋಗಿದ್ದಳು. ಈ ವೇಳೆ ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಫಾರ್ಮ್ …
Read More »UPSC’ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ಶಾಕ್!
ನವದೆಹಲಿ: 2020ರ ಅಕ್ಟೋಬರ್ʼನಲ್ಲಿ ಕೊನೆಯ ಪ್ರಯತ್ನ ನಡೆಸಿದ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಯುಪಿಎಸ್ ಸಿ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಆಗದ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ. ಸಿವಿಲ್ ಸರ್ವೀಸ್ ಎಕ್ಸಾಮಿನೇಷನ್ 2020ರಲ್ಲಿ ಕೊನೆಯ ಪ್ರಯತ್ನ ಮಾಡಿದ್ದ ಅರ್ಜಿದಾರರು, ಕೋವಿಡ್-19 …
Read More »ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ
ಗೋಕಾಕ: ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ ವತಿಯಿಂದ ದಿ. 26 ರಂದು ಸಂಜೆ 5 ಗಂಟೆಗೆ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಅಸೋಸಿಯೇಷನ ಕಾರ್ಯದರ್ಶಿ ರಮೇಶ ಕಳ್ಳಿಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಈ ಸ್ಪರ್ಧೆಯಲ್ಲಿ 55, 60, 65, ಹಾಗೂ 65+ ಕೆಜಿ ದೇಹ ತೂಕದ ಸ್ಪರ್ಧಾಳುಗಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು …
Read More »ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರೊಂದಿಗೆ ಚರ್ಚಿಸುತ್ತಿರುವ ರೈತ ಸಂಘದ ಮುಖಂಡರು.
ಗೋಕಾಕ: ಕಳೆದ ಎರಡು ವರ್ಷಗಳಿಂದ ನೆರೆ, ಅತಿವೃಷ್ಟಿ ಹಾಗೂ ಕೊರೋನಾ ಮಹಾಮಾರಿಯಿಂದ ಆರ್ಥಿಕವಾಗಿ ತತ್ತರಿಸಿರುವ ರೈತರಿಗೆ ಈಗ ಸಾಲ ತುಂಬುವಂತೆ ನೋಟಿಸು ನೀಡುತ್ತಿರುವ ಬ್ಯಾಂಕ್ನವರು ತಮ್ಮ ಕಾರ್ಯವನ್ನು ಕೂಡಲೇ ನಿಲ್ಲಿಸಬೇಕೆಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಒತ್ತಾಯಿಸಿದ್ದಾರೆ. ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಸಾಲ ತುಂಬಲು ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನವರು ರೈತರಿಗೆ ನೀಡುತ್ತಿರುವ ನೋಟಿಸ್ನ್ನು ತಹಶೀಲ್ದಾರರ ಗಮನಕ್ಕೆ ತಂದು ಅವರೊಂದಿಗೆ ಚರ್ಚಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, …
Read More »ಮುಂದುವರೆದ ʼಮಹಾʼ ಸಿಎಂ ಉದ್ಧಟತನ
ಮುಂಬೈ: ಗಡಿ ವಿಚಾರದ ಬೆನ್ನಲ್ಲೇ ಇದೀಗ ಭಾಷೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದು, ಕನ್ನಡ ಪ್ರಾಬಲ್ಯವಿರುವ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಮರಾಠಿ ಪ್ರಚಾರ ನಡೆಸುವಂತೆ ಆದೇಶ ನೀಡಿದ್ದಾರೆ. ಗಡಿ ಭಾಗದಲ್ಲಿ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಭಾಷೆಯ ಪ್ರಚಾರ ಮಾಡಬೇಕು. ಶೇ.50 ರಷ್ಟು ಮರಾಠಿ ಮಾತನಾಡುವಂತಾಗಬೇಕು ಎಂದು ಪತ್ರದ ಮೂಲಕ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಜತ್, ಅಕ್ಕಲಕೋಟ …
Read More »ಐವರು ಮಹಾರಾಷ್ಟ್ರದ ಸಚಿವರಿಗೆ ಕೋವಿಡ್ ದೃಢ..!
ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಹರಡುತ್ತಿರುವ ನಡುವೆ ಮಹಾರಾಷ್ಟ್ರದ ಐವರು ಸಚಿವರಿಗೆ ಸೋಂಕು ದೃಢವಾಗಿರುವುದು ಈಗ ವರದಿಯಾಗಿದೆ. ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ Chhagan Bhujbal ಈಗ ಕೋವಿಡ್ ಪಾಸಿಟಿವ್ ದೃಢಗೊಂಡಿರುವವರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. “ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಎರಡು ಮೂರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಇತ್ತೀಚೆಗೆ, ಜಲ …
Read More »ಕೊಲೆ ಪ್ರಕರಣ ಮೂವರು ಅರೆಸ್ಟ್………?
ಬೆಳಗಾವಿ, ತಾಲೂಕಿನ ಸೋಮನಟ್ಟಿ ಗ್ರಾಮದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಸಿಕ್ಕಿದೆ ಎಂದು ಡಿಸಿಪಿ ಡಾ.ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಬೆಳಗಾವಿ ತಾಲೂಕಿನ ಸೋಮನಟ್ಟಿ ಗ್ರಾಮದ ಸಾಗರ ಗಂಗಪ್ಪ ಪೂಜೇರಿ ಎಂಬ ಯುವಕ ಫೆ.11ರಂದು ನಾಪತ್ತೆಯಾಗಿದ್ದ, ನಂತರ ಫೆ.22ರಂದು ಜೋಯಿಡಾ ತಾಲೂಕಿನ ಉಳವಿ ಬಳಿ ಯುವಕನ …
Read More »ನಾಳೆ ಸಚಿವ ಈಶ್ವರಪ್ಪರಿಂದ ಕವಲಗುಡ್ಡದ ಶ್ರೀ ಅಮೋಘಸಿದ್ಧ ಶಾಲೆಯ 14 ಕೊಠಡಿಗಳ ಲೋಕಾರ್ಪಣೆ..ಅಮರೇಶ್ವರ ಮಹಾರಾಜರು
ಕಾಗವಾಡ ತಾಲೂಕಿನ ಸಿದ್ಧಶ್ರೀ ಸಂಸ್ಥಾನ ಶ್ರೀ. ಕರಿಯೋಗಸಿದ್ಧ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಕೌಲಗುಡ್ಡ ಇಲ್ಲಿಗೆ ಕಟ್ಟಿಸಿದ 14 ನೂತನ ಕೋಣೆಗಳ ಕಟ್ಟಡದ ಉದ್ಘಾಟನೆ ಸಮಾರಂಭ ಗುರುವಾರ ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯದ ಗ್ರಾಮಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಾ ಇವರು ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನೆರವೇರಿಸಲಿದ್ದಾರೆಯೆಂದು ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾಹಿತಿ ನೀಡಿದರು. ಬುಧವಾರ ರಂದು ಇನ್ ವಾಹಿನಿಗೆ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾಹಿತಿ ನೀಡುವಾಗ, ಕರಿಯೋಗಸಿದ್ಧ ಕನ್ನಡ …
Read More »
Laxmi News 24×7