Breaking News

ರಾಷ್ಟ್ರೀಯ

ಯಮಕನಮರಡಿ : ವಿವಿಧ ಕಾಮಗಾರಿಗೆ ಗ್ರಾಪಂ.ಅಧ್ಯಕ್ಷೆ ಚಾಲನೆ

ಬೆಳಗಾವಿ : ಯಮಕನಮರಡಿ ಕ್ಷೇತ್ರದ ಮಾವನೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶಿವಕುಮಾರ್ ಗುಡಗನಟ್ಟಿ ಇಂದು ಭೂಮಿ ಪೂಜೆ ನೆರವೇರಿಸಿದರು. ನರೇಗಾ ಯೋಜನೆಯಲ್ಲಿ ಬಿಡುಗಡೆಯಾದ 18 ಲಕ್ಷ ರೂಪಾಯಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇದೇ ವೇಳೆ ಅಧ್ಯಕ್ಷೆ ಮಾತನಾಡಿ, ಯಮಕನಮರಡಿ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶಾಸಕರು ಪಣ ತೊಟ್ಟಿದ್ದಾರೆ. ಅವರ ಆಸೆಯಂತೆ ಇಂದು ರಸ್ತೆ , ಶಾಲೆ ಕೊಠಡಿ ನಿರ್ಮಾಣ ಸೇರಿ ವಿವಿಧ …

Read More »

ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆ ಉದ್ಘಾಟಿಸಿದ ಮಹಾಂತೇಶ ಕವಟಗಿಮಠ

ಚಿಕ್ಕೋಡಿ: ಬಡ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುವ ಮುಖಾಂತರ ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಸ್ಥೆಗಳು ನೆರವಾಗಬೇಕು ಎಂದು ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ತಾಲೂಕಿನ ಮುಗಳಿ ಗ್ರಾಮದಲ್ಲಿ ನೂತನವಾಗಿ ಆರಂಭಿಸಿದ ಓಂ ಶ್ರೀ ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಸಂಸ್ಥೆಗಳಲ್ಲಿ ಠೇವಣಿದಾರರಿಗೂ ಕಡಿಮೆ ಬಡ್ಡಿ ನೀಡುವ ಜತೆಗೆ ಸಾಲಗಾರರಿಗೂ ಕಡಿಮೆ …

Read More »

ಪ್ರತಿ ಹಳ್ಳಿಗೂ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ: ದುರ್ಯೋಧನ ಐಹೊಳೆ

ಚಿಕ್ಕೋಡಿ: ಹಿಂದಿನ ಸರ್ಕಾರಗಳು ಹಳ್ಳಿಯ ಜನರಿಗೆ ಶುದ್ದ ಕುಡಿಯುವ ನೀರು ಕೊಡುವಲ್ಲಿ ವಿಫಲವಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ಶುದ್ದ ಕುಡಿಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಕಮತೇನಹಟ್ಟಿ ಹಾಗೂ ಮುಗಳಿ ಗ್ರಾಮದಲ್ಲಿ ಜೀವಜಲ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೀವಜಲ ಯೋಜನೆಯಡಿ ಶೀಘ್ರ ರಾಯಬಾಗ …

Read More »

ಕಾಂಗ್ರೆಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಿ: ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ‘ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹಲವಾರು ವಿಚಾರಗಳನ್ನು ಮಾಡಲಾಗುತ್ತಿದೆ. ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳು ಸಹ ವಿಶೇಷ ಆಸಕ್ತಿ ಬೆಳೆಸಿಕೊಂಡು ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಬೆಳಗಾವಿ‌ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದರು. ಬಳಿಕ ಮಾತನಾಡಿ, ‘ಕಾಂಗ್ರೆಸ್ ಪಕ್ಷವನ್ನು …

Read More »

ನೀನು ಮೊದಲು ರಾಜೀನಾಮೆ ನೀಡು : ಯತ್ನಾಳ್ ಗೆ ಸಚಿವ ನಿರಾಣಿ ಸವಾಲ್

ಬೆಂಗಳೂರು : ಶಾಸಕ ಬಸವರಾಜ್ ಯತ್ನಾಳ್ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದೀಯಾ. ಮೊದಲು ನೀನು  ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡು ಅಂತಾ ಸಚಿವ ಮುರಗೇಶ್ ನಿರಾಣಿ ಕಿಡಿ ಕಾರಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೇ ನಡೆದ ಸಮಾವೇಶದಲ್ಲಿ ಬಹಿರಂಗವಾಗಿ ಯತ್ನಾಳ್ ಅವರು , ಸಚಿವರು ರಾಜೀನಾಮೆ ನೀಡಬೇಕು ಎಂದು ಹೇಳುತ್ತಾರೆ. ನಮಗೆ ರಾಜೀನಾಮೆ ನೀಡು ಎನ್ನುವುದಕ್ಕೆ ಇವರು ಯಾರು ಎಂದು ಪ್ರಶ್ನ ಮಾಡಿದ್ದಾರೆ. ಮೊದಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ …

