Breaking News

ರಾಷ್ಟ್ರೀಯ

ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ

ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.

Read More »

ಗೋಕಾಕ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗೋಕಾಕ ಆಯ್ಕೆ

ಗೋಕಾಕ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕುತ್ಬುದ್ಧೀನ್ ಗೋಕಾಕ ಶನಿವಾರ ಆಯ್ಕೆಯಾಗಿದ್ದಾರೆ. ಕುತ್ಬುದ್ಧೀನ್ ಅವರು ಮೂರು ಬಾರಿ ನಗರಸಭೆಗೆ ಆಯ್ಕೆಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ ಹಾಗೂ ಅಂಬಿರಾವ್ ಪಾಟೀಲ ಅವರ ಸೂಚನೆಯ ಮೇರೆಗೆ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಂಚ್ಯಾಳ, ನಗರ ಸೇವಕರಾದ ಅಬ್ಬಾಸ ದೇಸಾಯಿ, ಸಂತೋಷ …

Read More »

ಕರ್ತವ್ಯದ ಸಮಯದಲ್ಲಿ ಕ್ರಿಮಿನಲ್ ಜತೆಗೆ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ

ಮಂಗಳೂರು : ಕರ್ತವ್ಯದ ವೇಳೆಯಲ್ಲಿ ಬಾರಿನಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬನೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪುಲ್ ವೈರಲ್ ಆಗಿದೆ. ಮಂಗಳೂರು ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ನಡೆಸುತ್ತಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ …

Read More »

ಗಾಂಧಿಯನ್ನು ಕೊಂದವರ ಪ್ರತಿಮೆ ಮಾಡಿ ಪೂಜಿಸುವ ಕೆಲಸ,ಇದಕ್ಕಿಂತ ದೇಶದ್ರೋಹ ಮತ್ತೊಂದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಯಾವುದಕ್ಕಾಗಿ ಗಾಂಧೀಜಿ ಹೋರಾಟ ಮಾಡಿದ್ರು ಅದು ಈಗ ದೇಶದಲ್ಲಿ ನೆಲೆಸುತ್ತಿಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ರೈತ ಸಂಘಟನೆಗಳು ಆಚರಿಸುತ್ತಿರುವ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಂಧೀಜಿ ದೇಶದಲ್ಲಿ ಶಾಂತಿ ನೆಲೆಸಬೇಕು, ಎಲ್ಲರೂ ನೆಮ್ಮದಿಯಿಂದ ಬಾಳಬೇಕು, ಸೌಹಾರ್ದತೆ ನೆಲೆಸಬೇಕು ಎಂದುಕೊಂಡವರು. ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಡಿದ್ರೋ ಅದಕ್ಕಿಂತಲೂ ಹೆಚ್ಚು ಶಾಂತಿ ಸೌಹಾರ್ದತೆಗಾಗಿ ಹೋರಾಡಿದವರು. ಗಾಂಧೀಜಿ ಜೊತೆಗೆ ಬಹಳಷ್ಟು ಜನ ಹೋರಾಟ ಮಾಡಿದ್ದಾರೆ, ಅವರನ್ನೂ ನಾವು ಸ್ಮರಿಸಬೇಕು …

Read More »

“ಕರ್ನಾಟಕಕ್ಕೆ ಮಹಾದಾಯಿ ನದಿಯ 1 ಹನಿ ನೀರನ್ನೂ ಕೊಡಲ್ಲ”

ಪಣಜಿ,ಜ.30- ನನ್ನ ಪಕ್ಷದವರೇ ಇರಲಿ ಅಥವಾ ಬೇರೆ ಯಾರೇ ಇರಲಿ ರಾಜ್ಯದ ಹಿತ ಕಡೆಗಣಿಸಿ ಮಹಾದಾಯಿ ನದಿಯಿಂದ ಒಂದೂ ಹನಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತೆ ಕ್ಯಾತೆ ತೆಗೆದಿದ್ದಾರೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಮಂಡಿಸಿದ್ದ ನಿಲುವಳಿ ಸೂಚನೆ ಮೇಲೆ ಉತ್ತರಿಸಿರುವ ಪ್ರಮೋದ್ ಸಾವಂತ್, ಮಹದಾಯಿಯಿಂದ ನೀರು ಹರಿಸುವಂತೆ ನನ್ನ ಪಕ್ಷವೇ ನನ್ನ ಮೇಲೆ ಒತ್ತಡ ಹಾಕಿದರೂ ನಾನು ಭಾಗುವುದಿಲ್ಲ ಎಂದು …

Read More »

ಗೋಕಾಕದಲ್ಲಿ ಸರಕಾರಿ ವೈದ್ಯರಿಂದ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ

ಗೋಕಾಕದಲ್ಲಿ ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಗೋಕಾಕ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ ಇವರು ರಿಬ್ಬನ್ ಕಟ್ ಮಾಡಿ ನಗರಸಭೆಯ ಉಪಾದಕ್ಷ ಬಸವರಾಜ ಆರೆನ್ನವರ ಇವರು ಬ್ಯಾಂಡ ಬಾರಿಸುವ ಮೂಲಕ‌ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ನಾಳೆ ದಿನ ಜನೆವರಿ 31 ರವಿವಾರದಂದು ಸ್ಥಳಿಯ ಪ್ರಾಥಮಿಕ …

Read More »

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್

ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ  ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿ.ಜಿ. ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ …

Read More »

ಬಸವರಾಜ ಬೊಮ್ಮಾಯಿ ಗಡಿ ಉಸ್ತುವಾರಿ ಸಚಿವರಾಗಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪತ್ರೆ

ಬೆಳಗಾವಿ – ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …

Read More »

ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಹೋರಾಟ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಮಂಡ್ಯ: ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿದ್ದು, ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರು ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಶುಕ್ರವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಪ್ರತಿಯೊಬ್ಬರು ನಿರಂತರವಾಗಿ ಪ್ರೀತಿಸಿ, ಪ್ರೋತ್ಸಾಹಿಸಬೇಕು. ರಾಜ್ಯ, ಹೊರ ರಾಜ್ಯಗಳಲ್ಲಿಯೂ ಕನ್ನಡ ಕ್ರಾಂತಿಯಾಗಬೇಕು. ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ …

Read More »

ಲಾರಿ- ಆಟೋ ನಡುವೆ ಭೀಕರ ಅಪಘಾತ ; ಮದುವೆಗೆ ಬಟ್ಟೆ ತರಲು ಹೊರಟ್ಟಿದ್ದ ಆರು ಜನರು ಸಾವು !

ತೆಲಂಗಾಣ : ಲಾರಿ- ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಸ್ಥಳದಲ್ಲೇ ಆರು ಜನರು ಮೃತಪಟ್ಟಿರುವ ಘಟನೆ ಮೆಹಬೂಬಾಬಾದ್ ಜಿಲ್ಲೆಯ ಗುಡೂರ್ ವಲಯದ ಮರ್ರಿಮಿಟ್ಟದಲ್ಲಿ ಇಂದು ನಡೆದಿದೆ. ಮೃತರು ಒಂದೇ ಕುಟುಂಬದವರಾಗಿದ್ದು, ಮದುವೆಗೆ ಬಟ್ಟೆ ತರಲು ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವದು ಸೇರಿ ಆಟೋದಲ್ಲಿ ಆರು ಮಂದಿ ಇದ್ದರು ಎನ್ನಲಾಗಿದೆ. ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು …

Read More »