ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ 5 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ಈಗಾಗಲೇ ಸಂಸದ ರಾಘವೇಂದ್ರ ಅವರು ಬೀಡು ಬಿಟ್ಟಿದ್ದಾರೆ. ಅಲ್ಲದೆ ನಮ್ಮ ಇಲಾಖೆಯ ಮುರುಗೇಶ್ ನಿರಾಣಿ ಕೂಡ ಸ್ಥಳದಲ್ಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ …
Read More »ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?
ಲೈವ್ ಪಿಕ್ಸ್ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ. ಶಾಸಕರಾದ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ. ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.
Read More »ಬಾಂಬೆ ಹೈಕೋರ್ಟ್ ನಲ್ಲಿ ಹಿನ್ನಡೆ: ಸಂಕಷ್ಟದಲ್ಲಿ ಸೋನು ಸೂದ್
ಕೊರೊನಾ ಲಾಕ್ಡೌನ್ ಕಾಲದಲ್ಲಿ ಸಹಸ್ರಾರು ಜನರಿಗೆ ಸಹಾಯ ಮಾಡಿ ‘ಮಸ್ಸೀಹಾ’ (ದೇವರು) ಎನಿಸಿಕೊಂಡಿದ್ದ ನಟ ಸೋನು ಸೂದ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಟ ಸೋನು ಸೂದ್ ಗೆ ಸೇರಿದ ಮುಂಬೈನಲ್ಲಿನ ಸ್ಟಾರ್ ಹೋಟೆಲ್ಗೆ ಮುಂಬೈ ಮಹಾನಗರ ಪಾಲಿಕೆಯು ನೊಟೀಸ್ ಜಾರಿ ಮಾಡಿದ್ದು. ಸೋನು ಸೂದ್ ಅವರ ಹೋಟೆಲ್ ಕಟ್ಟಡವು ಅಕ್ರಮವಾಗಿ ಕಟ್ಟಲ್ಪಟ್ಟಲಾಗಿದೆ ಎಂದು ಬಿಎಂಸಿ ಆರೋಪಿಸಿದೆ. ಬಿಎಂಸಿಯ ನೊಟೀಸ್ ಅನ್ನು ಪ್ರಶ್ನಿಸಿ, ಬಿಎಂಸಿ ನೊಟೀಸ್ ಗೆ ತಡೆ ನೀಡಬೇಕು ಎಂದು …
Read More »ಅಬಕಾರಿ ಖಾತೆ ನಂಗೆ ಬೇಕಿಲ್ಲ: M.T.B.
ಬೆಂಗಳೂರು, ಜ.21- ಖಾತೆ ಹಂಚಿಕೆ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಬಕಾರಿ ಇಲಾಖೆ ನನಗೆ ಬೇಡ. ಅದರಲ್ಲಿ ಮಾಡುವ ಕೆಲಸ ಏನೂ ಇಲ್ಲ ಎಂದು ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಸಿಎಂ ಉತ್ತಮ ಖಾತೆ ನೀಡುವ ಭರವಸೆ ನೀಡಿದ್ದರು. ಆದರೆ, ಈಗ ಅಬಕಾರಿ ಖಾತೆ ನೀಡಿದ್ದಾರೆ. ನನಗೆ ಈ ಖಾತೆ ಬೇಡ ಎಂದು ಹೇಳಿಬಂದಿದ್ದೇನೆ. ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ? …
Read More »ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರೈಲ್ವೆ ಹಳಿಮೇಲೆ ಎಸೆದು ಹೋದ ಆರೋಪಿಗಳು!
ಇಂದೋರ್: ಮಧ್ಯಪ್ರದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೇ ಕಾಲೇಜು ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ರೈಲ್ವೆ ಹಳಿ ಮೇಲೆ ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇಂದೋರ್ ನ 19 ವರ್ಷದ ಕಾಲೇಜು ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಚೂರಿಯಿಂದ ಇರಿದು ರೈಲ್ವೆ ಹಳಿ ಮೇಲೆ ಎಸೆದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಬದುಕುಳಿದಿರುವುದಾಗಿ ವರದಿ ತಿಳಿಸಿದೆ. ವ ದೂರಿನ ಪ್ರಕಾರ, ಯುವತಿಯನ್ನು …
Read More »ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ
ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …
Read More »ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್ಡಿಕೆ ಗರಂ..!
ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …
Read More »ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ
ಚಲಿಸುತ್ತಿದ್ದ ಬೈಕ್ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ …
Read More »ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್
ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಕುಟುಂಬದ ವಿರುದ್ಧ ಹೇಳಿಕೆ ನಿಡಿದ್ದರು. ಈ ಹಿನ್ನೆಲೆಯಲ್ಲಿ ಅಖ್ತರ್ ಕಂಗನಾ ವಿರುದ್ಧ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಂಗನಾ ರಣಾವತ್ …
Read More »ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಆರಂಭ: ಸ್ಮಾರ್ಟ್ ಪೋನ್ ಗಳಿಗೆ 40% ಡಿಸ್ಕೌಂಟ್ !
ನವದೆಹಲಿ: ದೇಶದ ಬೃಹತ್ ಆನ್ ಲೈನ್ ಮಾರುಕಟ್ಟೆ ಮಳಿಗೆಯಾಗಿರುವ ಅಮೆಜಾನ್ ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ತಯಾರಿಯಲ್ಲಿರುವ ತನ್ನ ಭಾರತೀಯ ಗ್ರಾಹಕರಿಗಾಗಿ ‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಅನ್ನು ಪ್ರಾರಂಭಿಸಿದೆ. ಆ ಮೂಲಕ ಸ್ಮಾರ್ಟ್ ಪೋನ್ ಗಳನ್ನು ಒಳಗೊಂಡಂತೆ ಹಲವು ಇಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಭಾರಿ ಆಫರ್ ನೀಡಲು ಮುಂದಾಗಿದೆ. ಈಗಾಗಲೇ ಅಮೆಜಾನ್ ಪ್ರೈಮ್ ಬಳಕೆದಾರರಿಗೆ ಈ ಆಫರ್ ಗಳು ಲಭ್ಯವಿದ್ದು, ಇಂದಿನಿಂದ ಆರಂಭಗೊಂಡು ಜನವರಿ 23 ರ ವರೆಗೆ ಎಲ್ಲಾ …
Read More »