Read More »

ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಅವರ ಕ್ಷೇತ್ರಕ್ಕೆ ಅವರೇ ಬಾಸ್, ಸುಪ್ರೀಂ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಬಾಸ್!!

ಬೆಳಗಾವಿ:  ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ  ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದರು. ಕಾಂಗ್ರೆಸ್ ನಲ್ಲಿ  ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ  ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರು ಒಂದೇ. ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರು ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ಥಾಪವಿರಬಹುದು ಆದ್ರೆ ಪಕ್ಷದಲ್ಲಿ …

Read More »

ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ :ಎಚ್ಚರಿಕೆ ನೀಡಿದ ಮಹಾ ಸಿಎಂ

ಮುಂಬೈ : ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಕರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಅಗತ್ಯ ಇರುವ ಕಡೆಗಳಲ್ಲಿ ನಾಳೆ ಸಂಜೆಯಿಂದಲೇ ಲಾಕ್ ಡೌನ್ ಮಾಡಲಾಗುವುದು ಎಂದು ತಿಳಿಸಿದರು. ‘ಲಾಕ್ ಡೌನ್ ಇದ್ದಕ್ಕಿದ್ದಂತೆ ಪ್ರಾರಂಭವಾಗುವುದಿಲ್ಲ. ನಾವು ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ಹಾಕುತ್ತಿಲ್ಲ. ನಾಳೆ ಸಂಜೆಯಿಂದಲೇ ಅಗತ್ಯವಿರುವೆಡೆ ಲಾಕ್ …

Read More »

ಜಿ ಎನ್ ಎಸ್ ಶಾಲೆಯ 1998-99 ವಿದ್ಯಾರ್ಥಿಗಳಿಂದ ಗುರುಗಳಿಗೆ ಗುರುಸ್ಮoತಿ ಕಾರ್ಯಕ್ರಮ

ಗೋಕಾಕ: ದೇಶದ ಸಮಸ್ಯೆಯನ್ನು ನಿವಾರಿಸಲು ಯುವ ಶಕ್ತಿಯಿಂದ ಮಾತ್ರ ಸಾಧ್ಯ. ಆರೋಗ್ಯಯುತ ಭಾರತವಾಗಬೇಕು. ಭಾರತೀಯ ಸಂಸ್ಕøತಿಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು. ಅವರು ರವಿವಾರದಂದು ಇಲ್ಲಿಯ ಶುಭಂ ಗಾರ್ಡನ್‍ನಲ್ಲಿ ಜರುಗಿದ ನಗರದ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುಗಳಿಗೆ ಗೌರವ ನಮನ ಹಾಗೂ ಸ್ನೇಹಿತರ ಪುನರ್ ಮಿಲನ ಹಾಗೂ ಗುರುಸ್ಮøತಿ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …

Read More »

ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. …

Read More »

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪಾಟ್ನಾ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ , ಕೊಲೆಗೈದಿದ್ದ ಆರೋಪಿಗೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯವೊಂದು ಮರಣ ದಂಡನೆ ಶಿಕ್ಷೆಯನ್ನು ಶನಿವಾರ ಪ್ರಕಟಿಸಿದೆ. ಕೇಸ್ ದಾಖಲಾದ ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯ ಈ ಮಹತ್ವದ ಶಿಕ್ಷೆ ಪ್ರಕಟಿಸಿದೆ. ಪಾಟ್ನಾದಿಂದ 140 ಕಿ.ಮೀ. ದೂರದಲ್ಲಿರುವ ಬಾಕ್ರೌರು ಹಳ್ಳಿಯಲ್ಲಿನ ಪ್ರಮುಖ ಶಂಕಿತನ ಮನೆಯಿಂದ ಬ್ಯಾಂಗ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹವನ್ನು ಆಗಸ್ಟ್ 25 ರಂದು ಗೋಪಾಲ್ ಗಂಜ್ …

Read More »